ಚುನಾವಣೆ ಹೊಸ್ತಿಲಲ್ಲಿ ಭರವಸೆಗಳ ಸುಗ್ಗಿ, ಸರ್ಕಾರಿ ನೌಕರ, ಪಿಂಚಣಿದಾರರೇ ಟಾರ್ಗೆಟ್, ಇದು ಕೊಡುಗೈ ಸಂಪುಟ

Saturday, March 1st, 2014
K.H.-Muniyappa

ನವದೆಹಲಿ: ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಯುಪಿಎ ಸರ್ಕಾರ ತನ್ನ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಮತದಾರರ ಓಲೈಕೆಗೆ ಕೆಲ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.10ರಷ್ಟು ಹೆಚ್ಚಳ, ಕರ್ನಾಟಕ ಸೇರಿದಂತೆ ದೇಶಾದ್ಯಂತ ಹೊಸದಾಗಿ 54 ಕೇಂದ್ರೀಯ ವಿದ್ಯಾಲಯ ಹಾಗೂ 3,500 ಮಾದರಿ ಶಾಲೆ, ಕೋಲಾರದಲ್ಲಿ ರೈಲು ಬೋಗಿ ಕಾರ್ಖಾನೆ ಸ್ಥಾಪನೆ ಸೇರಿದಂತೆ ಅನೇಕ ಮಹತ್ವದ ನಿರ್ಧಾರಗಳಿಗೆ ಒಪ್ಪಿಗೆ ಸೂಚಿಸಿದೆ. ಕೇಂದ್ರ ಸರ್ಕಾರಿ ನೌಕರರ ಓಲೈಕೆ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ನೌಕರರ ತುಟ್ಟಿ […]

ಎಫ್‌ಡಿಐ, ಜಿಎಸ್‌ಟಿ ಇರಲಿ ಮಾರಕ ಕಾನೂನು ತೊಲಗಲಿ

Friday, February 28th, 2014
Narendra-Modi

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಪಕ್ಷದ ಆರ್ಥಿಕ ನೀತಿಯನ್ನು ಬಹಿರಂಗಪಡಿಸಿದ್ದಾರೆ. ವಿದೇಶಿ ನೇರ ಬಂಡವಾಳ ಹೂಡಿಕೆ ಮತ್ತು ಸರಕು ಹಾಗೂ ಸೇವೆಗಳ ತೆರಿಗೆ(ಜಿಎಸ್‌ಟಿ) ಪಕ್ಷದ ವಿರೋಧವಿಲ್ಲ ಎಂದಿದ್ದಾರೆ. ಜಿಎಸ್‌ಟಿ ಜಾರಿಗೆ ಸಂಬಂಧಿಸಿ ನಮ್ಮ ಅಭ್ಯಂತರವೇನೂ ಇಲ್ಲ. ಆದರೆ, ಇದರ ಅನುಷ್ಠಾನಕ್ಕೆ ಬೇಕಾದ ಪೂರ್ವ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಜಿಎಸ್‌ಟಿ ಜಾರಿಗೂ ಮುನ್ನ ಮಾಹಿತಿ ತಂತ್ರಜ್ಞಾನ ಎಲ್ಲೆಡೆ ಲಭ್ಯವಾಗಬೇಕಿದೆ. ಜತೆಗೆ, ರಾಜ್ಯ ಸರ್ಕಾರಗಳಿಗೆ ಹಣಕಾಸಿಗೆ ಸಂಬಂಧಿಸಿ ಒಂದಷ್ಟು ಕಳವಳಗಳಿವೆ. […]

ಸಹಾರಾ ಮುಖ್ಯಸ್ಥ ಸುಬ್ರತಾ ರಾಯ್ ಬಂಧನ

Friday, February 28th, 2014
Subrata-Roy

ನವದೆಹಲಿ: ಸಹಾರಾ ಸಂಸ್ಥೆಯ ಮುಖ್ಯಸ್ಥ ಸುಬ್ರತಾ ರಾಯ್ ಅವರನ್ನು ಲಖನೌ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಕಳೆದ ಬುಧವಾರ ರಾಯ್‌ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಲಖನೌ ಪೊಲೀಸರನ್ನು ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹೂಡಿಕೆದಾರರಿಗೆ 20 ಸಾವಿರ ಕೋಟಿ ರುಪಾಯಿ ಮರುಪಾವತಿ ಮಾಡದ ಪ್ರಕರಣ ಸಂಬಂಧ ಕೋರ್ಟ್ ಮುಂದೆ ಹಾಜರಾಗುವಲ್ಲಿ ವಿಫಲರಾಗಿದ್ದ ರಾಯ್‌ನನ್ನು ಬಂಧಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ರಾಯ್‌ರನ್ನು ಬಂಧಿಸಿ ಮಾರ್ಚ್ 4ರ ಮಧ್ಯಾಹ್ನ 2 ಗಂಟೆಗೆ […]

ಮೋದಿ ಬಗ್ಗೆ ಖುರ್ಷಿದ್ ಹೇಳಿಕೆಗೆ ರಾಹುಲ್ ಅಸಮಾಧಾನ

Thursday, February 27th, 2014
Rahul-Gandhi

ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಹಾಗೂ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ನೀಡಿದ್ದ ‘ನಪುಂಸಕ’ ಹೇಳಿಕೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಬಳಿಕ ಖುರ್ಷಿದ್ ಹೇಳಿಕೆ ಬಗ್ಗೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿರುವ ರಾಹುಲ್, ‘ಇಂತಹ ಭಾಷೆ ಬಳಸುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ’ ಎಂದಿದ್ದಾರೆ. 2002ರ ಗುಜರಾತ್ ಗಲಭೆ ನಿಯಂತ್ರಿಸಲು ಸಾಧ್ಯವಾಗದ ಮೋದಿ ಒಬ್ಬ ‘ನಪುಂಸಕ’ ಎಂದು ಸಲ್ಮಾನ್ ಖರ್ಷಿದ್ ಹೇಳಿದ್ದರು. ಈ […]

ನಳಿನಿ ಸೇರಿದಂತೆ 4 ರಾಜೀವ್ ಹಂತಕರ ಬಿಡುಗಡೆಗೆ ಸುಪ್ರೀಂ ತಡೆ

Thursday, February 27th, 2014
Rajeev-Gandhi

ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಳಿನಿ ಸೇರಿದಂತೆ ನಾಲ್ವರು ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ. ಈ ಮುಂಚೆ ಪ್ರಕರಣದ ಮೂವರು ಅಪರಾಧಿಗಳ ಬಿಡುಗಡೆಗೆ ತಡೆಯಾಜ್ಞೆ ನೀಡಿದ್ದ ಸುಪ್ರೀಂ ಕೋರ್ಟ್, ಇಂದು ನಳಿನಿ, ರಾಬರ್ಟ್, ಜಯಕುಮಾರ್ ಹಾಗೂ ರವಿಚಂದ್ರನ್   ಬಿಡುಗಡೆಗೂ ತಡೆ ನೀಡಿದೆ. ಪ್ರಕರಣದ ಏಳು ಹಂತಕರ ಬಿಡುಗಡೆ ತಮಿಳುನಾಡು ಸರ್ಕಾರ ನಿರ್ಧರಿಸಿತ್ತು. ತಮಿಳುನಾಡು ಸರ್ಕಾರದ ನಿರ್ಧಾರ […]

ಬಿಜೆಪಿ, ಕಾಂಗ್ರೆಸ್‌ಗೆ ಪರ್ಯಾಯ ರಂಗ ಸ್ಥಾಪನೆ, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಇಲ್ಲ

Wednesday, February 26th, 2014
ಬಿಜೆಪಿ, ಕಾಂಗ್ರೆಸ್‌ಗೆ ಪರ್ಯಾಯ ರಂಗ ಸ್ಥಾಪನೆ, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಇಲ್ಲ

ನವದೆಹಲಿ: ಕಾಂಗ್ರೆಸ್-ಬಿಜೆಪಿಯೇತರ,  ಜೆಡಿಎಸ್ ಸೇರಿದಂತೆ ಪ್ರಮುಖ ಹನ್ನೊಂದು ಪಕ್ಷಗಳನ್ನೊಳಗೊಂಡ ತೃತೀಯ ರಂಗ ಮಂಗಳವಾರ ಅಸ್ವಿತ್ವಕ್ಕೆ ಬಂದಿದೆ. ಭ್ರಷ್ಟ ಕಾಂಗ್ರೆಸ್ ಹಾಗೂ ಕೋಮುವಾದಿ ಬಿಜೆಪಿಯನ್ನು ಕೇಂದ್ರದಿಂದ ದೂರ ಇಡಲು ತೃತೀಯ ರಂಗ ರಚಿಸಿರುವುದಾಗಿ ಘೋಷಿಸಿರುವ ನಾಯಕರು, ಒಗ್ಗೂಡಿ ಚುನಾವಣೆ ಎದುರಿಸಲಿದ್ದಾರೆ. ಆದರೆ, ಚುನಾವಣೆಗೂ ಮುನ್ನ ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡದಿರಲು ಮಂಗಳವಾರ ತ್ರಿಪುರ ಭವನದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬಹುತೇಕ ಪಕ್ಷಗಳು ಬೇರೆ ಬೇರೆ ರಾಜ್ಯಗಳನ್ನು ಪ್ರತಿನಿಧಿಸುವುದರಿಂದ ಆಯಾ ಪ್ರದೇಶದಲ್ಲಿ ಸೀಟು ಹಂಚಿಕೆ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. […]

ಸಲ್ಮಾನ್ ಖುರ್ಷಿದ್‌ಗೆ ಮಾನಸಿಕ ಸ್ಥಿಮಿತ ಇಲ್ಲ: ಬಿಜೆಪಿ

Wednesday, February 26th, 2014
Narendra-Modi

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದ ಎರಡು ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಮಾತಿನ ಸಮರ ಆರಂಭವಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ, ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ಬುಧವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. 2002ರ ಗುಜರಾತ್ ಗಲಭೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಒಬ್ಬ ‘ನಪುಂಸಕ’ ಎಂದು ಖುರ್ಷಿದ್ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಸೋಲಿನ ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದೆ […]

ಯೋಧರ ಮತದಾನ ಸುಪ್ರೀಂ ನೋಟಿಸ್

Tuesday, February 25th, 2014
Rajeev-Chandrasekhar

ನವದೆಹಲಿ: ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿಯೋಜಿತ ಕ್ಷೇತ್ರದಲ್ಲೇ ಮತದಾನ ಮಾಡಲು ಅವಕಾಶ ನೀಡಬೇಕೆಂದು ಕೋರಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ನಾಲ್ಕು ವಾರಗಳಲ್ಲಿ ಉತ್ತರಿಸುವಂತೆಯೂ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ನೇತೃತ್ವದ ನ್ಯಾಯಪೀಠವು  ಸೂಚಿಸಿದೆ. ಮುಂಬರುವ ಚುನಾವಣೆಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿಯೋಜಿತ ಕ್ಷೇತ್ರ ವ್ಯಾಪ್ತಿಯಲ್ಲೇ ಮತದಾನ ಮಾಡಲು ಅವಕಾಶ ನೀಡುವಂತೆ ರಾಜೀವ್ ಚಂದ್ರಶೇಖರ್ ಮನವಿ ಮಾಡಿದ್ದರು. […]

ದೆಹಲಿಯಲ್ಲಿ ಅಗ್ನಿ ಆಕಸ್ಮಿಕ: ಐಐಟಿ ಕ್ಯಾಂಪಸ್‌ನ ಘಟನೆ

Monday, February 24th, 2014
Delhi-Campus

ನವದೆಹಲಿ : ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಐಐಟಿ) ಕ್ಯಾಂಪಸ್‌ನಲ್ಲಿ ಅಗ್ನಿ ಆಕಸ್ಮಿಕವಾಗಿರುವ ಘಟನೆ ಸೋಮವಾರ ವರದಿಯಾಗಿದ್ದು,  ಬಲ್ಲ ಮೂಲಗಳಿಂದ ತಿಳಿದುಬಂದಿರುವಂತೆ ಕೆಮೆಸ್ಟ್ರಿ ಲ್ಯಾಬ್‌ನಲ್ಲಿ ಉಂಟಾದ ಸಣ್ಣ ಪ್ರಮಾಣದ ನ್ಪೋಟದಿಂದ ಕಾಣಿಸಿಕೊಂಡ ಬೆಂಕಿ ಬಳಿಕ ಕಟ್ಟಡ ವಿವಿಧ ಕಡೆಗೆ ಹಬ್ಬಲಾರಂಭಿಸಿತು, ಬಳಿಕ ಈ ಬೆಂಕಿ ಪಕ್ಕದಲ್ಲಿಯೇ ಇದ್ದ ಹಾಸ್ಟೆಲ್‌ ಕಟ್ಟಡಕ್ಕೂ ಹಬ್ಬಿತು ಎಂದು ತಿಳಿದುಬಂದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಕಾಲೇಜು ಕ್ಯಾಂಪಸ್ಸಿನಲ್ಲಿ ಹರಡಿಕೊಳ್ಳಲಾರಂಭಿಸಿದಂತೆ ಅಲ್ಲಿದ್ದ ವಿದ್ಯಾರ್ಥಿಗಳಲ್ಲಿ ಹಾಗೂ ಉಪನ್ಯಾಸಕ ವರ್ಗದಸರಲ್ಲಿ ಭೀತಿಯ ವಾತಾವರಣ ಮೂಡಲ ಕಾರಣವಾಯಿತು. ತಕ್ಷಣವೇ […]

‘ರಾಜೀವ್’ ಹಂತಕರ ಬಿಡುಗಡೆ: ಫೆ. 27ಕ್ಕೆ ವಿಚಾರಣೆ

Monday, February 24th, 2014
Rajeev-Gandhi

ನವದೆಹಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದ ತಮಿಳುನಾಡು ಸರ್ಕಾರ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಕೈಗೆತ್ತಿಕೊಳ್ಳಲಿದೆ. ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ್ದ ಸುಪ್ರೀಂಕೊರ್ಟ್ನ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಫೆ. 27ರಂದು ಸುಪ್ರೀಂಕೋರ್ಟ್ ನಡೆಸಲಿದೆ. ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ […]