ಜೆಪ್ಪು ಮೋರ್ಗನ್ಸ್‌ಗೇಟ್ ರೈಲ್ವೆ ಸೇತುವೆ ಬಳಿ ಯುವಕನ ಮೃತ ದೇಹ ಪತ್ತೆ

Tuesday, August 6th, 2013
Youth dead

ಮಂಗಳೂರು : ಜೆಪ್ಪು ಮೋರ್ಗನ್ಸ್‌ಗೇಟ್ ಸಮೀಪದ ರೈಲ್ವೆ ಸೇತುವೆ ಬಳಿ ಮಂಗಳವಾರ ಯುವಕನೊಬ್ಬನ ಮೃತ ದೇಹ  ಪತ್ತೆಯಾಗಿದ್ದು . ಮೃತ ವ್ಯಕ್ತಿಯನ್ನು ಶಾಂತಿಗುಡ್ಡೆ ನಿವಾಸಿ ವಿಕ್ರಾಂತ್ ಶೆಟ್ಟಿ (27) ಎಂದು ಗುರುತಿಸಲಾಗಿದೆ. ಸೋಮವಾರ ಸುಮಾರು 11 ಗಂಟೆ ಸುಮಾರಿಗೆ ಜ್ಯೋತಿ ಸಮೀಪದ ರಿಕ್ರಿಯೇಶನ್ಸ್ ಕ್ಲಬ್ ನಿಂದ ಶಾಂತಿಗುಡ್ಡೆಯ ತನ್ನ ನಿವಾಸಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ  ಬಂದ ದುಷ್ಕರ್ಮಿಗಳ ತಂಡವೊಂದು ವಿಕ್ರಾಂತ್ ಶೆಟ್ಟಿಯ ವಾಹನಕ್ಕೆ ಡಿಕ್ಕಿ ಹೊಡೆಸಿ  ವಿಕ್ರಾಂತ್ ಶೆಟ್ಟಿ ಮೇಲೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ […]

ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಟಿದ ತಮ್ಮನ

Tuesday, August 6th, 2013
ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಟಿದ ತಮ್ಮನ

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ ಹಾಗೂ ಬಿಲ್ಲವರ ಮಹಿಳಾ ಸಂಘ ಕುದ್ರೋಳಿ ಇವರ ಸಹಯೋಗದೊಂದಿಗೆ ಮಂಗಳೂರಿನ ರವೀಂದ್ರ ಕಲಾಭವನದಲ್ಲಿ ಆಗಸ್ಟ್ 4 ರಂದು ಆಟಿದ ತಮ್ಮನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಗರಾಭಿವೃಧ್ದಿ ಸಚಿವ ವಿನಯಕುಮಾರ್ ಸೊರಕೆಯವರು ನೆರವೇರಿಸಿದರು. ನಂತರ ಅವರು ಮಾತಾಡಿ ಇಂದು ತುಳುನಾಡಿನ ಸಂಪ್ರಾದಾಯ ಆಚರಣೆಗಳು ಮರೆಯಾಗುತ್ತಿದ್ದು ಅದನ್ನು ರಕ್ಷಿಸುವ ಕೆಲಸವಾಗಬೇಕು, ಜನತೆ ನಗರ ಜೀವನಕ್ಕೆ ಹೊಂದಿಕೊಳ್ಳುತ್ತಿದ್ದು ಹಳ್ಳಿಭಾಗದ ಆಚರಣೆಗಳು ಮರೆಯಾಗುತ್ತಿವೆ ಎಂದರು. ಇಂತಹ ಅಟಿಯ ಕಾರ್ಯಕ್ರಮಗಳು ನಗರದ ಜನತೆಗೆ ತುಳುನಾಡಿನ […]

ಸಿಬಿಎಸ್ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಹಿಂದೂ ಜನಜಾಗೃತಿ ಸಮಿತಿ ಖಂಡನೆ

Monday, August 5th, 2013
Hindu Jana Jagruthi

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಭಾನುವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಮಾಡಿರುವುದನ್ನುದು ಖಂಡಿಸಿ ಪ್ರತಿಭಟನೆ ಸಭೆ ನಡೆಯಿತು. ಜನಜಾಗೃತಿ ಸಮಿತಿಯ ಸುಕನ್ಯ ಆಚಾರ್ಯ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅಪಮಾನ ವಾಗುವಂತೆ ಚಿತ್ರಿಸಲಾಗಿದೆ.  ಇದಕ್ಕೆ ಕಾರಣರಾದವರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಲೆಕ್ಕಿಸದೆ ಹೋರಾಡಿದ ಮಹಿಳೆಯ ಅವಮಾನಿಸಿದ್ದು ಖಂಡನೀಯ ಎಂದು ಅವರು ಹೇಳಿದರು. ಉದ್ಯಮಿಜಿಲ್ಲಾ ಸಂಚಾಲಕ ಪ್ರಸನ್ನ ಕಾಮತ್, ಅನಂತ್ ಕಾಮರ್, ವಕೀಲ […]

ವಿಜಯ ಬ್ಯಾಂಕ್ ನ ಮಾಜಿ ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ ನಿಧನ

Sunday, August 4th, 2013
bb shetty

ಮಂಗಳೂರು: ವಿಜಯ ಬ್ಯಾಂಕ್ ನ ಮಾಜಿ ಅಧ್ಯಕ್ಷ  ಮತ್ತು ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ (77) ಅವರು ಜುಲೈ 2 ಶುಕ್ರವಾರ ಮಧ್ಯರಾತ್ರಿ ನಿಧನರಾದರು. ಬಿ.ಬಿ. ಶೆಟ್ಟಿ ಅವರು ಪತ್ನಿ ಕಲಾವತಿ ಸಹೋದರ ಸುಬ್ಬಯ್ಯ ಶೆಟ್ಟಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಬಿ.ಬಿ. ಶೆಟ್ಟಿ ಅವರು 1975ರ ಡಿಸೆಂಬರ್ ನಲ್ಲಿ ಆಡಳಿತ ಕಚೇರಿಯಲ್ಲಿ ಮ್ಯಾನೇಜರ್ ಆಗಿ ಶೆಟ್ಟಿ ಅವರು ವಿಜಯ್ ಬ್ಯಾಂಕ್ ಗೆ ಸೇರಿದ್ದರು.  1992ರಿಂದ 1996ರ ತನಕ ವಿಜಯ ಬ್ಯಾಂಕ್ ನ ಆಡಳಿತ ನಿರ್ದೇಶಕರಾಗಿದ್ದರು. 1984ರ […]

ಅರಣ್ಯ ರಕ್ಷಣೆ ದೃಷ್ಟಿಕೋನ ವಿಸ್ತಾರವಾಗಲಿ: ರಮಾನಾಥ ರೈ

Sunday, August 4th, 2013
Laksha Vruksha

ಮಂಗಳೂರು : ಪ್ರಾಕೃತಿಕ ಸಮತೋಲನ ಕಾಯ್ದು ಕೊಳ್ಳುವ ಹೊಣೆ ಪ್ರತಿಯೊಬ್ಬರದ್ದು. ಪರಿಸರವಿಲ್ಲದೆ ಜೀವರಾಶಿ ಇಲ್ಲ ಎಂಬ ಸತ್ಯವನ್ನು ಅರಿತು ಮರಗಿಡಗಳನ್ನು ಬೆಳೆಸುವ ಹೊಣೆ ಎಲ್ಲರದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಶ್ರೀ ಬಿ ರಮಾನಾಥ ರೈ ಅವರು ಹೇಳಿದರು. ಅವರು ನಗರದ ಪುರಭವನದಲ್ಲಿ ಜುಲೈ3, ಶನಿವಾರ ಆಯೋಜಿಸಲಾದ ರಾಜ್ಯ ಮಟ್ಟದ ‘ಲಕ್ಷ ವೃಕ್ಷ’ ಅಭಿಯಾನ ಉದ್ಘಾಟಿಸಿ ಮಾತನಾಡುತ್ತಿದ್ದರು. ಪರಿಸರ ಸಂರಕ್ಷಣೆ, ಅರಣ್ಯ ನಿರ್ಮಾಣ ಕೇವಲ ಅರಣ್ಯ ಇಲಾಖೆಯ ಹೊಣೆಯಲ್ಲ; ಜನರಲ್ಲಿ […]

ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಕ್ಯಾರಿ ಓವರ್ ಸಮಸ್ಯೆಯ ಪರಿಹಾರಕ್ಕಾಗಿ ಉಪವಾಸ ಸತ್ಯಾಗ್ರಹ

Saturday, August 3rd, 2013
polytechnic student

ಮಂಗಳೂರು : ಕರ್ನಾಟಕ ಪಾಲಿಟೆಕ್ನಿಕ್ ಕ್ಯಾರಿ ಓವರ್ ಸಮಸ್ಯೆಯ ಪರಿಹಾರಕ್ಕೆ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಉಪವಾಸ ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಮುಂಬಾಗದಲಲಿ ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ರ ತನಕ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ ನಡೆಯಿತು. ಉಪವಾಸ ನಿರತ ವಿದ್ಯಾರ್ಥಿಗಳನ್ನುದ್ದೇಶಿಸಿ ಸಂಘದ ಕಾನೂನು ಸಲಹೆಗಾರ ದಿನಕರ ಶೆಟ್ಟಿ ಮಾತನಾಡಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುವ ಕ್ಯಾರಿ ಓವರ್ ನಿಯಮದಿಂದ ಸಮಸ್ಯೆ ಉದ್ಭವಿಸಿದ್ದು, ಕರಾವಳಿ ಕರ್ನಾಟಕ ಭಾಗದ ಸುಮಾರು 5000ಕ್ಕೂ […]

ಪತ್ರಕರ್ತರ ಸಂಘ ಮತ್ತು ಅರಣ್ಯ ಸಂರಕ್ಷಣಾ ಇಲಾಖೆ ಕದ್ರಿ ಪಾರ್ಕ್ ನಲ್ಲಿ ವನಮಹೋತ್ಸವ

Saturday, August 3rd, 2013
vanamahostava

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ಮತ್ತು ಮಂಗಳೂರು ಅರಣ್ಯ ಸಂರಕ್ಷಣಾ ಇಲಾಖೆ ವತಿಯಿಂದ ನಗರದಕದ್ರಿ ಪಾರ್ಕ್ ನಲ್ಲಿ ಆಗಸ್ಟ್2 ರಂದು ಗಿಡ ನೆಡುವುದರ ಮೂಲಕ ವನಮಹೋತ್ಸವ ಆಚರಿಸಲಾಯಿತು. ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ಗಿಡನೆಟ್ಟು ನೀರೆರೆಯುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿ ಲಕ್ಷವೃಕ್ಷ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದ್ದು, ಮಂಗಳೂರಿನಲ್ಲಿ ನಾಳೆ ಚಾಲನೆ ನೀಡಲಾಗುವುದು. ಇದು ರಾಷ್ಟೀಯ ಮಟ್ಟದ ಕಾರ್ಯಕ್ರಮವಾಗಿರದೆ ಅಂತರಾಷ್ಟೀಯ ಮಟ್ಟದ ಕಾರ್ಯಕ್ರಮವಾಗಬೇಕಾಗಿದೆ.  ಪರಿಸರ ಸಂರಕ್ಷಣಾ ಕಾರ್ಯದಲ್ಲಿ ಸ್ವಯಂ ಸೇವಾ ಸಂಘದವರು ಜೊತೆಗೂಡಿ ಕೆಲಸ ಮಾಡಬೇಕಾಗಿದೆ. […]

ನನ್ನ ಬಳಿ ಯಾವುದೇ ದಾಖಲೆಗಳಿರಲಿಲ್ಲ : ಬಂಟ್ವಾಳ ಠಾಣಾಧಿಕಾರಿ ಮಹೇಶ್ ಪ್ರಸಾದ್

Friday, August 2nd, 2013
Mahesh Prasad

ಮಂಗಳೂರು :  ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ  ಮಹಿಳೆಯೊಬ್ಬರು ವರಕ್ಷಿಣೆ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ 2008 ರಲ್ಲಿ ದಾಖಲಾಗಿತ್ತು. ಅಂದಿನ ಠಾಣಾಧಿಕಾರಿಯಾಗಿರುವ ವಿನಾಯಕ ಬಿಲ್ಲವ ಪ್ರಕರಣದ ತನಿಕೆ ನಡೆಸಿ ಕೇಸು ದಾಖಲಿಸಿಕೊಂಡಿದ್ದರು. ಪ್ರಕರಣವು 2008 ರಿಂದ ಬಂಟ್ವಾಳ ನ್ಯಾಯಾಲಯದಲ್ಲಿ ಎರಡು ವರ್ಷಗಳ ಕಾಲ ತನಿಖೆಯಲ್ಲಿತ್ತು. ನಂತರ 2010 ರಲ್ಲಿ ಪ್ರಕರಣವನ್ನು ಮಂಗಳೂರು ನ್ಯಾಯಾಲಕ್ಕೆ ವರ್ಗಾಯಿಸಲಾಯಿತು. ಅಂದಿನ ಠಾಣಾಧಿಕಾರಿ ವಿನಾಯಕ ಬಿಲ್ಲವ ಸಂಬಂಧಪಟ್ಟ ಸಾಕ್ಷಿಗಳನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಿರುವುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯ ದಾಖಲೆಗಳಲ್ಲಿ ಬರೆದಿಟ್ಟಿದ್ದಾರೆ. […]

ಸರಕಾರದ `ಕ್ಷೀರ ಭಾಗ್ಯ ಯೋಜನೆಗೆ’ ಮಂಗಳೂರಿನಲ್ಲಿ ಬಿ.ರಮಾನಾಥ ರೈಯವರಿಂದ ಚಾಲನೆ

Thursday, August 1st, 2013
Ramanath Rai ksheera Bhagya

ಮಂಗಳೂರು :  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್  ದಕ್ಷಿಣ ಕನ್ನಡ ಜಿಲ್ಲೆ, ಸಾರ್ವಜನಿಕ ಶಿಕ್ಷಣಾ ಇಲಾಖೆ, ಅಕ್ಷರ ದಾಸೋಹ, ಮಹಿಳಾ ಮತ್ತು ಅಭಿವೃದ್ದಿ ಇಲಾಖೆ ಮತ್ತು ದಕ್ಷಿಣ ಕನ್ನಡ  ಹಾಲು ಉತ್ಪಾದಕರ ಒಕ್ಕೂಟ ಇದರ ಸಹಯೋಗದಲ್ಲಿ ಆಗಸ್ಟ್ 1 ರಂದು ಸರಕಾರಿ ಮಾದರಿ ಹಿರಿಯ ಪ್ರಾಥವಿಕ ಶಾಲೆ ಉರ್ವ ಮಂಗಳೂರು ಇಲ್ಲಿ ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ಉಚಿತ ಹಾಲು ವಿತರಿಸುವ `ಕ್ಷೀರ ಭಾಗ್ಯ’ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ಚಾಲನೆ ನೀಡಿದರು. ಈ ಕಾರ್ಯಕ್ರಮದ  […]

ಜನರಿಗೆ ಭಯದ ವಾತಾವರಣ ಸೃಷ್ಟಿಸುವ ಯಾವುದೇ ಯೋಜನೆಗೆ ಅವಕಾಶ ನೀಡಲಾಗದು : ರೈ

Thursday, August 1st, 2013
Ramanatha Rai

ಮಂಗಳೂರು :  ನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರದ ಬಗ್ಗೆ ಮಾತನಾಡಿದ ಅರಣ್ಯ ಮತ್ತು ಜಿವಶಾಸ್ತ್ರ ಸಚಿವ ರಮನಾಥ ರೈ  ಜನಾಭಿಪ್ರಾಯ ಪಡೆದು ಬಳಿಕವಷ್ಟೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಜನರ ಸಮಸ್ಯೆಯನ್ನು ಅರ್ಥಮಾಡಿಕೊಂಡು ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ. ಜನರಿಗೆ ಭಯದ ವಾತಾವರಣ ಸೃಷ್ಟಿಸುವ ಯಾವುದೇ ಯೋಜನೆಗೆ ಅವಕಾಶ ನೀಡಲಾಗದು. ಪರಿಸರ ಮತ್ತು ಅರಣ್ಯ ಇಲಾಖೆಯು ಈ ಬಗ್ಗೆ ಸಾಧಕ ಬಾಧಕಗಳನ್ನು ತಿಳಿದುಕೊಂಡೇ ಮುಂದೆ ಸಾಗಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಮಂಗಳೂರಿನಲ್ಲಿ ಸರಕಾರದ ಕ್ಷೀರ ಭಾಗ್ಯ ಯೊಜನೆಗೆ […]