ಅತ್ತಾವರ ಘಟನೆ ಪೊಲೀಸರನ್ನು ಆರೋಪ ಮಾಡುವುದು ಸರಿಯಲ್ಲ – ಮುರುಗನ್
Thursday, August 27th, 2015ಮಂಗಳೂರು : ಅತ್ತಾವರದಲ್ಲಿ ಆ. 24 ರಂದು ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ದ ಯುವಕ ಶಾಕಿರ್ನನ್ನು ಅರೆ ನಗ್ನಗೊಳಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು 13 ಮಂದಿಯನ್ನು ಬಂಧಿಸಲಾಗಿದ್ದು, ಅವರಿಗೆ ಸೆ. 7 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಸ್ತುತ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಸ್. ಮುರುಗನ್ ಆ. 26 ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಮತ್ತು ಪ್ರತಿ ದೂರುಗಳೆರಡರ […]