ಬಡಮನೆಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ ಮಾಡಿ ಕುಟುಂಬಕ್ಕೆ ಬೆಳಕಾದ ವೇದವ್ಯಾಸ ಕಾಮತ್..!

Wednesday, October 24th, 2018
vedavyas-kamath

ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಬಡಮನೆಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ ಮಾಡಿ ಅಕ್ಷರಶ: ಆ ಕುಟುಂಬಕ್ಕೆ ಬೆಳಕಾಗಿದ್ದಾರೆ. ಮಂಗಳೂರಿನ ಬಿಜೈ ಕಾಪಿಕಾಡ್ ಪರಿಸರದಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ವಾಸವಿರುವ ಜಯಮ್ಮ ಎನ್ನುವ ಹಿರಿಯ ಜೀವ ಕಳೆದ ನಲ್ವತ್ತು ವರ್ಷಗಳಿಂದ ವಿದ್ಯುತ್ ಇಲ್ಲದೆ ಚಿಮಣಿ ದೀಪದಲ್ಲಿ ದಿನ ದೂಡುತ್ತಿದ್ದರು. ಈ ವಿಷಯ ಭಾರತೀಯ ಜನತಾ ಪಾರ್ಟಿಯ ಸ್ಥಳೀಯ ಕಾರ್ಯಕರ್ತರಿಂದ ಶಾಸಕ ವೇದವ್ಯಾಸ ಕಾಮತ್ ಅವರ ಗಮನಕ್ಕೆ ಬಂತು. ಜಯಮ್ಮ […]

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟಾಭಿಷೇಕದ ಸುವರ್ಣ ಮಹೋತ್ಸವ: ಕಲ್ಕೂರವರಿಂದ ಅಭಿನಂದನೆ

Wednesday, October 24th, 2018
veerendra-heggde

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟಾಭಿಷೇಕದ ಸುವರ್ಣ ಮಹೋತ್ಸವದ ಸಂದರ್ಭ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ, ಹೆಗ್ಗಡೆಯವರನ್ನು ಹೂ ಹಾರ ಫಲವಸ್ತು ನೀಡುವ ಮೂಲಕ ಅಭಿನಂದಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಉಪ ಪ್ರಭಾರಿ ಪ್ರತಾಪ ಸಿಂಹ ನಾಯಕ್, ಸುರತ್ಕಲ್ ಬ್ಲಾಕ್‌ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಸದಾಶಿವ ಶೆಟ್ಟಿ ಹಾಗೂ ಜನಾರ್ದನ ಹಂದೆ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ […]

ಜನರ ಮರಳು ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಮಧ್ಯೆ ಪ್ರವೇಶಿಸಬೇಕೆಂದು ಕೋರಿ ಮನವಿ

Wednesday, October 24th, 2018
mangaluru

ಮಂಗಳೂರು: ಕಳೆದ ಹಲವು ತಿಂಗಳುಗಳಿಂದ ಕರಾವಳಿ ಜಿಲ್ಲೆಯಲ್ಲಿ ಮರಳು ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡಿದೆ. ದ.ಕ.ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮರಳು ನದಿಗಳಲ್ಲಿ ದೊರೆಯುತ್ತಿದ್ದರೂ ರಾಜ್ಯ ಸರ್ಕಾರ ಮರಳು ನೀತಿ ತರಲಿದೆಯೆಂದು ಮರಳುಗಾರಿಕೆಗೆ ಅವಕಾಶ ನೀಡಲು ಜಿಲ್ಲಾಡಳಿತ ವಿಳಂಬ ನೀತಿ ಅನುಸರಿಸುತ್ತಿದೆ. ಮರಳು ಸಮಸ್ಯೆಯಿಂದಾಗಿ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರವು ಸಂಪೂರ್ಣವಾಗಿ ನೆಲಕಚ್ಚಿದೆ.ದುಡಿಮೆಯನ್ನೇ ನಂಬಿ ಸಾಲ ಮಾಡಿ ಕುಟುಂಬ ನಿರ್ವಹಿಸುತ್ತಿದ್ದ ಸಾವಿರಾರು ಕುಟುಂಬಗಳು ಕೆಲಸ ಇಲ್ಲದೆ ಸಂಕಷ್ಟದಲ್ಲಿದೆ. ಮರಳು ಸಮಸ್ಯೆಯನ್ನು ಬಗೆಹರಿಸಲು ವಿಫಲವಾದ ಜಿಲ್ಲಾಡಳಿತವೇ ಕಟ್ಟಡ ಕಾರ್ಮಿಕರಿಗೆ ಕೆಲಸ ನಿರಾಕರಣೆ ಮಾಡಿದಂತಾಗಿದೆ. […]

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ರೂ.3 ಲಕ್ಷ ಸಾಲ

Wednesday, October 24th, 2018
woman loan

ಮಂಗಳೂರು :  ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಬ್ಯಾಂಕಿನಿಂದ ಗರಿಷ್ಷ ರೂ.3 ಲಕ್ಷ ಸಾಲ ಪಡೆದು ಸ್ವಂತ ಉದ್ಯೋಗ ಕೈಗೊಳ್ಳಲು ಆರ್ಥಿಕವಾಗಿ ಹಿಂದುಳಿದ 18 ರಿಂದ 55 ವರ್ಷ ವಯೋಮಿತಿಯ ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.1.50 ಲಕ್ಷಕ್ಕೆ ಮೀರದ ಮಹಿಳೆಯರಿಂದ 2018-19ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಮಹಿಳೆಯರಿಗೆ 30% ಸಹಾಯಧನ, ಪರಿಶಿಷ್ಷ ಜಾತಿ ಮತ್ತು ಪರಿಶಿಷ್ಷ ಪಂಗಡದ ಮಹಿಳೆಯರಿಗೆ 50% , ಸಹಾಯಧನ ನೀಡಲಾಗುವುದು. ಉದ್ಯಮವನ್ನು ಪ್ರಾರಂಭಿಸಲು ಆಸಕ್ತಿ ಇರುವ […]

ಹಾಡುವ ಮೂಲಕ ಜನರಂಜನೆಗೈದ ಮಂಗಳೂರು ಮೇಯರ್

Wednesday, October 24th, 2018
bhaskar

ಮಂಗಳೂರು: ಇತ್ತೀಚೆಗೆ ಎಸ್.ಕೆ. ಮುನಿಸಿಪಲ್ ಎಂಪ್ಲಾಯಿಸ್‌ ಯೂನಿಯನ್ ಸಂಸ್ಥೆಯು ದಸರಾ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮ.ನಾ.ಪ ಮೇಯರ್ ಭಾಸ್ಕರ ಕೆ. ಸಭಾ ಕಾರ್ಯಕ್ರಮದ ಬಳಿಕ ವೇದಿಕೆಯಲ್ಲಿ ’ಸಿನಿಮಾ ಹಾಡು’ ಹಾಡುವ ಮೂಲಕ ಜನಮನ ರಂಜಿಸಿದರು. ಸುರ್ ಸಂಗಮ್‌ ಆರ್ಕೆಸ್ಟ್ರಾ ತಂಡದವರು ಹಿನ್ನಲೆ ಸಂಗೀತ ನೀಡಿದ್ದರು. ಶಾಸಕ ವೇದವ್ಯಾಸ ಕಾಮತ್ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಮ.ನಾ.ಪ ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ, ಸ್ಥಾಯಿ ಸಮಿತಿಅಧ್ಯಕ್ಷ ನವೀನ್‌ಆರ್. ಡಿ’ಸೋಜಾ, ಕಾರ್ಪೋರೇಟರ್‌ಗಳಾದ ರೂಪಾ […]

ಪೋಲಿಯೋ ದಿನಾಚರಣೆ: ಪೋಲಿಯೋ ಮುಕ್ತ ಭಾರತ ಅಭಿಯಾನ

Wednesday, October 24th, 2018
rotary-club

ಮಂಗಳೂರು: ಪೋಲಿಯೋ ದಿನಾಚರಣೆಯ ಅಂಗವಾಗಿ ಪೋಲಿಯೋ ಮುಕ್ತ ಭಾರತ ಅಭಿಯಾನವನ್ನು ರೋಟರಿ ಸಂಸ್ಥೆಯು ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಆಯೋಜಿಸಿತ್ತು. ಇದಕ್ಕೂ ಮುನ್ನ ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಜಾಥಾ ನಡೆಯಿತು. ಈ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾತನಾಡಿ, ನಮ್ಮ ದೇಶ 2014ರಿಂದ ಪೋಲಿಯೋ ಮುಕ್ತ ಭಾರತವೆಂದು ಘೋಷಣೆಗೊಂಡಿತು. ಕಳೆದ ಏಳು ವರ್ಷಗಳಿಂದ ನಮ್ಮ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲ. ನಮ್ಮ ನೆರೆಯ ರಾಷ್ಟ್ರವಾದ ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲಿ ಇನ್ನೂ ಪೋಲಿಯೋ […]

ಟೋಲ್ ಗೇಟ್ ಮುಚ್ಚಲು ಆಗ್ರಹ: ಎರಡನೇ ದಿನಕ್ಕೆ ಮುಂದುವರೆದ ಧರಣಿ..!

Wednesday, October 24th, 2018
tollgate

ಮಂಗಳೂರು: ಸುರತ್ಕಲ್ ಎನ್.ಐ.ಟಿ.ಕೆ ಬಳಿ ಇರುವ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಡೆಸುತ್ತಿರುವ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಎನ್.ಐ.ಟಿ.ಕೆ ಟೋಲ್ ಗೇಟ್ ನಲ್ಲಿ ಸುಂಕ ವಸೂಲಿ ಒಪ್ಪಂದ ಅಕ್ಟೋಬರ್ 30 ಕ್ಕೆ ಕೊನೆಗೊಳ್ಳಲಿದೆ. ಮುಂದೆ ನವೀಕರಣಕ್ಕೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿ ನಿನ್ನೆಯಿಂದ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸಿದೆ. ಹೋರಾಟ ಸಮಿತಿಯ ಮುಖಂಡ, ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮಾಜಿ ಶಾಸಕ ವಿಜಯಕುಮಾರ್ […]

ಮಂಗಳೂರಿನ ಮೆಡಿಕಲ್ ಶಾಪ್​ಗೆ ಬೆಂಕಿ: ಔಷಧಗಳು ಸುಟ್ಟು ಭಸ್ಮ

Wednesday, October 24th, 2018
shop-medical

ಮಂಗಳೂರು: ಇಲ್ಲಿನ ಹಂಪನಕಟ್ಟೆಯಲ್ಲಿರುವ ಸೆಂಟ್ರಲ್ ಮಾರುಕಟ್ಟೆ ರಸ್ತೆಯಲ್ಲಿನ ಮೆಡಿಕಲ್ ಶಾಪ್ಗೆ ಬೆಂಕಿ ಬಿದ್ದು, ಔಷಧಗಳು ಸೇರಿದಂತೆ ಪೀಠೋಪಕರಣಗಳು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ರಾತ್ರಿ 11 ಗಂಟೆಯ ಸುಮಾರಿಗೆ ಸೆಂಟ್ರಲ್ ಮಾರುಕಟ್ಟೆಯ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ಗೆ ಬೆಂಕಿ ಬಿದ್ದಿದೆ. ಇದರಿಂದ ಮೆಡಿಕಲ್ ಶಾಪಿನ ಎಲ್ಲಾ ಔಷಧಗಳು ಬೆಂಕಿಗಾಹುತಿಯಾಗಿವೆ . ಜೊತೆಗೆ ಪೀಠೋಪಕರಣ ಸೇರಿದಂತೆ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿವೆ. ರಾತ್ರಿಯಾದ್ದರಿಂದ ಮೆಡಿಕಲ್ ಶಾಪ್ನಲ್ಲಿ ಯಾರೂ ಇರಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ, […]

ಶಬರಿಮಲೆ ಕ್ಷೇತ್ರಕ್ಕೆ ಅದರದ್ದೇ ಆದ ಸಾಂಪ್ರದಾಯಿಕ ಸೌಂದರ್ಯವಿದ್ದು, ಅದನ್ನು ಉಳಿಸಿಕೊಳ್ಳಬೇಕು: ವೀರೇಂದ್ರ ಹೆಗ್ಗಡೆ

Wednesday, October 24th, 2018
Manjusha

ಧರ್ಮಸ್ಥಳ: ಮಹಿಳೆಯರು ಶಬರಿಮಲೆಗೆ ಹೋದರೆ ಸಂಯಮದ ತತ್ವವೇನಿದೆಯೋ, ಅದು ಸಡಿಲವಾಗುತ್ತದೆ. ಅವರ ಪ್ರವೇಶದಿಂದ ಸಂಯಮಕ್ಕೆ, ಮನೋನಿಗ್ರಹಕ್ಕೆ ಧಕ್ಕೆಯಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಪಟ್ಟಿದ್ದಾರೆ. ಶಬರಿಮಲೆಗೆ ಸ್ತ್ರೀಯರ ಪ್ರವೇಶ ವಿವಾದಕ್ಕೆ ಕುರಿತಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಹಿಳೆಯರ ಶಬರಿಮಲೆ ಪ್ರವೇಶ ಭಕ್ತಿಯಿಂದ ಮಾಡುವುದಾದರೆ ಮನೆಯಲ್ಲಿ ಕೂಡಾ ಮಾಡಬಹುದು. ಅಲ್ಲಿಗೇ ಹೋಗಬೇಕಾಗಿಲ್ಲ. ಪುರುಷರಿಗೆ ಸಂಯಮದ ಅಭ್ಯಾಸ ಮಾಡಿಸಲಿಕ್ಕಾಗಿ ಈ ಪದ್ಧತಿಯಿದೆ ಎಂದು ನನ್ನ ಒಂದು ಕಲ್ಪನೆ. ಯಾಕೆಂದರೆ 48 ದಿನಗಳ ಕಾಲ […]

ಧರ್ಮಸ್ಥಳದಲ್ಲಿ “ಮಂಜೂಷಾ” ವಸ್ತು ಸಂಗ್ರಹಾಲಯ ಬುಧವಾರ ಲೋಕಾರ್ಪಣೆ

Tuesday, October 23rd, 2018
Manjusha Museum

ಧರ್ಮಸ್ಥಳ : ವಿವಿಧ ವಿನ್ಯಾಸದ ಆಭರಣಗಳು, ಪೂಜಾ ಪರಿಕರಗಳು, ಕಲ್ಲಿನ ಹಾಗೂ ಲೋಹದ ಕಲಾಕೃತಿಗಳು, ವಿಂಟೇಜ್ ಕಾರುಗಳು, ಚಿತ್ತಾಕರ್ಷಕ ವರ್ಣಚಿತ್ರಗಳು, ಗೃಹ ಬಳಕೆಯ ವಸ್ತುಗಳು, ವೈವಿಧ್ಯಮಯ ಕ್ಯಾಮರಾಗಳು, ರೈಲ್ವೆ ಎಂಜಿನ್, ವಿಮಾನ, ಮರದ ರಥಗಳು, ಪೆನ್ನುಗಳು, ಕನ್ನಡಕಗಳು – ಹೀಗೆ ವೈವಿಧ್ಯಮಯ ಅಪೂರ್ವ ವಸ್ತುಗಳ ಭಂಡಾರ “ಮಂಜೂಷಾ” ವಸ್ತು ಸಂಗ್ರಹಾಲಯ. ಅಪಾರ ಜ್ಞಾನದ ಆಕರ, ಮಾಹಿತಿಯ ಕಣಜವಾಗಿದ್ದು ಎಲ್ಲರ ಕಣ್ಮನ ಸೆಳೆಯುತ್ತಿದೆ. ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ, ವಿಜ್ಞಾನ, ಸಂಗೀತ, ಯಕ್ಷಗಾನ, ಭೂತಾರಾಧನೆ – ಹೀಗೆ ಬದುಕಿನ […]