`ವಿದ್ಯಾರ್ಥಿ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ’ ಕಾರ್ಯಗಾರ

Monday, September 27th, 2010
ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ ಕಾರ್ಯಗಾರ

ಮಂಗಳೂರು: ರಾಮಕೃಷ್ಣ ಮಠದ, ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಸೆಪ್ಟಂಬರ್ 27 ರಿಂದ 28 ರ ವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಯುವ ಶಿಕ್ಷಕರ ಕಾರ್ಯಗಾರವನ್ನು ಡಾ. ವಿಶ್ವನಾಥ್ ಉದ್ಘಾಟಿಸಿದರು. ಉದ್ಘಾಟನಾ ಬಳಿಕ ಮಾತನಾಡಿದ ಅವರು ದೇಶದ ಪ್ರಗತಿ ಆಗಬೇಕಿರುವುದು ಶಿಕ್ಷಕರಿಂದಲೇ ಅದಕ್ಕಾಗಿ ಇಂದಿನಿಂದಲೇ ತಯಾರಿ ಹೊಂದಬೇಕು. ಕೇವಲ ಮಾತೃ ಭಾಷೆಯಲ್ಲಿ ಮಾತ್ರ ಪಾಂಡಿತ್ಯ ಹೊಂದದೆ ಇತರ ಭಾಷೆಗಳಲ್ಲಿಯೂ ಹಿಡಿತವನ್ನು ಹೊಂದಿ ಯಾವುದೇ ಸನ್ನಿವೇಶಗಳನ್ನು ಎದುರಿಸುವ ಮನೋಭಾವ ಹೊಂದಿರಬೇಕು ಎಂದು ಅವರು ಹೇಳಿದರು. ಸ್ವಾಮಿ ಜಿತಕಾಮಾನಂದಜೀಯವರು `ಉತ್ತಮ […]

ಮಂಗಳೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

Monday, September 27th, 2010
ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮಂಗಳೂರು: ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಪಣಂಬೂರ್ ಬೀಚ್  ಅಭಿವೃದ್ಧಿ ಯೋಜನಾ ಸಂಸ್ಥೆ ಹಾಗೂ ಮಂಗಳೂರು ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋಧ್ಯಮ ದಿನಾಚರಣೆ 2010ನ್ನು ಇಂದು ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಪ್ರವಾಸೋಧ್ಯಮ ಮತ್ತು ಜೈವಿಕ ವೈವಿಧ್ಯತೆ ಎಂಬ ಸಂದೇಶದೊಂದಿಗೆ ಆಚರಿಸಲ್ಪಟ್ಟ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ತೀರ ಪ್ರದೇಶವನ್ನು ಹೊಂದಿರುವ […]

ಪತ್ರಿಕಾ ಮಾರಟಕ್ಕೆ ಅಡ್ಡಿ ಪಡಿಸಿ ಅಂಗಡಿ ಜಖಂಗೊಳಿಸಿದ ದುಷ್ಕರ್ಮಿಗಳು

Monday, September 27th, 2010
Paper stall

ಮಂಗಳೂರು :  ನಗರದ ಮಿಲಾಗ್ರಿಸ್ ಬಳಿ ಟೆಲಿಫೋನ್ ಬೂತ್ ಹಾಗೂ ಪೇಪರ್ ಸ್ಟಾಲ್ ಹೊಂದಿರುವ ಸಾಮಾಜಿಕ ಕಾರ್ಯಕರ್ತ ಮೆಲ್ವಿಲ್ ಪಿಂಟೋ ಎಂಬವರ ಅಂಗಡಿಗೆ ಭಾನುವಾರ ಸಂಜೆ ಆಗಮಿಸಿದ ದುಷ್ಕರ್ಮಿಗಳು ‘ಕರಾವಳಿ ಅಲೆ’ ಮಾರಾಟ ಮಾಡಬಾರದು ಎಂದು ಬೆದರಿಸಿ ಕಾಯಿನ್ ಬಾಕ್ಸ್ ಮತ್ತು ಕಪಾಟಿಗೆ ಹಾನಿ ಮಾಡಿ ‘ಕರಾವಳಿ ಅಲೆ’ಯ ಪ್ರತಿಗಳನ್ನು ಹರಿದು ಹಾಕಿರುವ ಘಟನೆ ನಡೆದಿದೆ. ಬೈಕ್‌ನಲ್ಲಿ ಮೂರು ಮಂದಿ ಬಂದಿದ್ದು ಒಬ್ಬಾತನ ಬಳಿ ಮಾರಕಾಯುಧ ಇತ್ತು ಎಂದು ಮೆಲ್ವಿಲ್ ಪಿಂಟೊ ತಿಳಿಸಿದ್ದಾರೆ. ಬಳಿಕ ಕಂಕನಾಡಿ ಆಸುಪಾಸಿನ […]

ಪಾಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಕಿಂಡಿ ಅಣೆಕಟ್ಟು ಮತ್ತು ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಬೇಕು : ಭಟ್

Saturday, September 25th, 2010
yogish Bhat

ಮಂಗಳೂರು : ಪಶ್ವಿಮವಾಹಿನಿ ಯೋಜನೆ ಕರಾವಳಿ ಜಿಲ್ಲೆಗಳಲ್ಲಿ ಹರಿಯುತ್ತಿರುವ 13 ನದಿಗಳಿಂದ ಸಮುದ್ರಕ್ಕೆ ಸುಮಾರು 2000 ಟಿ.ಎಂ.ಸಿ ಯಷ್ಟು ನೀರು ಪೋಲಾಗುವುದನ್ನು ತಪ್ಪಿಸಿ ಸದ್ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತಹ ಯೋಜನೆಗಾಗಿ 2010-11 ನೇ ಸಾಲಿನ ಅಯವ್ಯಯದಲ್ಲಿ ಅನುಷ್ಠಾನಗೊಳಿಸುಲು ಕೇಂದ್ರ ಸರಕಾರಕ್ಕೆ ವಿಶೇಷ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಮಂಗಳೂರು ಶಾಸಕ ಯೊಗೀಶ್ ಭಟ್ ಇಂದು ನರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರಿಗೆ ತಿಳಿಸಿದರು. ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಅಡ್ಡಲಾಗಿ ಅಲ್ಲಲ್ಲಿ ಹೊಸ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಿ ನೀರಾವರಿ ಸೌಲಭ್ಯವನ್ನು […]

ತಣ್ಣೀರು ಬಾವಿ ಬೀಚ್ ನಲ್ಲಿ ‘ಅಂತರರಾಷ್ಟ್ರೀಯ ಬೀಚ್ ಕ್ಲೀನ್ ಡೇ’

Saturday, September 25th, 2010
ಅಂತರರಾಷ್ಟ್ರೀಯ ಬೀಚ್ ಕ್ಲೀನ್ ಡೇ

ಮಂಗಳೂರು : ಕರಾವಳಿ ಕಾವಲು ಪೊಲೀಸ್ ಠಾಣೆ ಮತ್ತು ಕೋಸ್ಟ್ ಗಾರ್ಡ್ ಮಂಗಳೂರುರವರು ಜಂಟಿಯಾಗಿ ತಣ್ಣೀರು ಬಾವಿ ಬೀಚ್ ನಲ್ಲಿ ‘ಅಂತರರಾಷ್ಟ್ರೀಯ ಬೀಚ್ ಕ್ಲೀನ್ ಡೇ’ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದ ಅದ್ಯಕ್ಷತೆಯನ್ನು ಶ್ರೀ. ಎಸ್.ಸಿ ಪಟ್ನಾಯಕ್, ಕಮಾಂಡೆಂಟ್, ಕೋಸ್ಟ್ ಗಾರ್ಡ್ ರವರು ವಹಿಸಿದ್ದು, ಹಾಗೂ ಶ್ರೀ ಅರುಣ್ ಕುಮಾರ್, ಕಮಾಂಡೆಂಟ್, ಕೋಸ್ಟ್ ಗಾರ್ಡ್, ಶ್ರೀ ಅಮಾನುಲ್ಲಾ. ಎ, ಪೊಲೀಸ್ ಉಪನಿರೀಕ್ಷಕರು, ಶ್ರೀ ಶ್ರೀಧರ್.ಎಸ್.ಆರ್, ಪೊಲೀಸ್ ಉಪನಿರೀಕ್ಷಕರು, ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿಗಳು ಮತ್ತು ಕೋಸ್ಟ್ ಗಾರ್ಡ್ […]

ಅನಿರೀಕ್ಷಿತ ಮಳೆಗೆ ಜಿಲ್ಲೆಯಲ್ಲಿ ಮನೆಕುಸಿತ, ವಿದ್ಯುತ್ ವತ್ಯಯ

Saturday, September 25th, 2010
ಅತ್ತಾವರದಲ್ಲಿ ಮಳೆಗೆ ಕುಸಿದ ಮನೆ

ಮಂಗಳೂರು : ಮುಂಗಾರು ಮಳೆ ಕಡಿಮೆಯಾಗಿ ಜನರು ಸ್ವಲ್ಪ ಮಟ್ಟಿಗೆ ಓಡಾಟ ಅರಂಭಿಸುತ್ತಿರುವಾಗಲೇ ಮತ್ತೆ ಗುರುವಾರ ರಾತ್ರಿ ಧಾರಾಕಾರ ಮಳೆ ಸುರಿದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಪಾರ ನಷ್ಟ, ಹಾನಿ ಸಂಭವಿಸಿದೆ. ಮಂಗಳೂರಿನ ಪಾಂಡೇಶ್ವರದಲ್ಲಿ ರುಕ್ಮಯ ಎಂಬವರ ಮನೆ, ಪಂಪ್ವೆಲ್ ಸಮೀಪ ಒಂದು ಮನೆ ಅರ್ಧದಷ್ಟು ಕುಸಿದಿದೆ, ಬೆಂದೂರುವೆಲ್ ಸಮೀಪ ಆವರಣಗೋಡೆಯೊಂದು ಕುಸಿದು ಬಿದ್ದಿದೆ.  ಅತ್ತಾವರ ಕೆಎಂಸಿ ಆಸ್ಪತ್ರೆ ಎದುರಿನಲ್ಲಿ ಹಳೆಯ ಹಂಚಿನ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಸುರತ್ಕಲ್  ಪರಿಸರದಲ್ಲಿ ಹಾನಿಯಾದ ಪ್ರದೇಶಗಳಿಗೆ […]

ರೌಡಿ ಶೀಟರ್ ಉಮೇಶ್‌ ರೈ ಕೊಲೆ ಆರೋಪಿಗಳ ಬಂಧನ

Friday, September 24th, 2010
ದ ಕ ಎಸ್ ಪಿ ಪತ್ರಿಕಾಗೋಷ್ಠಿ

ಮಂಗಳೂರು : ರೌಡಿ ಶೀಟರ್  ತಿಂಗಳಾಡಿ ಉಮೇಶ್‌ ರೈ (36)  ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಡಿ. ಅಮ್ಮಣ್ಣ ರೈ, ಅಮ್ಮಣ್ಣ ರೈ ಅವರ ಬಾವ ಈಶ್ವರಮಂಗಲ ನಿವಾಸಿ ಜಯರಾಜ ರೈ ಹಾಗೂ ಅರಿಯಡ್ಕ ನಿವಾಸಿಗಳಾದ ರಾಮಚಂದ್ರ ನಾಯ್ಕ ಮತ್ತು ರಾಮಕೃಷ್ಣ ನಾಯ್ಕ ಬಂದಿತ ಆರೋಪಿಗಳು ಎಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಬ್ರಹ್ಮಣ್ಯೇಶ್ವರ ರಾವ್ ಅವರು ಇಂದು ಸುದ್ದಿಗೋಷ್ಠಿ ಯಲ್ಲಿ ತಿಳಿಸಿದ್ದಾರೆ. ಉಮೇಶ್‌ ರೈ […]

ವಳಾಲು ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಮಕ್ಕಳು ಅಸ್ವಸ್ಥ.

Thursday, September 23rd, 2010
ವಳಾಲು ಶಾಲೆ

ಪುತ್ತೂರು: ಮಧ್ಯಾಹ್ನ ಬಿಸಿಯೂಟ ಮಾಡಿದ 45 ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾದ ಘಟನೆ ಪುತ್ತೂರು ತಾಲೂಕಿನ ವಳಾಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದಿದೆ. ಅಸ್ವಸ್ಥ ಮಕ್ಕಳನ್ನು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿದೆ. ಕೆಲವು ಮಕ್ಕಳನ್ನು ಖಾಸಗಿ ಆಸ್ವತ್ರೆಗೆ ಸೇರಿಸಲಾಗಿದೆ. ಸಹಾಯಕ ಕಮಿಷನರ್ ಡಾ| ಹರೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳನ್ನು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮತ್ತು ಶಾಲೆಯಲ್ಲಿ ತಯಾರಿಸಲಾದ ಬಿಸಿಯೂಟದ ಸ್ಯಾಂಪಲ್ನ್ನು ಆರೋಗ್ಯ ಇಲಾಖೆಯ ಮೂಲಕ ಪ್ರಯೋಗಾಲಯಕ್ಕೆ […]

`ಅಂಬಿಟ್ ಕಿರು ಚಲನಚಿತ್ರ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರ

Thursday, September 23rd, 2010
ಕಿರು ಚಲನಚಿತ್ರ

ಮಂಗಳೂರು : ನಗರದ ಹಂಪನಕಟ್ಟೆಯ ಗೋಕುಲ್ ಮಾರ್ಕೆಟ್  ಬಿಲ್ಡಿಂಗ್ನಲ್ಲಿರುವ ಪ್ರಸಿದ್ದ `ಅಂಬಿಟ್’ ಕಂಪ್ಯೂಟರ್ ಮತ್ತು ತಾಂತ್ರಿಕ ತರಬೇತಿ ಸಂಸ್ಥೆಯ ವತಿಯಿಂದ 64ನೇ ಸ್ವಾತಂತ್ರೋತ್ಸವದ ಅಂಗವಾಗಿ ಏರ್ಪಡಿಸಲಾದ ಪ್ರಥಮ ವಾರ್ಷಿಕ `ಅಂಬಿಟ್’ ಕಿರು ಚಲನಚಿತ್ರ (AMBIT-Short Film Competition) ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸ್ಪರ್ಧೆಯು 28 ಆಗಸ್ಟ್ 2010ರಂದು ನಡೆದಿದ್ದು ಅಂಬಿಟ್ ರಾಯಭಾರಿ ಪ್ರಸಾದ್ B.N. ರವರು ಸಂಯೋಜನಾ ಅಧಿಕಾರಿಯಾಗಿ, ಕರ್ನಾಟಕ ಸರಕಾರದ ‘ಕರ್ನಾಟಕ ಚಲನಚಿತ್ರ ಅಕಾಡೆಮಿ’ಯ ಅಧೀನ […]

ಸಿಪಿಐಎಂ ವತಿಯಿಂದ `ಶಾಂತಿಗಾಗಿ ಸೌಹಾರ್ದ ನಡಿಗೆ’

Wednesday, September 22nd, 2010
ಸಿಪಿಐಎಂ ವತಿಯಿಂದ `ಶಾಂತಿಗಾಗಿ ಸೌಹಾರ್ದ ನಡಿಗೆ'

ಮಂಗಳೂರು: ರಾಮಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದ ತೀರ್ಪನ್ನು ಅಲಹಾಬಾದ್ ಕೋರ್ಟ್ ಸೆಪ್ಟೆಂಬರ್ 24 ರಂದು ನೀಡುವ ಹಿನ್ನೆಲೆಯಲ್ಲಿ ಎಲ್ಲಾ ಕೋಮಿನವರು ಶಾಂತಿ ಕಾಪಾಡಬೇಕೆಂದು ಸಿಪಿಐಯಂ ನ ಕಾರ್ಯಕರ್ತರು ಗಾಂಧಿ ಪ್ರತಿಮೆಯ ಮುಂಭಾಗದಿಂದ ಡಿಸಿ ಕಛೇರಿಗೆ ಇಂದು ಬೆಳಿಗ್ಗೆ 11 ಗಂಟೆಗೆ ಕಾಲ್ನಡಿಗೆಯಲ್ಲಿ `ಶಾಂತಿಗಾಗಿ ಸೌಹಾರ್ದ ನಡಿಗೆ’ಯನ್ನು ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಯಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ. ಮಾಧವ್ ಅವರು ನ್ಯಾಯಾಲಯ ನೀಡುವ ತೀರ್ಪನ್ನು ಹಿಂದೂಗಳು ಮತ್ತು ಮುಸ್ಲೀಮರು ಸೌಹಾರ್ದಯುತವಾಗಿ ಸ್ವೀಕರಿಸಬೇಕು. ಕಾನೂನು ಮತ್ತು […]