ಎಸ್.ಡಿ.ಪಿ.ಐ ನಿಂದ ರಾಜಕೀಯ ಅಸ್ಥಿರತೆ ಸರಿದೂಗಿಸಲು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

Friday, October 15th, 2010
ಎಸ್.ಡಿ.ಪಿ.ಐ ನಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಜನತೆ ಹಿಂದೆಂದೂ ಕಂಡಿರದ ನಾಟಕೀಯ ರಾಜಕೀಯ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ತಮ್ಮದು ಭ್ರಷ್ಟಾಚಾರ ರಹಿತ, ರೈತರ ಬಡವರ ಪರ ಆಡಳಿತ ನೀಡುತ್ತೇವೆಂದು ಜನತೆಗೆ ಆಶ್ವಾಸನೆ ನೀಡಿ ಈ ಸರಕಾರದಿಂದ ನಿರೀಕ್ಷಿಸಿದ್ದ ಎಲ್ಲಾ ಭರವಸೆಗಳನ್ನು ಹುಸಿಯಾಗಿಸಿದೆ. ಬಿಜೆಪಿ ಸರಕಾರಕ್ಕೆ ಆಡಳಿತ ನಡೆಸಲು ಈ ರಾಜ್ಯದ ಜನತೆ ಸ್ಪಷ್ಟ ಜನಾದೇಶ ನೀಡಿದ್ದರೂ, ಇತರ ಪಕ್ಷಗಳಿಂದ ಚುನಾಯಿತರಾದ ಜನಪ್ರತಿನಿಧಿಗಳನ್ನು ಹಣ ಹಾಗೂ ಮಂತ್ರಿಗಿರಿಯ ಅಮಿಷ ತೋರಿಸಿ ಕುದುರೆ ವ್ಯಾಪಾರ  ನಡೆಸುವ ಮೂಲಕ “ಆಪರೇಶನ್ ಕಮಲ”ದ […]

ಅಂಧರ ಚಲನ ವಲನ ತರಬೇತಿ ಕೇಂದ್ರದ ದಶಮಾನೋತ್ಸವ ಉದ್ಘಾಟನೆ.

Friday, October 15th, 2010
ಅಂಧರ ತರಬೇತಿ ಕೇಂದ್ರದ ದಶಮಾನೋತ್ಸವ ಉದ್ಘಾಟನೆ

ಮಂಗಳೂರು: ನಗರದ ಅತ್ತಾವರದ ಎನ್.ಜಿ ರಸ್ತೆಯಲ್ಲಿರುವ ಅಂಧರ ಚಲನ ವಲನ ತರಬೇತಿ ಕೇಂದ್ರದ ದಶಮಾನೋತ್ಸವದ ಅಂಗವಾಗಿ ನಡೆದ ಅಂಧರ ಮರು ಸಾಮರ್ಥ್ಯ ಪರೀಕ್ಷೆಯ ತರಬೇತಿ ಪತ್ರಗಳನ್ನು ಇಂದು ಬೆಳಿಗ್ಗೆ ವಿತರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ಮಂಗಳೂರು ಮಹಾನಗರಪಾಲಿಕೆಯ ಆಯುಕ್ತ ಕೆ.ಎನ್ ವಿಜಯ ಪ್ರಕಾಶ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು, ಪರಿಶುದ್ಧ ಮನಸ್ಸು ಹಾಗೂ ನಿರ್ಮಲ ಹೃದಯಿಗಳು ಯಾವತ್ತೂ ಅಂಧರಲ್ಲ.  ಅವರ ಬಲಹೀನ ಸಾಮರ್ಥ್ಯವನ್ನು ಹೆಚ್ಚಿಸಬೇಕಾದರೆ ಶಕ್ತರು ಉತ್ತಮ ಮನಸ್ಸಿನವರಾಗಿರಬೇಕು, ಅಂಗಹೀನರನ್ನು ತಾತ್ಸಾರದಿಂದ ನೋಡದೆ ಎಲ್ಲರಂತೆ ನೋಡಿಕೊಳ್ಳಬೇಕು ಎಂದು ಉದ್ಘಾಟನೆ […]

ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬ್ಬಡಿ ಪಂದ್ಯಾಟ ಉದ್ಘಾಟನೆ.

Friday, October 15th, 2010
ರಾಜ್ಯಮಟ್ಟದ ಕಬ್ಬಡಿ ಪಂದ್ಯಾಟ

ಮಂಗಳೂರು: ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ ಹಾಗೂ ಗಣಪತಿ ಸಂಯುಕ್ತ ಅನುದಾನಿತ ಪ.ಪೂ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಹಾಗೂ ಬಾಲಿಕಿಯರ ಕಬ್ಬಡಿ ಪಂದ್ಯಾವಳಿಯನ್ನು ಇಂದು ಬೆಳಿಗ್ಗೆ 9 ಗಂಟೆಗೆ ನೆಹರೂ ಮೈದಾನದಲ್ಲಿ ಅಮೆಚೂರ್ ಕಬ್ಬಡಿ ಫೆಡರೇಶನ್ ಆಫ್ ಇಂಡಿಯಾದ ಬಿ. ರತ್ನಾಕರ ಪುತ್ರನ್ ಉದ್ಘಾಟಿಸಿದರು. ಉದ್ಘಾಟನಾ ಬಳಿಕ ಮಾತನಾಡಿದ ರತ್ನಾಕರ ಪುತ್ರನ್ ಕ್ರೀಡೆಗಳು ಯುವಶಕ್ತಿಯನ್ನು ಒಂದು ಗೂಡಿಸುವ ಒಂದು ಸಮರ್ಥ ವೇದಿಕೆ, ಕ್ರೀಡೆಯಿಂದ ವೈಯಕ್ತಿಕ ಬೆಳವಣಿಗೆಯೊಂದಿಗೆ […]

ನಮ್ಮವರು ಹಳೆಮೈಸೂರು ಸಂಪ್ರದಾಯದ “ಮೈಸೂರು ದಸರಾ ಬೊಂಬೆ ಪ್ರದರ್ಶನ”

Thursday, October 14th, 2010
ಮೈಸೂರು ದಸರಾ ಬೊಂಬೆ ಪ್ರದರ್ಶನ

ಮಂಗಳೂರು:  ಮಂಗಳೂರುವಾಸಿ –  ಹಳೆಮೈಸೂರು ವಿಪ್ರ ಕೂಟವು ಹದಿನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಮ್ಮವರು  ಸಂಘಟನೆಯ ಹೆಸರಿನಲ್ಲಿ ಸ್ಥಾಪನೆಯಾಯಿತು.  ಇಲ್ಲಿಗೆ ಮೈಸೂರು, ಚಾಮರಾಜಪೇಟೆ, ತುಮುಕೂರು, ಮಂಡ್ಯ, ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಕೋಲಾರ ಮುಂತಾದ ಕಡೆಗಳಿಂದ ದ.ಕ ಜಿಲ್ಲೆಗೆ ಉದ್ಯೋಗಕ್ಕಾಗಿ ಬಂದು ಇಲ್ಲೇ ನೆಲೆ ನಿಂತು ಹಳೇ ಮೈಸೂರಿನ ಸಾಂಸ್ಕೃತಿಕ ಆಚಾರ ವಿಚಾರ, ಪದ್ದತಿ-ಪರಂಪರೆಗಳು, ಹಾಗೂ ಮೂಲ ಸಂಸ್ಕೃತಿಯನ್ನು ಉಳಿಸಿ, ಹೊಸ ಜನಾಂಗಕ್ಕೆ ತಿಳಿಸುವ ಉದ್ದೇಶದಿಂದ ಈ ಸಂಘಟನೆ ಸ್ಥಾಪನೆಯಾಗಿದೆ. ಮೈಸೂರು ಪ್ರಾಂತ್ಯದಲ್ಲಿ “ಬೊಂಬೆ ಕೂಡಿಸುವ” ಪದ್ಧತಿಯು ಸುಮಾರು […]

ಎರಡನೇ ಬಾರಿಗೆ ಬಹುಮತ ಗೆದ್ದ ಯಡಿಯೂರಪ್ಪ ಸರಕಾರ

Thursday, October 14th, 2010
ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ದೇಶದ ಇತಿಹಾಸದಲ್ಲೇ ಒಂದೇ ವಾರದಲ್ಲಿ ಎರಡೆರಡು ಬಾರಿ ವಿಶ್ವಾಸ ಮತ ಚಲಾಯಿಸಿ ದಕ್ಷಿಣ ಭಾರತದಲ್ಲಿ ಮೊದಲ ಭಾರಿಗೆ ಅಧಿಕಾರ ಹಿಡಿದ ಬಿ.ಎಸ್.ಯಡಿಯೂರಪ್ಪ ಸರಕಾರ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದೆ. ವಿಧಾನ ಸಭಾ ಸ್ಪೀಕರ್ ದ್ವನಿ ಮತದ ಮೂಲಕ ವಿಶ್ವಾಸ ಮತ ಚಲಾಯಿಸಲು ಸೂಚಿಸಿದರಾದರೂ ವಿರೋಧ ಪಕ್ಷದ ಪ್ರತಿರೋದದಿಂದಾಗಿ ತಲೆ ಎಣಿಕೆಗೆ ಸೂಚನೆ ನೀಡಿದರು. ಪರ ಹಾಗೂ ವಿರೋಧ ಪಕ್ಷಗಳ ಶಾಸಕರ ಪ್ರತಿ ಸಾಲಿನ ಮತ ಎಣಿಕೆ ಬಳಿಕ ಯಡಿಯೂರಪ್ಪ ಪರವಾಗಿ 106 ಹಾಗೂ ವಿರೋಧವಾಗಿ […]

ರಾಜ್ಯಪಾಲರು, ಕಾಂಗ್ರೆಸ್, ಜೆಡಿಎಸ್ ನಾಯಕರ ವರ್ತನೆಗೆ ದ.ಕ ಜಿಲ್ಲಾ ಬಿಜೆಪಿ ಖಂಡನೆ.

Wednesday, October 13th, 2010
ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ

ಮಂಗಳೂರು:  ಕಳೆದ ಒಂದು ವಾರದ ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದಾಗ ಈ ರಾಜ್ಯದಲ್ಲಿ ಜನಾದೇಶದೊಂದಿಗೆ ಜನಪರ ಆಡಳಿತ ನೀಡುವ  ಒಂದು ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರತಿಪಕ್ಷಗಳು ಯಾವ ರೀತಿ ಕಾರ್ಯೋನ್ಮುಖವಾಗಿದೆ ಎನ್ನುವುದರ ಜ್ವಲಂತ ಸಾಕ್ಷಿಯಾಗಿದೆ. ರಾಜ ಭವನವನ್ನು ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿರಿಸಿಕೊಂಡು ರಾಜ್ಯಪಾಲರನ್ನು ಪಕ್ಷದ ಏಜಂಟರಂತೆ ಉಪಯೋಗಿಸಿಕೊಂಡ ಕಾಂಗ್ರೆಸ್-ಜೆಡಿಎಸ್ನ ಕುತಂತ್ರ ಬಯಲಾಗಿದೆ ಎಂದು ಬಿ.ಜೆಪಿಯ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿಯವರು ಇಂದು ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸರಕಾರದ ಭಾಗವಾಗಿ ಕಾರ್ಯನಿರ್ವಹಿಸಿದ ಸಚಿವರನ್ನು, ಶಾಸಕರನ್ನು ರೆಸಾರ್ಟ್ ಗಳಲ್ಲಿ […]

ಕೆನಡಾದ ಡೆಲ್ಟಾ ಮಹಾ ನಗರ ಪಾಲಿಕೆಯ ತಂಡ ಮಂಗಳೂರಿನಲ್ಲಿ

Tuesday, October 12th, 2010
ಕೆನಡಾ ಮಹಾ ನಗರ ಪಾಲಿಕೆಯ ತಂಡ ಮಂಗಳೂರಿನಲ್ಲಿ

ಮಂಗಳೂರು :  ಕೆನಡಾದ ಡೆಲ್ಟಾ ಮಹಾ ನಗರ ಪಾಲಿಕೆಯ ಮೇಯರ್ ಲೂಯಿಸ್ ಇ.ಜಾಕ್ಸನ್ ತನ್ನ ನಿಯೋಗದೊಂದಿಗೆ ಸೋಮವಾರ ನಗರಕ್ಕೆ ಭೇಟಿ ನೀಡಿದ್ದಾರೆ.  ಮಂಗಳೂರು ಮಹಾ ನಗರ ಪಾಲಿಕೆ ಯೊಂದಿಗೆ ಹೆಚ್ಚಿನ ಬಾಂಧವ್ಯ ಹೊಂದಲು ಮತ್ತು ಮಹಾನಗರ  ಪಾಲಿಕೆಯ ಅಭಿವೃದ್ದಿ ಕಾರ್ಯಗಳ ಅಧ್ಯಯನಕ್ಕೆ ಈ ತಂಡ ನಗರಕ್ಕೆ ಭೇಟಿ ನೀಡಿದೆ. ನಿಯೋಗದಲ್ಲಿ ಮೇಯರ್ ಸಹಿತ ಅಲ್ಲಿನ ಸಿ‌ಇ‌ಒ ಜಾರ್ಜ್ ವಿ. ಹಾರ್ವೆ, ಆಡಳಿತ ವ್ಯವಸ್ಥಾಪಕಿ ಮಂಜತ್ ಕೈಲಾ ಮತ್ತಿತರರು ಇದ್ದರು. ಇಂದು ಬೆಳಿಗ್ಗೆ ಮಂಗಳೂರು ಮಹಾನಗರ  ಪಾಲಿಕೆಯ ಸಭೆಯಲ್ಲಿ […]

ದಲಿತ ವಿರೋಧಿ ವಿನಯ್ ಗಾಂವ್ಕರ್ ರನ್ನು ಅಮಾನತುಗೊಳಿಸಲು ದಸಂಸ ಮನವಿ.

Monday, October 11th, 2010
ದಸಂಸದಿಂದ ಪ್ರತಿಭಟನೆ

ಮಂಗಳೂರು: ಬಿಲ್ಲವ ಕುಟುಂಬದ ಬಡ ಮಹಿಳೆಯೊಬ್ಬರು ಮೋಸ ಮಾಡಿದ ವ್ಯಕ್ತಿಯೊಬ್ಬನ ವಿರುದ್ಧ ದೂರು ಕೊಡಲು ಹೋದಾಗ ಬಂದರು ಠಾಣೆಯ ಇನ್ಸ್ ಪೆಕ್ಟರ್ ವಿನಯ್ ಗಾಂವ್ಕರ್ ಅಮಾನವೀಯವಾಗಿ ನಡೆಸಿಕೊಂಡದನ್ನು ವಿರೋದಿಸಿ ದಲಿತ ಸಂಘರ್ಷ ಸಮಿತಿಯಿಂದ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಛೇರಿ ಬಳಿ ಪ್ರತಿಭಟನೆ ನಡೆಯಿತು. ಕಳೆದ ಸಪ್ಟೆಂಬರ್ ನಲ್ಲಿ ರಮೇಶ ಎಂಬುವವರು ನೀರುಮಾರ್ಗದ ಗಾಯತ್ರಿ ಎಂಬ ಮಹಿಳೆಗೆ ತನ್ನ ಪರಿಚಯ ಮಾಡಿಸಿಕೊಂಡು ಹಂಪನ್ ಕಟ್ಟದಲ್ಲಿರುವ ಭಾರತ್ ಫೈನಾನ್ಸ್ ನ ಮಾಲಕರ ಮೂಲಕ ಸೊಸೈಟಿಯಲ್ಲಿರುವ 181 ಗ್ರಾಂ ಚಿನ್ನವನ್ನು ತೆಗೆಸಿ, […]

ದ.ಕ. ಜಿಲ್ಲಾ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಎಚ್ ಉಸ್ಮಾನ್ ಅಧಿಕಾರ ಸ್ವೀಕಾರ.

Monday, October 11th, 2010
ದ.ಕ. ಜಿಲ್ಲಾ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾಗಿ ಹಾಜಿ ಎಸ್. ಎಚ್ ಉಸ್ಮಾನ್

ಮಂಗಳೂರು: 1962 ರಲ್ಲಿ ಸ್ಥಾಪನೆಯಾದ ದ.ಕ. ಜಿಲ್ಲಾ ವಕ್ಫ್ ಬೋರ್ಡ್ ಇದರ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಎಸ್.ಎಚ್. ಉಸ್ಮಾನ್ ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ಕಳೆದ ಮೂರು ಬಾರಿಯ ಅವಧಿಯಲ್ಲಿ ವೈ. ಮೊಹಮ್ಮದ್ ಕುಂಞ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸರಕಾರದ ವತಿಯಿಂದ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ಈ ಸಂಸ್ಥೆಯಲ್ಲಿ, ಸರಕಾರದ ವಿವಿಧ ಯೋಜನೆಗಳು, ಜಿಲ್ಲೆಯ ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗಾಗಿ ಸರಕಾರ ಬಿಡುಗಡೆ ಮಾಡುವ ಯೋಜನೆಗಳನ್ನು ತಲುಪಿಸುವುದಾಗಿದೆ ಎಂದು ನೂತನ […]

ವಿಶ್ವಾಸ ಮತ ಗೆದ್ದ ಯಡಿಯೂರಪ್ಪ ಸರಕಾರ, ಸದನದಲ್ಲಿ ಪ್ರತಿ ಪಕ್ಷಗಳ ಗದ್ದಲ

Monday, October 11th, 2010
ವಿಶ್ವಾಸಮತ ಗೆದ್ದ ಯಡಿಯೂರಪ್ಪ

ಬೆಂಗಳೂರು :  ಧ್ವನಿಮತದ ಮೂಲಕ ವಿಶ್ವಾಸಮತವನ್ನು ಅಂಗೀಕರಿಸಲಾಗಿದೆ ಎಂದು ಸೋಮವಾರ ಬೆಳಗ್ಗೆ 10ಗಂಟೆಗೆ ಸರಿಯಾಗಿ ಸ್ಪೀಕರ್ ಕೆ ಜಿ ಬೋಪಯ್ಯ ಸದನದಲ್ಲಿ ಘೋಷಿಸುತ್ತಿದ್ದಂತೆ . ಪ್ರತಿಪಕ್ಷಗಳ ತೀವ್ರ ಗದ್ದಲದ ನಡುವೆ ರಣರಂಗವಾಗಿ ಮಾರ್ಪಟ್ಟಿತು. ಬಳಿಕ ಸ್ಪೀಕರ್ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು ಸರಕಾರದ ಪರವಾಗಿ 106 ಮತಗಳು ಇರುವುದರಿಂದ ಬಿಜೆಪಿ ಸರ್ಕಾರಕ್ಕೆ ಬಹುಮತ ಸಾಬೀತಾಗಿದ್ದು, ವಿರುದ್ಧ ಶೂನ್ಯ ಮತಗಳು ಬಿದ್ದಿವೆ ಎಂದು ಬೋಪಯ್ಯ ಘೊಷಿಸಿದ್ದಾರೆ. ಇನ್ನು ಮುಂದಿನ ನಿರ್ಣಯ ರಾಜ್ಯಪಾಲರ ಕೈಯಲ್ಲಿದೆ ಅಲ್ಲೂ ಸಾಧ್ಯವಾಗದಿದ್ದರೆ ಪ್ರತಿ ಪಕ್ಷಗಳು ರಾಷ್ಟ್ರ […]