ಅನುದಾನಿತ ಶಾಲಾ ಶಿಕ್ಷಕರಿಗೂ ಹಳೇ ಪಿಂಚಣಿ ಸೌಲಭ್ಯ ವಿಸ್ತರಣೆಗೆಹರೀಶ್ ಆಚಾರ್ಯ ಆಗ್ರಹ

Tuesday, February 20th, 2024
Harish-Acharya

ಮಂಗಳೂರು : ಹಳೆಯ ಪಿಂಚಣಿ ಯೋಜನೆಯ (OPS) ಸೌಲಭ್ಯವನ್ನು ಏಪ್ರಿಲ್ 1, 2006 ರ ಪೂರ್ವದಲ್ಲಿ ಅಧಿಸೂಚಿತಗೊಂಡು ನಂತರದಲ್ಲಿ ನೇಮಕಾತಿಯನ್ನು ಪಡೆದ ಎಲ್ಲಾ ಸರಕಾರಿ ನೌಕರರಿಗೆ ಅನ್ವಯಗೊಳಿಸಲು ರಾಜ್ಯ ಸರಕಾರ ಆದೇಶ ಮಾಡಿದೆ. ಆದರೆ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೂ ಈ ಸೌಲಭ್ಯವನ್ನು ವಿಸ್ತರಿಸಲು ಮೀನಮೇಷ ಎಣಿಸುತ್ತಿರುವ ರಾಜ್ಯ ಸರಕಾರ ಅನುದಾನಿತ ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾದ ಡಾ. ಎಸ್ ಆರ್ ಹರೀಶ್ ಆಚಾರ್ಯ […]

ಉದ್ಯೋಗವಿಲ್ಲ ಎಂದು ಎಂ ಎಸ್ ಡಬ್ಲ್ಯು ಪದವೀಧರ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ

Monday, February 19th, 2024
Nischith

ಬಂಟ್ವಾಳ : ಉದ್ಯೋಗವಿಲ್ಲದ ಪದವೀಧರನೊಬ್ಬ ನಿರುದ್ಯೋಗಿಯಾಗಿರುವ ಚಿಂತೆಯಲ್ಲಿ ಪಾಣೆ ಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಎಂಬಾತನೇ ನೇತ್ರಾವತಿಗೆ ಹಾರಲು ಯತ್ನಿಸಿದ ಯುವಕ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿ ಯುವಕರಾದ […]

ಶ್ರೀ ಕಾವಿ ಸುಬ್ರಹ್ಮಣ್ಯ ದೇವರ ‘ವರ್ಕಾಡಿದ ಬ್ರಹ್ಮಕಲಶೋತ್ಸವ’ ತುಳು ಭಕ್ತಿಗೀತೆ ಬಿಡುಗಡೆ

Monday, February 19th, 2024
Vorkady-song

ವರ್ಕಾಡಿ : ಶ್ರೀ ಕಾವಿ ಸುಬ್ರಹ್ಮಣ್ಯ ದೇವಸ್ಥಾನ ವರ್ಕಾಡಿ ಮಂಜೇಶ್ವರ ಇದರ ಬ್ರಹ್ಮಕಲಶೋತ್ಸವದ ಭಕ್ತಿಗೀತೆಯನ್ನು ಶ್ರೀ ಕಾವಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುಭಾಷ್ ಅಡಪ ಕಲ್ಲೂರು ಇವರು ದೇವಸ್ಥಾನದಲ್ಲಿ ಬಿಡುಗಡೆ ಗೊಳಿಸಿದರು. ಬ್ರಹ್ಮಕಲಶೋತ್ಸವದ ಈ ಶುಭ ಸಂದರ್ಭದಲ್ಲಿ ಶ್ರೀ ಕಾವಿ ಸುಬ್ರಹ್ಮಣ್ಯ ದೇವರ ಭಕ್ತಿ ಸ್ತುತಿಯನ್ನು ಶಿವಪ್ರಸಾದ್ ತೌಡುಗೋಳಿ ಅವರು ತನ್ನ ಸಾಹಿತ್ಯದ ಸೇವೆ ಮೂಲಕ ಬರೆದು ದೇವರಿಗೆ ಅರ್ಪಣೆ ಮಾಡಿದ್ದಾರೆ. ಅವರಿಗೆ ಇನ್ನಷ್ಟು ಸಾಹಿತ್ಯ ಬರೆಯುವ ಶಕ್ತಿಯನ್ನು ಶ್ರೀ ಕಾವಿ ಸುಬ್ರಹ್ಮಣ್ಯ ಸ್ವಾಮಿ ಕರುಣಿಸಲಿ […]

ಇನ್ನು ಮುಂದೆ ಮಂಗಳೂರಿನಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ಮಳಿಗೆಗಳು ತೆರೆಯಲು ಅವಕಾಶ

Saturday, February 17th, 2024
ಇನ್ನು ಮುಂದೆ ಮಂಗಳೂರಿನಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ಮಳಿಗೆಗಳು ತೆರೆಯಲು ಅವಕಾಶ

ಮಂಗಳೂರು : ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವ್ಯಾಪಾರಿಗಳಿಗೆ ರಾತ್ರಿ 1 ಗಂಟೆಯ ವರೆಗೆ ನಿರಾತಂಕವಾಗಿ ವ್ಯಾಪಾರ ನಡೆಸಲು ಅನುಮತಿ ಘೋಷಿಸಿದ್ದಾರೆ. ತಕ್ಷಣವೇ ಜಾರಿಗೆ ಬರುವಂತೆ, ಬೆಂಗಳೂರು ಮತ್ತು ರಾಜ್ಯದಾದ್ಯಂತ 10 ಇತರ ಮುನ್ಸಿಪಲ್ ಕಾರ್ಪೊರೇಶನ್‌ಗಳಲ್ಲಿ ವ್ಯಾಪಾರ ಚಟುವಟಿಕೆಗಳಿಗಾಗಿ ವ್ಯವಹಾರ ಸಮಯವನ್ನು 1 ಗಂಟೆ ರಾತ್ರಿಯವರೆಗೆ ವಿಸ್ತರಿಸಲಾಗಿದೆ. ಹೊಸ ನಿಯಮಗಳ ಅಡಿಯಲ್ಲಿ, ವ್ಯಾಪಾರಗಳು ರಾತ್ರಿಯ ನಂತರ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಈ ವಿಸ್ತೃತ ಸಮಯವು ಬೆಂಗಳೂರಿನ ಜೊತೆಗೆ ಬಳ್ಳಾರಿ, ಬೆಳಗಾವಿ, ದಾವಣಗೆರೆ, […]

ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಮುತ್ತಿಗೆ ಹಾಕಲು ಯತ್ನ

Saturday, February 17th, 2024
BJP-protest

ಮಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಹೊರವಲಯ ಬೋಂದೆಲ್ ಬಳಿ ಇಂದು ನಡೆಯಿತು. ಅಡ್ಯಾರ್ ನ ಸಹ್ಯಾದಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಕಾರನ್ನು ತಡೆದು ಮುತ್ತಿಗೆ ಹಾಕಲು ಯತ್ನಿಸಿದರು. ಜೆರೋಸಾ ಶಾಲೆಯಲ್ಲಿ […]

ಇಲ್ಲಿನ ಬಡವರಿಗೆ ಅಧಿಕಾರ ಕೊಟ್ಟಿದ್ದು ಕಾಂಗ್ರೆಸ್ ಪಾರ್ಟಿ : ಮಲ್ಲಿಕಾರ್ಜುನ್ ಖರ್ಗೆ

Saturday, February 17th, 2024
Kharge

ಮಂಗಳೂರು: ಮಂಗಳೂರಿನ ಜನ ಮುಂಜಾನೆ ಎದ್ದ ಕೂಡಲೇ ಕಾಂಗ್ರೆಸ್‌ಗೆ ಬೈತಾರೆ. ಧರ್ಮದ ಹೆಸರಲ್ಲಿ ಶ್ರೀಮಂತರು ಬಡವರನ್ನು ತುಳಿಯುತ್ತಿದ್ದಾರೆ. ಮಂಗಳೂರು ಉಡುಪಿಯಲ್ಲಿ ಸೇತುವೆ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಕಾಲದಲ್ಲಿ. ಬಂದರು ನಿರ್ಮಾಣ, ವಿಮಾನ ನಿಲ್ದಾಣ ಆಗಿದ್ದು ಕಾಂಗ್ರೆಸ್ ಕಾಲದಲ್ಲಿ. ಎಲ್ಲಾ ಬೃಹತ್ ಯೋಜನೆಗಳೂ ಕಾಂಗ್ರೆಸ್ ಕಾಲದಲ್ಲಿಯೇ ಆಗಿದ್ದು. ಮಣಿಪಾಲ ಶೈಕ್ಷಣಿಕ ಅಭಿವೃದ್ಧಿ, ಬ್ಯಾಂಕ್‌ಗಳನ್ನು ಕೊಟ್ಟಿರೋದೂ ಕಾಂಗ್ರೆಸ್ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು. ಮಂಗಳೂರಿನ ಅಡ್ಯಾರ್​ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಮಾತನಾಡಿದ […]

ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹುಟ್ಟುಹಬ್ಬ ಆಚರಣೆ

Wednesday, February 14th, 2024
ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹುಟ್ಟುಹಬ್ಬ ಆಚರಣೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಜನ್ಮದಿನದ ಪ್ರಯುಕ್ತ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಕುಂದಾಪುರ ತಾಲೂಕು ಮೂಡುಬಗೆಯ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ ಯ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವುದರ ಮೂಲಕ ಆಚರಿಸಲಾಯಿತು. ಶ್ರವಣದೋಷವುಳ್ಳ ಮಕ್ಕಳಿಂದ ಸಚಿವರಿಗೆ ವಿಷ್ಸಚಿವೆ […]

ನೂತನ ಸ್ವರ್ಣ ಲಾಲ್ಕಿ ವೆಂಕಟರಮಣ ದೇವರಿಗೆ ಸಮರ್ಪಣೆ

Wednesday, February 14th, 2024
ನೂತನ ಸ್ವರ್ಣ ಲಾಲ್ಕಿ ವೆಂಕಟರಮಣ ದೇವರಿಗೆ ಸಮರ್ಪಣೆ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಸಮರ್ಪಣಾ ಕಾರ್ಯಕ್ರಮ ಬುಧವಾರ ಶ್ರೀ ದೇವಳದಲ್ಲಿ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಈ ಸ್ವರ್ಣ ಪಲ್ಲಕಿಯನ್ನು ಬ್ರಹ್ಮರಥೋತ್ಸವದ ಹಿಂದಿನ ದಿನ ನಡೆಯುವ ಶ್ರೀ ದೇವರ ಮೃಗಬೇಟೆ ಉತ್ಸವ ನಡೆಯಲಿರುವುದು . ಇಂದು ಬೆಳಿಗ್ಗೆ ವೈದಿಕ ವಿಧಿವಿದಾನದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಬಳಿಕ ಶ್ರೀಗಳವರ ದಿವ್ಯ […]

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ, 2022 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

Wednesday, February 14th, 2024
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ, 2022 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ ನಡೆದು 90 ದಿನಗಳು ಪೂರ್ಣಗೊಂಡು ಚಾರ್ಜ್ ಶೀಟ್ ನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಉಡುಪಿಯ ನೇಜಾರು ಸಮೀಪದ ತೃಪ್ತಿ ಲೇ ಔಟ್ ನಲ್ಲಿ ತಾಯಿ ಮತ್ತು ಮಕ್ಕಳ ಭೀಕರ ಹತ್ಯೆ ಮಾಡಲಾಗಿತ್ತು. ಇದೀಗ ಪೊಲೀಸ್ ತನಿಖೆ ಪೂರ್ಣಗೊಂಡಿದ್ದು‌ 244 ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಎಫ್ ಎಸ್ ಎಲ್ ವರದಿಯೂ ಕೈ ಸೇರಿದೆ. ಮಾರ್ಗ ‌ಮಧ್ಯೆ ಬಿಸಾಕಿರುವ ಬಟ್ಟೆ ಆರೋಪಿಯದ್ದೆ ಎನ್ನುವುದು ಎಫ್ ಎಸ್ ಎಲ್ ವರದಿಯಿಂದ […]

ಉರ್ವ ಶ್ರೀ ಮಾರಿಯಮ್ಮ ದೇವರ ಪುನರ್ ಪ್ರತಿಷ್ಟೆ ಸಂಭ್ರಮ, ಸೊಬಗು – ವಿಡಿಯೋ

Tuesday, February 13th, 2024
Urwa-Mariyamma

ಮಂಗಳೂರು : ಸುಮಾರು 600 ವರ್ಷಗಳ ಇತಿಹಾಸವಿರುವ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶದ ಸಂಭ್ರಮ ಆರಂಭಗೊಂಡಿದೆ. ಫೆಬ್ರವರಿ 13ರ ಮಂಗಳವಾರ ಬಾಲಾಲಯದಲ್ಲಿದ್ದ ಶ್ರೀ ಮಾರಿಯಮ್ಮ ದೇವರನ್ನು ಗರ್ಭಗುಡಿಗೆ ವಾದ್ಯಘೋಷಗಳೊಂದಿಗೆ ತಂದು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭ ಪ್ರತಿಷ್ಠಾಕಲಶ, ಪಂಚಬ್ರಹ್ಮ ಮಹಾಮಂತ್ರ ಹೋಮ ನಡೆಯಿತು. ಬ್ರಹ್ಮಕಲಶದ ವಿಧಿ ವಿಧಾನಗಳು ಫೆಬ್ರವರಿ 11 ರಿಂದ 15 ರ ವರೆಗೆ ನಡೆದು ಫೆಬ್ರವರಿ 15 ರಂದು ಬೆಳಗ್ಗೆ 8.12 ರ ಸುಮೂಹೂರ್ತದಲ್ಲಿ ಶ್ರೀ ಮಾರಿಯಮ್ಮ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. […]