ಅತ್ತಾವರ ಘಟನೆ ಪೊಲೀಸರನ್ನು ಆರೋಪ ಮಾಡುವುದು ಸರಿಯಲ್ಲ – ಮುರುಗನ್‌

Thursday, August 27th, 2015
6muruga

ಮಂಗಳೂರು : ಅತ್ತಾವರದಲ್ಲಿ ಆ. 24 ರಂದು ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ದ ಯುವಕ ಶಾಕಿರ್‌ನನ್ನು ಅರೆ ನಗ್ನಗೊಳಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು 13 ಮಂದಿಯನ್ನು ಬಂಧಿಸಲಾಗಿದ್ದು, ಅವರಿಗೆ ಸೆ. 7 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಸ್ತುತ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಎಸ್‌. ಮುರುಗನ್‌ ಆ. 26 ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ದೂರು ಮತ್ತು ಪ್ರತಿ ದೂರುಗಳೆರಡರ […]

ಬಿ.ಬಿ.ಎಂ.ಪಿ.ಬಿಜೆಪಿ ಗೆಲುವು – ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ

Wednesday, August 26th, 2015
bbmp

ಮಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿ.ಬಿ.ಎಂ.ಪಿ.)ಯ ಚುನಾವಣೆಯಲ್ಲಿ, ಬಿಜೆಪಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಮಂಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಗೆಲುವಿನ ಸಂಭ್ರಮಾಚರಣೆಯನ್ನು ಮಂಗಳವಾರ ಆಚರಿಸಿದರು. ರಾಜ್ಯಉಪಾಧ್ಯಕ್ಷರು ಸುಲೋಚನಾ ಜಿ.ಕೆ.ಭಟ್ ,ಕೆ. ಮೋನಪ್ಪ ಭಂಡಾರಿ, ಜಿಲ್ಲಾ ಉಪಾಧ್ಯಕ್ಷರು ಸುರೇಶ್‌ಚಂದ್ರ ಶೆಟ್ಟಿ, ನಿತಿನ್ ಕುಮಾರ್, ಮಂಗಳೂರು ನಗರ ದಕ್ಷಿಣ ಮಂಡಲ ರವಿಶಂಕರ ಮಿಜಾರ್, ಸುಧೀರ್ ಶೆಟ್ಟಿ ಕಣ್ಣೂರು ವೇದವ್ಯಾಸ್ ಕಾಮತ್ ,ಭಾಸ್ಕರ್ ಚಂದ್ರ ಶೆಟ್ಟಿ, ಸತೀಶ್ ಪ್ರಭು,ಶ್ರೀನಿವಾಸ್ ಶೇಟ್, ಶ್ರೀಮತಿ ಕಾತ್ಯಾಯನಿ ಸೀತಾರಾಮ್ , ಶ್ರೀಮತಿ ರೂಪಾ […]

ಶೀಘ್ರ “ಬ್ಯಾರಿ ಸಂಚಾರಿ ಗ್ರಂಥಾಲಯ” ಸ್ಥಾಪನೆ

Friday, August 14th, 2015
Haneefa

ಮಂಗಳೂರು : ಬ್ಯಾರಿ ಭಾಷೆಯಲ್ಲಿ ಪ್ರಕಟಗೊಂಡ ಕೃತಿಗಳಿಗೆ ಮಾರುಕಟ್ಟೆ ಒದಗಿಸುವ ಮತ್ತು ಪ್ರಕಟಿತ ಎಲ್ಲ ಬ್ಯಾರಿ ಕೃತಿಗಳು, ಸಿ.ಡಿ.ಗಳು ಪ್ರತಿಯೊಬ್ಬ ಬ್ಯಾರಿ ಸಾಹಿತ್ಯಾಸಕ್ತರ ಮನೆ ಮನೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶೀಘ್ರ ಬ್ಯಾರಿ ಸಂಚಾರಿ ಗ್ರಂಥಾಲಯ ಸ್ಥಾಪಿಸಲಾಗುವುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಹೇಳಿದ್ದಾರೆ. ಅಕಾಡಮಿಯ ಪ್ರಸಕ್ತ ತಂಡ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗುರುವಾರ ನಗರದಲ್ಲಿ ಹಮ್ಮಿಕೊಂಡ “ವಾರ್ಷಿಕ ಅವಲೋಕನ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಕಾಡಮಿಯ ಪ್ರಸಕ್ತ ಅವಧಿ […]

ಅಂತರ್ಜಾಲದಲ್ಲಿ ಮೋಸ ಹೋಗದಿರಲು ಸೂಚನೆ

Friday, August 14th, 2015
cyber crime

ಮಂಗಳೂರು : ಸೈಬರ್ ಸೆಕ್ಯುರಿಟಿ ಮತ್ತು ಅಂತರ್ಜಾಲದಲ್ಲಿ ಮೋಸ ಹೋಗದಿರಲು ನಿರಂತರವಾಗಿ ಆರಕ್ಷಕ ಇಲಾಖೆಯಿಂದ ಹಾಗೂ ಬ್ಯಾಂಕ್‌ಗಳಿಂದ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅಪರಿಚಿತರ ದೂರವಾಣಿ ಕರೆ/ಇ-ಮೇಲ್/ಮೊಬೈಲ್ ಎಸ್.ಎಂ.ಎಸ್ ಮುಖಾಂತರ ಬ್ಯಾಂಕ್ ಖಾತೆಯ ವೈಯಕ್ತಿಕ ವಿವರಗಳನ್ನು (ಖಾತೆ ವಿವರ, ಎ.ಟಿ.ಎಂ/ಡೆಬಿಟ್ ಕಾರ್ಡ್ ಸಂಖ್ಯೆ, ಗುಪ್ತ ಸಂಕೇತ(Password/pin), ಸಿ.ವಿ.ಸಿ ಸಂಖ್ಯೆಗಳನ್ನು ಕೇಳಿದಾಗ ಸಾರ್ವಜನಿಕರು ಅವರಿಗೆ ನೀಡಿ ಅಂತಹ ಮಾಹಿತಿಗಳನ್ನು ಅಂತರ್ಜಾಲದಲ್ಲಿ ಅಪರಾಧಿಗಳು ಉಪಯೋಗಿಸಿಕೊಂಡು ಬ್ಯಾಂಕ್ ಖಾತೆಯಿಂದ ಹಣ ಪಡೆಯುವುದು, ಆನ್-ಲೈನ್ ಶಾಪಿಂಗ್ ಮಾಡುವುದು ಇತ್ತೀಚಿನ […]

ಪಾಲಡ್ಕದಲ್ಲಿ ರಾಯೀರಾಜಕುಮಾರರಿಂದ ನಾಣ್ಯ ಸಂಗ್ರಹಣೆಯ ಮಾಹಿತಿಕಾರ್ಯಾಗಾರ

Friday, August 14th, 2015
coin collection

ಮೂಡುಬಿದಿರೆ: ಇಲ್ಲಿಗೆ ಸಮೀಪದ ಪಾಲಡ್ಕದ ಪೂಪಾಡಿಕಲ್ಲು ಶ್ರೀ ನಾರಾಯಣಗುರು ಸಭಾ ಭವನದಲ್ಲಿ ನಡೆಯುತ್ತಿರುವ ಮೂಡುಬಿದಿರೆ ಆಳ್ವಾಸ್ ಆಯುರ್ವೇದ ಮೆಡಿಕಲ್‌ಕಾಲೇಜಿನರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ದ್ವಿತೀಯ ದಿನವಾದ ಅಗೋಸ್ತು 12 ರಂದು ಶೈಕ್ಷಣಿಕಕಾರ್ಯಕ್ರಮದಲ್ಲಿ ಮೂಡುಬಿದಿರೆಜೈನ ಪ್ರೌಢಶಾಲೆಯ ಶಿಕ್ಷಕ, ಸಂಪನ್ಮೂಲ ವ್ಯಕ್ತಿರಾಯೀರಾಜಕುಮಾರರು ನಾಣ್ಯ ಸಂಗ್ರಹದ ಪ್ರಾತ್ಯಕ್ಷಿಕೆ-ಮಾಹಿತಿಕಾರ್ಯಾಗಾರವನ್ನು ನಡೆಸಿಕೊಟ್ಟರು. ತಮ್ಮ ೨೨೫ ನೇ ಕಾರ್ಯಾಗಾರದಲ್ಲಿಅವರು ವಿವಿಧ ಹವ್ಯಾಸಗಳ ಬಗೆಗೆ ತಿಳಿಸಿ ಕೆಟ್ಟ ಚಟಗಳಿಂದ ದೂರವಿಡುವಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಅಭಿವೃದ್ಧಿ ಪಡಿಸಿಕೊಳ್ಳುವದರೊಂದಿಗೆ ಜೀವನವನ್ನು ಮೇರು ಮಟ್ಟಕ್ಕೆಕೊಂಡೊಯ್ಯಬಹುದೆಂದರು.ನಮ್ಮದೇಶದ ಹಾಗೂ ವಿವಿಧ ದೇಶಗಳ […]

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Friday, August 14th, 2015
Rud Shed

ಉಜಿರೆ : ಗ್ರಾಮೀಣ ಪ್ರದೇಶದ ಆರ್ಥಿಕ ಪ್ರಗತಿಯಿಂದ ದೇಶದ ಆರ್ಥಿಕ ಪ್ರಗತಿ ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ದಕ್ಷ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ರುಡ್‌ಸೆಟ್ ಸಂಸ್ಥೆಗಳ) ಸೇವೆ ಮತ್ತು ಸಾಧನೆ ಶ್ಲಾಘನೀಯವಾಗಿದೆ ಎಂದು ಕೆನರಾ ಬ್ಯಾಂಕ್‌ನ ಆಡಳಿತ ನಿರ್ದೇಶಕ ಪಿ.ಎಸ್. ರಾವತ್ ಹೇಳಿದರು. ಧರ್ಮಸ್ಥಳದಲ್ಲ ಶ್ರೀಸನ್ನಿಧಿ ಅತಿಥಿ ಗೃಹದಲ್ಲಿ ಗುರುವಾರ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. […]

ಆಗಸ್ಟ್ 14ರಂದು ಸೂಪರ್ ಮರ್ಮಯೆ ತೆರೆಗೆ

Thursday, August 13th, 2015
super marmaye

ಮಂಗಳೂರು: ಆನಂದ್ ಫಿಲಂಸ್ ಲಾಂಛನದಲ್ಲಿ ಅಡ್ಯಾರ್ ಮಾಧವ ನಾಯ್ಕ್ ನಿರ್ಮಿಸುತ್ತಿರುವ ರಾಮ್‌ಶೆಟ್ಟಿ ನಿರ್ಮಾಣ ನಿರ್ದೇಶನದಲ್ಲಿ ತಯಾರಾದ ಸೂಪರ್ ಮರ್ಮಯೆ ತುಳುಚಲನ ಚಿತ್ರ ಆಗೋಸ್ಟ್ 14ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ 10ಥಿಯೇಟರ್‌ಗಳಲ್ಲಿ ತೆರೆಕಾಣಲಿದೆ. ಮಂಗಳೂರಿನಲ್ಲಿ ಜ್ಯೋತಿ, ಬಿಗ್ ಸಿನೆಮಾಸ್, ಸಿನಿಪೊಲಿಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ, ಮೂಡಬಿದರೆಯಲ್ಲಿ ಅಮರ ಶ್ರೀ, ಕಾರ್ಕಳದಲ್ಲಿ ರಾಧಿಕಾ, ಪುತ್ತೂರಿನಲ್ಲಿ ಅರುಣಾ, ಬೆಳ್ತಂಗಡಿಯಲ್ಲಿ ಭಾರತ್ ಹಾಗೂ ಬಿ.ಸಿ.ರೋಡ್‌ನಲ್ಲಿ ನಕ್ಷತ್ರದಲ್ಲಿ ಬಿಡುಗಡೆಗೊಳ್ಳಲಿದೆ. ತುಳುವರು ಏನಿದ್ದರೂ ಹಾಸ್ಯದ ಆಟ್ರಾಕ್ಷನ್ ಎಂಬುದು ಮನದಟ್ಟಾಗಿರುವುದರಿಂದ ಸೂಪರ್ ಮರ್ಮಯೆ ಎಂಬ ಹೆಸರಿನಲ್ಲಿ […]

ರೈತರ ಸಾಲ ಮರುಪಾವತಿ -ಅವಧಿ ವಿಸ್ತರಣೆಗೆ ಮನವಿ ಸಲ್ಲಿಸಿ: ಎ.ಬಿ.ಇಬ್ರಾಹಿಂ

Thursday, August 13th, 2015
Farmers Meeting

ಮಂಗಳೂರು : ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದ ಸಾಲ ಮರುಪಾವತಿ ಅವಧಿ ಮುಗಿದಿದ್ದರೆ ಅಂತಹ ರೈತರು ತಮ್ಮ ಸಾಲದ ಅವಧಿಯನ್ನು ವಿಸ್ತರಿಸುವಂತೆ/ಸಾಲ ಮರುಹೊಂದಾಣಿಕೆ ಮಾಡಿಕೊಳ್ಳಲು ಸಂಬಂಧಿಸಿದ ಬ್ಯಾಂಕುಗಳಿಗೆ /ಸಹಕಾರ ಸಂಘಗಳಿಗೆ ಕೋರಿಕೆ ಪತ್ರಗಳನ್ನು ಸಲ್ಲಿಸಿದಲ್ಲಿ ಸಂಬಂಧಿಸಿದ ಹಣಕಾಸು ಸಂಸ್ಥೆಗಳು ಸಾಲಮರುಪಾವತಿಗೆ ರೈತರಿಗೆ ನೋಟೀಸ್‌ಗಳನ್ನು ನೀಡದಂತೆ ಬಲವಂತದ ಸಾಲ ವಸೂಲಿಗೆ ಮುಂದಾಗದಂತೆ ತಡೆಯಬಹುದೆಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ರೈತರಿಗೆ ತಿಳಿಸಿದ್ದಾರೆ. ಅವರು ಇಂದು ತಮ್ಮ ಕಚೇರಿಯಲ್ಲಿ ರೈತ ಮುಖಂಡರೊಂದಿಗೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು. […]

ಬೆಸೆಂಟ್ ಮಹಿಳಾ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ

Thursday, August 13th, 2015
Besant

ಮಂಗಳೂರು : ಬೆಸೆಂಟ್ ಮಹಿಳಾ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ ಅಗೋಸ್ಟ್ 5 ಶನಿವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮಾನಸಿಕ ಆರೋಗ್ಯ ವಿಭಾಗದ ಡಾ.ಸುಪ್ರಿಯಾ ಹೆಗ್ಡೆ ಅರೂರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸಭೆಯಲ್ಲಿ ಭಾಗವಹಿಸಿದ ಪೋಷಕರನ್ನು ಹಾಗೂ ರಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಮಕ್ಕಳು ತಂದೆ ತಾಯಿಯರಲ್ಲಿ ಏನಾದರೂ ವಿಷಯವನ್ನು ಹಂಚಿಕೊಳ್ಳಲು ಬಯಸಿದಾಗ ಅವರು ಕಿವಿಗೊಡುವುದೇ ಅಲ್ಲದೆ ದಿನ ನಿತ್ಯದ ಕೆಲಸಗಳನ್ನು ಮಾಡುವಾಗ ತಮ್ಮೊಂದಿಗೆ ಮಕ್ಕಳನ್ನು ಸೇರಿಸಿಕೊಳ್ಳುವುದರಿಂದ ವಿಶ್ವಾಸ ವೃದ್ಧಿಗೊಳ್ಳುವುದು […]

ರೋಟರಿಯವರಿಂದ ಅಭಿನಂದನಾರ್ಹ ಸೇವೆ ಶ್ರೀ. ಯೋಗೀಶ್ ಭಟ್

Thursday, August 13th, 2015
Rotary Bejai

ಮಂಗಳೂರು : ದ.ಕ.ಜಿ.ಪಂ. ಹಿ.ಪ್ರಾ ಶಾಲೆ ಕಾಪಿಕಾಡು ಶಾಲೆಗೆ ಸಂಪೂರ್ಣ ಸುಣ್ಣ ಬಣ್ಣ ಬಳಿದು (ಪೈಂಟಿಂಗ್) ಶಾಲೆಯ ಸುತ್ತಮುತ್ತ ಬೆಳೆದಂತಹ ಹುಲ್ಲು ಮತ್ತು ಗಿಡಗಳನ್ನು ಕಡಿದು ಸ್ವಚ್ಛಗೊಳಿಸಿ ಶಾಲೆಯ ಅಂದವನ್ನು ಹೆಚ್ಚಿಸುವಲ್ಲಿ ಸುಮಾರು ರೂ. 1,50,000.00 ವರೆಗೆ ವೆಚ್ಛ ಮಾಡಿದ ಕುರಿತು ಸೇವೆಯನ್ನು ಗುರುತಿಸಿ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರಿಂದ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್‌ನ ಅಧ್ಯಕ್ಷರಾದ ಶ್ರೀ. ಇಲಿಯಾಸ್ ಸಾಂಟಿಸ್ ಇವರನ್ನು ಅಭಿನಂದಿಸಲಾಯಿತು. ಸಭೆಯ ಮುಖ್ಯ ಅತಿಥಿಯಾಗಿ ಮಾಜಿ ಶಾಸಕರಾದ ಶ್ರೀ. ಎನ್. […]