ಲಕ್ನೋ ನ್ಯಾಯಾಲಯದ ಆವರಣದಲ್ಲಿ ಸಜೀವ ಬಾಂಬ್​ ಸ್ಫೋಟ : ಹಲವರಿಗೆ ಗಾಯ

Thursday, February 13th, 2020
lacknow

ಉತ್ತರ ಪ್ರದೇಶ : ವಕೀಲರನ್ನು ಗುರಿಯಾಗಿಸಿಕೊಂಡು ಲಕ್ನೋ ನ್ಯಾಯಾಲಯದಲ್ಲಿ ಸಜೀವ ಬಾಂಬ್ ಸ್ಪೋಟಿಸಲಾಗಿದ್ದು, ಘಟನೆಯಲ್ಲಿ ಅನೇಕ ವಕೀಲರು ಗಾಯಗೊಂಡಿದ್ದಾರೆ. ಬಾಂಬ್ ಸ್ಪೋಟ ಘಟನೆ ಬಳಿಕ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗಾಯಗೊಂಡ ವಕೀಲರನ್ನು ತಕ್ಷಣಕ್ಕೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಸಿರ್ಗಂಜ್ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದರು. ಈ ವೇಳೆ ಮೂರು ಸಜೀವ ಬಾಂಬ್ ಪತ್ತೆಯಾಗಿದೆ. ಇಲ್ಲಿನ ಜಿಲ್ಲಾ ನ್ಯಾಯಾಲಯದ ವಕೀಲ ಸಂಜೀವ್ ಲೋದಿ ಅವರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಕೂದಲೆಳೆ ಅಂತರದಲ್ಲಿ […]

ಭೀಕರ ಅಪಘಾತ ಬಸ್ ಗೆ ಢಿಕ್ಕಿ ಹೊಡೆದ ಟ್ರಕ್ : 13 ಜನರು ಮೃತ್ಯು, 31 ಮಂದಿ ಗಂಭೀರ

Thursday, February 13th, 2020
uttara-pradesha

ಉತ್ತರಪ್ರದೇಶ : ಆಗ್ರಾ -ಲಕ್ನೋ ಹೆದ್ದಾರಿಯಲ್ಲಿ ಟ್ರಕ್ ಒಂದು ಬಸ್ ಗೆ ಢಿಕ್ಕಿ ಹೊಡೆದ ತೀವ್ರತೆಗೆ 13 ಜನರು ದಾರುಣವಾಗಿ ಸಾವನ್ನಪ್ಪಿ 31 ಜನರು ಗಂಭೀರ ಗಾಯಗೊಂಡ ಘಟನೆ ಫಿರೋಜಾಬಾದ್ ನಲ್ಲಿ ನಡೆದಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಗಾಯಗೊಂಡ ವ್ಯಕ್ತಿಗಳನ್ನು ಇತವಾಹಹ್ ನಲ್ಲಿರುವ ಸೈಫೈ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ರಾತ್ರಿ 10 ಗಂಟೆಯ ವೇಳೆ ಈ ಭೀಕರ ಅಪಘಾತ ಸಂಭವಿಸಿದ್ದು ಸಾವೀನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ, ದೆಹಲಿಯಿಂದ ಮೊತಿರಿಗೆ (ಬಿಹಾರ) ಹೋಗುತ್ತಿದ್ದ ಸ್ಲೀಪರ್ ಬಸ್ […]

ದ್ವೇಷ, ವಿಭಜಕ ರಾಜಕಾರಣ ಮಾಡುವವರಿಗೆ ದೆಹಲಿ ಫಲಿತಾಂಶ ತಕ್ಕ ಉತ್ತರ : ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

Tuesday, February 11th, 2020
mamatha

ಕೋಲ್ಕತಾ : ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ದಾಖಲಿಸಿರುವ ಗೆಲುವು ಪ್ರಜಾಪ್ರಭುತ್ವದ ಗೆಲುವು, ದ್ವೇಷದ ಮತ್ತು ವಿಭಜಕ ರಾಜಕಾರಣ ಮೇಲೆ ನಂಬಿಕೆ ಇಟ್ಟಿರುವ ರಾಷ್ಟ್ರೀಯ ನಾಯಕರಿಗೆ ತಕ್ಕ ಉತ್ತರ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು ಆಮ್ ಆದ್ಮಿ ಪಕ್ಷ ಮೂರನೇ ಭಾರಿಗೆ ಭರ್ಜರಿ ಗೆಲುವು ದಾಖಲಿಸಿದೆ. ಅರವಿಂದ ಕೇಜ್ರಿವಾಲ್ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಟ್ವಿಟರ್ನಲ್ಲಿ ಪ್ರಶಂಶೆ ವ್ಯಕ್ತಪಡಿಸಿರುವ […]

ಶಬರಿಮಲೆ ಅಯ್ಯಪ್ಪಸ್ವಾಮಿ ದೇವರ ಆಭರಣಗಳ ಪಟ್ಟಿ ತಯಾರಿಸಲು ಆದೇಶ

Saturday, February 8th, 2020
ayyappa

ನವದೆಹಲಿ : ಕೇರಳದ ಪಂದಳಂ ರಾಜಮನೆತನದ ಆಂತರಿಕ ಕಲಹಗಳಿಂದಾಗಿ ಶಬರಿಮಲೆ ಅಯ್ಯಪ್ಪಸ್ವಾಮಿ ದೇವರ ಆಭರಣಗಳ ಭದ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಅಯ್ಯಪ್ಪಸ್ವಾಮಿಗೆ ಸೇರಿರುವ ಎಲ್ಲ ಆಭರಣಗಳ ಸಮಗ್ರ ಪಟ್ಟಿ ತಯಾರಿಸಲು ಆದೇಶಿಸಿದೆ. ಕೇರಳ ಹೈಕೋರ್ಟ್ನ ನಿವೃತ್ತ ಜಡ್ಜ್ ಸಿ.ಎನ್. ರಾಮಚಂದ್ರನ್ ನಾಯರ್ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದ್ದು, ನಾಲ್ಕು ವಾರದೊಳಗೆ ಪಟ್ಟಿ ಸಲ್ಲಿಸಬೇಕು ಎಂದು ಕೋರ್ಟ್ ಶುಕ್ರವಾರ ಆದೇಶಿಸಿದೆ. ದೇವರ ಆಭರಣಗಳ ಉಸ್ತುವಾರಿ ಮತ್ತು ದೇವಸ್ಥಾನ ಆಡಳಿತಕ್ಕಾಗಿ ಸಮಿತಿ ನೇಮಿಸುವಂತೆ ಕೋರಿ ಪಂದಳಂ ರಾಜಮನೆತನದ ಕೆಲವರು […]

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಬಂಧನ ಅವಧಿ ಮುಂದುವರಿಕೆ

Friday, February 7th, 2020
omar

ಶ್ರೀನಗರ : ಕಳೆದ ಆರು ತಿಂಗಳಿಂದ ಗೃಹ ಬಂಧನದಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರ ಬಂಧನ ಅವಧಿಯನ್ನು ಮುಂದುವರಿಸಲಾಗಿದೆ. ಉಭಯರ ಬಂಧನದ ಅವಧಿ ಮುಗಿಯಲು ಕೆಲವೇ ಗಂಟೆಗಳಿರುವಾಗ ಸಾರ್ವಜನಿಕ ಸುರಕ್ಷತಾ ಕಾಯ್ದೆ ಹೇರಿ ಅವರ ಬಂಧನ ಅವಧಿ ವಿಸ್ತರಿಸಲಾಗಿದೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಸಂದರ್ಭದಲ್ಲಿ ಭದ್ರತೆಯ ದೃಷ್ಟಿಯಿಂದ ಇವರಿಬ್ಬರನ್ನೂ ಗೃಹ ಬಂಧನದಲ್ಲಿ ಇರಿಸಲಾಗಿತ್ತು. ಗುರುವಾರ ರಾತ್ರಿ ಒಮರ್ ಮನೆಗೆ ಮೆಜುಸ್ಟ್ರೇಟ್ ಒಬ್ಬರು ಪೊಲೀಸ್ ಅಧಿಕಾರಿಗಳೊಂದಿಗೆ […]

ಮುಂದಿನ ಬಾರಿಗೆ ಜನರು ಅಧಿಕಾರ ನೀಡಿದರೆ ದೆಹಲಿ ವಾಯು ಮಾಲಿನ್ಯ ನಿಯಂತ್ರಿಸುತ್ತೇವೆ : ಮುಖ್ಯಮಂತ್ರಿ ಕೇಜ್ರಿವಾಲ್​

Thursday, February 6th, 2020
aravind

ನವದೆಹಲಿ : ಮೊದಲ ಅವಧಿಯ ಆಡಳಿತದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ರಕ್ಷಣೆಗೆ ಆದ್ಯತೆ ನೀಡಿದ ನಮ್ಮ ಸರ್ಕಾರ ಮುಂದಿನ ಅವಧಿಯಲ್ಲಿ ಅಧಿಕಾರಕ್ಕೆ ಬಂದರೆ ಸ್ವಚ್ಛತೆ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ನಮ್ಮ ಪಕ್ಷ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸಿ ಪ್ರಚಾರ ಮಾಡುತ್ತಿದ್ದರೆ. ಬಿಜೆಪಿ ನಿಂದನೆ ಹಾಗೂ ಹಿಂಸಾಚಾರದ ವಿಚಾರದ ಮೂಲಕ ಮತ ಯಾಚಿಸುತ್ತಿದೆ ಎಂದು ಅವರು ಅಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಗೆ ಅಭಿವೃದ್ಧಿ ಬೇಕಿಲ್ಲ. ಅವರಿಗೆ ಹಿಂದು ಹಾಗೂ ಮುಸ್ಲಿಮರ ಬಗ್ಗೆ […]

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ : ರಜನಿಕಾಂತ್

Wednesday, February 5th, 2020
rajanikanth

ಚೆನ್ನೈ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಗೆ ನಟ, ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಈ ಕಾಯ್ದೆಯಿಂದ ಮುಸ್ಲಿಮರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ ಯಾವುದೇ ಪ್ರಜೆಗೂ ತೊಂದರೆ ಇಲ್ಲ. ಒಂದು ವೇಳೆ ಇದರಿಂದ ಮುಸ್ಲಿಮರಿಗೆ ತೊಂದರೆ ಆದರೆ ಇದರ ಬಗ್ಗೆ ಧ್ವನಿ ಎತ್ತುವ ಮೊದಲ ವ್ಯಕ್ತಿ ನಾನೇ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ನಡೆಯಲಿರುವ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಪರ ಮಾತನಾಡಿರುವ […]

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಟ್ರಸ್ಟ್​ ರಚನೆ : ಪ್ರಧಾನಮಂತ್ರಿ ನರೇಂದ್ರ ಮೋದಿ

Wednesday, February 5th, 2020
modi

ನವದೆಹಲಿ : ಅಯೋಧ್ಯೆಯ ವಿವಾದಿತ ಜಾಗವನ್ನು ರಾಮ್ಲಲ್ಲಾಗೆ ನೀಡಿ ಕಳೆದ ವರ್ಷ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಈ ಮೂಲಕ ಶತಮಾನಗಳ ಹಿಂದಿನ ಬಾಬ್ರಿ ಮಸೀದಿ- ರಾಮಜನ್ಮಭೂಮಿ ವಿವಾದಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿತ್ತು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಟ್ರಸ್ಟ್ ರಚಿಸುವುದಾಗಿ ಸಂಸತ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ಈ ಬಗ್ಗೆ ಸಂಸತ್ ಅಧಿವೇಶನದಲ್ಲಿ ಘೋಷಣೆ ಮಾಡಿರುವ ಪ್ರಧಾನಿ ಮೋದಿ, ‘ ಅಯೋಧ್ಯೆ ಟ್ರಸ್ಟ್ ರಚಿಸುವ ಬಗ್ಗೆ ಇಂದು ಬೆಳಗ್ಗೆ ನಡೆದ ಸಂಪುಟ ಸಭೆಯಲ್ಲಿ ನಾವೆಲ್ಲರೂ […]

ಭಾರತ್ ಬ್ಯಾಂಕ್ – ಜಯಂತ್ ಎನ್ ಪೂಜಾರಿ ಸೇವಾ ನಿವೃತ್ತಿ

Tuesday, February 4th, 2020
bharat-bank

ಮುಂಬಯಿ : ಕಳೆದ 33ವರ್ಷಗಳಿಂದ ಭಾರತ್ ಬ್ಯಾಂಕ್ ನಲ್ಲಿ ಸೇವೆ ಸಲ್ಲಿಸುತ್ತಿದ್ದು ಇದೀಗ ಬ್ಯಾಂಕ್ ನ ಬಾಂಡುಪು ವಿಲೇಜ್ ಶಾಖೆಯಲ್ಲಿ ಹಿರಿಯ ಪ್ರಭಂದಕರಾಗಿ ಸೇವೆ ಸಲ್ಲಿಸುತ್ತಿದ್ದ ಸೆವಾನಿವೃತ್ತರಾಗಿದ್ದು ಜ. 31ರಂದು ಇವರನ್ನು ಗೌರವಿಸಿ ವಿದಾಯವನ್ನು ನೀಡುವ ಕಾರ್ಯಕ್ರಮವು ಬ್ಯಾಂಕಿನ ಗೋರೆಗಾಂವ್ ಕೇಂದ್ರ ಕಚೇರಿಯಲ್ಲಿ ಜರಗಿತು. ಈ ಸಮಾರಂಭದಲ್ಲಿ ಭಾರತ್ ಬ್ಯಾಂಕ್ ನ ಆಡಳಿತ ನಿರ್ದೇಶಕ ಸಿ. ಆರ್. ಮೂಲ್ಕಿ, ಮುಖ್ಯ ಮಹಾ ಪ್ರಭಂದಕ ವಿದ್ಯಾನಂದ ಎಸ್ ಕರ್ಕೇರ, ಇತರ ಉನ್ನತಾಧಿಕಾರಿಗಳಾದ ದಿನೇಶ್ ಬಿ. ಸಾಲ್ಯಾನ್, ನಿತ್ಯಾನಂದ ಎಸ್. […]

ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಶೀಘ್ರವೇ ಗಲ್ಲಿಗೇರಿಸಬೇಕು : ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು

Tuesday, February 4th, 2020
venkayya-naidu

ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣ ಅಪರಾಧಿಗಳನ್ನು ಶೀಘ್ರವಾಗಿ ಮರಣದಂಡನೆಗೆ ಗುರಿಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಶಾಸಕ ಸಂಜಯ್ ಸಿಂಗ್ ನೀಡಿರುವ ಹೇಳಿಕೆಗೆ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಧ್ವನಿಗೂಡಿಸಿದ್ದಾರೆ. ನಾಲ್ವರನ್ನು ಶೀಘ್ರವೇ ಗಲ್ಲಿಗೇರಿಸಲು ಜವಾಬ್ದಾರಿ ಹೊಂದಿರುವ ಎಲ್ಲ ಸಂಸ್ಥೆಗಳು ತಮ್ಮ ಕರ್ತವ್ಯವನ್ನು ಅಂತಿಮಗೊಳಿಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಅವರು ರಾಜ್ಯಸಭೆಯಲ್ಲಿ ಮಾತನಾಡಿದರು. ಅಪರಾಧಿಗಳನ್ನು ಕ್ಷಮಿಸಲು ಸಾಧ್ಯವಿಲ್ಲ. ರಾಷ್ಟ್ರದ ಜನರು ಕೂಡ ಇದನ್ನು ಒಪ್ಪುವುದಿಲ್ಲ. ಅಪರಾಧಿಗಳಿಗೆ ಎಲ್ಲ ರೀತಿಯ ಕಾನೂನು ನೆರವು […]