ಮೊಯ್ಲಿ, ದಿಯೋರಾ, ಅಂಬಾನಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

Tuesday, February 11th, 2014
Arvind-Kejriwal

ನವದೆಹಲಿ: ಮುರಳಿ ದಿಯೋರಾ, ವೀರಪ್ಪ ಮೊಯ್ಲಿ, ವಿ.ಕೆ ಸಿಬಲ್ , ಮುಖೇಶ್ ಅಂಬಾನಿ ಮತ್ತು ರಿಲಾಯನ್ಸ್ ಇಂಡಸ್ಟ್ರೀಸ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸೂಚನೆ ನೀಡಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅನಿಲ ಬೆಲೆ ಹೆಚ್ಚಳ ರಿಲಾಯನ್ಸ್ ಕಂಪನಿಯೇ ಕಾರಣ ಎಂದು ಹೇಳಿದ್ದಾರೆ. ರಿಲಾಯನ್ಸ್ ಕಂಪನಿ ಅನಿಲ ಬಾವಿ ಗುತ್ತಿಗೆಯ ವಿಚಾರದಲ್ಲಿ ಕೇಂದ್ರ ಗೋಲ್‌ಮಾಲ್ ನಡೆಸಿದೆ ಹಾಗು ರಿಲಾಯನ್ಸ್ ಕಂಪನಿ ದೇಶದಲ್ಲಿ ಅನಿಲವನ್ನು ಕೃತಕ ಸಂಗ್ರಹದಲ್ಲಿರಿಸಿದೆ […]

20ರೊಳಗೆ ಜಿಪಿಎಸ್ ಕಡ್ಡಾಯ

Monday, February 10th, 2014
GPS

ನವದೆಹಲಿ:  ಫೆ.20ರೊಳಗೆ ಜಿಪಿಎಸ್ ಸಾಧನ ಅಳವಡಿಸಿ. ಇದು ಕೇಂದ್ರ ಸರ್ಕಾರ ಸಾರ್ವಜನಿಕ ಸಾರಿಗೆ ವಾಹನಗಳಿಗೆ ನೀಡಿರುವ ಗಡುವು. 10 ಲಕ್ಷಕ್ಕಿಂತ ಅಧಿಕ ಜನಸಂಖ್ಯೆಯುಳ್ಳ ಪ್ರಮುಖ ನಗರಗಳಲ್ಲಿ ಸಂಚರಿಸುವ ವಾಹನಗಳು ಜಿಪಿಎಸ್ ವ್ಯವಸ್ಥೆ ಹೊಂದಿರಲೇಬೇಕು ಎಂದು ಕೇಂದ್ರ ಸಾರಿಗೆ ಸಚಿವಾಲಯ ಆದೇಶ ನೀಡಿದೆ. ಸಾರ್ವಜನಿಕ ಸಾರಿಗೆ ವಾಹನಗಳ ಮಾಲೀಕರು 20ರೊಳಗೆ ತಮ್ಮ ವಾಹನಗಳಲ್ಲಿ ಜಿಪಿಎಸ್(ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ) ಅಳವಡಿಸಬೇಕು. ತಪ್ಪಿದರೆ ಅಂಥವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದೂ ಸಚಿವಾಲಯ ಎಚ್ಚರಿಕೆ ನೀಡಿದೆ. ಈ ಹಿಂದೆ ಜಿಪಿಎಸ್ ಅಳವಡಿಕೆಗೆ […]

ಕೊನೆಗೂ ತೆಲಂಗಾಣಕ್ಕೆ ಸಿಕ್ಕಿತು ಕೇಂದ್ರದ ಸಮ್ಮತಿ

Saturday, February 8th, 2014
ಕೊನೆಗೂ ತೆಲಂಗಾಣಕ್ಕೆ ಸಿಕ್ಕಿತು ಕೇಂದ್ರದ ಸಮ್ಮತಿ

ನವದೆಹಲಿ: ಅಂತೂ ಇಂತೂ ಆಂಧ್ರ ಪ್ರದೇಶವನ್ನು ಇಬ್ಭಾಗ ಮಾಡುವ ತೆಲಂಗಾಣ ರಚನೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶುಕ್ರವಾರ ನಡೆದ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  ಹೈದರಾಬಾದ್ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡುವುದಿಲ್ಲ ಎಂದಿರುವ ಕೇಂದ್ರ ಸರ್ಕಾರ ಜಂಟಿ ರಾಜಧಾನಿ ಮಾಡುವುದಾಗಿ ಹೇಳಿದೆ. ಕರಡು ಮಸೂದೆಯ ಬಹುತೇಕ ಅಂಶಗಳನ್ನು ಹಾಗೆಯೇ ಉಳಿಸಿಕೊಂಡಿರುವ ಕೇಂದ್ರ ಸರ್ಕಾರ, ಹೈದರಾಬಾದ್ ಅನ್ನು ಕೇಂದ್ರಾಡಳಿತ ಪ್ರದೇಶ ಮಾಡಬೇಕು ಎಂಬ ಸೀಮಾಂಧ್ರ ಭಾಗದ ನಾಯಕರ ಒತ್ತಡಕ್ಕೆ ಮಣಿದಿಲ್ಲ. ಬದಲಾಗಿ […]

ಮಣಿಪುರದಲ್ಲಿ ಮೋದಿ ಆರ್ಭಟ

Saturday, February 8th, 2014
Narendra-Modi

ಮಣಿಪುರ: ಈಶಾನ್ಯ ವಿದ್ಯಾರ್ಥಿ ಹತ್ಯೆ ಪ್ರಕರಣ ದೇಶಕ್ಕೆ ನಾಚಿಕೆಗೇಡಾಗಿದೆ.ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ  ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂದು ಮಣಿಪುರ ಸಮಾವೇಶದಲ್ಲಿ ಮಾತನಾಡಿದ ಅವರು ಈಶಾನ್ಯ ವಿದ್ಯಾರ್ಥಿ ಹತ್ಯೆ ಪ್ರಕರಣ ದೇಶಕ್ಕೆ ನಾಚಿಕೆಗೇಡದ ಸಂಗತಿ ಈಶಾನ್ಯ ಜನರಿಗೆ ಯುಪಿಎ ಸರಕಾರ ಸೂಕ್ತ ಭದ್ರತೆ ಒದಗಿಸದೇ ಇರುವುದೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದ ಮೋದಿ ಮಣಿಪುರದಲ್ಲಿ ಕಾಂಗ್ರೆಸ್‌ ನಾಯಕರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಇಂತಹವರನ್ನು ಮೊದಲು ಮಟ್ಟಹಾಕಬೇಕು ಎಂದು ಹೇಳಿದ್ದಾರೆ. ಇಲ್ಲಿನ ಜನತೆಗೆ […]

ಸಿಎನ್‌ಆರ್ ರಾವ್, ಸಚಿನ್‌ಗೆ ‘ಭಾರತ ರತ್ನ’ ಪ್ರದಾನ

Tuesday, February 4th, 2014
Sachin-Tendulkar

ನವದೆಹಲಿ: ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿಎನ್‌ಆರ್ ರಾವ್ ಹಾಗೂ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗೆ ಮಂಗಳವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ಪ್ರಥಮ ಪ್ರಜೆ ಪ್ರಣಬ್ ಮುಖರ್ಜಿ ಅವರು, ದೇಶದ ಎರಡು ರತ್ನಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ಕ್ರೀಡಾ ಕ್ಷೇತ್ರದಲ್ಲಿನ ಅಪೂರ್ವ ಸಾಧನೆಗಾಗಿ […]

ಏ ಮೇರೆ ವತನ್‌…ಗೆ ಐದು ದಶಕ

Tuesday, January 28th, 2014
Latha-Mangeshkar

ಮುಂಬೈ : ಚೀನಾ ಜತೆಗಿನ ಯುದ್ಧದಲ್ಲಿ ಭಾರತ ಸೋತು ನೂರಾರು ಸೈನಿಕರು ಮಡಿದ ಸಂದರ್ಭದಲ್ಲಿ  ಗಾಯಕಿ ಲತಾ ಮಂಗೇಷ್ಕರ್‌ ಅವರು ಹಾಡಿದ್ದ ‘ಏ ಮೇರೆ ವತನ್‌ ಕೆ ಲೋಗೊ’ ಗೀತೆಗೆ ಈಗ 51 ವರ್ಷ. 1962ರಲ್ಲಿ ಚೀನಾ ಯುದ್ಧದಲ್ಲಿ ಮಡಿದ ಭಾರತೀಯರ ಯೋಧರ ಸ್ಮರಣಾರ್ಥ 1963ರ ಜನವರಿ 27ರಂದು ಅಂದಿನ ಪ್ರಧಾನಿ ನೆಹರೂ ಅವರ ಸಮ್ಮುಖದಲ್ಲಿ ಲತಾ ಈ  ಹಾಡನ್ನು ಪ್ರಸ್ತುತಪಡಿಸಿದ್ದರು. ಲತಾ ಹಾಡಿದ್ದ ಈ ಹಾಡು ಕೇಳಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ನೆರೆದಿದ್ದ ಜನರ ಕಣ್ಣಾಲಿಗಳು […]

ನಾನು ಲೋಕಸಭೆಗೆ ಸ್ಪರ್ಧಿಸುತ್ತೇನೆ : ಅಡ್ವಾಣಿ

Monday, January 27th, 2014
Adwani

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳುವ ಮೂಲಕ ಹಿರಿಯ ಬಿಜೆಪಿ ಮುಖಂಡ ಎಲ್.ಕೆ.ಆಡ್ವಾಣಿ ಅವರು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ ಮೋದಿ ಅವರ ಕೈಗೆ ಚುನಾವಣೆ ಹೊಣೆ ಸಿಕ್ಕ ಮೇಲೆ ಅಡ್ವಾಣಿ ಅವರು ರಾಜ್ಯಸಭೆ ಕಣಕ್ಕಿಳಿಯಬಹುದು ಎನ್ನುವ ಊಹಾಪೋಹ ಎದ್ದಿತ್ತು. ಆದರೆ, ಎಲ್ಲಾ ಸುದ್ದಿಗಳನ್ನು ಬದಿಗೊತ್ತಿ ಲೋಕಸಭೆ ಸ್ಪರ್ಧೆ ಬಗ್ಗೆ ಅಡ್ವಾಣಿ ಖಚಿತಪಡಿಸಿದ್ದಾರೆ. ರಾಜ್ಯಸಭೆಗೆ ಸ್ಪರ್ಧಿಸುವ ಕುರಿತು ಈವರೆಗೆ ನಾನು ಏನೂ ಹೇಳಿಲ್ಲ. ಯಾರಾದರೂ ಈ ಕುರಿತು ಹೇಳಿದರೆ ಈ ಕುರಿತು ಯೋಚಿಸುತ್ತೇನೆ. ಒಂದು ವೇಳೆ ರಾಜ್ಯಸಭೆಗೆ […]

ಸುನಂದಾ ಸಾವಿನ ತನಿಖೆ ಕ್ರೈಮ್ ಬ್ರಾಂಚ್ ಪೊಲೀಸರಿಗೆ

Friday, January 24th, 2014
Sunanda-Pushkar

ನವದೆಹಲಿ: ಕೇಂದ್ರ ಸಚಿವ ಶಶಿ ತರೂರ್ ಅವರ ಪತ್ನಿ ಸುನಂದಾ ಪುಷ್ಕರ್ ಅವರ ನಿಗೂಢ ಸಾವಿನ ತನಿಖೆಯನ್ನು ದೆಹಲಿ ಕ್ರೈಮ್ ಬ್ರಾಂಚ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಈ ಪ್ರಕರಣದಲ್ಲಿ ಒಳಗೊಂಡ ವಿವಿಧ ಅಂಶಗಳನ್ನು ಪರಿಗಣಿಸಿ ಈ ಪ್ರಕರಣನ್ನು ಕ್ರೈಮ್ ಬ್ರಾಂಚ್‌ಗೆ ಹಸ್ತಾಂತರಿಸಲಾಗಿದೆ. ಸುನಂದಾ ಸಾವಿನ ತನಿಖೆ ನಡೆಸಿದ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರಕರಣದ ಹತ್ಯೆ ಅಥವಾ ಆತ್ಮಹತ್ಯೆಯ ವಿವಿಧ ಕೋನಗಳನ್ನು ತನಿಖೆ ಮಾಡುವಂತೆ ಆದೇಶಿಸಿದ್ದಾರೆ.. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಔಷಧಿಯ ಅತಿಸೇವನೆಯಿಂದ ವಿಷಕಾರಿಯಾಗಿ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ. ತರೂರ್ ಜತೆ […]

ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಡ್ವಾಣಿ

Monday, June 10th, 2013
lk advani

ನವದೆಹಲಿ: ಗೋವಾ ರಾಜಧಾನಿ ಪಣಜಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಗೈರು ಆಗಿದ್ದ ಆಡ್ವಾಣಿ,  ಸೋಮವಾರ ಬಿಜೆಪಿ ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಸಂಸದೀಯ ಮಂಡಳಿ ಅಧ್ಯಕ್ಷ ಸ್ಥಾನ ಸೇರಿದಂತೆ ಪಕ್ಷದ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದು, ರಾಜಿನಾಮೆ ಪತ್ರವನ್ನು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ತನ್ನ ಆಪ್ತರಲ್ಲಿ ರವಾನಿಸಿದ್ದಾರೆ. ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ 2014ರ ಚುನಾವಣಾ ಪ್ರಚಾರ ಸಮಿತಿಯ ಸಾರಥ್ಯ ವಹಿಸಿದ್ದರಿಂದ ತೀವ್ರ ಅಸಮಾಧಾನಗೊಂಡಿದ್ದ ಬಿಜೆಪಿ ಹಿರಿಯ ನಾಯಕ […]

ಇಟಲಿ ರಾಯಭಾರಿಗೆ ಸುಪ್ರೀಮ್ ಕೋರ್ಟ್ ನಿಂದ ತಡೆ

Thursday, March 14th, 2013
ಇಟಲಿ ರಾಯಭಾರಿಗೆ ಸುಪ್ರೀಮ್ ಕೋರ್ಟ್ ನಿಂದ ತಡೆ

ನವದೆಹಲಿ : ಭಾರತೀಯ ಮೀನುಗಾರರಿಬ್ಬರನ್ನು ಗುಂಡಿಕ್ಕಿ ಕೊಂದ ಆರೋಪ ಎದುರಿಸುತ್ತಿರುವ ಇಟಲಿ ನೌಕಾಪಡೆಯ ಸಿಬ್ಬಂದಿಯಿ ಬ್ಬರನ್ನು ಮರಳಿ ಒಪ್ಪಿಸುವಂತೆ ಸುಪ್ರೀಮ್ ಕೋರ್ಟ್ ಆದೇಶಿಸಿದೆ. ತಮ್ಮ ದೇಶದಲ್ಲಿನ ಮತದಾನದಲ್ಲಿ ಪಾಲ್ಗೊಳ್ಳಲು ಅನುಮತಿ ಕೋರಿ ಇಟಲಿಗೆ ತೆರಳಿದ ಇಬ್ಬರು ನೌಕಾ ಸಿಬ್ಬಂದಿಯನ್ನು ವಾಪಾಸು ಕಳುಹಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಮಾತು ತಪ್ಪಿರುವ ಇಟಲಿಯ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಮ್ ಕೋರ್ಟ್ ದೆಹಲಿಯಲ್ಲಿರುವ ಇಟಲಿ ರಾಯಭಾರಿ ಭಾರತ ಬಿಟ್ಟು ತೆರಳುವುದಕ್ಕೆ ಗುರುವಾರ ತಡೆಯಾಜ್ಞೆ ನೀಡಿದೆಯಲ್ಲದೆ, ಈ ಕುರಿತು ಮಾರ್ಚ್ 18  ರೊಳಗೆ ಉತ್ತರಿಸುವಂತೆ […]