ಪೆಟ್ರೋಲ್ ಬೆಲೆ ೧ ರೂ. ಅಗ್ಗ, ಡೀಸೆಲ್ ೫೦ ಪೈಸೆ ಹೆಚ್ಚಳ

Thursday, March 14th, 2013
Petrol and deasel price

ನವ ದೆಹಲಿ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಬೆಲೆಗಳು ಇಳಿಯುತ್ತಿರುವ ಪರಿಣಾಮ ಪೆಟ್ರೋಲ್ ಬೆಲೆಯೂ ಒಂದು ರೂಪಾಯಿಯಷ್ಟು ಇಳಿಯಲಿದೆ. ಪೆಟ್ರೋಲ್ ಬೆಲೆ ಒಂದು ರೂಪಾಯಿಯಷ್ಟು  ಇಳಿಕೆಯಾಗಲಿದ್ದರೆ, ಜನವರಿಯಲ್ಲಿ ಪ್ರತಿ ತಿಂಗಳು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ನಿರ್ಧಾರ ಕೈಗೊಂಡಿರುವುದರಿಂದ, ಡೀಸೆಲ್ ಬೆಲೆ ೪೦ ರಿಂದ ೫೦ ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆಯು  ಮಾರ್ಚ್ ೧೫ ಶುಕ್ರವಾರ ಅಥವಾ ಮಾರ್ಚ್ ೧೬ ಶನಿವಾರದಿಂದು ಪ್ರಕಟಗೊಳ್ಳುವ  ಸಾಧ್ಯತೆಯಿದೆ.

ಡ್ರಗ್ಸ್ ಸ್ಮಗ್ಲಿಂಗ್, ಬಾಕ್ಸರ್ ವಿಜೇಂದರ್‌ ಸಿಂಗ್‌ ಮೇಲೆ ಆರೋಪ

Friday, March 8th, 2013
Vijendar Sing

ಮೊಹಾಲಿ : ಡ್ರಗ್ಸ್ ಸ್ಮಗ್ಲಿಂಗ್ ಗೆ ಸಂಬಂಧಪಟ್ಟಂತೆ ಬಾಕ್ಸಿಂಗ್ ಚಾಂಪಿಯನ್, ಒಲಿಂಪಿಕ್ಸ್ ನ ಪದಕ ವಿಜೇತ  ಬಾಕ್ಸರ್‌ ವಿಜೇಂದರ್‌ ಸಿಂಗ್‌ ರವರ ಮೇಲೆ ಆರೋಪ ಕೇಳಿ ಬಂದಿದೆ. ಮೊಹಾಲಿಯ ಫ್ಲಾಟ್‌ ಒಂದರಲ್ಲಿ 130 ಕೋಟಿ ರೂಪಾಯಿ ಮೌಲ್ಯದ 26 ಕಿಲೋ ಹೆರಾಯಿನ್‌ ನನ್ನು ವಶಪಡಿಸಿಕೊಂಡ ಪಂಜಾಬ್ ಪೊಲೀಸರು ಈ ವೇಳೆ ಅನೂಪ್‌ ಖಲೋನ್‌ ಎಂಬಾತನನ್ನು ಸೆರೆಹಿಡಿದಿದ್ದಾರೆ. ವಿಚಾರಣೆಯ ವೇಳೆ ಈತ ತನಗೆ ಬಾಕ್ಸರ್‌ ವಿಜೇಂದರ್‌ ಸಿಂಗ್‌ ಜತೆ ಸಂಪರ್ಕವಿದೆ ಎಂದು ಹೇಳಿಕೊಂಡಿದ್ದಾನೆ. ಅಲ್ಲದೆ ತಾನು ವಿಜೇಂದರ್‌ ಕುಮಾರ್‌ಗೆ […]

ಪೆಟ್ರೋಲು ಬೆಲೆ ಲೀಟರಿಗೆ 1.40 ರೂಪಾಯಿ ಏರಿಕೆ

Saturday, March 2nd, 2013
Petrol price hike

ಹೊಸದಿಲ್ಲಿ : ಪೆಟ್ರೋಲು ಬೆಲೆಯನ್ನು ಲೀಟರಿಗೆ 1.40 ರೂಪಾಯಿಯಂತೆ ಏರಿಸಲಾಗಿದ್ದು, ಇದು ಇತ್ತೀಚೆಗಿನ ಕೆಲವು ವಾರಗಳಲ್ಲಿ ಆಗಿರುವ ದೊಡ್ಡ ಮೊತ್ತದ ಹೆಚ್ಚಳ.ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯೇರಿಕೆ ಮತ್ತು ರೂಪಾಯಿ ಮೌಲ್ಯ ಕುಸಿತದಿಂದಾಗಿ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲು ಬೆಲೆಯನ್ನು ರೂ. 1.40ರಂತೆ ಏರಿಸುವುದು ಅನಿವಾರ್ಯ ಎಂದು ಭಾರತೀಯ ತೈಲ ನಿಗಮ ಹೇಳಿದೆ. ಈ ಏರಿಕೆಯಲ್ಲಿ ಸ್ಥಳೀಯ ತೆರಿಗೆಗಳು ಒಳಗೊಂಡಿಲ್ಲ. ವ್ಯಾಟ್‌ ಸೇರಿಸಿದ ಬಳಿಕ ಏರಿಕೆ ಇನ್ನೂ ತುಸು ಹೆಚ್ಚಾಗಲಿದೆ. ಫೆ. 16ರಂದು ವ್ಯಾಟ್‌ ಸೇರಿಸದೆ ರೂಪಾಯಿ 1.50 […]

ಕೊಲ್ಕತ್ತಾ ಮಾರುಕಟ್ಟೆ ಸಂಕೀರ್ಣದಲ್ಲಿ ಅಗ್ನಿ ದುರಂತ ಸಾವಿನ ಸಂಖ್ಯೆ19 ಕ್ಕೆ ಏರಿಕೆ

Wednesday, February 27th, 2013
Kolkata market complex

ಕೊಲ್ಕತ್ತಾ  : ಬುಧವಾರ ಕೇಂದ್ರ ಕೊಲ್ಕತ್ತಾ ದ ಸೀಲ್ಡಾ ಪ್ರದೇಶದಲ್ಲಿ ಗೋದಾಮು ಮತ್ತು ಕಚೇರಿ ಸಂಕೀರ್ಣಗಳಿರುವ ಮಾರುಕಟ್ಟೆಯಲ್ಲಿ ನಸುಕಿನ ಜಾವ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸುಮಾರು 19 ಜನರು ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ  26 ತಂಡಗಳು ಸತತವಾಗಿ ಮೂರು ಗಂಟೆಗಳ ಸತತ ಪರಿಶ್ರಮದಿಂದ ಬೆಂಕಿಯನ್ನು ಶಮನಗೊಳಿಸಲು ಪ್ರಯತ್ನಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ನಸುಕಿನ ಜಾವ 4 ಗಂಟೆ ಸುಮಾರಿಗೆ ಈ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಮೃತರಲ್ಲಿ […]

ಶಿವಸೇನೆ ವರಿಷ್ಠ ಬಾಳಾ ಸಾಹೇಬ್ ಠಾಕ್ರೆ ಅವರ ಅಂತಿಮಯಾತ್ರೆ ಹರಿದು ಬಂದ ಜನಸಾಗರ

Monday, November 19th, 2012
Bal Thackeray

ಮುಂಬಯಿ :ಮಹಾರಾಷ್ಟ್ರದ ಹುಲಿ ಎಂದೇ ಪ್ರಸಿದ್ಧರಾದ, ಮಹಾರಾಷ್ಟ್ರದ್ಲಲಿ ಶಿವಸೇನೆಯನ್ನು ಅಧಿಕಾರಕ್ಕೆ ತಂದ ಬಾಳ ಠಾಕ್ರೆ ದೇಹಕ್ಕೆ ಹಲವಾರು ಜನರ ಸಮ್ಮಖದಲ್ಲಿ ದೇಹಕ್ಕೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಠಾಕ್ರೆಯವರ ದೇಹ ಪಂಚಭೂತಗಳಲ್ಲಿ ಲೀನವಾಯಿತು. ಶಿವಸೇನೆ ವರಿಷ್ಠ ಬಾಳಾ ಸಾಹೇಬ್ ಠಾಕ್ರೆ ಅವರ ಅಂತಿಮಯಾತ್ರೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಲಕ್ಷಾಂತರ ಮಂದಿ ಪಾಲ್ಗೊಂಡಿದ್ದರು. ಠಾಕ್ರೆ ಶವವನ್ನು ಬೆಳಗ್ಗೆ 9 ಗಂಟೆಗೆ ಅವರ ನಿವಾಸ ‘ಮಾತೋಶ್ರೀ’ ಯಿಂದ ಹೊರಕ್ಕೆ ತರಲಾಯಿತು. ಗಾಜಿನ ಪೆಟ್ಟಿಗೆಯಲ್ಲಿ ಇರಿಸಿದ್ದ ದೇಹವನ್ನು ಪುಷ್ಪಾಲಂಕೃತ ವಾಹನದಲ್ಲಿ […]

ದೇಶದ 13ನೇ ರಾಷ್ಟ್ರಪತಿಯಾಗಿ ಪ್ರಣಬ್ ಮುಖರ್ಜಿ ಅಧಿಕಾರ ಸ್ವೀಕಾರ

Thursday, July 26th, 2012
Pranab Mukherjee

ಹೊಸದಿಲ್ಲಿ : ಪ್ರಣಬ್ ಮುಖರ್ಜಿಯವರು  ಬುಧವಾರ ಪೂರ್ವಾಹ್ನ 11.38ಕ್ಕೆ ಸರಿಯಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ದೇಶದ 13 ನೇ ರಾಷ್ಟ್ರಪತಿಯಾಗಿ ಅಧಿಕಾರವನ್ನು ಸ್ವೀಕರಿಸಿದರು. ಸಂಸತ್ತಿನ ಸೆಂಟ್ರಲ್  ಹಾಲ್ ನಲ್ಲಿ  ಸುಪ್ರೀಮ್  ಕೋರ್ಟಿನ  ಮೂಖ್ಯ ನ್ಯಾಯಧೀಶರಾದ ಎಸ್‌.ಎಚ್‌. ಕಪಾಡಿಯಾ ರವರು ಪ್ರಣ್ ಬ್ ಮುಖರ್ಜಿ  ಯವರಿಗೆ  ಪ್ರಮಾಣ ವಚನ ಬೋಧಿಸಿದರು. ಈ ಸಂದಭ೯ದಲ್ಲಿ  ಉಪರರಾಷ್ಟ್ರಪತಿ ಹಮೀದ್  ಅನ್ಸಾರಿ, ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಲೋಕಸಭಾ ಸ್ಪೀಕರ್ ಮೀರಾ ಕುಮಾರ್‌, ಪ್ರಧಾನಿ ಮನಮೋಹನ್‌ ಸಿಂಗ್‌, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ  ಹಾಗೂ ಕೇಂದ್ರದ  ಸಚಿವರು, ವಿರೋದ ಪಕ್ಶದ […]

ಮಂಗಳೂರಿನಲ್ಲಿ 23ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹ ಉದ್ಘಾಟನೆ

Wednesday, January 11th, 2012
Road safty

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸಂತ ಅಲೋಶಿಯಸ್‌ ಪ.ಪೂ. ಕಾಲೇಜು ಆವರಣದಲ್ಲಿ ಆರಂಭವಾದ 23ನೇ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಿದರು ರಸ್ತೆ ಸುರಕ್ಷಾ ಸಪ್ತಾಹವನ್ನು ಆಚರಿಸಿದರೆ ಮಾತ್ರ ಸಾಲದು ಅವುಗಳ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಕೂಡಾ ನಿಯಮ ಅನುಸರಣೆ ಮಾಡುವ ಮೂಲಕ ಸುಗಮ, ಸುರಕ್ಷಿತ ಸಂಚಾರಕ್ಕೆ ನೆರವಾಗ ಬೇಕು ಎಂದು […]

ಅಕ್ಟೋಬರ್ 11ರಿಂದ ಹೊರಡಲಿರುವ ಅಡ್ವಾಣಿಯವರ ‘ಜನಚೇತನ ಯಾತ್ರೆ’

Wednesday, October 5th, 2011
LK ADWANI

ಬೆಂಗಳೂರು : ಭ್ರಷ್ಟಚಾರ ವಿರುದ್ಧ ಎಲ್. ಕೆ. ಅಡ್ವಾಣಿ ಕೈಗೊಳ್ಳಲಿರುವ ‘ಜನಚೇತನ ಯಾತ್ರೆ’ಯು ಅಕ್ಟೋಬರ್ 11ರಿಂದ ಜಯಪ್ರಕಾಶ್ ನಾರಾಯಣ್ ಅವರ ಹುಟ್ಟೂರಾದ ಸಿತಾಬ್ದಿಯಾರಾದಿಂದ ಆರಂಭವಾಗಲಿದೆ ರಥಯಾತ್ರೆಗೆ ಬಿಹಾರ ಮುಖಮಂತ್ರಿ ನಿತೀಶ್ ಕುಮಾರ್ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಎಚ್. ಅನಂತ್ ಕುಮಾರ್ ತಿಳಿಸಿದ್ದಾರೆ. ಜನಚೇತನ ಯಾತ್ರೆಯ ದೇಶದ 23 ರಾಜ್ಯಗಳಲ್ಲಾಗಿ ಒಟ್ಟು 7,600 ಕೀ. ಮೀ. ಸಂಚರಿಸಲಿದೆ ಎಂದು ಬುಧವಾರ ಬಿಜೆಪಿ ಸಂಸದ ಅನಂತ್ ಕುಮಾರ್ ತಿಳಿಸಿದ್ದಾರೆ, ಇದರ ಮುಖ್ಯ ಉದ್ದೇಶ ಉತ್ತಮ […]

ಅಣ್ಣಾ ಬೇಡಿಕೆ : ಕೊನೆಗೂ ಧ್ವನಿಮತದಿಂದ ಸಮ್ಮತಿಸಿದ ಸರಕಾರ

Saturday, August 27th, 2011
Anna Hazare/ ಅಣ್ಣಾ ಹಜಾರೆ

ನವ ದೆಹಲಿ: ಲೋಕಸಭೆಯಲ್ಲಿ ಲೋಕಪಾಲ ಮಸೂದೆಯ ಚರ್ಚೆಯ ನಂತರ ಸಂಸತ್ತಿನಲ್ಲಿ ಧ್ವನಿಮತದ ಪ್ರಸ್ತಾವನೆಗೆ ಕೊನೆಗೂ ಕೇಂದ್ರ ಸರಕಾರ ಒಪ್ಪಿಕೊಂಡಿದೆ. ಲೋಕಪಾಲ ಚರ್ಚೆಯ ನಂತರ ಧ್ವನಿಮತಕ್ಕೆ ಹಾಕುವ ಕೇಂದ್ರ ಸರಕಾರದ ನಿರ್ಧಾರದಿಂದ ಸಂತೋಷವಾಗಿದೆ ಎಂದು ಅಣ್ಣಾ ತಂಡದ ಸದಸ್ಯರಾದ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಸಂಸತ್ತಿನಲ್ಲಿ ನಿರ್ಣಯ ಅಂಗೀಕಾರವಾದ ನಂತರ ಪ್ರಧಾನಿಮಂತ್ರಿ ಮನಮೋಹನ್ ಸಿಂಗ್ ಅವರ ಪತ್ರದೊಂದಿಗೆ ಕೇಂದ್ರ ಸಚಿವ ವಿಲಾಸರಾವ್ ದೇಶಮುಖ್, ಅಣ್ಣಾ ಹಜಾರೆಯವರ ಭೇಟಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಣ್ಣಾ ಹಜಾರೆ, ಜನಲೋಕಪಾಲ ಮಸೂದೆ ಜಾರಿಗೊಳಿಸುವಂತೆ […]

ಚಿನ್ನದ ಬೆಲೆ 10 ಗ್ರಾಂಗೆ 25,230 ರೂ.

Wednesday, August 10th, 2011
ಚಿನ್ನದ ಬೆಲೆ 10 ಗ್ರಾಂಗೆ 25,230 ರೂ.

ಮಂಗಳೂರು : ದೀಪಾವಳಿ ಹಬ್ಬಕ್ಕಾಗುವಾಗ ಚಿನ್ನದ ಬೆಲೆ 10 ಗ್ರಾಂಗೆ 27,000 ರೂ. ಆಗಲಿದೆ. ಶೇರು ಮಾರುಕಟ್ಟೆ ಕುಸಿಯುತ್ತಿದ್ದರೂ ಚಿನ್ನ ಮಾತ್ರ ಬೆಲೆಯೇರಿಕೆಯಲ್ಲಿ ನಾಗಾಲೋಟದಲ್ಲಿ ತೊಡಗಿರುವುದರಿಂದ ಇನ್ನೆರಡು ತಿಂಗಳಲ್ಲಿ ಅದು 27,000 ರೂ. ದಾಟಿದರೂ ಆಶ್ಚರ್ಯವಿಲ್ಲ ಎಂದು ಮಾರುಕಟ್ಟೆ ಪಂಡಿತರು ಹೇಳಿದ್ದಾರೆ. ಜಾಗತಿಕ ಪರಿಸ್ಥಿತಿ ಇದೇ ರೀತಿ ದೃಢವಾಗಿದ್ದರೆ ದೀಪಾವಳಿ ಹಬ್ಬಕ್ಕಾಗುವಾಗ ಚಿನ್ನ 27,000 ರೂ.ಗೆ ತಲುಪುತ್ತದೆ. ಕೋಲ್ಕತಾದಲ್ಲಿ ಮಂಗಳವಾರ ಮತ್ತೆ ರೂ. 160 ಏರಿಕೆಯಾಗಿ 25,995 ರೂ. ತಲುಪಿದ್ದರೆ ಚೆನ್ನೈಯಲ್ಲಿ 395 ರೂ. ಏರಿಕೆಯಾಗಿ 24,930 […]