ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶ್​​​​ ಘೋಷ್ ವಿರುದ್ಧ ಎಫ್​​ಐಆರ್​​​

Tuesday, January 7th, 2020
Ish-ghosh

ನವದೆಹಲಿ : ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್ನೊಳಗೆ ಕಿಡಿಗೇಡಿಗಳಿಂದ ತೀವ್ರ ಹಲ್ಲೆಗೊಳಗಾದ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್ ಸೇರಿದಂತೆ 19 ಮಂದಿ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುಸುಕುಧಾರಿಗಳು ಕ್ಯಾಂಪಸ್ಗೆ ನುಗ್ಗಿ ಹಿಂಸಾಚಾರ ನಡೆಸುವ ಮುನ್ನ ದಿನ ಜನವರಿ 4ನೇ ತಾರಿಕು ಜೆಎನ್ಯು ಸರ್ವರ್‌ ಕೊಠಡಿಯಲ್ಲಿ ಐಶೆ ಘೋಷ್ ಸೇರಿದಂತೆ 19 ಮಂದಿ ದಾಂದಲೆ ನಡೆಸಿದರು. ಈ ಆರೋಪದ ಮೇಲೆ ಐಶೆ ಘೋಷ್ ಮತ್ತಿತರ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕ್ಯಾಂಪಸ್ನಲ್ಲಿ ಹಿಂಸಾಚಾರ […]

ಶಬರಿಮಲೆ ವಿವಾದ : ಜ.13 ರಿಂದ ಸುಪ್ರೀಂಕೋರ್ಟ್​​ನಲ್ಲಿ ಸಾಂವಿಧಾನಿಕ ಪೀಠ ವಿಚಾರಣೆ

Tuesday, January 7th, 2020
SC

ನವದೆಹಲಿ : ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಬೇಕೇ ಬೇಡವೇ ಎನ್ನುವ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಜನವರಿ 13ನೇ ತಾರೀಕಿನಿಂದ ಅಂತಿಮ ವಿಚಾರಣೆ ಆರಂಭವಾಗಲಿದೆ. ಸುಪ್ರೀಂಕೋರ್ಟ್ನ 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ವಿಚಾರಣೆ ನಡೆಸಲಿದೆ. ಇದೇ ವೇಳೆ ಮುಸ್ಲಿಂ ಮತ್ತು ಪಾರ್ಸಿ ಸುಮಾಯದ ಮಹಿಳೆಯರ ತಾರತಮ್ಯದ ಬಗ್ಗೆಯೂ ವಿಚಾರಣೆ ಮಾಡಲಿದೆ. ಈ ಹಿಂದೆ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಕುರಿತು ಸುಪ್ರೀಂಕೋರ್ಟ್ ತನ್ನ ತೀರ್ಮಾನ ಪ್ರಕಟಿಸಿತ್ತು. ಈ ಪ್ರಕರಣವನ್ನು […]

ಜಯ ಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಪೇಜಾವರ ಶ್ರೀಯವರಿಗೆ ನುಡಿ ನಮನ

Monday, January 6th, 2020
mumbay

ಮುಂಬಯಿ : ವಿಶ್ವಕ್ಕೆ ಮಾರ್ಗದರ್ಶಕರಾಗಿ, ಸರ್ವಶ್ರೇಷ್ಠ ಸ್ವಾಮೀಜಿಯವರೆಂದಿನಿಸಿದ ಶ್ರೀ ಪೇಜಾವರ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಗೆ ಶ್ರದ್ದಾಂಜಲಿ ಸಭೆಯನ್ನು ಜ. 3 ರಂದು ಸಂಜೆ ಅಂಧೇರಿ ಪೂರ್ವದ ಮರೋಲ್ – ಮರೋಶಿ ರೋಡ್ ನಲ್ಲಿರುವ ಮಾಂಗಲ್ಯ ಕಟ್ಟಡದಲ್ಲಿನ ಸಿ-502ರಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನಡೆಸಲಾಯಿತು. ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರಗೆ ನುಡಿನಮನ ಸಲ್ಲಿಸುತ್ತಾ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ತೋನ್ಸೆ ಜಯಕೃಷ್ಣ ಎ. ಶೆಟ್ಟಿಯವರು ಮಾತನಾಡುತ್ತಾ ಶ್ರೀ ಶ್ರೀ […]

ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಲಷ್ಕರ್​-ಇ-ತೋಯ್ಬಾ ಉಗ್ರನನ್ನು ಬಂಧಿಸಿದ ಭದ್ರತಾ ಪಡೆ

Saturday, January 4th, 2020
bhadrata-pade

ಜಮ್ಮು : ಭದ್ರತಾ ಪಡೆಯು ಲಷ್ಕರ್-ಇ-ತೋಯ್ಬಾ ಸಂಘಟನೆಗೆ ಸೇರಿದ ಉಗ್ರ ನಿಸಾರ್ ಅಹಮದ್ ದಾರ್ನನ್ನು ಶ್ರೀನಗರದಲ್ಲಿ ಶುಕ್ರವಾರ ತಡರಾತ್ರಿ ಬಂಧಿಸಿದೆ. ಉಗ್ರ ಅಡಗಿ ಕುಳಿತಿದ್ದಾನೆ ಎಂಬ ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿತ್ತು. ಜಮ್ಮು-ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಶ್ರೀನಗರದ ಮಹಾರಾಜ ಹರಿ ಸಿಂಗ್ ಆಸ್ಪತ್ರೆಯಲ್ಲಿ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಅಂದರೆ 2019 ನವೆಂಬರ್ನಲ್ಲಿ ಕುಲ್ಲಾನ್ ಗಂದೇರ್ಬಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ನಿಸಾರ್ ತಪ್ಪಿಸಿಕೊಂಡಿದ್ದ. ಆತ […]

ದೆಹಲಿ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ : ರಕ್ಷಣಾ ಕಾರ್ಯಾಚರಣೆ ವೇಳೆ ಕುಸಿದ ಕಟ್ಟಡ

Thursday, January 2nd, 2020
dehli

ನವದೆಹಲಿ : ಬೆಂಕಿ ಅವಘಡ ಸಂಭವಿಸಿದ್ದ ಪೀರಗರ್ಹಿಯ ಫ್ಯಾಕ್ಟರಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ ಹಲವು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಪ್ರಾಥಮಿಕ ಮೂಲಗಳ ಪ್ರಕಾರ, ಪೀರಗರ್ಹಿಯ ಫ್ಯಾಕ್ಟರಿಯೊಂದಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿತ್ತು. ಕೂಡಲೇ ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಧಾವಿಸಿದ್ದವು. ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ […]

ಗಣರಾಜ್ಯೋತ್ಸವದ ಪರೇಡ್ ನಲ್ಲಿ ಪಶ್ಚಿಮಬಂಗಾಳದ ಸ್ತಬ್ದಚಿತ್ರ ಪ್ರಸ್ತಾಪ ತಿರಸ್ಕರಿಸಿದ ಕೇಂದ್ರ ಸರ್ಕಾರ

Thursday, January 2nd, 2020
mamatha

ಕೋಲ್ಕತಾ : ಜನವರಿ 26 ರಂದು ರಾಷ್ಟ್ರರಾಜಧಾನಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್ ನಲ್ಲಿ ಪಶ್ಚಿಮಬಂಗಾಳದ ಟ್ಯಾಬ್ಲೋ(ಸ್ತಬ್ದಚಿತ್ರ) ಪ್ರದರ್ಶಿಸುವ ಪ್ರಸ್ತಾಪವನ್ನು ಕೇಂದ್ರ ರಕ್ಷಣಾ ಸಚಿವಾಲಯ ತಿರಸ್ಕರಿಸಿದ್ದು, ಈ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಂತಾಗಿದೆ. ಪಶ್ಚಿಮಬಂಗಾಳ ಸರ್ಕಾರದ ಟ್ಯಾಬ್ಲೋ ಪ್ರಸ್ತಾಪವನ್ನು ತಜ್ಞರ ಸಮಿತಿ ಎರಡು ಬಾರಿ ಸಭೆ ನಡೆಸಿ ಪರಿಶೀಲನೆ ನಡೆಸಿತ್ತು. ಪಶ್ಚಿಮಬಂಗಾಳದ ಟ್ಯಾಬ್ಲೋ ಪ್ರದರ್ಶನದ ಪ್ರಸ್ತಾಪವನ್ನು ಪರಿಗಣಿಸದಿರಲು ಸಮಿತಿ ನಿರ್ಧರಿಸಿದೆ ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಗಣರಾಜ್ಯೋತ್ಸವ […]

ಎಲ್​ಪಿಜಿ ಬಳಕೆದಾರರಿಗೆ ಹೊಸ ವರ್ಷದ ಆರಂಭದಲ್ಲೇ ದರ ಏರಿಕೆ

Wednesday, January 1st, 2020
LPG

ನವದೆಹಲಿ : ಜನವರಿ 1ರಿಂದಲೇ ಜಾರಿಗೆ ಬರುವಂತೆ ದೇಶಾದ್ಯಂತ ಸಬ್ಸಿಡಿ ರಹಿತ ಎಲ್ಪಿಜಿ ಅಥವಾ ಅಡುಗೆ ಅನಿಲ ದರ ಏರಿಕೆಯಾಗಿದ್ದು, ಒಂದೇ ತಿಂಗಳ ಅಂತರದಲ್ಲಿ ಐದನೇ ಬಾರಿಗೆ ಹೆಚ್ಚಳವಾಗುವ ಮೂಲಕ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಮುಂಬೈನಲ್ಲಿ ಪ್ರತಿ ಸಿಲಿಂಡರ್ಗೆ 19 ಮತ್ತು 19.5 ರೂ. ಏರಿಕೆ ಕಂಡಿದ್ದು, ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ಗೆ ದೆಹಲಿಯಲ್ಲಿ 714 ರೂ. ಮತ್ತು ಮುಂಬೈನಲ್ಲಿ 684.50 ರೂ. ಇರುವುದಾಗಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ತಿಳಿಸಿದೆ. ಆದರೆ, […]

ಹೊಸ ವರ್ಷದ ದಿನದಂದೇ ರೈಲ್ವೆ ಪ್ರಯಾಣ ದರದಲ್ಲಿ ಹೆಚ್ಚಳ

Wednesday, January 1st, 2020
Railway

ನವದೆಹಲಿ : ಹೊಸ ವರ್ಷದ ದಿನದಂದೇ ರೈಲ್ವೆ ಇಲಾಖೆ ಪ್ರಯಾಣಿಕರಿಗೆ ಜೇಬಿಗೆ ಬರೆ ಎಳೆದಿದೆ. ರೈಲು ಪ್ರಯಾಣದ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ದರ ಜನವರಿ 1ರಿಂದಲೇ ಜಾರಿಗೆ ಬರಲಿದೆ. ಉಪನಗರ ರೈಲು ಪ್ರಯಾಣ ದರದಲ್ಲಿ ಬದಲಾವಣೆ ಇಲ್ಲ. ಆರ್ಡಿನರಿ ನಾನ್ ಎಸಿ, ಎಸಿ, ಶತಾಬ್ದಿ, ರಾಜಧಾನಿ, ತುರಂತ್ ರೈಲುಗಳಿಗೆ ದರ ಹೆಚ್ಚಳ ಅನ್ವಯವಾಗಲಿದೆ. ಟಿಕೆಟ್ ಕಾಯ್ದಿರಿಸುವಿಕೆ ಶುಲ್ಕದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ಇಲಾಖೆ ತಿಳಿಸಿದೆ. ಈಗಾಗಲೇ ಕಾಯ್ದಿರಿಸಿರುವ ಟಿಕೆಟ್ಗಳಿಗೆ ದರ ಹೆಚ್ಚಳ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ […]

ಕೇಸರಿ ಬಟ್ಟೆ ಬಗ್ಗೆ ಟೀಕಿಸಿದ್ದ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ

Tuesday, December 31st, 2019
yogi-adhithyanath

ಲಕ್ನೋ : ಕೇಸರಿ ಬಟ್ಟೆ ಯೋಗಿ ಆದಿತ್ಯನಾಥ್ ಅವರ ಸ್ವತ್ತಲ್ಲ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ತಿರುಗೇಟು ನೀಡಿರುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ‘ನಾನು ಎಲ್ಲವನ್ನೂ ತ್ಯಾಗ ಮಾಡಿಯೇ ಸಾರ್ವಜನಿಕ ಸೇವೆಗೆ ಬಂದವನು’ ಎಂದು ಹೇಳಿದ್ದಾರೆ. ಸಿಎಎ ವಿರುದ್ಧದ ಹೋರಾಟವನ್ನು ಬೆಂಬಲಿಸಿ ಲಕ್ನೋ ಪ್ರವಾಸದಲ್ಲಿರುವ ಪ್ರಿಯಾಂಕಾ ಗಾಂಧಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡುವಾಗ ಯೋಗಿ ಆದಿತ್ಯನಾಥ್ ವಿರುದ್ಧ ಹರಿಹಾಯ್ದಿದ್ದರು. ಸಿಎಂ ಯೋಗಿ […]

ದೇಶದ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಜನರಲ್ ಬಿಪಿನ್ ರಾವತ್ ನೇಮಕ

Tuesday, December 31st, 2019
bipin

ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ದೇಶದ ಮೊದಲು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೆಮಕಗೊಂಡಿದ್ದಾರೆ. 62 ವರ್ಷದ ಬಿಪಿನ್ ರಾವತ್ ಅವರು ಸೇನಾ ಮುಖ್ಯಸ್ಥರಾಗಿ ನಿವೃತ್ತಿ ಹೊಂದಲು ಒಂದು ದಿನ ಇರುವಂತೆಯೇ ಅಚ್ಚರಿಯ ಬೆಳವಣಿಗೆಯಲ್ಲಿ ಸಿಎಎಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರ ಕೂಡ ಬಿಪಿನ್ ರಾವತ್ ಅವರಿಗೆ ಅನುಕೂಲವಾಗುವಂತೆ ಕಾನೂನು ತಿದ್ದುಪಡಿ ಮಾಡಿದೆ. ಸೇನಾ ಮುಖ್ಯಸ್ಥರ ವಯೋಮಿತಿಯನ್ನು 62ರಿಂದ 65 ವರ್ಷಕ್ಕೆ ನಿನ್ನೆ ಏರಿಸಿತ್ತು. ಕೆಲ ದಿನಗಳ ಹಿಂದಷ್ಟೇ ರಕ್ಷಣಾ […]