ಕೊರೋನಾ ಭೀತಿ : ಹೋಳಿ ಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧಾರ; ಪ್ರಧಾನಿ ಮೋದಿ

Wednesday, March 4th, 2020
modi

ನವದೆಹಲಿ : ಪ್ರಪಂಚವನ್ನು ಬೆಚ್ಚಿ ಬೀಳಿಸಿರುವ ಮಾರಕ ಸೋಂಕು ಕೊರೋನಾ ಸೋಂಕು ಎಲ್ಲರನ್ನು ಭಯಭೀತರನ್ನಾಗಿ ಮಾಡಿದೆ. ದೇಶದಲ್ಲಿಯೂ ದಿನೇ ದಿನೇ ಈ ಪ್ರಕರಣಗಳು ಹೆಚ್ಚುತ್ತಿದ್ದು ಆತಂಕ ಮೂಡಿಸಿದೆ. ಈಗಾಗಲೇ 6 ಜನರು ಈ ಸೋಂಕಿಗೆ ಬಲಿಯಾಗಿದ್ದು, ಜೈಪುರ ಪ್ರವಾಸಕ್ಕೆ ಒಂದ 15 ಜನರಲ್ಲಿ ಕೂಡ ಈ ಸೋಂಕು ದೃಢಪಟ್ಟಿದೆ. ಈ ಭಯ ಈಗ ಪ್ರಧಾನಿ ಮೋದಿಯನ್ನು ಆವರಿಸಿದ್ದು, ಈ ಹಿನ್ನೆಲೆ ಹೋಳಿ ಸಂಭ್ರಮದಲ್ಲಿ ಭಾಗಿಯಾಗದಿರಲು ಅವರು ನಿರ್ಧಾರಿಸಿದ್ದಾರೆ. ಹೋಳಿ ಹಬ್ಬದ ಸಂಭ್ರದಲ್ಲಿ ಭಾಗಿಯಾಗಲು ಈ ಹಿಂದೆ ಪ್ರಧಾನಿ […]

ಹೋಳಿ ಹಬ್ಬದ ಬಳಿಕ ದೆಹಲಿ ದಂಗೆ ಚರ್ಚೆ: ಸ್ಪೀಕರ್ ತೀರ್ಮಾನಕ್ಕೆ ಪ್ರತಿಪಕ್ಷಗಳ ಆಕ್ಷೇಪ

Tuesday, March 3rd, 2020
navadehali

ನವದೆಹಲಿ : ದೆಹಲಿ ಸಿಎಎ ದಂಗೆ ಕುರಿತು ಹೋಳಿ ಹಬ್ಬದ ನಂತರವಷ್ಟೇ ಚರ್ಚೆಗೆ ಆಸ್ಪದ ನಿಡಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸ್ಪಷ್ಟಪಡಿಸಿದ್ದಾರೆ. ದೆಹಲಿ ದಂಗೆ ಕುರಿತು ಈ ಕೂಡಲೇ ಚರ್ಚೆಗೆ ಅವಕಾಶ ಕೊಡಬೇಕು ಎಂಬ ಪ್ರತಿಪಕ್ಷಗಳ ಆಗ್ರಹವನ್ನು ತಳ್ಳಿ ಹಾಕಿದ ಓಂ ಬಿರ್ಲಾ, ಹೋಳಿ ಹಬ್ಬ ಆಚರಣೆ ಬಳಿಕವಷ್ಟೇ ಚರ್ಚೆ ಮಾಡೋಣ ಎಂದು ಹೇಳಿದರು. ಸ್ಪೀಕರ್ ನಿರ್ಣಯಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸದಸ್ಯರು, ಸರ್ಕಾರಕ್ಕೆ ಅನುಕೂಲಕರ ಪರಿಸ್ಥಿತಿ ನಿರ್ಮಾಣ ಮಾಡಿಕೊಡುವಲ್ಲಿ ಸ್ಪೀಕರ್ ನಿರತರಾಗಿದ್ದಾರೆ […]

ಸಗಣಿ ಮತ್ತು ಗೋ ಮೂತ್ರದಿಂದ ಕೊರೋನಾ ವೈರಸ್ ಗುಣಪಡಿಸಬಹುದು : ಬಿಜೆಪಿ ಶಾಸಕಿ ಸುಮನ್ ಹರಿಪ್ರಿಯಾ ಹೇಳಿಕೆ

Tuesday, March 3rd, 2020
hari-preeya

ಗೌಹಾತಿ : ಚೀನಾ ಸೇರಿದಂತೆ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಇದೇ ಸಂದರ್ಭದಲ್ಲಿ ಈ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಹಾಗೂ ಈ ವೈರಸ್ ಬಾಧಿಸುವವರಿಗೆ ಔಷಧಿ ಕಂಡುಹಿಡಿಯುವ ನಿಟ್ಟಿನಲ್ಲಿ ವಿಶ್ವ ವೈದ್ಯ ಸಮೂಹವೇ ತಲೆಕೆಡಿಸಿಕೊಂಡು ಕೂತಿದೆ. ಆದರೆ ಇತ್ತ ಅಸ್ಸಾಂ ವಿಧಾನಸಭೆಯಲ್ಲಿ ಹೇಳಿಕೆಯೊಂದನ್ನು ನೀಡಿರುವ ಭಾರತೀಯ ಜನತಾ ಪಕ್ಷದ ಶಾಸಕಿ ಸುಮನ್ ಹರಿಪ್ರಿಯಾ ಅವರು ಗೋಮೂತ್ರ ಮತ್ತು ಸಗಣಿ ಕೊರೋನಾ ವೈರಸ್ ತಡೆಯುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಗೋಮೂತ್ರ […]

ಮೃತ ಗುಪ್ತಚರ ದಳದ ಅಧಿಕಾರಿ ಅಂಕಿತ್ ಶರ್ಮಾ ಕುಟುಂಬಕ್ಕೆ 1 ಕೋಟಿ ರೂ.ಪರಿಹಾರ : ಸಿಎಂ ಅರವಿಂದ ಕೇಜ್ರಿವಾಲ್

Tuesday, March 3rd, 2020
aravndh

ನವದೆಹಲಿ : ದೆಹಲಿ ಗಲಭೆ ವೇಳೆ ಮೃತಪಟ್ಟ ಬೇಹುಗಾರಿಕೆ ದಳದ ಸಿಬ್ಬಂದಿ ಅಂಕಿತ್ ಶರ್ಮಾ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಪ್ರಕಟಿಸಿದ್ದಾರೆ. ಅಂಕಿತ್ ಶವ ಕಳೆದ ವಾರ ಚರಂಡಿಯೊಂದರಲ್ಲಿ ಪತ್ತೆಯಾಗಿತ್ತು. ಗಲಭೆ ವೇಳೆ ಮೃತಪಟ್ಟ ಹೆಡ್ಕಾನ್ಸ್ಟೆಬಲ್ ಒಬ್ಬರ ಕುಟುಂಬಕ್ಕೂ ಕೇಜ್ರಿವಾಲ್ 1 ಕೋಟಿ ರೂ. ಪರಿಹಾರವನ್ನು ಘೋಷಿಸಿದ್ದರು. ಈ ಮಧ್ಯೆ, 1,880 ದೂರವಾಣಿ ಕರೆಗಳನ್ನು ದೆಹಲಿ ಪೊಲೀಸರು ಸ್ವೀಕರಿಸಿದ್ದಾರೆ ಮತ್ತು ವದಂತಿ ಹಬ್ಬಿಸುತ್ತಿದ್ದ ಆರೋಪದ ಮೇಲೆ 40 ಜನರನ್ನು […]

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

Tuesday, March 3rd, 2020
modi

ನವದೆಹಲಿ : ಮೂರನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ವಿಜಯಿಯಾಗುತ್ತಿದ್ದಂತೆ ಅರವಿಂದ್ ಕೇಜ್ರಿವಾಲ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ನಂತರ ಟ್ವೀಟ್ ಮಾಡಿದ್ದ ಕೇಜ್ರಿವಾಲ್, ಅಮಿತ್ ಶಾ ಅವರನ್ನು ಭೇಟಿಯಾಗಿ ಸಂತಸವಾಗಿದೆ. ಉತ್ತಮ ಚರ್ಚೆ ನಡೆಯಿತು. ದಿಲ್ಲಿಯ ವಿಚಾರಗಳ ಬಗ್ಗೆ ಮಾತನಾಡಲಾಗಿದೆ ಎಂದಿದ್ದರು. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅರವಿಂದ್ […]

ಮಹದಾಯಿ ಯೋಜನೆ ಕಾಮಗಾರಿ ಸದ್ಯಕ್ಕೆ ಆರಂಭಿಸದಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Monday, March 2nd, 2020
SC

ನವದೆಹಲಿ : ಮಹಾದಾಯಿ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲು ಕರ್ನಾಟಕಕ್ಕೆ ಕೈಗೆ ಬಂದ ತುತ್ತು ಬಾಯಿಗೆ ತಲುಪಲು ಇನ್ನೂ ಸಾಧ್ಯವಾಗುತ್ತಿಲ್ಲ. ಮಹದಾಯಿ ಯೋಜನೆಯನ್ನು ತತ್ಕ್ಷಣವೇ ಆರಂಭಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೊರ್ಟ್ ಸೂಚಿಸಿದೆ. ಮಹದಾಯಿ ಪ್ರಕರಣದಲ್ಲಿ ಕರ್ನಾಟಕದ ಯೋಜನೆಯನ್ನು ಆಕ್ಷೇಪಿಸಿ ಗೋವಾ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆಯನ್ನು ನ್ಯಾ‌.ಚಂದ್ರಚೂಡ್, ನ್ಯಾ.‌ಅಜಯ್ ರಸ್ಟೋಗಿ ದ್ವಿಸದಸ್ಯ ಪೀಠವು ನಡೆಸಿತು. “2014ರ ಮಧ್ಯಂತರ ಆದೇಶದಲ್ಲಿ ನೀಡಿರುವ ನಿರ್ದೇಶನ ಪಾಲಿಸಬೇಕು. ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕು. […]

ತೀಯಾ ಸಮಾಜ ಪಶ್ಚಿಮ ವಲಯದ ವತಿಯಿಂದ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Monday, March 2nd, 2020
pooje

ಮುಂಬಯಿ : ತೀಯಾ ಸಮಾಜ ಮುಂಬಯಿಯ ಪಶ್ಚಿಮ ವಲಯ ಸಮಿತಿಯು 18ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟಿದ್ದು ಇದೀಗ ಹದಿನೆಂಟನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯನ್ನು ಆಚರಿಸುತ್ತಿರುವುದು ಅಭಿನಂದನೀಯ. ಸಮಾಜದಲ್ಲಿ ಹೆಚ್ಚಿನ ಮಟ್ಟದಲ್ಲಿ ಸಮಾಜ ಬಾಂಧವರು ಕ್ರೀಯಾಶೀಲರಾಗಲು ನಾವು ವಲಯ ಸಮಿತಿಗಳನ್ನು ಆಗ ರಚಿಸಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುದರೊಂದಿಗೆ ಸಮಾಜ ಬಾಂಧವರನ್ನು ಒಂದೆಡೆ ತರುವ ಕೆಲಸವನ್ನು ಮಾಡುತ್ತಿರುವೆವು. ಸಮಾಜದ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯರುಗಳಿಗೆ ಭಿನ್ನಾಭಿಪ್ರಾಯವಾದಲ್ಲಿ ಅವರ ಸಮಸ್ಯೆಯನ್ನು ಬಗೆಯರಿಸಲು ನಮ್ಮ ಸಮಾಜದ ಉನ್ನತ ಪದವಿಯನ್ನಲಂಕರಿಸಿದ ಸಮಾಜದ ಟ್ರಷ್ಠಿಗಳು ಈ ಬಗ್ಗೆ […]

ಕುಟುಂಬದ ಆರು ಮಂದಿಯನ್ನು ಹತ್ಯೆಗೈದಿದ್ದ ಸೈನೈಡ್ ಕಿಲ್ಲರ್ ಆತ್ಮಹತ್ಯೆಗೆ ಯತ್ನ

Thursday, February 27th, 2020
tiruvantapuram

ತಿರುವನಂತಪುರಂ : ಕುಟುಂಬದ ಆರು ಮಂದಿಯನ್ನು ಕೊಲೆ ಮಾಡಿ ಜೈಲುಪಾಲಾದ ಕೇರಳದ ಸೈನೈಡ್ ಕಿಲ್ಲರ್ ಜ್ಯೂಲಿ ಕೈ ಕೊಯ್ದುಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗುರುವಾರ ನಸುಕಿನ ಜಾವ ಜ್ಯೂಲಿ ಥಾಮಸ್ ತನ್ನ ಕೈ ಕೊಯ್ದುಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಜ್ಯೂಲಿಯ ಈ ಸ್ಥಿತಿ ನೋಡಿದ ಪೊಲೀಸರು ತಕ್ಷಣ ಆಕೆಯನ್ನು ಕೋಯಿಕೋಡ್ ನ ಮೆಡಿಕಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳೆದ ವರ್ಷ ಕೇರಳದ ಕೋಯಿಕೋಡ್ ಜಿಲ್ಲೆಯಲ್ಲಿ ಪೊಲೀಸರು ಹಂತಕಿ ಜ್ಯೂಲಿಯ ಜೊತೆಗೆ 2ನೇ ಪತಿ ಹಾಗೂ ಮತ್ತೊಬ್ಬನನ್ನು ಕೂಡ […]

ದೆಹಲಿ ಹಿಂಸಾಚಾರ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಎಸ್. ಮುರಳೀಧರ್ ವರ್ಗಾವಣೆ

Thursday, February 27th, 2020
s-muralidhar

ನವದೆಹಲಿ : ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಎಸ್. ಮುರಳೀಧರ್ ಅವರು ಬುಧವಾರ (ಫೆಬ್ರವರಿ 26, 2020) ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗಾವಣೆಗೊಂಡಿದ್ದಾರೆ. ಆದಾಗ್ಯೂ, ಈಶಾನ್ಯ ದೆಹಲಿಯಲ್ಲಿ ಗಲಭೆಗಳು ಸಂಭವಿಸುವ ಹಲವು ದಿನಗಳ ಮೊದಲು (ಫೆಬ್ರವರಿ 12) ಸುಪ್ರೀಂ ಕೋರ್ಟ್ ಕೊಲಿಜಿಯಂ ಇದನ್ನು ಶಿಫಾರಸು ಮಾಡಿದ್ದರಿಂದ ಇದು ವಾಡಿಕೆಯ ವರ್ಗಾವಣೆಯಾಗಿದೆ. ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರೊಂದಿಗೆ ಸಮಾಲೋಚಿಸಿದ ನಂತರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, […]

ದೆಹಲಿ ಹಿಂಸಾಚಾರ : ಗಲಭೆಯಲ್ಲಿ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆ

Thursday, February 27th, 2020
himsachara

ನವದೆಹಲಿ : ಕಳೆದ 4 ದಿನಗಳಿಂದ ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ಇದುವರೆಗೂ ದೆಹಲಿಯ ಸಿಎಎ ಹಿಂಸಾಚಾರಕ್ಕೆ ಒಬ್ಬ ಪೊಲೀಸ್‌ ಕಾನ್ಸ್‌ಟೇಬಲ್‌ ಹಾಗೂ ಐಬಿ ಅಧಿಕಾರಿ ಸೇರಿ 34 ಮಂದಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಭಜನ್‌ಪುರ, ಮೌಜ್‌ಪುರ್‌ ಮತ್ತು ಕಾರವಾಲ್‌ ಪ್ರದೇಶಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ದೆಹಲಿ ಪೊಲೀಸರು ಇದುವರೆಗೂ 18ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಗಲಭೆಗೆ ಸಂಬಂಧಿಸಿದಂತೆ 106 ಜನರನ್ನು ಬಂಧಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಈಶಾನ್ಯ ದೆಹಲಿಯಲ್ಲಿ ಒಂದು ತಿಂಗಳ […]