ದೇಶದಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳನ್ನು ಪರಿಗಣಿಸಿ ಕಠಿಣ ಕಾನೂನು ಕ್ರಮ ಜಾರಿ

Thursday, August 4th, 2016
drink-and-drive

ಹೊಸದಿಲ್ಲಿ: ದೇಶದಲ್ಲಿ ವಾರ್ಷಿಕ ಸಂಭವಿಸುವ 5 ಲಕ್ಷ ಅಪಘಾತ ಪ್ರಕರಣಗಳಲ್ಲಿ 1.5 ಲಕ್ಷ ಜನ ಸಾವನ್ನಪ್ಪುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರಕಾರ, ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಠಿನ ಕಾನೂನುಗಳನ್ನು ಒಳಗೊಂಡ ಮೋಟಾರು ಕಾಯ್ದೆ (ತಿದ್ದುಪಡಿ) ಮಸೂದೆ 2016ಕ್ಕೆ ಬುಧವಾರ ಅನುಮೋದನೆ ನೀಡಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರಿಗೆ 10,000 ರೂ. ವರೆಗೆ ದಂಡ, ಹಿಟ್‌ ಆ್ಯಂಡ್‌ ರನ್‌ ಕೇಸಲ್ಲಿ ಸಂತ್ರಸ್ತರಿಗೆ 2 ಲಕ್ಷ ರೂ. ಪರಿಹಾರ, ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ 10 ಲಕ್ಷ ರೂ. […]

ರಿಕ್ಷಾ ಚಾಲಕ, ಪಡೀಲ್ ನಿವಾಸಿ ಮುಖೇಶ್ ಮೇಲೆ ಹಲ್ಲೆ

Thursday, July 7th, 2016
Mukhesh

ಮಂಗಳೂರು: ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿರುವ ಪಡೀಲ್ ಭಜರಂಗದಳದ ಸದಸ್ಯನೂ ಆಗಿರುವ ಯುವಕನೋರ್ವನ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ನಿನ್ನೆ ಸಂಜೆ ನಗರದ ಫೈಸಲ್‍ನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಪಡೀಲ್ ನಿವಾಸಿ ಮುಖೇಶ್ ಎಂದು ಗುರುತಿಸಲಾಗಿದೆ. ಮುಖೇಶ್ ತನ್ನ ರಿಕ್ಷಾದಲ್ಲಿ ಫೈಸಲ್‍ನಗರಕ್ಕೆ ಬಾಡಿಗೆಗೆ ತೆರಳಿದ್ದ. ಈ ವೇಳೆ ರಸ್ತೆಯಲ್ಲಿ ಶೇಖರಣೆಯಾಗಿದ್ದ ಕೆಸರು ನೀರು ರಸ್ತೆ ಬದಿ ನಿಂತಿದ್ದ ಯುವಕನೋರ್ವನ ಮೇಲೆ ಎರಚಿದೆ. ಇದನ್ನೇ ನೆಪವಾಗಿರಿಸಿದ ಸ್ಥಳೀಯ ಯುವಕರು ಮುಖೇಶ್‍ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಸ್ಥಳಕ್ಕೆ […]

ಲಿಪ್ಫ್ ಕೊಟ್ಟು ರೇಪ್ ಆಂಡ್ ಮರ್ಡರ್ ಮಾಡಿದವನಿಗೆ ಮರಣದಂಡನೆ

Friday, October 30th, 2015
Rape Murder

ಮುಂಬೈ: ಟೆಕ್ಕಿ ಎಸ್ತರ್ ಅನೂಹ್ಯಾ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪಿ ಚಂದ್ರಬಾನ್ ಸನಾಪ್ ಗೆ ಮುಂಬೈ ಕೋರ್ಟ್ ಶುಕ್ರವಾರ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿ, ಇದು ಅತ್ಯಪರೂಪ ಪ್ರಕರಣವಾಗಿದ್ದು, ಆರೋಪಿಗೆ ಗಲ್ಲುಶಿಕ್ಷೆಯೇ ಸೂಕ್ತವಾದದ್ದು ಎಂದು ಅಭಿಪ್ರಾಯವ್ಯಕ್ತಪಡಿಸಿದೆ. 2014ರ ಜನವರಿ 5ರಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ಅನೂಹ್ಯಾ ಮುಂಬೈಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಲೋಕಮಾನ್ಯ ತಿಲಕ್ ರೈಲ್ವೆ ನಿಲ್ದಾಣದ ಬಳಿ ಅನೂಹ್ಯಳಿಗೆ ತಾನು ತನ್ನ ಬೈಕ್ ನಲ್ಲಿ ಲಿಫ್ಟ್ ಕೊಡುವುದಾಗಿ ತಿಳಿಸಿದ್ದ. ಸನಾಪ್ ಮಾತನ್ನು ನಂಬಿ ಬೈಕ್ ನಲ್ಲಿ […]

ಪಾಕಿಸ್ಥಾನಃ ಗಡಿ ಉಲ್ಲಂಘನೆ ಮಾಡಿದ ಆರೋಪ ೨೫ ಮೀನುಗಾರರ ಬಂಧನ

Tuesday, September 30th, 2014
Fishermen

ಇಸ್ಲಮಾಬಾದ್‌ : ಭಾನುವಾರ ಸಂಜೆ ಮೀನು ಹಿಡಿಯಲು ತೆರಳಿದ 25 ಭಾರತೀಯ ಮೀನುಗಾರರನ್ನು ಪಾಕಿಸ್ತಾನದ ಬಂದರು ರಕ್ಷಣಾ ಪಡೆ ಭಂದಿಸಿದೆ. ಗಡಿ ಉಲ್ಲಂಘನೆ ಮಾಡಿದ ಆರೋಪ ಎದುರಿಸಿತ್ತುರುವ  ಎಲ್ಲಾ ಮೀನುಗಾರರನ್ನು ಕರಾಚಿಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಇವರೆಲ್ಲರಿಗೂ ಕನಿಷ್ಠ 1 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಗಳಿವೆ.

ತಮಿಳು ನಾಡು: ಹೊಸ ಸಿ.ಎಂ. ಆಗಿ ಹಣ­ಕಾಸು ಸಚಿವ ಪನ್ನೀರ್‌ಸೆಲ್ವಂ ಆಯ್ಕೆ

Monday, September 29th, 2014
O.Panneerselvam

ಚೆನ್ನೈ:  ತಮಿಳುನಾಡು ಮುಖ್ಯ­ಮಂತ್ರಿ ಜೆ.ಜಯಲಲಿತಾ ಅವರು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ ಕಾರಣ ತೆರವಾದ ಮುಖ್ಯ ಮಂತ್ರಿ ಸ್ಟಾನಕ್ಕೆ ಹಣಕಾಸುಸಚಿವ ಎಂ.ಪನ್ನೀರ್‌ಸೆಲ್ವಂ ಅವರನ್ನು ಆಯ್ಕೆ ಮಾಡಲಾಗಿದೆ. ಎಐಎಡಿಎಂಕೆ ಪ್ರಧಾನ ಕಚೇರಿ­ಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾ­ಯಿತು. ಈ ಹಿಂದೆ ೨೦೦೧ರಲ್ಲಿ ತಾನ್ಸಿ ಭೂಹಗರಣ­ದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪಿ­ನಿಂದಾಗಿ ಜಯಲಲಿತಾ ಅವರು ರಾಜೀನಾಮೆ ನೀಡ­ಬೇಕಾಗಿ ಬಂದಿದ್ದಾಗ ಪನ್ನೀರ್‌ಸೆಲ್ವಂ ಅವರು ಕೇವಲ  ಆರು ತಿಂಗಳ ಕಾಲ ಜಯಾ ಉತ್ತರಾ­ಧಿಕಾರಿ­ಯಾಗಿ ೨೦೦೧ರ ಸೆ.೨೧ರಿಂದ ೨೦೦೨ರ ಮಾರ್ಚ್‌ ೧ರವರೆಗೆ  ಅವರು ಮುಖ್ಯಮಂತ್ರಿಯಾಗಿ ಆಡಳಿತ […]

ಅರ್ಚರಿಯಲ್ಲಿ ಭಾರತಕ್ಕೆ ಬಂಗಾರದ ಅಚ್ಚರಿ

Saturday, September 27th, 2014
ಅರ್ಚರಿಯಲ್ಲಿ ಭಾರತಕ್ಕೆ ಬಂಗಾರದ ಅಚ್ಚರಿ

ಇಂಚೆನ್‌ : ಭಾರತದ ಕ್ರೀಡಾ ಪ್ರೇಮಿಗಳ ಪಾಲಿಗೆ ಶನಿವಾರ ಶುಭದಿನ. 17ನೇ ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯಲ್ಲಿ ಭಾರತವು ತಲಾ ಒಂದು ಬಂಗಾರ ಹಾಗೂ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಚಾರಿತ್ರಿಕ ಸಾಧನೆ ಮಾಡಿದೆ. ಇಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದ ಕಂಪೌಂಡ್ ಪುರುಷರ ಆರ್ಚರಿ  ತಂಡವು ಬಂಗಾರ ಗೆದ್ದಿದೆ. ಈ ಕ್ರೀಡಾಕೂಟದಲ್ಲಿ ಭಾರತಕ್ಕೆ ದೊರೆತ ಎರಡನೇ ಚಿನ್ನದ ಪದಕವಿದು. ಇದೇ ವಿಭಾಗದ ಮಹಿಳೆಯರ ತಂಡವು   ಕಂಚಿನ ಸಾಧನೆ ಮಾಡಿದೆ. ಮತ್ತೊಂದೆಡೆ ಪುರುಷರ […]

ಜಯಲಲಿತಾ ದೋಷಿ : ಕೋರ್ಟ್‌ ತೀರ್ಪು

Saturday, September 27th, 2014
Jayalalitha

ಬೆಂಗಳೂರು : ದೇಶಾದ್ಯಂತ ಕುತೂಹಲ ಕೆರಳಿಸಿರುವ, ಸುಮಾರು 18 ವರ್ಷಗಳಿಂದ ವಿಚಾರಣೆ ನಡೆಯುತ್ತಿರುವ ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅಂತಿಮ ತೀರ್ಪು ಹೊರ ಬಿದ್ದಿದ್ದು ಅವರನ್ನು ದೋಷಿ ಎಂದು ಶನಿವಾರ ನ್ಯಾಯಾಲಯ ಹೇಳಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್‌ ಮೈಕಲ್‌ ಕುನ್ಹಾ ಅವರು ಜಯಲಲಿತಾ ಅವರ ವಿರುದ್ದ ಮಾಡಲಾಗಿರುವ ಆರೋಪ ಭೃಷ್ಟಾಚಾರ ತಡೆ ಖಾಯ್ದೆ ಸೆಕ್ಷನ್‌ 13(1)ಇ ಅಡಿ ಸಾಬೀತಾಗಿದೆ ಎಂದು ತೀರ್ಪು ಪ್ರಕಟಿಸಿದ್ದಾರೆ. ಆರೋಪ ಸಾಬೀತಾಗಿರುವ ಹಿನ್ನಲೆಯಲ್ಲಿ ಜಯಲಲಿತಾ ಅವರನ್ನು ಪೊಲೀಸರು ತಮ್ಮ […]

ಲೋಕಲ್ ಟ್ರೈನ್‌ನಲ್ಲಿ ಕೇಜ್ರಿವಾಲ್ ಪ್ರಚಾರ

Thursday, March 13th, 2014
Arvind-Kejriwal

ಮುಂಬೈ: ಲೋಕಸಭಾ ಚುನಾವಣೆ ಅಂಗವಾಗಿ ಪ್ರಚಾರಕ್ಕಾಗಿ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಬುಧವಾರ ಮುಂಬೈಗೆ ಭೇಟಿ ನೀಡಿದ್ದಾರೆ. ಮುಂಬೈ ವಿಮಾನ ನಿಲ್ದಾಣದಿಂದ ನೇರವಾಗಿ ಆಟೋದಲ್ಲಿ ತೆರಳಿದ ಕೇಜ್ರಿವಾಲ್, ಪಕ್ಷದ ನಾಯಕರನ್ನು ಭೇಟಿ ಮಾಡಿದ್ದಾರೆ. ತದ ನಂತರ  ಚರ್ಚ್‌ಗೇಟ್ ರೈಲ್ವೇ ಸ್ಟೇಷನ್ ಬಳಿ ಲೋಕಲ್ ಟ್ರೈನ್‌ನಲ್ಲಿ ಏರಿದ ಅರವಿಂದ್ ಕೇಜ್ರಿವಾಲ್ ಜನತೆಯೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಎಎಪಿ ಕಾರ್ಯಕರ್ತರು ಹೆಚ್ಚಾಗಿ ನೆರದಿದ್ದು, ನೂಕು ನುಗ್ಗಲಾಗಿದೆ ಈ ಸಂದರ್ಭದಲ್ಲಿ ಮೆಟಲ್ ಡಿಟೆಕ್ಟರ್ ಸೇರಿದಂತೆ ಇತರೆ ಉಪಕರಣಗಳನ್ನು […]

ದೇವಯಾನಿ ವಿರುದ್ಧದ ವೀಸಾ ವಂಚನೆ ಪ್ರಕರಣ ಕೈ ಬಿಟ್ಟ ಅಮೆರಿಕ

Thursday, March 13th, 2014
Devyani

ನ್ಯೂಯಾರ್ಕ್: ಭಾರತೀಯ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಅವರ ದೇವಯಾನಿ ವಿರುದ್ಧದ ವೀಸಾ ವಂಚನೆ ಪ್ರಕರಣವನ್ನು ಗುರುವಾರ ಅಮೆರಿಕ ಕೋರ್ಟ್ ವಜಾಗೊಳಿಸಿದೆ. ಇದರಿಂದ ದೇವಯಾನಿ ಪ್ರಕರಣದಲ್ಲಿ ಅಮೆರಿಕಕ್ಕೆ ಭಾರಿ ಹಿನ್ನಡೆಯಾದಂತಾಗಿದೆ. ದೇವಯಾನಿ ಖೋಬ್ರಾಗಡೆ ಅವರ ಬಂಧನ ಮತ್ತು ಕ್ಯಾವಿಟಿ ಸರ್ಚ್ ಪ್ರಕರಣದಿಂದ ಅಮೆರಿಕ ಮತ್ತು ಭಾರತದ ನಡುವಿನ ಹಲವು ವರ್ಷಗಳ ಉತ್ತಮ ಬಾಂಧವ್ಯಕ್ಕೆ ಧಕ್ಕೆಯಾಗಿತ್ತು. ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಉಪ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದೇವಯಾನಿ ಅವರನ್ನು ವೀಸಾ ವಂಚನೆ ಆರೋಪದ ಮೇಲೆ ಕಳೆದ ಡಿಸೆಂಬರ್ 12ರಂದು […]

ವಿಮಾನ ನಾಪತ್ತೆ: ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ಶೋಧ

Thursday, March 13th, 2014
Missing-Plane

ಕೌಲಾಲಂಪುರ: ನಿಗೂಢವಾಗಿ ಕಣ್ಮರೆಯಾಗಿರುವ ಮಲೇಷ್ಯಾ ವಿಮಾನದ ಬಗ್ಗೆ ಕಿಂಚಿತ್ತೂ ಸುಳಿವು ಸಿಕ್ಕಿಲ್ಲ. 5 ದಿನ ಕಳೆದರೂ ವಿಮಾನದ ಅವಶೇಷ ಪತ್ತೆಯಾಗದ ಹಿನ್ನೆಲೆಯಲ್ಲಿ ಸಮುದ್ರ ಮಾತ್ರವಲ್ಲ, ನೆಲದಲ್ಲೂ ಹುಡುಕಾಟ ಶುರು ಮಾಡಲಾಗಿದೆ. ಈಗ ಶೋಧ ಕಾರ್ಯವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದತ್ತ ನೆಟ್ಟಿದೆ. ಈ ದ್ವೀಪದ ನಿಯಂತ್ರಣವನ್ನು ಭಾರತ ಸರ್ಕಾರವು ಹೊಂದಿರುವ ಕಾರಣ, ಮಲೇಷ್ಯಾ ಸರ್ಕಾರವು ಶೋಧ ಕಾರ್ಯದಲ್ಲಿ ಭಾರತದ ನೆರವು ಕೋರಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ನೌಕಾಪಡೆ ಅಧಿಕಾರಿಗಳು, ನಮ್ಮ ಹಡಗುಗಳು ಹಾಗೂ ಸಿಬ್ಬಂದಿ ಸರ್ವಸನ್ನದ್ಧವಾಗಿ […]