ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಆರೆಸ್ಸೆಸ್ಸ್

Friday, March 7th, 2014
Rahul-Gandhi

ನವದೆಹಲಿ: ಗಾಂಧಿಯವರ ಹತ್ಯೆಯಲ್ಲಿ ಆರೆಸ್ಸೆಸ್ಸ್ ಕೈವಾಡವಿದೆ ಎಂದು ಹೇಳಿರುವ ರಾಹುಲ್ ಗಾಂಧಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೆಸ್ಸೆಸ್ಸ್ ಹೇಳಿದೆ. ರಾಹುಲ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಆರೆಸ್ಸೆಸ್ಸ್ ಹಿರಿಯ ನೇತಾರ ರಾಮ್ ಮಾಧವ್, ರಾಹುಲ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಆರೆಸ್ಸೆಸ್ಸ್ ಗಾಂಧೀಜಿಯವರನ್ನು ಹತ್ಯೆಗೈದಿತ್ತು. ಆಗ ಅವರೇ (ಬಿಜೆಪಿ) ಗಾಂಧಿ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದೆ ಅವರು ಸರ್ದಾರ್ ಪಟೇಲ್ ಮತ್ತು ಗಾಂಧೀಜಿಯವರನ್ನು ವಿರೋಧಿಸುತ್ತಿದ್ದರು ಎಂದು ಮಹಾರಾಷ್ಟ್ರದಲ್ಲಿ ನಡೆದ ರ್ಯಾಲಿಯಲ್ಲಿ ರಾಹುಲ್ ಹೇಳಿದ್ದರು.

ಕಿರಣ್‌ ಕುಮಾರ್‌ ರೆಡ್ಡಿ ಹೊಸ ಪಕ್ಷ

Friday, March 7th, 2014
Kiran-Kumar-Reddy

ನವದೆಹಲಿ: ತೆಲಂಗಾಣ ವಿಭಜನೆ ಖಂಡಿಸಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಿರಣ್‌ ಕುಮಾರ್‌ ರೆಡ್ಡಿ ಸಿಂಮಾಧ್ರ ಪ್ರದೇಶದಲ್ಲಿ ಹೊಸ ಪಕ್ಷ ರಚಿಸುವುದಾಗಿ ಗುರುವಾರ ತಿಳಿಸಿದ್ದಾರೆ. ರಾಜಮಹೇಂದ್ರಿಯಲ್ಲಿ ಮಾರ್ಚ್‌ 12ರಂದು ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ನೂತನ ಪಕ್ಷದ ನೀತಿ ನಿರ್ಧಾರಗಳು ಹಾಗೂ ಕಾರ್ಯಕ್ರಮಗಳನ್ನು ಪ್ರಕಟಿಸಲಾಗುವುದು ಎಂದು ಕಿರಣ್‌ ಕುಮಾರ್‌ ಹೇಳಿದ್ದಾರೆ. ಆಂಧ್ರಪ್ರದೇಶದ ವಿಭಜನೆಯನ್ನು ವಿರೋಧಿಸಿ ಕಿರಣ್‌ ಕುಮಾರ್‌ ರೆಡ್ಡಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲದೇ ಕಾಂಗ್ರೆಸ್‌ ಪಕ್ಷವನ್ನೂ ತ್ಯಜಿಸಿದ್ದರು. ಕಿರಣ್‌ ಕುಮಾರ್‌ಗೆ ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆಗೊಂಡಿದ್ದ […]

ಗುಜರಾತ್ ಅಭಿವೃದ್ಧಿ ಬಗ್ಗೆ ಮೋದಿ ಹೇಳುತ್ತಿರುವುದೆಲ್ಲ ಸುಳ್ಳು: ಕೇಜ್ರಿವಾಲ್

Friday, March 7th, 2014
Arvind-Kejriwal

ಅಹಮದಾಬಾದ್: ಪದೇಪದೆ ಗುಜರಾತ್ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ ಎಂದು ಹೇಳಿಕೊಳ್ಳುತ್ತಿರುವ ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಗುಜರಾತ್ ಅಭಿವೃದ್ಧಿಯಾಗಿದೆ ಎಂದು ಮೋದಿ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ವಾಸ್ಥವದಲ್ಲಿ ಗುಜರಾತ್‌ನಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ಅವರು ಹೇಳುತ್ತಿರುವುದೆಲ್ಲ ಸುಳ್ಳು ಎಂದು ಹೇಳಿರುವ ಆಮ್ ಆದ್ಮಿ ಪಕ್ಷದ ನಾಯಕ, ಗುಜರಾತ್ ಅಭಿವೃದ್ಧಿಗೆ ಸಂಬಂಧಿಸಿದ 16 ಪ್ರಶ್ನೆಗಳ ಪಟ್ಟಿಯೊಂದಿಗೆ ಗುಜರಾತ್ ಮುಖ್ಯಮಂತ್ರಿಯ ನಿವಾಸಕ್ಕೆ ಭೇಟಿ […]

ಲೋಕ ಸಮೀಕ್ಷೆಯಲ್ಲಿ ಮೋದಿ ಮುಂದು ರಾಗಾ ಹಿಂದೆ, ಎನ್‌ಡಿಎನತ್ತ ಮತದಾರ, ಯುಪಿಎ ಕಥೆ ಹರೋಹರ

Friday, March 7th, 2014
Narendra-Modi

ನವದೆಹಲಿ: ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದ ರುಚಿ ಅನುಭವಿಸುತ್ತಿರುವ ಕಾಂಗ್ರೆಸ್ ಈ ಬಾರಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಬ್ಬರಕ್ಕೆ ಧೂಳೀಪಟವಾಗಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗದ್ದುಗೆಯ ಸನಿಹ ಬಂದು ನಿಲ್ಲಲಿದೆ. ಎನ್‌ಡಿಎ 212- 232 ಸ್ಥಾನಗಳನ್ನು ಗೆದ್ದರೆ, ಯುಪಿಎ 119ರಿಂದ 139 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಲಿದೆ ಎಂದು ಸಿಎನ್‌ಎನ್‌ಐಬಿನ್- ಲೋಕನೀತಿ- ಸಿಎಸ್‌ಡಿಎಸ್ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ಬಿಜೆಪಿ ಅತಿದೊಡ್ಡ ಪಕ್ಷ: ಒಂದು ವೇಳೆ ತಕ್ಷಣಕ್ಕೆ ಚುನಾವಣೆ ನಡೆದರೆ ಬಿಜೆಪಿ […]

ಪ್ರಧಾನಿ ಹುದ್ದೆಗೆ ನಾನೇ ಸಮರ್ಥ: ನಿತೀಶ್ ಕುಮಾರ್

Thursday, March 6th, 2014
Nitish-kumar

ನವದೆಹಲಿ: ಇನ್ನಿತರ ಪ್ರಧಾನಿ ಆಕಾಂಕ್ಷಿಗಳಿಗಿಂತ ನಾನೇ ಆ ಹುದ್ದೆಗೆ ಹೆಚ್ಚು ಸಮರ್ಥ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಪ್ರಧಾನಿ ಹುದ್ದೆಯನ್ನಲಂಕರಿಸಲು ತಾನು ಯೋಗ್ಯ ಹೇಗೆ ಎಂಬುದನ್ನು ವಿವರಿಸಿದ ನಿತೀಶ್, ಪ್ರಧಾನಿ ಹುದ್ದೆಯ ಆಕಾಂಕ್ಷಿಗಳಿಗಿಂತ ನನಗೆ ಹೆಚ್ಚಿನ ಅರ್ಹತೆಯಿದೆ ಎಂದು ಹೇಳಿದ್ದಾರೆ. ಬಿಹಾರಕ್ಕೆ ವಿಶೇಷ ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ ಕೈಗೊಂಡಿರುವ ಸಂಕಲ್ಪಯಾತ್ರೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಥವಾ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಬ್ಬರಲ್ಲಿ ಯಾರ ಹೆಸರನ್ನೂ ಉಲ್ಲೇಖಿಸದೇ ಮಾತನಾಡಿದ ನಿತೀಶ್, ಒಬ್ಬರಿಗೆ ಸಂಸತ್‌ನ […]

ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ಸುಷ್ಮಾ ನಕಾರ

Thursday, March 6th, 2014
Sushma-Swaraj

ನವದೆಹಲಿ: ನಾನು ಬಿಜೆಪಿ ಸೇರುವುದಕ್ಕೆ ಸುಷ್ಮಾ ಸ್ವರಾಜ್ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎಂದು ನಿನ್ನೆ ಬಿಎಸ್‌ಆರ್ ಕಾಂಗ್ರೆಸ್ ಸಂಸ್ಥಾಪಕ ಬಿ.ಶ್ರೀರಾಮುಲು ಹೇಳಿದ ಮಾತು ಎಷ್ಟರ ಮಟ್ಟಿಗೆ ನಿಜ ಎಂಬ ಗೊಂದಲ ಮೂಡಿದೆ. ಬಿ.ಶ್ರೀರಾಮುಲು ಬಿಜೆಪಿ ಸೇರ್ಪಡೆಗೆ ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದಿರುವ ಬೆನ್ನಲ್ಲೇ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಬಿಎಸ್‌ಆರ್ ಪಕ್ಷ ಮತ್ತು ಬಿಜೆಪಿ ವಿಲೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬಿ.ಶ್ರೀರಾಮುಲು ನೇತೃತ್ವದ ಬಿಎಸ್‌ಆರ್ ಕಾಂಗ್ರೆಸ್ ಮತ್ತು ಬಿಜೆಪಿ ವಿಲೀನಕ್ಕೆ ನನ್ನ ವಿರೋಧವಿದೆ ಎಂದು […]

ಶಾಂತಿ ಕಾಪಾಡಲು ಕೇಜ್ರಿವಾಲ್ ಕರೆ

Thursday, March 6th, 2014
Arvind-kejriwa

ನವದೆಹಲಿ: ಬುಧವಾರ ಬಿಜೆಪಿ ಪ್ರಧಾನ ಕಾರ್ಯಾಲಯದ ಹೊರಗೆ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆಪ್ ನಾಯಕರಾದ ಅಶತೋಷ್, ಶಾಜಿಯಾ ಇಲ್ಮೀ ಅವರ ಬಂಧನಕ್ಕೆ ಆದೇಶಿಸಿದ್ದಾರೆ. ನಿನ್ನೆ ನಡೆದ ಈ ಘಟನೆಯಲ್ಲಿ ಕನಿಷ್ಟ 14 ಆಪ್ ಕಾರ್ಯಕರ್ತರನ್ನು ಈವರೆಗೆ ಬಂಧಿಸಲಾಗಿದೆ. ಆದಾಗ್ಯೂ, ನಿನ್ನೆ ನಡೆದ ಅಹಿತಕರ ಘಟನೆಗೆ ಕ್ಷಮೆಯಾಚಿಸಿದ ಆಪ್ ನೇತಾರ  ಅರವಿಂದ್ ಕೇಜ್ರಿವಾಲ್ ಕಾರ್ಯಕರ್ತರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ನೇತಾರರಾದ ಡಾ.ಹರ್ಷವರ್ಧನ್, […]

ರಾಜೀವ್ ಹಂತಕರ ಬಿಡುಗಡೆ: ಮಾಚ್ 26ಕ್ಕೆ ವಿಚಾರಣೆ ಮುಂದೂಡಿಕೆ

Thursday, March 6th, 2014
Rajiv-gandhi

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಬಿಡುಗಡೆ ವಿರೋಧಿಸಿ 1991ರ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಮಾರ್ಚ್ 26ಕ್ಕೆ ಮುಂದೂಡಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಹಂತಕರ ಬಿಡುಗಡೆಗೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ನೇತೃತ್ವದ ಸರ್ಕಾರ ನಿರ್ಧರಿಸಿತ್ತು. ತಮಿಳುನಾತಡು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಹಂತಕರ ಬಿಡುಗಡೆಗೆ ತಡೆಯಾಜ್ಞೆ ನೀಡಿತ್ತು. 1991ರ ಸ್ಫೋಟದಲ್ಲಿ […]

ಮಹಾಯುದ್ಧ ಆರಂಭ 9 ಹಂತಗಳಲ್ಲಿ ಸಂಸತ್ ಚುನಾವಣೆ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

Thursday, March 6th, 2014
Lok-Shaba

ನವದೆಹಲಿ: ವಿಶ್ವದ ಅತಿದೊಡ್ಡ ಚುನಾವಣಾ ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗ ಚಾಲನೆ ನೀಡಿದ್ದು, ಒಂಬತ್ತು ಹಂತದ ಮತದಾನದ ವೇಳಾಪಟ್ಟಿ ಪ್ರಕಟಿಸಿದೆ. ಜೂನ್ 1ರಿಂದ ಅಸ್ತಿತ್ವಕ್ಕೆ ಬರಬೇಕಿರುವ ಹದಿನಾರನೇ ಲೋಕಸಭೆಗೆ 543 ಸದಸ್ಯರನ್ನು  81.4 ಕೋಟಿ ಜನರು ಆಯ್ಕೆ ಮಾಡಲಿದ್ದಾರೆ. ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ಚುನಾವಣಾ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಇನ್ನು ಮುಂದೆ ಕೇಂದ್ರ ಅಥವಾ ರಾಜ್ಯ ಸರ್ಕಾರ ಮನಸೋ ಇಚ್ಛೆ ಹೊಸ ಯೋಜನೆಗಳನ್ನು ಘೋಷಿಸುವಂತಿಲ್ಲ. ಏಪ್ರಿಲ್ 7ರಿಂದ ಆರಂಭವಾಗುವ ಮತದಾನ ಪ್ರಕ್ರಿಯೆ ಒಂಬತ್ತು ಹಂತಗಳಲ್ಲಿ ನಡೆಯಲಿದೆ. ಲೋಕಸಭಾ […]

ಅರವಿಂದ ಕೇಜ್ರಿವಾಲ್ ಬಂಧನ

Thursday, March 6th, 2014
Arvind-kejriwa

ಹಮದಾಬಾದ್: ಬುಧವಾರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಉತ್ತರ ಗುಜರಾತ್‌ನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಆಪ್ ನಾಯಕ ಅರವಿಂದ ಕೇಜ್ರಿವಾಲ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಈ ಘಟನೆ ದೆಹಲಿ ಹಾಗೂ ಲಖನೌನಲ್ಲಿ ನಾಟಕೀಯ ಬೆಳವಣಿಗೆಗಳಿಗೆ ಕಾರಣವಾಯಿತು. ಕೇಜ್ರಿ ವಶಕ್ಕೆ ತೆಗೆದುಕೊಂಡ ಸುದ್ದಿ ತಿಳಿಯುತ್ತಿದ್ದಂತೆಯೇ ಆಪ್ ಕಾರ್ಯಕರ್ತರು ನವದೆಹಲಿಯಲ್ಲಿನ ಬಿಜೆಪಿ ಪ್ರಧಾನ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ ಆಪ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯಿತು. ಇದಲ್ಲದೇ ಗುಜರಾತ್‌ನ ಹಲವೆಡೆಯೂ ಬಿಜೆಪಿ-ಆಪ್ […]