ಗಣಿ ಹಗರಣ: ಧರಂ, ಎಚ್‌ಡಿಕೆ ವಿರುದ್ಧ ತನಿಖೆಗೆ ಹಸಿರು ನಿಶಾನೆ

Wednesday, March 5th, 2014
S.M.-Krishna

ನವದೆಹಲಿ: ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿರುವ ಆರೋಪ ಕುರಿತು ಲೋಕಾಯುಕ್ತ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಪ್ರಕರಣಕ್ಕೆ ಸೀಮಿತವಾಗಿ ತಡೆಯಾಜ್ಞೆ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿದೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಅವರ ವಿರುದ್ಧ ಇರುವ ಆರೋಪ ಕುರಿತು ಲೋಕಾಯುಕ್ತ ಪೊಲೀಸರು ತಮ್ಮ ತನಿಖೆ ಮುಂದುವರಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಹೆಸರಿಸಲಾಗಿರುವ ಐವರು ಐಎಎಸ್ ಅಧಿಕಾರಿಗಳ ವಿರುದ್ಧವೂ ತನಿಖೆ ಮುಂದುವರೆಸುವಂತೆ ಸುಪ್ರೀಂ […]

ಆಂಧ್ರ ವಿಭಜನೆ ಅಧಿಕೃತ, ಜೂ.2 ತೆಲಂಗಾಣ ಉದಯ ದಿನ

Wednesday, March 5th, 2014
Sampath

ನವದೆಹಲಿ: ತೆಲಂಗಾಣ ರಾಜ್ಯ ರಚನೆ ಈಗ ಅಧಿಕೃತವಾಗಿದ್ದು, ಜೂ.2 ತೆಲಂಗಾಣ ಉದಯ ದಿನ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಇದರೊಂದಿಗೆ ಭಾರತದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದೆ. ತೆಲಂಗಾಣ ರಾಜ್ಯ ರಚನೆ ಮಸೂದೆ ರಾಜ್ಯಸಭೆಯಲ್ಲಿ ಮತ್ತು ಲೋಕಸಭೆಯಲ್ಲಿ ಅಂಗೀಕಾರಗೊಂಡ ನಂತರ, ಮಾರ್ಚ್ 1ರಂದು ರಾಷ್ಟ್ರಪತಿಗಳು ಮಸೂದೆಗೆ ಸಹಿ ಹಾಕಿದ್ದರು. ಇದಾದ ಬಳಿಕ ನಿನ್ನೆ ತಡರಾತ್ರಿ ಕೇಂದ್ರ ಗೃಹ ಸಚಿವಾಲಯ, ಆಂಧ್ರಪ್ರದೇಶ ವಿಭಜನೆ ಕಾಯ್ದೆ 2014ರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಜೂನ್ 2 ತೆಲಂಗಾಣ ದಿನವನ್ನಾಗಿ ಘೋಷಿಸಿದೆ. […]

ಗುಜರಾತ್‌ನಲ್ಲಿನ ರಾಮರಾಜ್ಯವನ್ನು ನೋಡಲು ಬಂದಿದ್ದೇನೆ: ಕೇಜ್ರಿವಾಲ್

Wednesday, March 5th, 2014
Arvind-Kejriwal

ಅಹ್ಮದಾಬಾದ್: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸುವುದಾಗಿ ಸುದ್ದಿ ಕೇಳಿಬರುತ್ತಿದ್ದಂತೆ, ಕೇಜ್ರಿವಾಲ್ ಇಂದಿನಿಂದ ಗುಜರಾತ್‌ನಲ್ಲಿ 4 ದಿನಗಳ ಪ್ರವಾಸ ಆರಂಭಿಸಿದ್ದಾರೆ. ಪ್ರಧಾನಿ ಅಭ್ಯರ್ಥಿಯಾಗಿರುವ ನರೇಂದ್ರ ಮೋದಿಯವರು ಗುಜರಾತ್‌ನಲ್ಲಿ ಏನೆಲ್ಲಾ ಅಭಿವೃದ್ಧಿ ಮಾಡಿದ್ದಾರೆ ಎಂಬುದನ್ನು ಪರಿಶೀಲಿಸುವುದಕ್ಕಾಗಿಯೇ ತಾನು ಗುಜರಾತ್ ಪ್ರವಾಸ ಕೈಗೊಡಿರುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ. ಗುಜರಾತ್ ಸರ್ಕಾರ ಮತ್ತು ಮಾಧ್ಯಮಗಳು ಗುಜರಾತ್‌ನಲ್ಲಿ ರಾಮರಾಜ್ಯ ನಿರ್ಮಾಣವಾಗಿದೆ ಎಂದು ಹೇಳುತ್ತಿದ್ದಾರೆ. ಅವರು ಹೇಳುವಂತೆ ಇಲ್ಲಿ ವಿದ್ಯಾಭ್ಯಾಸದಲ್ಲಿ ಪ್ರಗತಿಯಾಗಿದೆ, ಆರೋಗ್ಯ ಸಮಸ್ಯೆಗಳು ನಿರ್ಮೂಲನೆಯಾಗಿವೆ, ಭ್ರಷ್ಟಾಚಾರ ಇಲ್ಲಿಲ್ಲ…ಆದ್ದರಿಂದ […]

ಕರ್ನಾಟಕದಲ್ಲಿ ಏ.17ಕ್ಕೆ ಎಂ.ಪಿ.ಚುನಾವಣೆ

Wednesday, March 5th, 2014
MP-Election

ನವದೆಹಲಿ: 2014ರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 17ರಂದು ಒಂದೇ ಹಂತದಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಗಾಗಿ ಮಾರ್ಚ್ 19ರಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, 27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಇನ್ನು ನಾಮಪತ್ರ ಹಿಂಪಡೆಯಲು ಮಾರ್ಚ್ 29 ಕಡೆಯ ದಿನವಾಗಿದ್ದು, ಏಪ್ರಿಲ್ 17ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ […]

ಲೋಕಸಭೆ ಚುನಾವಣೆ ದಿನಾಂಕ ಪ್ರಕಟ: ಏ.7ರಿಂದ ಮೇ, 12ರವರೆಗೆ ಮತದಾನ

Wednesday, March 5th, 2014
S.V.-Sampath

ನವದೆಹಲಿ: 2014ರ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿದ್ದು,  ಏಪ್ರಿಲ್ 7ರಿಂದ 9 ಹಂತಗಳಲ್ಲಿ 16ನೇ ಲೋಕಸಭೆಗೆ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ವಿ.ಎಸ್.ಸಂಪತ್ ಅವರು ಬುಧವಾರ ಹೇಳಿದ್ದಾರೆ. ಈ ಸಂಬಂಧ ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಪತ್, ಮೇ 31ಕ್ಕೆ 15ನೇ ಲೋಕಸಭೆಯ ಅವಧಿ ಅಂತ್ಯಗೊಳ್ಳಲಿದ್ದು, ಮೇ 31ರೊಳಗೆ ಚುನಾವಣಾ ಪ್ರಕ್ರಿಯೆಗಳು ಮುಗಿಯಬೇಕು ಮತ್ತು ಜೂನ್ 1ಕ್ಕೆ ಕೇಂದ್ರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಬೇಕಿದೆ ಎಂದು ಹೇಳಿದರು. ಏಪ್ರಿಲ್ 7ರಂದು […]

ಭಾರತ ಜಗತ್ತಿನ 3ನೇ ಅಪಾಯಕಾರಿ ದೇಶ..!

Tuesday, March 4th, 2014
India-is-a-dangerous

ನವದೆಹಲಿ: ಭಾರತ ಅಫ್ಘಾನಿಸ್ತಾನಕ್ಕಿಂತ ಅಪಾಯಕಾರಿ ದೇಶವಾಗಿದ್ದು, ನೀವು ಯಾವುದೇ ಕ್ಷಣದಲ್ಲೂ ಬೇಕಾದರು ಬಾಂಬ್ ಸ್ಫೋಟದಿಂದ ಸಾಯಬಹುದು. ಹೀಗಂತ ಸರ್ಕಾರಿ ದಾಖಲೆಗಳೇ ಹೇಳುತ್ತಿವೆ. ಭಾರತ ಜಗತ್ತಿನಲ್ಲಿ ಮೂರನೇ ಅಪಾಯಕಾರಿ ದೇಶವಾಗಿದ್ದು, ಜಗತ್ತಿನಲ್ಲಿ ಅತಿ ಹೆಚ್ಚು ಬಾಂಬ್ ಸ್ಫೋಟ ಸಂಭವಿಸುವ ದೇಶಗಳಲ್ಲಿ ಭಾರತ, ಇರಾಖ್ ಮತ್ತು ಪಾಕಿಸ್ತಾನದ ನಂತರದ ಸ್ಥಾನದಲ್ಲಿದೆ. ಯುದ್ಧದಿಂದ ತತ್ತರಿಸಿರುವ ಅಫ್ಘಾನಿಸ್ತಾನ ಮತ್ತು ಸಿರಿಯಾ ಸಹ ಭಾರತಕ್ಕಿಂತ ಉತ್ತಮ ಎಂದು ರಾಷ್ಟ್ರೀಯ ಬಾಂಬ್ ಅಂಕಿ-ಅಂಶ ಕೇಂದ್ರ(ಎನ್‌ಬಿಡಿಸಿ) ಬಿಡುಗಡೆ ಮಾಡಿರುವ ವರದಿ ಹೇಳುತ್ತಿದೆ. ಎನ್‌ಬಿಡಿಸಿ ಬಿಡುಗಡೆ ಮಾಡಿರುವ ವರದಿಯ […]

ಕಾಂಗ್ರೆಸ್‌ನಲ್ಲಿ ವಿಲೀನ ಇಲ್ಲ: ಕೆಸಿಆರ್ ಹೇಳಿಕೆ

Tuesday, March 4th, 2014
Candrasekhara-Rao

ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ ಪಕ್ಷ ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಗುವುದಿಲ್ಲ ಎಂದು ಟಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರರಾವ್ ಅವರು ಹೇಳಿದ್ದಾರೆ. ಹೈದರಾಬಾದ್ ನಲ್ಲಿ ಮಾತನಾಡಿದ ಕೆಸಿಆರ್, ತೆಲಂಗಾಣ ರಾಜ್ಯ ರಚನೆ ನಂತರ ಟಿಆರ್‌ಎಸ್ ಕಾಂಗ್ರೆಸ್ ಪಕ್ಷದಲ್ಲಿ ವಿಲೀನವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನವಾಗಲು ಉತ್ಸುಕತೆ ತೋರಿದ್ದ ಕೆಸಿಆರ್ ಅವರು, ಪಕ್ಷದಲ್ಲಿನ ಭಿನ್ನಮತ ಮತ್ತು ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆಯಿಂದಾಗಿ ತೀವ್ರ ಬೇಸರಗೊಂಡಿದ್ದಾರೆ ಎನ್ನಲಾಗುತ್ತಿದೆ. ಟಿಆರ್‌ಎಸ್ ಪಕ್ಷದ ವಿರುದ್ಧ ರೆಬೆಲ್ ಆಗಿದ್ದ ಶಾಸಕರನ್ನು ಕಾಂಗ್ರೆಸ್ ನಾಯಕರು ತಮ್ಮ […]

ಲೋಕಪಾಲ ಆಯ್ಕೆ ಸಮಿತಿ ಅಧ್ಯಕ್ಷ ನ್ಯಾ.ಥಾಮಸ್ ರಾಜಿನಾಮೆ

Tuesday, March 4th, 2014
Justice-KT-Thomas

ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಲೋಕಪಾಲ ಆಯ್ಕೆ ಮತ್ತು ಹುಡಕಾಟ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಕೆ.ಟಿ.ಥಾಮಸ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಸೋಮವಾರ ವರದಿಗಳು ತಿಳಿಸಿವೆ. ಕಳೆದ ವಾರವಷ್ಟೆ ಲೋಕಪಾಲರ ಆಯ್ಕೆ ಪ್ರಕ್ರಿಯೆಯಲ್ಲಿ ತಾವು ಪಾಲ್ಗೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆಹ್ವಾನವನ್ನು ಹಿರಿಯ ವಕೀಲ ಫಾಲಿ ನಾರಿಮನ್ ಅವರು ತಿರಸ್ಕರಿಸಿದ್ದರು. ಅಲ್ಲದೆ ಲೋಕಪಾಲ ಹುಡುಕಾಟ ಸಮಿತಿಯನ್ನು ಅರ್ಥಹೀನ ಮತ್ತು ಹಾಸ್ಯಾಸ್ಪದ ಎಂದು ಕರೆದಿದ್ದರು. ಇದೀಗ ಸಮತಿಯ ಅಧ್ಯಕ್ಷರೇ ರಾಜಿನಾಮೆ ನೀಡಿರುವುದರಿಂದ […]

ಜನರಲ್ ವಿ.ಕೆ.ಸಿಂಗ್ ಬಿಜೆಪಿಗೆ ಸೇರ್ಪಡೆ

Saturday, March 1st, 2014
VK-Singh

ನವದೆಹಲಿ: ಭೂಸೇನೆ ನಿವೃತ್ತ ಮುಖ್ಯಸ್ಥ ಜನರಲ್ ವಿ.ಕೆ.ಸಿಂಗ್ ಅವರು ಶನಿವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರಿದ್ದಾರೆ. ಇಂದು ನವದೆಹಲಿಯಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ವಿ.ಕೆ.ಸಿಂಗ್ ಅವರನ್ನು ಬಿಜೆಪಿ ರಾಷ್ಟ್ರಾದ್ಯಕ್ಷ ರಾಜನಾಥ್ ಸಿಂಗ್ ಅವರು ಹೂಗುಚ್ಛವನ್ನು ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು. ಇದಕ್ಕೂ ಮೊದಲು ಇಂಡಿಯಾ ಗೇಟ್ ಬಳಿ ಇರುವ ಅಮರ್ ಜವಾನ್ ಜ್ಯೋತಿ ಮೆಮೋರಿಯಲ್ಗೆ ಭೇಟಿ ನೀಡಿದ್ದ ವಿ.ಕೆ.ಸಿಂಗ್ ಅವರು ಅಲ್ಲಿ ನೆರೆದಿದ್ದ ಸುದ್ದಿಗಾರರೊಂದಿಗೆ ಮಾತನಾಡಿ, ತಾವು ಬಿಜೆಪಿ ಪಕ್ಷವನ್ನು ಸೇರುತ್ತಿರುವ ಕುರಿತು ಹೇಳಿಕೆ […]

ತೆಲಂಗಾಣ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ

Saturday, March 1st, 2014
Pranab-Mukherjee

ನವದೆಹಲಿ: ಆಂಧ್ರ ಪ್ರದೇಶವನ್ನು ವಿಭಜಿಸಿ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಮಾಡುವ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶನಿವಾರ ಅಂಕಿತ ಹಾಕಿದ್ದಾರೆ. ಸಂಸತ್ತಿನ ಉಭಯ ಕಲಾಪಗಳಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದ್ದ ನೂತನ ತೆಲಂಗಾಣ ರಾಜ್ಯ ರಚನೆ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಹಾಕಿದ್ದು, ಅಧಿಕೃತವಾಗಿ ದೇಶದ 29ನೇ ರಾಜ್ಯವಾಗಿ ತೆಲಂಗಾಣ ಉದಯವಾಗಿದೆ. ಫೆಬ್ರವರಿ 18ರಂದು ನಡೆದ ಲೋಕಸಭೆ ಕಲಾಪದಲ್ಲಿ ಅನುಮೋದನೆ ಪಡೆದಿದ್ದ ವಿಧೇಯಕಕ್ಕೆ ಕೊಂಚ ತಡವಾಗಿ ರಾಜ್ಯಸಭೆಯಲ್ಲಿ ಅಂಗೀಕಾರ ನೀಡಲಾಗಿತ್ತು. ಸೀಮಾಂಧ್ರ ಸಂಸದರ […]