ಅಭಿವೃದ್ಧಿಗೆ ಜನರು ನೀಡಿದ ಉಡುಗೊರೆ… ಕರ್ನಾಟಕ ಚುನಾವಣೆ ಗೆಲ್ಲುವುದೇ ನಮ್ಮ ಗುರಿ: ಶಾ

Monday, December 18th, 2017
amit-shah

ನವದೆಹಲಿ: ಬಹು ನಿರೀಕ್ಷಿತ ಗುಜರಾತ್‌‌-ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ದಾಖಲಿಸಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌‌ ಶಾ ಎರಡೂ ರಾಜ್ಯದ ಜನರಿಗೆ ಧನ್ಯವಾದ ಹೇಳಿದ್ದಾರೆ. ನವದೆಹಲಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಇದು ವಂಶವಾದ, ಜಾತೀವಾದದ ವಿರುದ್ಧದ ಗೆಲುವು. ದೇಶದ ಜನರು ಅಭಿವೃದ್ಧಿಗೆ ಮಣೆ ಹಾಕಿದ್ದಾರೆ. ಬಿಜೆಪಿ ಗೆಲುವು ಪ್ರಜಾಸತ್ತಾತ್ಮಕ ಗೆಲುವು. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಗುಜರಾತ್ ಚುನಾವಣಾ ಫಲಿತಾಂಶ ನನಗೆ ನಿರಾಸೆ ತಂದಿಲ್ಲ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

Monday, December 18th, 2017
rahul-gandhi

ಹೊಸದಿಲ್ಲಿ: ” ಗುಜರಾತ್ ಚುನಾವಣಾ ಫಲಿತಾಂಶ ನನಗೆ ನಿರಾಸೆ ತಂದಿಲ್ಲ. ಫಲಿತಾಂಶ ತೃಪ್ತಿ ತಂದಿದೆ” ಎಂದು ಅಖಿಲ ಭಾರತೀಯ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷ ರಾಹುಲ್ ಗಾಂಧಿ ಅಭಿಪ್ರಾಯಪಟ್ಟರು. ಎಐಸಿಸಿ ಕಚೇರಿಯಲ್ಲಿ ಗುಜರಾತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಗುಜರಾತ್ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದ ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಮೊದಲ ಚುನಾವಣಾ ಫಲಿತಾಂಶ ಹೊರಬಂದಿದೆ. ಚುನಾವಣೆ ನಡೆಯುವ ಹೊತ್ತಿಗೆ ಅವರು ಎಐಸಿಸಿ ಉಪಾಧ್ಯಕ್ಷರಾಗಿದ್ದರು. ಅವರ ನೇತೃತ್ವದಲ್ಲಿ ಕಾಂಗ್ರೆಸ್ […]

ಕಾಂಗ್ರೆಸ್ ಹಿಂದೆಹಿಂದೆ, ಬಿಜೆಪಿ ಮುಂದೆಮುಂದೆ

Monday, December 18th, 2017
himachala

ಅಹ್ಮದಾಬಾದ್: ಈ ವರ್ಷದ ಕಟ್ಟಕಡೆಯ ಚುನಾವಣೆ ರಿಯಾಲಿಟಿ ಶೋಗೆ ಗುಜರಾತ್ ಅಣಿಯಾಗಿದೆ. ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ತಿಳಿಯಲು ಕ್ಷಣಗಣನೆ ಆರಂಭವಾಗಿದೆ. 22 ವರ್ಷಗಳ ಕಾಲ ಆಡಳಿತ ನಡೆಸಿರುವ ಭಾರತೀಯ ಜನತಾ ಪಕ್ಷ ಪ್ರಥಮ ಬಾರಿಗೆ ಕಾಂಗ್ರೆಸ್ಸಿನಿಂದ ಭಾರೀ ತುರುಸಿನ ಸ್ಪರ್ಧೆಯನ್ನು ಈ ಬಾರಿ ಎದುರಿಸಿದೆ. ತಕ್ಕಡಿ ಯಾವುದೇ ಬದಿಗೂ ತೂಗಬಹುದು ಎನ್ನುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. LIVE : ಹಿಮಾಚಲ ಪ್ರದೇಶ ಚುನಾವಣೆ ಫಲಿತಾಂಶ 9.56 : ಬಿಜೆಪಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ರಾಜಕೋಟ್ ಪಶ್ಚಿಮ […]

ಗುಜರಾತ್‌ ಚುನಾವಣೆ: ತಮ್ಮ ಹಕ್ಕು ಚಲಾಯಿಸಿದ ತಾಯಿ-ಮಗ

Thursday, December 14th, 2017
narendra-modi

ಅಹಮದಾಬಾದ್: ಗುಜರಾತ್‌ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತವರ ತಾಯಿ ಹೀರಾಬೆನ್‌ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಸೇರಿದಂತೆ ಹಲವು ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಜರಾತ್‌ ವಿಧಾನಸಭಾ 182 ಸದಸ್ಯ ಬಲವನ್ನು ಹೊಂದಿದೆ. ಮೊದಲ ಹಂತದ ಚುನಾವಣೆ ಡಿ.9 ರಂದು ಮುಗಿದಿದ್ದು, ಇಂದು 2ನೇ ಹಾಗೂ ಕೊನೆಯ ಹಂತದ ಮತದಾನ ನಡೆಯುತ್ತಿದೆ. 2ನೇ ಹಂತದಲ್ಲಿ ರಾಜಧಾನಿ ಅಹಮದಾಬಾದ್ ಸೇರಿ ಒಟ್ಟು 14 ಜಿಲ್ಲೆಗಳ 93 ಕ್ಷೇತ್ರಗಳಲ್ಲಿದ್ದು, 2.22 […]

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಮನಮೋಹನ್ ಸಿಂಗ್ ವಿರುದ್ಧ ಆರೋಪಕ್ಕೆ ಶರದ್ ಪವಾರ್ ಕಿಡಿ

Wednesday, December 13th, 2017
shard-power

ನಾಗ್ಪುರ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುಜರಾತ್ ನಲ್ಲಿ ಬಿಜೆಪಿಯನ್ನು ಸೋಲಿಸಲು ಪಾಕಿಸ್ತಾನದ ಜತೆಗೆ ಪಿತೂರಿ ನಡೆಸಿದ್ದಾರೆ ಎಂದು ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು ಎಂದು ಎನ್ಸಿಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಹೇಳಿದ್ದಾರೆ. ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತಿರುವ ಪವಾರ್, ವಿಶ್ವದಲ್ಲಿ ಯಾರು ಕೂಡಾ ಮನಮೋಹನ್ ಸಿಂಗ್ ಅವರ ಕಡೆ ಬೊಟ್ಟು ಮಾಡಲಾಗದಂತ ವ್ಯಕ್ತಿತ್ವ ಅವರದ್ದು ಅಂತಹವರ ವಿರುದ್ಧ ನರೇಂದ್ರ ಮೋದಿ ಅವರು ಕೀಳುಮಟ್ಟದ ಆರೋಪ […]

ಆರೋಪ-ಪ್ರತ್ಯಾರೋಪಗಳ ನಂತ್ರ ಕೈಕುಲುಕಿದ ಹಾಲಿ-ಮಾಜಿ ಪ್ರಧಾನಿಗಳು!

Wednesday, December 13th, 2017
Narendra-modi

ನವದೆಹಲಿ: ಗುಜರಾತ್ ಚುನಾವಣಾ ಪ್ರಚಾರದ ವೇಳೆ ಆರೋಪ-ಪ್ರತ್ಯಾರೋಪಗಳನ್ನು ನಡೆಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿಯಾಗಿ ಕೈಕುಲುಕಿ ಮಾತನಾಡಿದರು. 2001ರ ಸಂಸತ್ ದಾಳಿಯ ವರ್ಷಾಚರಣೆ ಹಿನ್ನೆಲೆಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಆಗಮಿಸಿದ್ದ ವೇಳೆ ಹಾಲಿ ಹಾಗೂ ಮಾಜಿ ಪ್ರಧಾನಿಗಳ ಸಮಾಗಮ ಆಗಿದೆ. ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ನಮನ ಸಲ್ಲಿಸಲು ಸಂಸತ್‌ ಕಟ್ಟಡ ಪ್ರವೇಶಿಸುವ ಮುನ್ನ ಉಭಯ ನಾಯಕರು ಪರಸ್ಪರ ಭೇಟಿಯಾಗಿ ಕೈಕುಲುಕಿ ಕುಶಲೋಪರಿ ವಿಚಾರಿಸಿದರು. ಗುಜರಾತ್ ಚುನಾವಣಾ […]

ಹೆಚ್ಚಿನ ಬೆಲೆಗೆ ಮಿನರಲ್‌‌ ವಾಟರ್‌‌ ಮಾರಿದ್ರೆ ಜೈಲೂಟ ಗ್ಯಾರಂಟಿ!

Tuesday, December 12th, 2017
minaral-water

ನವದೆಹಲಿ: ಮಿನರಲ್‌‌ ವಾಟರ್‌‌ ಬಾಟಲ್‌ಗಳ ಎಂಆರ್‌‌ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರೇ ಎಚ್ಚರ. ಯಾಕಂದರೆ, ಎಂಆರ್‌‌ಪಿಗಿಂತ ಮಿನರಲ್‌‌ ವಾಟರ್‌‌ ಬಾಟಲ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಿದರೆ ಜೈಲು ಶಿಕ್ಷೆ ಎದುರಿಸಬೇಕಾಗುತ್ತಿದೆ. ಹೌದು, ಮಿನರಲ್‌‌ ವಾಟರ್‌‌ ಬಾಟಲ್‌ಗಳನ್ನು ಎಂಆರ್‌‌ಪಿಗಿಂತ ಹೆಚ್ಚಿನ ಬೆಲೆಗೆ ಮಾರುವ ಹೋಟೆಲ್‌‌, ರೆಸ್ಟೋರೆಂಟ್‌ ಹಾಗೂ ಮಲ್ಟಿಪ್ಲೆಕ್ಸ್‌‌ನವರಿಗೆ ಜೈಲು ಶಿಕ್ಷೆ ವಿಧಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ. ಮಿನರಲ್‌‌ ವಾಟರ್‌‌ ಬಾಟಲ್‌ಗಳ ಸಂಬಂಧ ಎಫ್‌‌ಹೆಚ್‌‌ಆರ್‌ಐ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಇಂದು ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಹೋಟೆಲ್‌‌, […]

ಬಂಟ್ಸ್ ಸಂಘ ಮುಂಬಯಿ 2017-20 ಸಮಿತಿಗೆ ನೂತನ ಸಾರಥಿಗಳ ಆಯ್ಕೆ

Wednesday, November 1st, 2017
bunts sanga

ಮುಂಬಯಿ: ಬಂಟ ಸಮುದಾಯದ ರಾಷ್ಟ್ರದ ಪ್ರತಿಷ್ಠಿತ ಸಂಸ್ಥೆಯೆಂದೆಣಿಸಿದ ಬಂಟ್ಸ್ ಸಂಘ ಮುಂಬಯಿ ಇದರ ವಾರ್ಷಿಕ 89 ನೇ ಮಹಾಸಭೆಯು ಇಂದಿಲ್ಲಿ ಸೋಮವಾರ ಪೂರ್ವಾಹ್ನ ಕುರ್ಲಾ ಪೂರ್ವದಲ್ಲಿನ ಬಂಟರ ಭವನದ ಶ್ರೀಮತಿ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸಭಾಗೃಹದಲ್ಲಿ ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಪ್ರಭಾಕರ ಎಲ್.ಶೆಟ್ಟಿ ಅಧ್ಯಕ್ಷತೆಯಲ್ಲಿ ನೆರವೇರಿದ್ದು ಸಭೆಯಲ್ಲಿ ಸಂಘದ 2017-20 ನೇ ಸಾಲಿಗೆ ನೂತನ ಸಾರಥಿಗಳ ಆಯ್ಕೆ ನಡೆಸಲ್ಪಟ್ಟಿತು. ಸಂಘದ 29 ನೇ ಅಧ್ಯಕ್ಷರಾಗಿ ಪದ್ಮನಾಭ ಎಸ್.ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಗಿ ರಂಜನಿ ಸುಧಾಕರ ಹೆಗ್ಡೆ ಮತ್ತು ಯುವ […]

ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ :ಸುಪ್ರೀಂ ಕೋರ್ಟ್

Friday, October 13th, 2017
rohingya muslims

ನವದೆಹಲಿ: ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಕಾಲವಕಾಶ ನೀಡಿರುವ ಸುಪ್ರೀಂ ಕೋರ್ಟ್, ನವೆಂಬರ್ 21ರ ಮುಂದಿನ ವಿಚಾರಣೆವರೆಗೂ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರನ್ನು ದೇಶದಿಂದ ಗಡಿಪಾರು ಮಾಡದಂತೆ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರ ಗಡಿಪಾರು ವಿಷಯಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದ್ದು, ಮಾನವೀಯ ಮೌಲ್ಯಗಳು ನಮ್ಮ ಸಂವಿಧಾನದ ಆಧಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಮುಗ್ಧ ಮಕ್ಕಳು ಮತ್ತು ಮಹಿಳೆಯರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ […]

ಆರುಷಿ-ಹೇಮರಾಜ್ ಜೋಡಿ ಕೊಲೆ ಪ್ರಕರಣ, ಪೋಷಕರು ನಿರ್ದೋಷಿಗಳು : ಹೈ ಕೋರ್ಟ್

Thursday, October 12th, 2017
arushi murder

ಅಲಹಾಬಾದ್: ಆರುಷಿ-ಹೇಮರಾಜ್ ಜೋಡಿ ಕೊಲೆ ಪ್ರಕರಣದಲ್ಲಿ ದಂತ ವೈದ್ಯ ದಂಪತಿ ರಾಜೇಶ್ ತಲ್ವಾರ್, ನೂಪುರ್ ತಲ್ವಾರ್ ಅವರನ್ನು ಅಲಹಾಬಾದ್ ಹೈ ಕೋರ್ಟ್ ನಿರ್ದೋಷಿಗಳೆಂದು ಪರಿಗಣಿಸಿ, ತೀರ್ಪು ನೀಡಿದೆ. 2008 ಮೇನಲ್ಲಿ ನಡೆದ ಈ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ವಿಚಾರಣಾ ನ್ಯಾಯಾಲಯ ದೋಷಿಗಳೆಂದು ತೀರ್ಪು ನೀಡಿ, ತಲ್ವಾರ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ತಲ್ವಾರ್ ದಂಪತಿ ವಿರುದ್ಧದ ಸಾಕ್ಷಿಗಳು ದುರ್ಬಲವಾಗಿದೆ ಎಂದಿರುವ ಹೈ ಕೋರ್ಟ್, ನಿರ್ದೋಷಿಗಳೆಂದು ಘೋಷಿಸಿದೆ. ಇದೊಂದು ಕ್ರೂರ ಕೊಲೆ. ದೋಷಿಗಳಿಗೆ ಮರಣ ದಂಡನೆ […]