ಪವಿತ್ರ ನದಿ ಗಂಗಾನದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯ, ಯುವಕ ಜೈಲುಪಾಲು

Wednesday, October 11th, 2017
Ganga river

ನವದೆಹಲಿ: ಹಿಂದೂಗಳ ಪವಿತ್ರ ನದಿ ಗಂಗಾನದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯ ಮಾಡಿದ್ದ ಯುವಕನೋರ್ವ ಭರ್ತಿ 42 ದಿನಗಳ ಕಾಲ ಜೈಲುಪಾಲದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಜಾಕಿರ್ ಅಲಿ ತ್ಯಾಗಿ ಎಂಬ ಯುವಕ ಗಂಗಾನದಿ ಕುರಿತಂತೆ ಅಪಹಾಸ್ಯ ಮಾಡಿದ್ದ. ಗಂಗೆಯನ್ನು ‘ಜೀವಂತ ಧಾರ್ಮಿಕ ಅಸ್ತಿತ್ವ’ ಎನ್ನುವ ಕೇಂದ್ರ ಸರ್ಕಾರ ರಾಮಮಂದಿರನ್ನು ಕಟ್ಟಿ ತೀರುತ್ತೇವೆ ಎಂದು ಹೇಳುತ್ತದೆ. ಆದರೆ ಇಲ್ಲಿಯವರೆಗೂ ಏರ್ ಇಂಡಿಯಾದ ಹಜ್ ಸಬ್ಸಿಡಿಯನ್ನು ಮಾತ್ರ ಏಕೆ ಹಿಂಪಡೆದಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು […]

ದೆಹಲಿ ಕರ್ನಾಟಕ ಸಂಘದಲ್ಲಿ ಜನಕಪುರಿ ಮಹಿಳಾ ಮಂಡಳಿಯ ಸಂಭ್ರಮದ ಬೆಳ್ಳಿ ಹಬ್ಬದ ಆಚರಣೆ

Tuesday, October 10th, 2017
new delhi

ನವ ದೆಹಲಿ: ನಮ್ಮ ಮಹಿಳೆಯರ, ಮಹಿಳೆಯರಿಗೋಸ್ಕರ ಮಹಿಳೆಯರ ಕಾರ್ಯಕ್ರಮ, ಮೊದಲುಅವರಿಗೆ ಅಭಿನಂದನೆಗಳು. ಕರ್ನಾಟಕ ಸಂಘ ನನಗೆ ತವರು ಮನೆಯ ಹಾಗೆ ಏಕೆಂದರೆ ನಾನು ಮೊದಲು ಐ.ಎ.ಎಸ್.  ಮಾಡುತ್ತಿರುವಾಗ ನಾನು ಇಲ್ಲಿಯೇ ಉಳಿದುಕೊಂಡು ಐ.ಎ.ಎಸ್. ಉತ್ತೀರ್ಣಳಾಗಿದ್ದು. ಆದ್ದರಿಂದ ದೆಹಲಿ ಕರ್ನಾಟಕ ಸಂಘದಿಂದ ಯಾವಾಗ ಕರೆ ಬಂದರೂ ನಾನು ಎಷ್ಟೇ ಕಾರ್ಯನಿರತಳಾಗಿದ್ದರೂ ಕೂಡ ಬಂದೇ ಬರುತ್ತೇನೆ ಎಂದು ತಮ್ಮ ಕೃತಜ್ಞತೆಯನ್ನು ಸಲ್ಲಿಸುತ್ತಾ ಕನ್ನಡದವರೇ ಆದ ಶ್ರೀಮತಿ ಧನಕ್ಷ್ಮೀ, ಐ.ಎ.ಎಸ್. ನಿವಾಸೀ ಆಯುಕ್ತರು, ಉತ್ತರ ಪ್ರದೇಶ ಭವನ, ನವದೆಹಲಿ, ಅವರು ದೆಹಲಿ […]

ಭಾರತ ಭಯೋತ್ಪಾದನೆ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ ಪಾಕ್

Saturday, October 7th, 2017
KPEC

ಇಸ್ಲಾಮಾಬಾದ್: ಭಯೋತ್ಪಾದನೆಯನ್ನು ತಡೆಗಟ್ಟಲು ಸಾಧ್ಯವಾಗದ ಪಾಕಿಸ್ತಾನ ಭಾರತದ ವಿರುದ್ಧ ಮತ್ತೊಮ್ಮೆ ಆರೋಪ ಮಾಡಿದ್ದು, ಪಾಕಿಸ್ತಾನದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಭಾರತ ಭಯೋತ್ಪಾದನೆ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದೆ. ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ನಫೀಜ್ ಝಕಾರಿಯಾ, ಭಾರತದ ವಿರುದ್ಧ ಆರೋಪ ಮಾಡಿದ್ದು, ತೆಹ್ರೀಕ್-ಇ-ತಾಲೀಬಾನ್ ಪಾಕಿಸ್ತಾನ್(ಟಿಟಿಪಿ) ಹಾಗೂ ಜಮಾತ್-ಉಲ್- ಅಹ್ರಾರ್(ಜೆಯುಎ) ಉಗ್ರ ಸಂಘಟನೆಗಳನ್ನು ಪಾಕಿಸ್ತಾನದ ವಿರುದ್ಧ ಪ್ರಯೋಗಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇನ್ನು ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಆಸೀಫ್ ಘಫೂರ್ ಸಹ ಭಾರತದ ವಿರುದ್ಧ ಆರೋಪ ಮಾಡಿದ್ದು, […]

ಜಿಎಸ್‌ಟಿ ಬದಲಾವಣೆಯಿಂದಾಗಿ ದೀಪಾವಳಿ ಬೇಗನೆ ಬಂದಿದೆ :ಮೋದಿ

Saturday, October 7th, 2017
modi

ದ್ವಾರಕಾ: ಈ ಬಾರಿಯ ಸರಕು ಮತ್ತು ಸೇವಾ ತೆರಿಗೆ ಸಮಿತಿ ಸಭೆಯಲ್ಲಿ ತೆಗೆದುಕೊಂಡ ಉತ್ತಮ ನಿರ್ಧಾರಗಳಿಂದ ಈ ಬಾರಿಯ ದೀಪಾವಳಿ ಹಬ್ಬ ಅತ್ಯಂತ ಮುಂಚಿತವಾಗಿ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಎರಡು ದಿನಗಳ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಈ ವೇಳೆ ಮಾತನಾಡಿರುವ ಅವರು, 27 ಸರಕು, ಸೇವೆಗಳ ತೆರಿಗೆ ದರ ಇಳಿಸಲು ಶುಕ್ರವಾರ ನಡೆದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿರುವುದನ್ನು ಉಲ್ಲೇಖಿಸಿದ್ದಾರೆ. ಇದೇ ವೇಳೆ ಮಾತನಾಡಿದ […]

ಗಾಂಧಿ ಹತ್ಯೆ ಮರುತನಿಖೆ, ಅಮಿಕಸ್ ಕ್ಯೂರಿ ನೇಮಿಸಿದ ಸುಪ್ರೀಂಕೋರ್ಟ್‌

Friday, October 6th, 2017
ghandhi

ನವದೆಹಲಿ: ಮಹಾತ್ಮ ಗಾಂಧಿ ಹತ್ಯೆ ಪ್ರಕರಣದ ಮರುತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ಈ ಸಂಬಂಧ ನ್ಯಾಯಾಲಯಕ್ಕೆ ನೆರವಾಗಲು ಅಮಿಕಸ್‌ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ) ನೇಮಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಎ. ಬೋಬ್ಡೆ ಮತ್ತು ಎಲ್‌. ನಾಗೇಶ್ವರ ರಾವ್‌ ಅವರಿದ್ದ ನ್ಯಾಯಪೀಠವು ಹಿರಿಯ ವಕೀಲ ಅಮರೇಂದರ್‌ ಶರಣ್‌ ಅವರನ್ನು ಅಮಿಕಸ್‌ ಕ್ಯೂರಿಯಾಗಿ ನೇಮಕ ಮಾಡಿದೆ. ಮಹಾತ್ಮ ಗಾಂಧಿ ಹತ್ಯೆ ಕುರಿತು ಪೂರ್ಣ ಸತ್ಯ ಹೊರಬರಬೇಕಿದ್ದು, ಈ ಬಗ್ಗೆ ಮರುತನಿಖೆಗೆ ಆದೇಶಿಸಬೇಕು […]

ವಿ5 ಹೆಲಿಕಾಪ್ಟರ್ ಪತನ: 7 ಯೋಧರ ಸಾವು

Friday, October 6th, 2017
new delhi

ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ ವಿ5 ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತೆವಾಂಗ್‌ನಲ್ಲಿ ಪತನಗೊಂಡದ್ದು, ಹೆಲಿಕಾಪ್ಟರ್‌ನಲ್ಲಿದ್ದ 7 ಮಂದಿ ಯೋಧರು ಮೃತಪಟ್ಟಿದ್ದಾರೆ. ವಿಶ್ವದ ಅತ್ಯಾಧುನಿಕ ಸೇನಾ ಹೆಲಿಕಾಪ್ಟರ್‌ಗಳಲ್ಲಿ ಒಂದಾಗಿರುವ ವಿ5 ಹೆಲಿಕಾಪ್ಟರ್ (ಮಿ-17) ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿ ಪೈಲಟ್‌ ಸೇರಿದಂತೆ 7 ಮಂದಿ ಯೋಧರಿದ್ದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.  

ರೈತರ ಅಭಿವೃದ್ಧಿ, ಗ್ರಾಮೀಣ ಜನತೆಗೆ ಉದ್ಯೋಗ ಮತ್ತು ಮೂಲಭೂತ ಸೌಲಭ್ಯ ಸರ್ಕಾರದ ಮೂಲ ಆದ್ಯತೆ: ಜೈಟ್ಲಿ

Wednesday, February 1st, 2017
Jaitley

ನವದೆಹಲಿ: 2017-18ರ ಕೇಂದ್ರ ಬಜೆಟ್ ಮಂಡಿಸಿದ ಸಚಿವ ಅರುಣ್ ಜೈಟ್ಲಿ, ರೈತರ ಅಭಿವೃದ್ಧಿ, ಗ್ರಾಮೀಣ ಜನತೆಗೆ ಉದ್ಯೋಗ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ತಮ್ಮ ಸರ್ಕಾರದ ಮೂಲ ಆದ್ಯತೆಗಳಾಗಿವೆ ಎಂದು ಪ್ರಕಟಿಸಿದ್ದಾರೆ. ಕೃಷಿ ಮತ್ತು ರೈತರ ಅಭಿವೃದ್ಧಿಗಾಗಿ ಈ ಸಾಲಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳನ್ನು ಜೈಟ್ಲಿ ಪ್ರಸ್ತಾಪಿಸಿದರು. ಮುಂದಿನ ಐದು ವರ್ಷಗಳಲ್ಲಿ ಕೃಷಿ ಆದಾಯ ದ್ವಿಗುಣಗೊಳಿಸಲು ಬದ್ಧವಿರುವುದಾಗಿ ತಿಳಿಸಿದರು. ರೈತರು ಮತ್ತು ಕೃಷಿ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಘೋಷಿಸಿದ ಅಂಶಗಳು ಹೀಗಿವೆ. ಕೃಷಿ ಸಾಲ.. 1. ಮುಂದಿನ ಐದು […]

ಇಸ್ಲಾಂನ ತ್ರಿವಳಿ ತಲಾಖ್ ಅಸಂವಿಧಾನಿಕ, ಇದು ಮುಸ್ಲಿಂ ಮಹಿಳೆಯರ ಹಕ್ಕಿನ ಉಲ್ಲಂಘನೆಯಾಗಿದೆ: ಅಲಹಾಬಾದ್ ಹೈಕೋರ್ಟ್

Thursday, December 8th, 2016
trevali talak

ಲಖ್ನೋ: ದೇಶಾದ್ಯಂತ ದೊಡ್ಡ ವಿವಾದಕ್ಕೆ ಹಾಗೂ ಚರ್ಚೆಗೆ ಕಾರಣವಾಗಿದ್ದ ಇಸ್ಲಾಂನ ತ್ರಿವಳಿ ತಲಾಖ್ ಪದ್ಧತಿ ಅಸಂವಿಧಾನಿಕ, ಇದು ಮುಸ್ಲಿಂ ಮಹಿಳೆಯರ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಉತ್ತರಪ್ರದೇಶದ ಅಲಹಾಬಾದ್ ಹೈಕೋರ್ಟ್ ಪೀಠ ಮಹತ್ವದ ತೀರ್ಪನ್ನು ಗುರುವಾರ ನೀಡಿದೆ. ಮೂರು ಬಾರಿ ತಲಾಖ್ ಎಂದು ಹೇಳಿ ಮಹಿಳೆಗೆ ವಿಚ್ಛೇದನ ನೀಡುವ ಇಸ್ಲಾಂನ ಈ ಪದ್ಧತಿ ಸಂವಿಧಾನ ಬಾಹಿರವಾದದ್ದು ಎಂದು ಅಲಹಾಬಾದ್ ಹೈಕೋರ್ಟ್ ಪೀಠ ಹೇಳಿರುವುದಾಗಿ ಎಎನ್ ಐ ವರದಿ ಮಾಡಿದೆ. ತ್ರಿವಳಿ ತಲಾಖ್ ಪದ್ಧತಿ ಮುಸ್ಲಿಂ ಮಹಿಳೆಯರ ಹಕ್ಕಿನ ಉಲ್ಲಂಘನೆಯ […]

ಮಹದಾಯಿ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ಮಹತ್ವದ ಸರ್ವಪಕ್ಷ ಸಭೆ ಆಗಸ್ಟ್‌ 7ರಂದು ನಿಗದಿ

Thursday, August 4th, 2016
Mahadayi

ಬೆಂಗಳೂರು: ಮಹದಾಯಿ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಮುಂದಿನ ನಡೆಗಳನ್ನು ನಿರ್ಧರಿಸಲು ಮಹತ್ವದ ಸರ್ವಪಕ್ಷ ಸಭೆ ಆಗಸ್ಟ್‌ 7ರಂದು ನಿಗದಿಯಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕಾನೂನು ತಜ್ಞರ ಜತೆ ಚರ್ಚಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು. ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರು, ರಾಜ್ಯದ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು, ಉತ್ತರ ಕರ್ನಾಟಕ ಭಾಗದ ಶಾಸಕರು, ವಿಧಾನ ಪರಿಷತ್‌ ಸದಸ್ಯರನ್ನು ಸಭೆಗೆ ಆಹ್ವಾನಿಸಲಾಗುವುದು. ಸರ್ವಪಕ್ಷ ಸಭೆಯಲ್ಲಿ ನ್ಯಾಯಾಧಿಕರಣದ ಮುಂದೆ […]

ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಮಸೂದೆಗೆ ರಾಜ್ಯಸಭೆಯ ಅನುಮೋದನೆ

Thursday, August 4th, 2016
GST

ಹೊಸದಿಲ್ಲಿ: ಒಂದು ದೇಶ-ಒಂದೇ ರೀತಿಯ ತೆರಿಗೆ’ ಎಂಬ ಧ್ಯೇಯ ಹೊಂದಿರುವ “ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಸೂದೆ’ಗೆ ಕೊನೆಗೂ ರಾಜ್ಯಸಭೆಯ ಅನುಮೋದನೆ ಸಿಕ್ಕಿದೆ. ಬುಧವಾರ ಮಧ್ಯಾಹ್ನ ಮಂಡಿಸಲಾದ ಐತಿಹಾಸಿಕ ಮಸೂದೆ ಕುರಿತು ಸತತ 7 ಗಂಟೆಗಳ ಚರ್ಚೆ ನಡೆದು, ಬಳಿಕ ಮಸೂದೆಯನ್ನು ಮತಕ್ಕೆ ಹಾಕಿದಾಗ, ಮಸೂದೆ ಪರ 203 ಮತ್ತು ವಿರುದ್ಧವಾಗಿ ಮತ ಚಲಾವಣೆಯಾದವು. ಈ ಮೂಲಕ ಮಸೂದೆಗೆ ಸದನವು ಬಹುಮತದ ಅನುಮೋದನೆ ನೀಡಿತು. ಮಸೂದೆಗೆ ಎಐಎಡಿಎಂಕೆ ಮಾತ್ರವೇ ವಿರೋಧ ವ್ಯಕ್ತಪಡಿಸಿತ್ತು. ಆದರೆ ಕಾಂಗ್ರೆಸ್‌ ಕೂಡಾ […]