ಕೋಟೆಕಾರ್ ಬ್ಯಾಂಕ್ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ

Friday, January 17th, 2025
Kotekarbank-robery

ಮಂಗಳೂರು : ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, […]

ನಾನು ತುಳುನಾಡಿನವ “ತುಳುವ“ ಎನ್ನುವುದೇ ಹೆಮ್ಮೆ -ಸುನಿಲ್ ಶೆಟ್ಟಿ

Friday, January 17th, 2025
jai-film

ಮಂಗಳೂರು: ”ನಾನು ತುಳುನಾಡಿನವ, ಮೂಲ್ಕಿ ಬಳಿಯ ಬಪ್ಪನಾಡು ನನ್ನ ಹುಟ್ಟೂರು. ನಾನು ವರ್ಷಕ್ಕೆ ನಾಲ್ಕು ಬಾರಿ ಇಲ್ಲಿಗೆ ಭೇಟಿ ಕೊಡುತ್ತೇನೆ. ನಾನು ತುಳುವ ಎನ್ನುವುದೇ ನನಗೆ ಹೆಮ್ಮೆ. ತುಳು ಸಿನಿಮಾದಲ್ಲಿ ಅಭಿನಯಿಸಬೇಕು ಅನ್ನುವ ಆಸೆ ಹಿಂದಿನಿಂದಲೂ ಇತ್ತು. ಆದರೆ ಕಾಲ ಕೂಡಿ ಬಂದಿರಲಿಲ್ಲ. ಈಗ ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಬರುತ್ತಿರುವ ಜೈ ಸಿನಿಮಾ ಕಥೆ ಕೇಳಿ ಇಷ್ಟಪಟ್ಟು ನಟಿಸುತ್ತಿದ್ದೇನೆ“ ಎಂದು ಬಾಲಿವುಡ್ ಸ್ಟಾರ್ ನಟ ಸುನಿಲ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ”ಕಾಮಿಡಿ ಸಿನಿಮಾಗಳಲ್ಲಿ ಅಭಿನಯ ಮಾಡಬೇಕು ಅನ್ನುವ […]

ಕಾರ್ಪೊರೇಟರ್ ಗಣೇಶ ಕುಲಾಲ್ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆ

Tuesday, January 14th, 2025
Ganesh-Kulal

ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸುವುದರ ಜತೆಗೆ ಅನಾಥ ಶವಗಳ ಅಂತ್ಯ ಸಂಸ್ಕಾರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣೇಶ ಕುಲಾಲ್ ಅವರು 2024-25ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ನೇತೃತ್ವದ ಆಯ್ಕೆ ಸಮಿತಿಯು ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜ. 26ರಂದು ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಗಣೇಶ […]

ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ದಾರುಣ ಸಾವು

Sunday, January 12th, 2025
Anas Uppala

ಕಾಸರಗೋಡು : ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಳದ ಬಾಯಾರಿನ ಲ್ಲಿ ಶನಿವಾರ ಸಂಜೆ ನಡೆದಿದೆ. ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಶನಿವಾರ ಸಂಜೆ ಮನೆಯಲ್ಲಿ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದೆ. ಬಳಿಕ ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದು, ಬಳಿಕ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ […]

ಹಿಂದೂಗಳ ನೂರಾರು ಸಮಸ್ಯೆಗೆ ಹಿಂದೂ ರಾಷ್ಟ್ರ ಒಂದೇ ಉಪಾಯ : ಶ್ರೀ ಪ್ರಣವ ಮಲ್ಯ

Sunday, January 12th, 2025
Hindu-Jana-Jagruti

ವಿಟ್ಲ (ಬಂಟ್ವಾಳ) : ದೇಶವನ್ನು ಆಳಿದ ಮುಘಲರು, ಬ್ರಿಟಿಷರು , ಪೋರ್ಚುಗೀಸರು, ಪ್ರತಿಯೊಬ್ಬರೂ ಧರ್ಮವನ್ನು ಗುರಿಯಾಗಿಸಿ ಹಿಂದೂ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸಿದರು. ಸದ್ಯದ ಸ್ಥಿತಿಯಲ್ಲಿಯೂ ಕೂಡ ಹಿಂದೂ ಧರ್ಮದ ಮೇಲೆ ನಿರಂತರ ಆಘಾತ ನಡೆಯುತ್ತಿದೆ. ವಕ್ಫ್ ಕಾಯ್ದೆ, ಲವ್ ಜಿಹಾದ್ ನಂತಹ ಸಮಸ್ಯೆ ಹಿಂದೂಗಳು ಎದುರಿಸಬೇಕಾಗಿದೆ. ಧರ್ಮ ಉಳಿದರೆ ರಾಷ್ಟ್ರ ಉಳಿಯುವುದು, ರಾಷ್ಟ್ರ ಉಳಿದರೆ ನಾವು ಬದುಕಿರಲು ಸಾಧ್ಯ ಇದನ್ನು ಅರಿತುಕೊಳ್ಳುವ ಅವಶ್ಯಕತೆ ಇದೆ. ಹಿಂದೂ ರಾಷ್ಟ್ರ ಸಧ್ಯದ ಕಾಲದ ಅವಶ್ಯಕತೆಯಾಗಿದೆ. ಹಿಂದೂ ರಾಷ್ಟ್ರ ನಮಗೆ […]

ಕರಾವಳಿ ಉತ್ಸವದ ಬೀಚ್ ಉತ್ಸವ ಸಮಾರೋಪ

Sunday, January 12th, 2025
Raghu-Dixith

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ರೋಹನ್ ಕಾಪೋ೯ರೇಶನ್ ನಡೆಸಿದ ಎರಡು ದಿನಗಳ ಬೀಚ್ ಉತ್ಸವ ಭಾನುವಾರ ಸಮಾರೋಪಗೊಂಡಿತು. ಮಂಗಳೂರು ಉತ್ತರ. ಶಾಸಕ ಭರತ್ ಶೆಟ್ಟಿ ಅವರು ಸಮಾರೋಪದಲ್ಲಿ ಮಾತನಾಡಿ, ಬೀಚ್ ಉತ್ಸವದಿಂದ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ದೊರಕಲಿದೆ. ಕರಾವಳಿಯ ಸೊಬಗನ್ನು ಹೆಚ್ಚಿಸಲು ಇಂತಹ ಕಾಯ೯ಕ್ರಮಗಳು ಇನ್ನಷ್ಟು ನಡೆಯಲಿ ಎಂದು ಹೇಳಿದರು. ಸಮಾರಂಭದಲ್ಲಿ ಮೇಯರ್ ಮನೋಜ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಅಪರ ಜಿಲ್ಲಾಧಿಕಾರಿ ಡಾ. […]

ಕನಾ೯ಟಕ ಕ್ರೀಡಾಕೂಟ ಯಶಸ್ಸಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿ ಕರೆ

Sunday, January 12th, 2025
Karnataka-Sports

ಮಂಗಳೂರು : ಜನವರಿ 17 ರಿಂದ 23ರವರೆಗೆ ನಡೆಯುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು […]

ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ: ಮುಖ್ಯಮಂತ್ರಿ ಸಿದ್ದರಾಮಯ್ಯ

Saturday, January 11th, 2025
CM-Naringana

ಮಂಗಳೂರು : ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹವನ್ನು ನಮ್ಮ ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಹಾಗೂ ಸರ್ವೋಚ್ಚ ನ್ಯಾಯಾಲಯಕ್ಕೆ ಪತ್ರ ಬರೆದಿರುವುದರಿಂದ ಕಂಬಳ ಉಳಿದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರಿನಲ್ಲಿ ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕಂಬಳದ ಕುರಿತು ಯೋಜನೆ ರೂಪಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಕಗಳ ಜೊತೆಗೆ 10 ಸಾವಿರ ರೂ.ಗಳ ಗೌರವಧನ ನೀಡಲು ಸರ್ಕಾರ ಒಪ್ಪಿದೆ. ಒಂದು ವೇಳೆ 10 ಸಾವಿರಗಳಷ್ಟು ಪ್ರೋತ್ಸಾಹಕಗಳು ಬಾರದೆ ಹೋದರೆ […]

ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ: ಸಿ.ಎಂ.ಬಣ್ಣನೆ

Saturday, January 11th, 2025
ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ: ಸಿ.ಎಂ.ಬಣ್ಣನೆ

ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ […]

ಮಂಜಿನಾಡಿ ಸಿಲಿಂಡರ್ ದುರಂತ ಕುಟುಂಬದ ಸದಸ್ಯರಿಗೆ ಒಟ್ಟು 15 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಿಎಂ

Saturday, January 11th, 2025
manjanady-cheque

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆ, ಉಳ್ಳಾಲ ತಾಲ್ಲೂಕಿನ ಮಂಜಿನಾಡಿ ಗ್ರಾಮದಲ್ಲಿ ಸಿಲಿಂಡರ್ ಸೋರಿಕೆಯಿಂದ ಉಂಟಾದ ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದರು. ಒಂದೇ ಕುಟುಂಬದ ಖತೀಜತ್ತುಲ್ ಖುಬ್ರ, ಝಲೈಕಾ ಮೆಹ್ದಿ, ಸಲ್ಮಾ ಮಝಿಯಾ ಮೃತಪಟ್ಟವರಾಗಿದ್ದು ಇವರ ಪರವಾಗಿ ತಲಾ ಐದು ಲಕ್ಷದ ಚೆಕ್ ಅನ್ನು (ಒಟ್ಟು 15 ಲಕ್ಷ) ಇವರ ಕುಟುಂಬದ ಸದಸ್ಯರಿಗೆ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿಗಳು ನೀಡಿದರು.