ಉದ್ಯಮ ವಲಯಕ್ಕೆ ತುರ್ತು ಸಾಲ, 12 ತಿಂಗಳ ಮರುಪಾವತಿಗೆ ವಿನಾಯಿತಿ – ವಿಶೇಷ ಪ್ಯಾಕೇಜ್

Wednesday, May 13th, 2020
Nirmala

ನವದೆಹಲಿ:  ಲಾಕ್ ಡೌನ್ ಜಾರಿಯಲ್ಲಿದ್ದ ಪರಿಣಾಮ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕ ಚೇತರಿಕಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿ ನಡೆಸಿ ವಿವರಣೆ ನೀಡಿದ್ದಾರೆ. 25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ […]

ಕೋವಿಡ್ ವೈರಸ್ ನಮ್ಮ ಜತೆಯಲ್ಲಿ ಅನೇಕ ವರ್ಷಗಳ ಕಾಲ ಇರುವಂಥದ್ದು : ಪ್ರಧಾನಿ

Wednesday, May 13th, 2020
Narendra Modi

ಹೊಸದಿಲ್ಲಿ: ಕೋವಿಡ್ ವೈರಸ್ ನಮ್ಮ ಜತೆಯಲ್ಲಿ ಅನೇಕ ವರ್ಷಗಳ ಕಾಲ ಇರುವಂಥದ್ದು ಎಂದು ಹಲವಾರು ತಜ್ಞರು ಹೇಳಿದ್ದಾರೆ ಎಂದ ಪ್ರಧಾನಿ, ನಾವು ಯಾವಾಗಲೂ ಮಾಸ್ಕ್ ಗಳನ್ನು ಧರಿಸೋಣ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳೋಣ. ಅವೆಲ್ಲದರ ಜತೆಗೆ ದೇಶದ ಆರ್ಥಿಕತೆಗೂ ಶ್ರಮಿಸೋಣ ಎಂದು ಪ್ರಧಾನಿ ಹೇಳಿದ್ದಾರೆ. ಕೋವಿಡ್ ಸಂಕಷ್ಟದಿಂದ ಕುಸಿದಿರುವ ದೇಶದ ಆರ್ಥಿಕತೆಯನ್ನು ಮೇಲೆತ್ತಲು ಪ್ರಧಾನಿ ಮೋದಿ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ. ಮಂಗಳವಾರ ರಾತ್ರಿ ದೂರದರ್ಶನದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, […]

ಉತ್ತರ ಮುಂಬಯಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಎರ್ಮಾಳ್ ಹರೀಶ್ ಶೆಟ್ಟಿ ನೇಮಕ

Tuesday, May 12th, 2020
Harish-Shetty

ಮುಂಬಯಿ  : ಮಹಾನಗರದ ನಾಮಾಂಕಿತ ಸಮಾಜ ಸೇವಕ, ಅಪ್ರತಿಮ ಸಂಘಟಕ ಎರ್ಮಾಳ್ ಹರೀಶ್ ಶೆಟ್ಟಿ ಇವರು ಉತ್ತರ ಮುಂಬಯಿ (ಬೋರಿವಿಲಿ) ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕ ಗೊಂಡಿದ್ದಾರೆ. ಮಹಾನಗರದಾದ್ಯಂತ ಎರ್ಮಾಳ್ ಹರೀಶ್ ಎಂದೇ ಪರಿಚಿತರಾದ, ಬಂಟರ ಸಂಘ ಮುಂಬಯಿ ಇದರ ಶೈಕ್ಷಣಿಕ ನೂತನ ಯೋಜನಾ ಸಮಿತಿ ಉಪಾಧ್ಯಕ್ಷರಾಗಿದ್ದು ಈ ಹಿಂದೆ ಇಂಡಿಯಾನ್ ಹೊಟೇಲ್ ಎಂಡ್ ರೆಸ್ಟೋರೆಂಟ್ ಅಸೋಸಿಯೇಶನ್ (ಆಹಾರ್) ಇದರ ಉಪಾಧ್ಯಕ್ಷರಾಗಿದ್ದು, ತಮ್ಮ ಹಲವಾರು ದಶಕಗಳ ಅನುಭವ, ಅವಿರತ ಶ್ರಮದ ಮೂಲಕ ಹೋಟೇಲು ಉದ್ಯಮದಲ್ಲಿ ಪಳಗಿರುವರು. ಲಿಂಕ್ […]

ಮೈಕ್ ಹಾಕಿ ಅಜಾನ್ (ಬಾಂಗ್ ) ಕೊಡುವುದನ್ನು ಈಗಲಾದರೂ ನಿಲ್ಲಿಸಿ: ಜಾವೇದ್ ಅಖ್ತರ್

Tuesday, May 12th, 2020
Javed-Aktar

ಮುಂಬೈ :  ಮುಸಲ್ಮಾನರು ಅಜಾನ್ (ಬಾಂಗ್ ) ಕೊಡುವಾಗ ಧ್ವನಿವರ್ಧಕಗಳನ್ನು ಬಳಸಿ ಇತರರಿಗೆ ತೊಂದರೆಯಾಗುವ ಹಿನ್ನಲೆಯಲ್ಲಿ ಹಲವಾರು ದೂರುಗಳಿವೆ. ಹೈಕೋರ್ಟ್ ಸಹ ಅಜಾನ್ ಮೈಕ್ ಬಳಸಿ ಕೊಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಇದು ಉಲ್ಲಂಘನೆಯಾಗಬಾರದು ಎಂದು ಜಾವೇದ್ ಅಖ್ತರ್ ಧ್ವನಿ ಎತ್ತಿದ್ದಾರೆ. ಮತ್ತೊಬ್ಬರಿಗೆ ಧಕ್ಕೆಯಾಗುವ ಧ್ವನಿವರ್ಧಕಗಳನ್ನು ಬಳಸಿ ಪ್ರಾರ್ಥನೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹಿರಿಯ ಬರಹಗಾರ ಗೀತರಚನೆಕಾರ ಜಾವೇದ್ ಅಖ್ತರ್ ಹೇಳಿದ್ದು, ಟ್ವೀಟ್ ಮಾಡಿದ್ದಾರೆ. ಶನಿವಾರ ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಭಾರತದಲ್ಲಿ ಸುಮಾರು 50 ವರ್ಷಗಳ ಕಾಲ ಅಜಾನ್ ಹರಾಮ್ ಎಂದು […]

ಒಕ್ಕಲಿಗರ ಸಂಘ ಮಹಾರಾಷ್ಟ್ರದ ವತಿಯಿಂದ ಮುಂಬಯಿಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ

Monday, May 11th, 2020
okkaliga sangha mumbai

ಮುಂಬಯಿ : ಲಾಕ್ ಡೌನ್ ನಿಂದಾಗಿ ಈಗಾಗಲೇ ಸಮಾಜ ಬಾಂಧವರು ಮಾತ್ರವಲ್ಲದೆ ಮಹಾನಗರದಲ್ಲಿ ನೆಲೆಸಿರುವ ಅನೇಕ ಕನ್ನಡಿಗರು ವಿವಿಧ ರೀತಿಯಲ್ಲಿ ಸಂಕಷ್ಟಕ್ಕೊಳಗಾಗಿದ್ದು, ಒಕ್ಕಲಿಗರ ಸಂಘ ಮಹಾರಾಷ್ಟ್ರವು ಅಧ್ಯಕ್ಷರಾದ ಜಿತೇಂದ್ರ ಗೌಡ ಇವರ ನೇತೃತ್ವದಲ್ಲಿ ಸಮಾಜ ಬಾಂಧವರೂ ಸೇರಿ 610 ಕ್ಕೂ ಅಧಿಕ ತುಳು ಕನ್ನಡಿಗ ಕುಟುಂಬಗಳಿಗೆ ಲಕ್ಷಾಂತರ ರೂಪಾಯಿಗಳ ಕಿಟ್ ವಿತರಿಸಿ ಸಹಕರಿಸಿದೆ. ನಮ್ಮ ಸಮಾಜದಲ್ಲಿ ಅನೇಕರು ಹೋಟೇಲು ಕಾರ್ಮಿಕರು, ಸಣ್ಣ ವ್ಯಾಪಾರಿಗಳಾಗಿದ್ದು ದೈನಂದಿನ ಖರ್ಚಿಗೆ ಬೇಕಾದಷ್ಟು ಮಾತ್ರ ಸಂಪಾದಿಸುತ್ತಿದ್ದು ಲಾಕ್ ಡೌನ್ ನಿಂದಾಗಿ ಇದೀಗ ಸಂಕಷ್ಟದಲ್ಲಿ […]

ಲಾಕ್ ಡೌನ್ ಸಂದರ್ಭದಲ್ಲಿ ಕನ್ನಡಿಗ ಸಹೋದರರ ಸಮಾಜ ಸೇವೆ

Monday, May 11th, 2020
ambika food

ಮುಂಬೈ :  ರಾಜು ಮೊಗವೀರ ಹಾಗೂ ಸತೀಶ ಮೊಗವೀರ ಇವರ ಅಂದೇರಿಯ ಅಂಬಿಕಾ ಫುಡ್ & ಹಾಸ್ಪಿಟಾಲಿಟಿ ಸರ್ವಿಸಸ್ ಇದರ ಪ್ರಾಯೋಜಕತ್ವದಲ್ಲಿ ಕೊರೊನ ಸಂತ್ರಸ್ತರಿಗೆ ಮುಂಬೈ ಮಹಾನಗರ ಪಾಲಿಕೆ ವತಿಯಿಂದ ಪ್ರತಿ ದಿನ ಹದಿನೈದು ಸಾವಿರ ದಿಂದ ಇಪತ್ತು ಸಾವಿರ ಊಟದ ಪ್ಯಾಕೆಟ್ ಗಳನ್ನು ವಿತರಿಸಲಾಗುತ್ತಿದೆ. ದಿನಾಲೂ ಬೇರೆ ಬೇರೆ ರೀತಿಯ ಪುಲಾವ್, ಬಿರಿಯಾನಿ, ಕಿಚಡಿ, ಮಸಾಲಾ ಬಾತ್, ಹಾಗೂ ಪಾವ್ ಬಾಜಿ ಯನ್ನು ವಿತರಿಸುತ್ತಿದ್ದಾರೆ. ಹಾಗೂ ಅಲ್ಲಿನ ಹತ್ತಿರದ ನಿವಾಸಿಗಳಿಗೂ, ಕಾರ್ಮಿಕರಿಗೂ, ಊಟವಿಲ್ಲದೆ ಪರದಾಡುತ್ತಿದ್ದವರಿಗೆ ಉಚಿತ […]

ವಿಶಾಖಪಟ್ಟಣ ಅನಿಲ ದುರಂತದಲ್ಲಿ ಹನ್ನೊಂದು ಮಂದಿ ಸಾವು, ಜೊತೆಗೆ ಹಲವು ಪ್ರಾಣಿ, ಪಕ್ಷಿ ದುರಂತ ಅಂತ್ಯ

Thursday, May 7th, 2020
gas-leak

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಿಯಾ ಕೆಮಿಕಲ್ ಪ್ಲ್ಯಾಂಟ್ ನಲ್ಲಿ ಸಂಭವಿಸಿದ ಅನಿಲ ಸೋರಿಕೆ ದುರಂತದಲ್ಲಿ ಹನ್ನೊಂದು  ಮಂದಿ ಸಾವನ್ನಪ್ಪಿದ್ದಾರೆ. ಇದು ದಕ್ಷಿಣ ಕೊರಿಯಾದ ಎಲ್ ಜಿ ಗ್ರೂಪ್ ನ ಕಂಪನಿಯಾಗಿದ್ದು, ಇದರ ಕೇಂದ್ರ ಕಚೇರಿ ಮುಂಬೈನಲ್ಲಿ ಇದ್ದಿರುವುದಾಗಿ ವರದಿ ತಿಳಿಸಿದೆ. ಪ್ಲಾಸ್ಟಿಕ್ ಕಾರ್ಖಾನೆಯಾಗಿರುವ ಇದು ಮರು ಕಾರ್ಯಾರಂಭ ಮಾಡಿದಾಗ ಆಕಸ್ಮಿಕವಾಗಿ ಅನಿಲ ಸೋರಿಕೆಯಾಗಿ ಈ ದುರ್ಘಟನೆ ಸಂಭವಿಸಿದೆ. 1961ರಲ್ಲಿ ಹಿಂದೂಸ್ತಾನ್ ಪಾಲಿಮರ್ಸ್ ಕಂಪನಿ ಪಾಲಿಸ್ಟ್ರಿಯೆನ್ ತಯಾರಿಸುತ್ತಿತ್ತು. ಈ ಕಂಪನಿ 1978ರಲ್ಲಿ ಮೆಕ್ […]

ಲಾಕ್ ಡೌನ್ ಸಮಯದಲ್ಲಿ ಜನಸಾಮಾನ್ಯರ ಸೇವೆಯಲ್ಲಿ ಕುಲಾಲ ಸಂಘ ಮುಂಬಯಿ

Tuesday, May 5th, 2020
kulal sangha Mumbai

ಮುಂಬಯಿ : ಲಾಕ್ ಡೌನ್ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಾರಂಭದಿಂದಲೇ ಕುಲಾಲ ಸಂಘ ಮುಂಬಯಿಯ ಕಾರ್ಯಕರ್ತರು ಸದ್ದು ಗದ್ದಲವಿಲ್ಲದೆ ಅಸಾಯಕ ಸಮಾಜ ಬಾಂಧವರಿಗೆ ಹಾಗೂ ಇತರ ಸಮಾಜದವರಿಗೆ ಒಟ್ಟು 200 ರಕ್ಕೂ ಮಿಕ್ಕಿ ಕುಟುಂಬಕ್ಕೆ ದೈನಂದಿನ ದವಸದಾನ್ಯಗಳನ್ನು ವಿತರಿಸಿದೆ. ಇದುವರಿಗೆ ದಾನಿಗಳ ಸಹಾಯದಿಂದ ಮುಂಬಯಿ ಮಹಾನಗರ, ಉಪನಗರ, ನವಿಮುಂಬಯಿ ಹಾಗೂ ಪರಿಸರದಲ್ಲಿ ಸುಮಾರು ಐದು ಲಕ್ಷ ರೂಪಾಯಿಗೂ ಹೆಚ್ಚಿನ ಮೊತ್ತದ ಆಹಾರ ಸಾಮಾಗ್ರಿಗಳನ್ನು ವಿತರಿಸುದರೊಂದಿಗೆ ಮಾನವೀಯತೆಯನ್ನು ಮೆರೆದಿದೆ. ಕುಲಾಲ ಸಂಘ ಮುಂಬಯಿಯ ಅಧ್ಯಕ್ಷರಾದ ದೇವದಾಸ ಕುಲಾಲ್ ಇವರ […]

ನಿಧನ : ಕಲ್ಯಾಣಿ ಹಿರಿಯಣ್ಣ ಶೆಟ್ಟಿ ಮಲಾಡ್

Sunday, May 3rd, 2020
Kalyani-shetty

ಮುಂಬಯಿ : ಗೋರೆಗಾಂವ್ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ದಿ. ಹಿರಿಯಣ್ಣ ಶೆಟ್ಟಿ ಯವರ ಧರ್ಮಪತ್ನಿ ಕುತ್ಯಾರ್ ಉಪ್ಪರಿಗೆ ಮನೆ ಕಲ್ಯಾಣಿ ಹಿರಿಯಣ್ಣ ಶೆಟ್ಟಿ (76) ಇವರು ಮೇ. 2 ರಂದು ಹೃದಯಘಾತ ದಿಂದ ಮಲಾಡ್ ಪಶ್ಚಿಮ ದ ಸ್ವಗೃಹದಲ್ಲಿ ನಿಧನ ಹೊಂದಿದರು. ಬೊಂಬೆ ಬಂಟ್ಸ್ ಅಸೋಷಿಯೇಶನಿನ ಉಪಾಧ್ಯಕ್ಷರಾದ ಸಿಎ ಸುರೇಂದ್ರ ಕೆ ಶೆಟ್ಟಿ ಯವರ ಅತ್ತೆ ಕಲ್ಯಾಣಿ ಶೆಟ್ಟಿ ಯವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಸಂಮಂಧಿಕರನ್ನು ಅಗಲಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಖ್ಯಾತ ನಟ ರಿಷಿ ಕಪೂರ್ ನಿಧನ

Thursday, April 30th, 2020
Rishi Kapoor

ಮುಂಬೈ : ಅಮೆರಿಕದಲ್ಲಿ ಕಳೆದ ವರ್ಷ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿದ್ದ ರಿಷಿ ಕಪೂರ್ ಆಗಾಗ್ಗೆ ಅನಾರೋಗ್ಯದ ಸಮಸ್ಯೆಗೆ ಒಳಗಾಗುತ್ತಿದ್ದರು. ಬುಧವಾರ ಬೆಳಿಗ್ಗೆ ಅವರನ್ನು ಮುಂಬೈನ ಎಚ್ ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ರಿಷಿ ಕಪೂರ್ ಅವರು ಕ್ಯಾನ್ಸರ್‌ಗೆ ತುತ್ತಾಗಿರುವುದು 2018ರಲ್ಲಿ ಪತ್ತೆಯಾಗಿತ್ತು. ಬಳಿಕ ಅಮೆರಿಕಕ್ಕೆ ತೆರಳಿ ಸುಮಾರು ಒಂದು ವರ್ಷ ಚಿಕಿತ್ಸೆ ಪಡೆದುಕೊಂಡ ನಂತರ ಕಳೆದ ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಮರಳಿದ್ದರು. ಫೆಬ್ರವರಿಯಲ್ಲಿ ಅನಾರೋಗ್ಯದಿಂದ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. […]