ಇತಿಹಾಸದ ಪುಟ ಸೇರಿದ ಕಾರ್ಗಿಲ್ ಯುದ್ಧವಿಮಾನ ಮಿಗ್​ 27

Friday, December 27th, 2019
mig-27

ನವದೆಹಲಿ : 1999ರ ಕಾರ್ಗಿಲ್ ಯುದ್ಧದಲ್ಲಿ ಪ್ರಮುಖ ಪಾತ್ರವಹಿಸಿದ ಮಿಗ್ 27 ಯುದ್ಧ ವಿಮಾನ ಇತಿಹಾಸ ಪುಟ ಸೇರಲು ಸಜ್ಜಾಗಿದೆ. ಕಳೆದ ಮೂರು ದಶಕಗಳಿಂದ ಭಾರತೀಯ ವಾಯು ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಈ ಯುದ್ಧವಿಮಾನ ಇಂದು ಕೊನೆಯ ಹಾರಾಟ ನಡೆಸಿತು. ಭಾರತೀಯ ವಾಯು ಸೇನೆಯ ಬೆನ್ನೆಲುಬಾಗಿದ್ದ ಈ ಯುದ್ಧ ವಿಮಾನ ಕಡೆಯದಾಗಿ ಜೋಧ್ಪುರ್ ಏರ್ಬೇಸ್ನಲ್ಲಿ ಹಾರಾಟ ನಡೆಸಿತು. ದೇಶದ ಯುದ್ಧ ಮತ್ತು ಶಾಂತಿ ಸಮಯದಲ್ಲಿ ಅಪಾರ ಸೇವೆ ಸಲ್ಲಿಸಿರುವ ಈ ಯುದ್ಧವಿಮಾನ ಕಾರ್ಗಿಲ್ ಸಮಯದಲ್ಲಿ ಶತ್ರು ದೇಶದ […]

‘ಭಾರತದ ಪ್ರತಿಯೊಬ್ಬ ನಾಗರಿಕನೂ ಹಿಂದುವೇ’ : ಮೋಹನ್​ ಭಾಗವತ್​​

Thursday, December 26th, 2019
RSS

ಹೈದರಾಬಾದ್ : ಭಾರತದ ಪ್ರತಿಯೊಬ್ಬ ನಾಗರೀಕನೂ ಹಿಂದುವೇ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ಧಾರೆ. ಇಂದು ಹೈದರಾಬಾದ್‍ನಲ್ಲಿ ಆರ್ಎಸ್ಎಸ್ನ ಕಾರ್ಯಾಗಾರದಲ್ಲಿ ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋಹನ್ ಭಾಗವತ್, ಭಾರತದ ಎಲ್ಲಾ 130 ಕೋಟಿ ಜನರೂ ಹಿಂದೂಗಳೇ. ಯಾವುದೇ ಭಾಷೆ ಮಾತಾಡಲಿ; ಯಾವುದೇ ದೇವರನ್ನಾದರೂ ನಂಬಲಿ; ಭಾರತದಲ್ಲಿ ಯಾವುದೇ ಮೂಲೆಯಲ್ಲಾದರೂ ನೆಲೆಸಿರಲಿ ಎಲ್ಲರೂ ಹಿಂದುಗಳೇ ಎಂಬ ಸಂದೇಶ ಸಾರಿದ್ದಾರೆ. ಭಾರತದ ಜಲ, ಕಾಡು, ಪ್ರಾಣಿ, ಮಣ್ಣನ್ನು ಹಿಂದೂ ಪ್ರೀತಿಸುತ್ತಾನೆ. ನಿಜವಾದ […]

ಕೇರಳದಲ್ಲಿ ಸಿಎಂ ಯಡಿಯೂರಪ್ಪಗೆ ಕಪ್ಪು ಬಾವುಟ ಪ್ರದರ್ಶನ : ಎಸ್​​​ಎಫ್​​ಐ ಮತ್ತು ಕಾಂಗ್ರೆಸ್​​ನ ಐವರು ಬಂಧನ​​

Thursday, December 26th, 2019
BSY

ತಿರುವನಂತಪುರಂ : ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕಾರು ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಆರೋಪದ ಮೇಲೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಕಾಂಗ್ರೆಸ್ನ ಐವರು ಕಾರ್ಯಕರ್ತರ ಬಂಧನವಾಗಿದೆ. ಸಿಪಿಐನ ಭಾರತೀಯ ವಿದ್ಯಾರ್ಥಿ ಫೆಡರೇಶನ್‌(ಎಸ್‌ಎಫ್‌ಐ)ನ ಮೂವರು ಮತ್ತು ಯುವ ಕಾಂಗ್ರೆಸ್ನ ಇಬ್ಬರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ಧಾರೆ. ಕಳೆದ ಎರಡು ದಿನಗಳ ಹಿಂದೆ ಸೋಮವಾರ(ಡಿ.23) ರಾತ್ರಿ ಕೇರಳದ ತಿರುವನಂತಪುರಂ ಪ್ರವೇಶಿಸುತ್ತಿದ್ದಂತೆ ಸಿಎಂ ಯಡಿಯೂರಪ್ಪನವರ ಕಾರಿಗೆ ಅಡ್ಡ […]

ಎನ್​ಪಿಆರ್​ಗೂ ಎನ್ಆರ್​ಸಿಗೂ ಸಂಬಂಧವಿಲ್ಲ : ಯಾರೂ ಪೌರತ್ವ ಕಳೆದುಕೊಳ್ಳುವುದಿಲ್ಲ; ಅಮಿತ್ ಶಾ ಸ್ಪಷ್ಟನೆ

Wednesday, December 25th, 2019
Amit

ನವದೆಹಲಿ : ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ಪಿಆರ್) ಯೋಜನೆಗೆ ಕೇಂದ್ರ ಸಂಪುಟ ಇವತ್ತು ಅನುಮೋದನೆ ನೀಡಿದ ಬೆನ್ನಲ್ಲೇ ಎನ್ಆರ್ಸಿ, ಪೌರತ್ವ ಕಾಯ್ದೆ ಬಗ್ಗೆ ಹಲವರು ಆತಂಕ ವ್ಯಕ್ತಪಡಿಸಲು ಪ್ರಾರಂಭಿಸಿದ್ಧಾರೆ. ಎನ್ಪಿಆರ್ ಬಗ್ಗೆಯೂ ಅನುಮಾನದ ದೃಷ್ಟಿ ಇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ ಅವರು ಎನ್ಪಿಆರ್, ಎನ್ಆರ್ಸಿ ಕುರಿತು ಉದ್ಭವಿಸಿರುವ ಅನುಮಾನಗಳಿಗೆ ತೆರೆ ಎಳೆಯಲು ಯತ್ನಿಸಿದ್ಧಾರೆ. ಎನ್ಆರ್ಸಿಗೂ ಎನ್ಪಿಆರ್ಗೂ ಯಾವುದೇ ಸಂಬಂಧವಿಲ್ಲ. ಭಾರತಾದ್ಯಂತ ಎನ್ಆರ್ಸಿ ಜಾರಿಗೊಳಿಸುವ ಬಗ್ಗೆ ಇನ್ನೂ ಚರ್ಚೆ ನಡೆದಿಲ್ಲ ಎಂದೂ […]

ಅತ್ಯಾಚಾರಿಗಳನ್ನು ಬಂಧಿಸದೆ ನಿರ್ಲಕ್ಷ್ಯ : ಪೊಲೀಸ್ ಠಾಣೆಯೆದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

Tuesday, December 24th, 2019
Lacknow

ಲಕ್ನೋ : ತನ್ನ ಮೇಲೆ ಮೂವರು ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರ ನಿರ್ಲಕ್ಷ್ಯ ಧೋರಣೆಗೆ ಬೇಸತ್ತ ಅಪ್ರಾಪ್ತ ಯುವತಿ ತನ್ನ ತಂದೆ-ತಾಯಿಯೊಂದಿಗೆ ವಾರಾಣಸಿಯ ಪೊಲೀಸ್ ಅಧಿಕಾರಿಯಕಚೇರಿಯ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಮೂವರನ್ನೂ ಆಸ್ಪತ್ರೆಗೆ ಸೇರಿಸಲಾಗಿದ್ದು, ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ವಾರಾಣಸಿಯ ಪೊಲೀಸ್ ಅಧಿಕಾರಿಯ ಆಫೀಸ್ ಎದುರು ವಿಷಯ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಯುವತಿ ತನ್ನ ಮೇಲಾದ ಸಾಮೂಹಿಕ ಅತ್ಯಾಚಾರದ ಆರೋಪಿಗಳಿಗೆ ಶಿಕ್ಷೆ ಆಗಬೇಕೆಂದು ಹಲವು ಬಾರಿ ಪೊಲೀಸ್ ಠಾಣೆಗೆ […]

ದೆಹಲಿ ಕಿರಾರಕಿ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ : 9 ಮಂದಿ ಸಾವು; 10 ಮಂದಿಗೆ ತೀವ್ರ ಗಾಯ

Monday, December 23rd, 2019
benki

ನವದೆಹಲಿ : ಭಾರತದ ರಾಜಧಾನಿ ದೆಹಲಿಯ ಕಿರಾರಿ ಎಂಬ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಂದು ಸೋಮವಾರ ತಡರಾತ್ರಿ 12.30 ಗಂಟೆಗೆ ಸಂಭವಿಸಿದ ಈ ಬೆಂಕಿ ಅನಾಹುತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 10ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇಲ್ಲಿನ ಬಟ್ಟೆಯ ಗೋದಾಮಿ ಅಂದರೆ ವೇರ್ ಹೌಸ್ನಲ್ಲಿ ಮಧ್ಯರಾತ್ರಿ 12.30ಕ್ಕೆ ದಿಢೀರ್ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಮೂರು ಅಂತಸ್ತಿನ ಕಟ್ಟಡದಲ್ಲಿ ವೇರ್ ಹೌಸ್ ಇತ್ತು ಎನ್ನಲಾಗಿದೆ. ಈ […]

ಶ್ರೀಕೃಷ್ಣ ವಿಠ್ಹಲ ಪ್ರತಿಷ್ಠಾನ ಮುಂಬಯಿ ಇದರ 22 ನೇ ವರ್ಷದ ಧಾರ್ಮಿಕ, ಸಾಂಸ್ಕೃತಿಕ ಉತ್ಸವ

Monday, December 23rd, 2019
Mumbai

ಮುಂಬಯಿ : ಆರಂಭದಲ್ಲಿ ಪ್ರತಿಷ್ಠಾನ ಸ್ಥಾಪನೆಯಾದಾಗ ಜನರಿಗೆ ಪ್ರಯೋಜನಕಾರಿಯಾಗಲು ನಾಲ್ಕು ವಿವಿಧ ಯೋಜನೆಗಳನ್ನು ನಾವು ಹಮ್ಮಿಕೊಂಡಿದ್ದೆವು. ಶಾಲಾ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಧಾರ್ಮಿಕ ಪ್ರಜ್ನೆ ಮೂಡಿಸಲು ಹರಿಕಥಾ ಸಪ್ತಾಹ, ಧರ್ಮ ಜಾಗೃತಿಗೊಳಿಸಲು ಯಾಗ ಮುಂತಾದವುಗಳು ಕಳೆದ 22 ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿದೆ. ಇದು ನಮ್ಮ ಸಂಸ್ಥೆಯ ಪದಾ ಧಿಕಾರಿಗಳ ಪರಿಶ್ರಮ ಹಾಗೂ ದಾನಿಗಳ ಸಹಕಾರದಿಂದ ಸಾಧ್ಯ ಎಂದು ಶ್ರೀಕೃಷ್ಣ ವಿಠ್ಹಲ ಪ್ರತಿಷ್ಠಾನ ಮುಂಬಯಿ ಇದರ ಸಂಸ್ಥಾಪಕ ವಿದ್ವಾನ್ ಕೈರಬೆಟ್ಟು ವಿಶ್ವನಾಥ ಭಟ್ ಇವರು ತಿಳಿಸಿದರು. ಶ್ರೀಕೃಷ್ಣ […]

ಪಿಜಿ ಮಾಲೀಕನ ಕಾಟಕ್ಕೆ ಬೇಸತ್ತ ಗಗನಸಖಿ ನೇಣಿಗೆ ಶರಣು

Thursday, December 19th, 2019
PG

ನವದೆಹಲಿ : ಖಾಸಗಿ ಏರ್ ಲೈನ್ಸ್ ನಲ್ಲಿ ಗಗನಸಖಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಕೆ ಗೆಸ್ಟ್ ಹೌಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ಗುರುಗ್ರಾಮ್ ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಪೈಸ್ ಜೆಟ್ ವಿಮಾನದಲ್ಲಿ ಗಗನಸಖಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಿಸ್ಥು ಸರ್ಕಾರ್ ಗುರುಗ್ರಾಮ್ ನಲ್ಲಿರುವ ಗೆಸ್ಟ್ ಹೌಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈಕೆ ಪಶ್ಚಿಮಬಂಗಾಳದ ಸಿಲಿಗುರಿ ನಿವಾಸಿ ಎಂದು ವರದಿ ತಿಳಿಸಿದೆ. ಪಿಜಿ ಮಾಲೀಕ ಈಕೆ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಗಗನಸಖಿ ತಂದೆ ಆರೋಪಿಸಿದ್ದಾರೆ. ಅಲ್ಲದೇ ಪದೇ, ಪದೇ […]

ದೆಹಲಿಯಲ್ಲಿ ಇನ್ನೂ ಆರದ ಪೌರತ್ವ ತಿದ್ದುಪಡಿ ಕಾಯ್ದೆಯ ಕಿಚ್ಚು : ಮೆಟ್ರೋ ನಿಲ್ದಾಣ ಸ್ಥಗಿತ, ಟ್ರಾಫಿಕ್​ ಜಾಮ್

Thursday, December 19th, 2019
dehli

ನವ ದೆಹಲಿ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರಂಭವಾಗಿರುವ ಪ್ರತಿಭಟನೆಯ ಕಾವು ಸದ್ಯಕ್ಕೆ ತಣ್ಣಗಾಗುವ ಯಾವುದೇ ಲಕ್ಷಣಗಳೂ ಕಾಣಿಸುತ್ತಿಲ್ಲ. ಇಂದೂ ಸಹ ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು ದೆಹಲಿಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ 13 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಸ್ಥಗಿತಗೊಳಿಸಲಾಗಿದೆ. ಅಧಿಕ ವಾಹನ ಸಂದಣಿ ಹೊಂದಿರುವ ದೆಹಲಿಯಲ್ಲಿ ಮೆಟ್ರೋ ಸಂಚಾರ ಪ್ರಯಾಣಿಕರ ಜೀವನಾಡಿ. ಪ್ರತಿದಿನ ಲಕ್ಷಾಂತರ ಜನ ಮೆಟ್ರೋ ಸೇವೆಯನ್ನು ಅವಲಂಭಿಸಿದ್ದಾರೆ. ಆದರೆ, ಪೌರತ್ವ […]

ಧೋನಿ ಸಿಕ್ಸರ್ ದಾಖಲೆ ಮುರಿದ ಹಿಟ್‍ಮ್ಯಾನ್ ರೋಹಿತ್ ಶರ್ಮಾ

Wednesday, December 18th, 2019
dhoni-and-rohith-sharma

ವಿಶಾಖಪಟ್ಟಣಂ : ಟೀಂ ಇಂಡಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಭಾರತದ ನೆಲದಲ್ಲಿ ಸಿಡಿಸಿದ್ದ ಸಿಕ್ಸರ್ ದಾಖಲೆಯನ್ನು ಹಿಟ್‍ಮ್ಯಾನ್ ರೋಹಿತ್ ಶರ್ಮಾ ಮುರಿದಿದ್ದಾರೆ. ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆ ಮಾಡಿದ್ದಾರೆ. ಏಕದಿನ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಭಾರತದ ನೆಲದಲ್ಲಿ 186 ಸಿಕ್ಸರ್ ಸಿಡಿಸಿದರೆ, ಹಿಟ್‍ಮ್ಯಾನ್ ರೋಹಿತ್ 187 ಸಿಕ್ಸರ್ ದಾಖಲೆ ಬರೆದಿದ್ದಾರೆ. ಧೋನಿ 186 ಇನ್ನಿಂಗ್ಸ್ ನಲ್ಲಿ ಈ ಸಾಧನೆ ಮಾಡಿದರೆ, ರೋಹಿತ್ 116 ಇನ್ನಿಂಗ್ಸ್ ಗಳಲ್ಲಿ […]