ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ ನಿಧನ

Wednesday, November 25th, 2020
Ahmed Pateel

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ (71 ವರ್ಷ) ಅವರು ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾಗಿದ್ದಾರೆ. ಸೋನಿಯಾ ಗಾಂಧಿ ಆಪ್ತ ಎಂದೇ ಬಿಂಬಿತವಾಗಿದ್ದ ಕಾಂಗ್ರೆಸ್‌ನ ನಿಷ್ಠಾವಂತ ನಾಯಕ  ಅಹ್ಮದ್ ಪಟೇಲ್ ಕಳೆದ ತಿಂಗಳು ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಹ್ಮದ್‌ ಪಟೇಲ್ ಅವರು ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರಾದರೂ, ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಇದೀಗ ಅವರ ನಿಧನದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು […]

ಮುಂದೆ ಒಂದು ದಿನ ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ : ಫಡ್ನವೀಸ್

Saturday, November 21st, 2020
Devendra-Fadnavis

ಮುಂಬೈ: ಮುಂದೆ ಒಂದಲ್ಲ ಒಂದು ದಿನ  ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಭಾರತದ ಭಾಗವಾಗಲಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದರು. ಮುಂಬೈನಲ್ಲಿ ನಡೆದ ಘಟನೆಯ ಬಗ್ಗೆ ಮಾತನಾಡುತ್ತಾ ಫಡ್ನವೀಸ್ ಈ ಹೇಳಿಕೆ ನೀಡಿದ್ದಾರೆ. ಆಡಳಿತಾರೂಢ ಶಿವಸೇನಾ ಕಾರ್ಯಕರ್ತರೊಬ್ಬರು ಸಿಹಿ ತಿನಿಸಿನ ಅಂಗಡಿಯೊಂದರ ಮಾಲೀಕರಿಗೆ ‘ಕರಾಚಿ’ ಎಂಬ ಪದವನ್ನು ಅಂಗಡಿಯ ಹೆಸರಿನಿಂದ ಕೈಬಿಡುವಂತೆ ಕೋರಿದ್ದರು, ಕಾರಣ ಕರಾಚಿ ಪಾಕಿಸ್ತಾನದ ನಗರಒಂದರ ಹೆಸರಾಗಿದೆ. ಈ ಬಗ್ಗೆ ಪ್ರತಿಕ್ರಯಿಸಿರುವ ಮಹಾ ಮಾಜಿ ಸಿಎಂ”ನಾವು” ಅಖಂಡ ಭಾರತ”(ಅವಿಭಜಿತ ಭಾರತ) […]

ಮುಸ್ಲಿಂ ರಾಷ್ಟ್ರ ಅಬುಧಾಬಿಯಲ್ಲಿ ಪ್ರಥಮ ಹಿಂದು ದೇವಾಲಯ ನಿರ್ಮಾಣ

Wednesday, November 11th, 2020
Hindu Temple

ಅಬುಧಾಬಿ: ಮುಸ್ಲಿಂ ರಾಷ್ಟ್ರ ಅಬುಧಾಬಿಯಲ್ಲಿ ನಿರ್ಮಾಣವಾಗುತ್ತಿರುವ ಪ್ರಥಮ ಹಿಂದು ದೇವಾಲಯ ಅಂತಿಮ ರೂಪ ಪಡೆದಾಗ ಹೇಗಿರಲಿದೆ ಎಂದು ತಿಳಿಯುವಂತಾಗಲು ದೇವಳದ ಅಂತಿಮ ವಿನ್ಯಾಸದ ಚಿತ್ರಗಳನ್ನು ಆಡಳಿತ ಮಂಡಳಿ- ಬಿಎಪಿಎಸ್ ಹಿಂದು ಮಂದಿರ್ ಬಿಡುಗಡೆಗೊಳಿಸಿದೆ. ಈ ಕುರಿತಾದ ವೀಡಿಯೋವೊಂದು ದೇವಳ ನಿರ್ಮಾಣದ ಆರಂಭದಿಂದ ಹಿಡಿದು ಪ್ರಸಕ್ತ ನಿರ್ಮಾಣ ಹಂತದ ತನಕದ ಚಿತ್ರಣವನ್ನು ನೀಡುತ್ತದೆ. ಅಬುಧಾಬಿಯ ಅಬು ಮುರೇಖಾಹ್ ಪ್ರದೇಶದಲ್ಲಿ ತಲೆಯೆತ್ತುತ್ತಿರುವ ಈ ದೇವಸ್ಥಾನದ ಎದುರುಗಡೆ ದೊಡ್ಡ ಸಭಾಂಗಣವಿರಲಿದ್ದು ಜತೆಗೆ ಅಲ್ಲಿ ಗ್ರಂಥಾಲಯ,  ಧಾರ್ಮಿಕ ಸಭಾಂಗಣ  ಹಾಗೂ ಸಮುದಾಯ ಕೇಂದ್ರವೂ ಇರಲಿದೆ. […]

ಬಿಹಾರ ವಿಧಾನಸಭೆ ಚುನಾವಣೆ, ಬಿಜೆಪಿ ಮೊದಲ ಗೆಲುವು

Tuesday, November 10th, 2020
Murari

ಪಟ್ನಾ : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ  ಹೊರಬೀಳುತ್ತಿದ್ದು, ಬಿಜೆಪಿ ಮೊದಲ ಗೆಲುವು ಕಂಡಿದೆ. ಕೆಯೊಟಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರಾರಿ ಮೋಹನ್ ಝಾ ಗೆಲುವು ಸಾಧಿಸಿದ್ದಾರೆ. ಆರ್‌ಜೆಡಿ ಅಭ್ಯರ್ಥಿ ಅಬ್ದುಲ್ ಬಾರಿ ಸಿದ್ದಿಕಿ ಅವರನ್ನು ಮುರಾರಿ ಸುಮಾರು 8,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ಹಿರಿಯ ಮುಖಂಡರಾಗಿರುವ ಸಿದ್ದಿಕಿ, 2015ರಲ್ಲಿ ಆರ್‌ಜೆಡಿ-ಜೆಡಿಯು ಸರ್ಕಾರದಲ್ಲಿ ಸಚಿವರಾಗಿದ್ದರು. ದರ್ಭಾಂಗಾ ಗ್ರಾಮೀಣ ಕ್ಷೇತ್ರದಲ್ಲಿ ಆರ್‌ಜೆಡಿಯ ಲಲಿತ್ ಕುಮಾರ್ ಯಾದವ್, ತಮ್ಮ ಎದುರಾಳಿ ಜೆಡಿಯುದ ಫರಾಜ್ ಫತ್ಮಿ ಅವರನ್ನು ಸೋಲಿಸಿದ್ದಾರೆ. ದರ್ಭಾಂಗಾ ಕ್ಷೇತ್ರದಲ್ಲಿ […]

ಟ್ರಂಪ್ ಸೋಲು ಭಾರತ ಕ್ಕೆ ಪಾಠ – ಶಿವಸೇನೆ

Monday, November 9th, 2020
Tackrey

ಮುಂಬೈ: ಅಮೆರಿಕ ಅಧ್ಯಕ್ಷೀಯ ಚುನಾವಣಾ ಸನ್ನಿವೇಶವನ್ನು ಬಿಹಾರ ವಿಧಾನಸಭಾ ಚುನಾವಣೆಯೊಂದಿಗೆ ಹೋಲಿಸಿ ಶಿವಸೇನೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸೋಲಿನಿಂದ ಭಾರತವೂ ಪಾಠ ಕಲಿತರೆ ಒಳ್ಳೆಯದು ಎಂದು ಹೇಳಿದೆ. ಶಿವಸೇನೆ, “ಅಧ್ಯಕ್ಷ ಟ್ರಂಪ್ ಎಂದಿಗೂ ರಾಷ್ಟ್ರದ ಅಧ್ಯಕ್ಷ ಪಟ್ಟಕ್ಕೆ ಅರ್ಹರಲ್ಲ. ಅಮೆರಿಕದ ನಾಗರಿಕರು ತಾವು ನಾಲ್ಕು ವರ್ಷದ ಹಿಂದೆ ಮಾಡಿದ್ದ ತಪ್ಪನ್ನು ಸರಿಪಡಿಸಿದ್ದಾರೆ. ಟ್ರಂಪ್ ಗೆ ಒಂದೂ ಭರವಸೆ ಪೂರೈಸಲಾಗಿಲ್ಲ. ನಾವೂ ಸಹ ಟ್ರಂಪ್ ಸೋಲಿನಿಂದ ಕಲಿತರೆ ಒಳ್ಳೆಯದಾಗಲಿದೆ”  ಎಂದು  ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಹೇಳಿಕೊಂಡಿದೆ . ಅಮೆರಿಕಾದಲ್ಲಿ […]

ಲವ್ ಜಿಹಾದ್ ಗೆ ಒಪ್ಪದಕ್ಕೆ ಗುಂಡಿಕ್ಕಿ ಯುವತಿಯ ಕೊಲೆ

Tuesday, October 27th, 2020
paridhabadh

ಚಂಡೀಗಢ: ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಮೂರು ವರ್ಷದಿಂದ ಯುವತಿಗೆ ಬಲವಂತ ಮಾಡಿ ಕೊನೆಗೆ ಹುಡುಗಿ ಒಪ್ಪದೇ ಇದ್ದುದಕ್ಕೆ ಏಕಾಏಕಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಪ್ರಕರಣ ಹರಿಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ದುರುಳರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಅಪಹರಿಸಲು ಮುಂದಾಗಿದ್ದು, ಈ ವೇಳೆ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಗುಂಡು […]

ಕೋಳಿ ಫಾರಂನಲ್ಲಿ ಕೂಡಿಹಾಕಿ 17 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ

Thursday, October 15th, 2020
Rape

ಕಟಕ್ : ಮನೆಯಿಂದ ಓಡಿಹೋಗಿದ್ದ 17 ವರ್ಷದ ಬಾಲಕಿಯನ್ನು ಕೋಳಿ ಫಾರಂನಲ್ಲಿ ಕೂಡಿಹಾಕಿ 22 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದಲ್ಲಿ ನಡೆದಿದೆ. ಕಟಕ್ ನಲ್ಲಿ ಕೋಳಿ ಸಾಕಣೆ ಕೇಂದ್ರಕ್ಕೆ ಹುಡುಗಿಯನ್ನು ಕರೆದೊಯ್ದು ಕೂಡಿಹಾಕಿ ಅತ್ಯಾಚಾರ ಎಸಗಲಾಗಿದೆ. ಜಗತ್ ಸಿಂಗ್ ಪುರ್ ಜಿಲ್ಲೆಯ ಟಿರ್ಟಾಲ್ ನಿವಾಸಿಯಾಗಿರುವ ಹುಡುಗಿ ಪೋಷಕರೊಂದಿಗೆ ಜಗಳವಾಡಿ ಮನೆಯಿಂದ ಓಡಿ ಹೋಗಿದ್ದಾಳೆ. ಓಎಂಸಿ ಸ್ಕ್ವೇರ್ ನಲ್ಲಿರುವ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ಆಕೆಯನ್ನು ಮನೆಗೆ ಕರೆದುಕೊಂಡು ಹೋಗುವುದಾಗಿ ಭರವಸೆ ನೀಡಿದ್ದಾನೆ. ಆದರೆ […]

80 ವರ್ಷದ ಅಜ್ಜಿಯನ್ನು ಕೊಲೆ ಮಾಡಿ, ಅಂಗಾಂಗಗಳನ್ನು ಕೋಣೆಯಲ್ಲಿ ಹರಡಿ ವಿಕೃತಿ ಮೆರೆದ ಮೊಮ್ಮಗ

Wednesday, October 14th, 2020
rossi

ಮುಂಬೈ:  ಮೊಮ್ಮಗನೊಬ್ಬ ತನ್ನ ಅಜ್ಜಿಯ ಕತ್ತು ಸೀಳಿ ಕೊಲೆ ಮಾಡಿದ್ದಲ್ಲದೇ ಆಕೆಯ ದೇಹದ ಅಂಗಾಂಗಗಳನ್ನು ಕೋಣೆಯ ತುಂಬಾ ಹರಡಿ ವಿಕೃತಿ ಮೆರೆದ ಘಟನೆಯೊಂದು ಮುಂಬೈನಲ್ಲಿ ನಡೆದಿದೆ. ಆರೋಪಿಯನ್ನು ಕ್ರಿಸ್ಟೋಫರ್ ಡಯಾಸ್ (25 ) ಎಂದು ಗುರುತಿಸಲಾಗಿದೆ. ಈತ ಸೋಮವಾರ ಪುನರ್ವಸತಿ ಕೇಂದ್ರದಿಂದ ಹಿಂದಿರುಗಿದ ಬಳಿಕ ತನ್ನ ಅಜ್ಜಿಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ರಿಸ್ಟೋಫರ್ ಪೋಷಕರು ಇಸ್ರೆಲ್ ನಲ್ಲಿ ನೆಲೆಸಿದ್ದಾರೆ. ಈತ ಪುನರ್ವಸತಿ ಕೇಂದ್ರದಿಂದ ವಾಪಸ್ಸಾದ ಬಳಿಕ ಅಜ್ಜಿ ಜೊತೆ ವಾಸವಾಗಿದ್ದನು ಎಂಬುದಾಗಿ ವರದಿಯಾಗಿದೆ. ಊಟಕ್ಕೆ ಬಂದಿದ್ದ […]

65 ವರ್ಷದ ದಲಿತ ವೃದ್ಧನ ಮೇಲೆ ಹಲ್ಲೆಗೈದು, ಮೂತ್ರ ಕುಡಿಸಿ ವಿಕೃತಿ ಮೆರೆದ ಯುವಕ

Tuesday, October 13th, 2020
amar

ಲಕ್ನೋ: ಮಗನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದಕ್ಕೆ ಪೊಲೀಸರಿಗೆ ದೂರು ನೀಡಿದ 65 ವರ್ಷದ ದಲಿತ ವೃದ್ಧನ ಮೇಲೆ ಹಲ್ಲೆಗೈದು, ಬಲವಂತವಾಗಿ ಮೂತ್ರ ಕುಡಿಸಿ ವಿಕೃತಿ ಮೆರೆದ ಘಟನೆ ಉತ್ತರಪ್ರದೇಶದ ಲಲಿತಪುರ ಗ್ರಾಮದ ರೊಡಾ ಎಂಬಲ್ಲಿ ನಡೆದಿದೆ. ಮೂತ್ರ ಕುಡಿಸಿದ  ಆರೋಪಿಯನ್ನು ಸೋನು ಯಾದವ್ ಎಂದು ಗುರುತಿಸಲಾಗಿದೆ. ಈತ ಕೆಲ ದಿನಗಳ ಹಿಂದೆ ವೃದ್ಧನ ಮಗನ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದನು. ಹೀಗಾಗಿ ತಂದೆ- ಮಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಸೋನು ವಿರುದ್ಧ ದೂರು ದಾಖಲಿಸಿದ್ದರು. ದೂರು ದಾಖಲಾಲಾದ  […]

ಹುಟ್ಟುಹಬ್ಬದ ಪಾರ್ಟಿಗೆಂದು ಕರೆಸಿ 23 ವರ್ಷದ ಯುವತಿಯನ್ನು ಅತ್ಯಾಚಾರ ಗೈದ ಕಾಮುಕರು

Sunday, October 11th, 2020
Rape Accuced

ಲಕ್ನೋ: ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು 23 ವರ್ಷದ ಯುವತಿಯ ಮೇಲೆ ಇಬ್ಬರು ಕಾಮುಕರು ಬಾರ್ರಾದ ಸಚನ್ ಸ್ಕ್ವೇರ್‌ನಲ್ಲಿರುವ ಹೋಟೆಲ್‌ನಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಸಂತ್ರಸ್ತೆ ಕಲ್ಯಾಣ್ಪುರದ ನಿವಾಸಿ ಯುವತಿ ದೆಹಲಿಯ ಆರೋಗ್ಯಕೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ತಾಯಿಯ ಅನಾರೋಗ್ಯದಿಂದಾಗಿ ಒಂದು ವರ್ಷದ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿದ್ದರು. ಸಂತ್ರಸ್ತೆಯ ನೆರೆಹೊರೆಯ ಮೋನಿಕಾ ಎನ್ನುವ  ಹುಡುಗಿಯೊಬ್ಬಳು ತನ್ನ ಸಹೋದರ ಅಶಿಶ್ ಹುಟ್ಟುಹಬ್ಬದ ಪಾರ್ಟಿಗೆ ಕರೆದಿದ್ದಳು. ಆಕೆಯ ತಂದೆ ಇನ್ಸ್‌ಪೆಕ್ಟರ್ ಆಗಿದ್ದರು. ನಂತರ ಸಂತ್ರಸ್ತೆ ಪಾರ್ಟಿಗೆಂದು ಸಚನ್ ಚೌರಾಹಾದ ಸೋನಾ […]