ವಿಭಜನೆ ಜತೆಗೆ ಆಂಧ್ರಕ್ಕೆ ಕೇಂದ್ರಾಡಳಿತದ ನೆರಳು

Saturday, February 22nd, 2014
Jairam-Ramesh

ನವದೆಹಲಿ: ಒಂದು ಕಡೆ ಆಂಧ್ರ ವಿಭಜನೆ ಪ್ರಕ್ರಿಯೆ ಆರಂಭವಾಗಿದ್ದರೆ, ಇನ್ನೊಂದೆಡೆ  ರಾಷ್ಟ್ರಪತಿ ಆಳ್ವಿಕೆಗೆ ಕ್ಷಣಗಣನೆ ಆರಂಭವಾಗಿದೆ. ತೆಲಂಗಾಣ ಮಸೂದೆಗೆ ರಾಜ್ಯಸಭೆಯಿಂದಲೂ ಅನುಮೋದನೆ ಸಿಕ್ಕ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಂಧ್ರವಿಭಜನೆ ಕಾರ್ಯಕ್ಕೆ ಶುಕ್ರವಾರ ಚಾಲನೆ ನೀಡಿದೆ. ನಾಗರಿಕ ಸೇವಾ ಅಧಿಕಾರಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಹಂಚಿಕೆಗೆ ಸಂಬಂಧಿಸಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಿದೆ. ಇವುಗಳಲ್ಲಿ ಒಂದು ಸಮಿತಿ ಅಖಿಲ ಭಾರತ ಸೇವೆಗಳ ಅಡಿ ಬರುವ ಅಧಿಕಾರಿಗಳನ್ನು ಹಂಚಿಕೆ ಮಾಡಿದರೆ ಇನ್ನೊಂದು ಸಮಿತಿ ರಾಜ್ಯಮಟ್ಟದ […]

ಲೋಕಸಮರ: ಬಿಹಾರ, ಉ.ಪ್ರದೇಶದಲ್ಲಿ ಬಿಜೆಪಿಗೆ ಶೇ.50ರಷ್ಟು ಸ್ಥಾನ

Saturday, February 22nd, 2014
Narendra-Modi

ನವದೆಹಲಿ: ದೇಶಾದ್ಯಂತ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅಲೆಯಲ್ಲಿ ತೇಲುತ್ತಿರುವ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಶೇ.50ರಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಖಾಸಗಿ ಸುದ್ದಿ ವಾಹಿನಿ ನಡೆಸಿದ ಚುನಾವಣಾ ಸಮೀಕ್ಷೆ ಹೇಳಿದೆ. ಎಲ್ಲೆಡೆ ಯುಪಿಎ ವಿರೋಧಿ ಮತ್ತು ಮೋದಿ ಪರ ಅಲೆ ಇರುವುದರಿಂದ ಈ ಎರಡು ರಾಜ್ಯಗಳಲ್ಲಿ ಬಿಜೆಪಿ ಒಟ್ಟು 61 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಉತ್ತರ ಪ್ರದೇಶದಲ್ಲಿ ಒಟ್ಟು 80 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 40 ಕಡೆ ಗೆಲವು […]

ಲೋಕಸಮರದತ್ತ ನಂದನ್ ಚಿತ್ತ, ‘ಆಧಾರ್‌’ಗೆ ರಾಜಿನಾಮೆ

Friday, February 21st, 2014
Nandan-Nilekani

ನವದೆಹಲಿ: ವಿಶಿಷ್ಟ ಗುರುತಿನ ಪತ್ರ ಪ್ರಾಧಿಕಾರ(ಆಧಾರ್)ದ ಅಧ್ಯಕ್ಷ ಸ್ಥಾನಕ್ಕೆ ನಂದನ್ ನಿಲೇಕಣಿ ಅವರು ರಾಜಿನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದ ನಂದನ್ ನಿಲೇಕಣಿ ಅವರು ಯುಐಡಿಐ (ಆಧಾರ್) ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಇನ್ಫೋಸಿಸ್ ಸಂಸ್ಥೆ ಸಹ ಸಂಸ್ಥಾಪಕರಾಗಿದ್ದ ನಂದನ್ ನಿಲೇಕಣಿ ಅವರನ್ನು 2009ರಲ್ಲಿ ಕೇಂದ್ರದ ಯುಪಿಎ ಸರ್ಕಾರ ‘ಆಧಾರ್‌’ ಯೋಜನೆಯ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ನಂತರ ಅವರು ತಮ್ಮ ಇನ್ಫೋಸಿಸ್ ಸಂಸ್ಥೆಯನ್ನು ತೊರೆದಿದ್ದರು. ದೇಶದ ಅತಿದೋಡ್ಡ ಗುರುತಿನ ಚೀಟಿ ಯೋಜನೆಯಾಗಿರುವ ‘ಆಧಾರ್‌’ ಯೋಜನೆ, […]

ರಾಜೀವ್ ಹಂತಕರ ಬಿಡುಗಡೆ ಸದ್ಯಕ್ಕಿಲ್ಲ

Friday, February 21st, 2014
P.-Sathasivam

ನವದೆಹಲಿ/ಚೆನ್ನೈ: ಸದ್ಯಕ್ಕೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹಂತಕರಿಗೆ ಬಿಡುಗಡೆ ಭಾಗ್ಯ ಇಲ್ಲ… ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿದ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ. ‘ಕೈದಿಗಳ ಬಿಡುಗಡೆ ಸಂಬಂಧ ತಮಿಳುನಾಡು ಸರ್ಕಾರ ಸೂಕ್ತ ವಿಧಿ ವಿಧಾನಗಳನ್ನು ಅನುಸರಿಸಿಲ್ಲ. ಹೀಗಾಗಿ ಕೋರ್ಟ್ ಜಯಲಲಿತಾ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ’ […]

ಫೇಸ್ ತೆಕ್ಕೆಗೆ ವಾಟ್ಸ್‌ಆ್ಯಪ್

Friday, February 21st, 2014
ಫೇಸ್ ತೆಕ್ಕೆಗೆ ವಾಟ್ಸ್‌ಆ್ಯಪ್

ನ್ಯೂಯಾರ್ಕ್: ವಿಶ್ವಾದ್ಯಂತ ಮೊಬೈಲ್ ಮೆಸೇಜಿಂಗ್‌ನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ವಾಟ್ಸ್‌ಆ್ಯಪ್ ಅನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ಮಡಿಲಿಗೆ ಸೇರಿಸಿಕೊಳ್ಳಲಿದೆ. ಬರೋಬ್ಬರಿ 12 ಲಕ್ಷ ಸಾವಿರ ಕೋಟಿ (19 ಶತಕೋಟಿ ಡಾಲರ್) ನೀಡಿ ಫೇಸ್‌ಬುಕ್ ಸ್ಥಾಪಕ ಮಾರ್ಕ್ ಝುಕರ್‌ಬರ್ಗ್ ವಾಟ್ಸ್‌ಆ್ಯಪ್ ಅನ್ನು ಖರೀದಿಸಲಿದ್ದಾರೆ. ಮೊಬೈಲ್ ತಂತ್ರಜ್ಞಾನ ವಲಯದಲ್ಲೇ ಆದ ದೊಡ್ಡ ಮೊತ್ತದ ಖರೀದಿ ಪ್ರಕ್ರಿಯೆ. ಒಪ್ಪಂದ ಪ್ರಕಾರ ಝುಕರ್‌ಬರ್ಗ್ ಮೊದಲು ವಾಟ್ಸ್‌ಆ್ಯಪ್ ಸ್ಥಾಪಕ ಜಾನ್ ಕೌಮ್‌ಗೆ  4 ಶತಕೋಟಿ ಡಾಲರ್ ನಗದಲ್ಲಿ ನೀಡಲಿದ್ದಾರೆ. ನಂತರ 12 […]

ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

Friday, February 21st, 2014
ಪದೇ ಪದೆ ಕಲಾಪ ಮುಂದೂಡಿಕೆ; ಪ್ರತಿಭಟನೆ ಮಧ್ಯೆ ತೆಲಂಗಾಣ ಬಿಲ್ ಪಾಸ್; 29ನೇ ರಾಜ್ಯ ಉದಯ

ನವದೆಹಲಿ: ದೇಶಕ್ಕೆ ಇನ್ನೊಂದು ರಾಜ್ಯದ ಸಂತಸ. 29ನೇ ರಾಜ್ಯವಾಗಿ ತೆಲಂಗಾಣ ಉದಯಕ್ಕೆ ಗುರುವಾರ ರಾಜ್ಯಸಭೆ ಸಾಕ್ಷಿಯಾಯಿತು. ಮಂಗಳವಾರವಷ್ಟೇ ಲೋಕಸಭೆಯಲ್ಲಿ ತೆಲಂಗಾಣ ಮಸೂದೆಗೆ ಒಪ್ಪಿಗೆ ಸಿಕ್ಕಿದ್ದು, ಎರಡು ದಿನಗಳ ಹಗ್ಗಜಗ್ಗಾಟದ ನಡುವೆ ಗುರುವಾರ ರಾತ್ರಿ 08.07 ಗಂಟೆಗೆ ಹೊಸ ರಾಜ್ಯದ ಉದಯವಾಯಿತು. ಆದರೆ ಈ ಮಸೂದೆಗೆ ರಾಷ್ಟ್ರಪತಿ ಅಂಕಿತ ಬೇಕು. ಆಗಷ್ಟೇ ಈ ರಾಜ್ಯ ಉದಯವಾಗಿದೆ ಎಂಬುದು ಅಧಿಕೃತವಾಗುತ್ತದೆ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಸಮರ ನಡೆದರೂ ಕೂಡ, ಮಸೂದೆಗೆ ಬೆಂಬಲ ನೀಡುತ್ತೇವೆ ಎಂಬ […]

‘ರಾಜೀವ್’ ಹಂತಕರ ಬಿಡುಗಡೆಗೆ ಪ್ರಧಾನಿ ಆಕ್ಷೇಪ

Thursday, February 20th, 2014
Manmohan-Singh

ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡಲು ಮುಂದಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡದಂತೆ ತಮಿಳುನಾಡು ಸಿಎಂಗೆ ಒತ್ತಾಯಿಸಿದ್ದಾರೆ. ಅಲ್ಲದೆ ತಾವು ತೆಗೆದುಕೊಂಡಿರುವ ನಿರ್ಧಾರವನ್ನು ಹಿಂಪಡೆಯುವಂತೆ ಜಯಲಲಿತಾಗೆ ಪ್ರಧಾನಿ ಆಗ್ರಹಿಸಿದ್ದಾರೆ. ಮಾಜಿ ಪ್ರಧಾನಿ ಅವರನ್ನು ಹತ್ಯೆ ಮಾಡಿರುವುದು ಸಣ್ಣ ವಿಷಯವಲ್ಲ. […]

ಹಿರಿಯರ ಮನೆ ಮಾನ ಮುಕ್ಕು

Thursday, February 20th, 2014
Rajya-Sabha

ನವದೆಹಲಿ: ಸದನದ ಬಾವಿಯಲ್ಲಿ ಗದ್ದಲ, ಘೋಷಣೆ, ರಾಜ್ಯಸಭೆ ಸೆಕ್ರೆಟರಿ ಜನರಲ್ ಶಂಷೇರ್ ಕೆ. ಶರೀಫ್‌ರಿಂದ ಬಲವಂತವಾಗಿ ಕಾಗದಪತ್ರ ಕಿತ್ತುಕೊಳ್ಳಲು ಯತ್ನ, ಉಪಸಭಾಪತಿಗಳಿಗೇ ಗದರಿದ ಸಂಸದರು, ಮೂರು ಬಾರಿ ಮುಂದೂಡಲ್ಪಟ್ಟ ಕಲಾಪ… ಇದು ತೆಲಂಗಾಣ ಮಸೂದೆಗೆ ಸಂಬಂಧಿಸಿ ರಾಜ್ಯಸಭೆಯಲ್ಲಿ ಕಂಡ ಘಟನಾವಳಿಗಳು. ಕೆಳಮನೆಯಲ್ಲಿ ಮಂಗಳವಾರವಷ್ಟೇ ನಾಟಕೀಯ ರೀತಿಯಲ್ಲಿ ಅಂಗೀಕಾರ ಪಡೆದಿದ್ದ ಮಸೂದೆಯನ್ನು ರಾಜ್ಯಸಭೆಯಲ್ಲಿ ಬುಧವಾರ ಮಂಡಿಸುವ ಸರ್ಕಾರದ ಪ್ರಯತ್ನ ಟಿಡಿಪಿ ಸಂಸದರ ಗದ್ದಲದಿಂದಾಗಿ ವಿಫಲವಾಗಿದೆ. ದಿನದ ಆರಂಭದಿಂದಲೇ ಕಲಾಪವನ್ನು ರಣರಂಗವಾಗಿ ಪರಿವರ್ತಿಸಿದ್ದ ಟಿಡಿಪಿ ಸಂಸದರು ಸದನದ ಬಾವಿಗೆ ನುಗ್ಗಿ […]

ರಾಜೀವ್ ಹಂತಕರ ಬಿಡುಗಡೆ ಏಕೆ?

Thursday, February 20th, 2014
Rahul-Gandhi

ನವದೆಹಲಿ/ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಮೂರು ದಿನಗಳೊಳಗೆ ಬಿಡುಗಡೆ ಮಾಡುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಿಡಿಕಿಡಿಯಾಗಿದ್ದಾರೆ. ಪ್ರಧಾನಮಂತ್ರಿಗಳ ಹಂತಕರನ್ನೇ ಬಿಡುಗಡೆ ಮಾಡಿದರೆ ಇನ್ನು ಜನಸಾಮಾನ್ಯರಿಗೆ ಹೇಗೆ ನ್ಯಾಯ ಸಿಗಲು ಸಾಧ್ಯ? ನಮ್ಮ ದೇಶದಲ್ಲಿ ಪ್ರಧಾನಿಗೂ ನ್ಯಾಯ ಸಿಗುವುದಿಲ್ಲವೇ? ನನ್ನ ತಂದೆಯ ಹಂತಕರಿಗೆ ಗಲ್ಲುಶಿಕ್ಷೆಯಾಗಬೇಕೆಂದು ನಾನೇನು ಆಗ್ರಹಿಸುತ್ತಿಲ್ಲ. ಅದರಿಂದ ನನ್ನ ತಂದೆ ಹಿಂತಿರುಗಿ ಬರುವುದೂ ಇಲ್ಲ. ಇದು ಇಡೀ ದೇಶಕ್ಕೆ ಸಂಬಂಧಪಟ್ಟ ವಿಚಾರ. ತಮಿಳುನಾಡು ಸರ್ಕಾರದ ಈ ನಿರ್ಧಾರದಿಂದ […]

ರಾಜೀವ್ ಹಂತಕರಿಗೆ ತಪ್ಪಿತು ಗಲ್ಲು

Wednesday, February 19th, 2014
Rajeev-Gandhi

ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲುಶಿಕ್ಷೆಯನ್ನು ಜೀವಾವಧಿಗಿಳಿಸಿ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ರಾಜೀವ್ ಹತ್ಯೆಗೈದ ಮೂವರು ಅಪರಾಧಿಗಳ ಕ್ಷಮಾದಾನ ಅರ್ಜಿಇತ್ಯರ್ಥಗೊಳಿಸಲು ಕೇಂದ್ರ ಸರ್ಕಾರ 11 ವರ್ಷ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ನೀಡಿದೆ.   ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಇದೇ ಕಾರಣ ಹೇಳಿ ನರಹಂತಕ ವೀರಪ್ಪನ್ ಸಹಚರರ ಗಲ್ಲುಶಿಕ್ಷೆಯನ್ನೂ ಜೀವಾವಧಿಗಿಳಿಸಿ ಆದೇಶ ಹೊರಡಿಸಿತ್ತು. ವಿಳಂಬವೇ ಕಾರಣ: ಅಪರಾಧಿಗಳಾದ ಸಂತನ್, ಮುರುಗನ್ ಹಾಗೂ ಪೆರಾರಿವೇಲನ್ ಅವರ ಕ್ಷಮಾದಾನ ಅರ್ಜಿಯ ಇತ್ಯರ್ಥಕ್ಕೆ […]