ಆಗಸ್ಟ್ 14ರಂದು ಸೂಪರ್ ಮರ್ಮಯೆ ತೆರೆಗೆ

Thursday, August 13th, 2015
super marmaye

ಮಂಗಳೂರು: ಆನಂದ್ ಫಿಲಂಸ್ ಲಾಂಛನದಲ್ಲಿ ಅಡ್ಯಾರ್ ಮಾಧವ ನಾಯ್ಕ್ ನಿರ್ಮಿಸುತ್ತಿರುವ ರಾಮ್‌ಶೆಟ್ಟಿ ನಿರ್ಮಾಣ ನಿರ್ದೇಶನದಲ್ಲಿ ತಯಾರಾದ ಸೂಪರ್ ಮರ್ಮಯೆ ತುಳುಚಲನ ಚಿತ್ರ ಆಗೋಸ್ಟ್ 14ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ 10ಥಿಯೇಟರ್‌ಗಳಲ್ಲಿ ತೆರೆಕಾಣಲಿದೆ. ಮಂಗಳೂರಿನಲ್ಲಿ ಜ್ಯೋತಿ, ಬಿಗ್ ಸಿನೆಮಾಸ್, ಸಿನಿಪೊಲಿಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ, ಮೂಡಬಿದರೆಯಲ್ಲಿ ಅಮರ ಶ್ರೀ, ಕಾರ್ಕಳದಲ್ಲಿ ರಾಧಿಕಾ, ಪುತ್ತೂರಿನಲ್ಲಿ ಅರುಣಾ, ಬೆಳ್ತಂಗಡಿಯಲ್ಲಿ ಭಾರತ್ ಹಾಗೂ ಬಿ.ಸಿ.ರೋಡ್‌ನಲ್ಲಿ ನಕ್ಷತ್ರದಲ್ಲಿ ಬಿಡುಗಡೆಗೊಳ್ಳಲಿದೆ. ತುಳುವರು ಏನಿದ್ದರೂ ಹಾಸ್ಯದ ಆಟ್ರಾಕ್ಷನ್ ಎಂಬುದು ಮನದಟ್ಟಾಗಿರುವುದರಿಂದ ಸೂಪರ್ ಮರ್ಮಯೆ ಎಂಬ ಹೆಸರಿನಲ್ಲಿ […]

ರೈತರ ಸಾಲ ಮರುಪಾವತಿ -ಅವಧಿ ವಿಸ್ತರಣೆಗೆ ಮನವಿ ಸಲ್ಲಿಸಿ: ಎ.ಬಿ.ಇಬ್ರಾಹಿಂ

Thursday, August 13th, 2015
Farmers Meeting

ಮಂಗಳೂರು : ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳು ವಾಣಿಜ್ಯ ಬ್ಯಾಂಕುಗಳಲ್ಲಿ ರೈತರು ಪಡೆದ ಸಾಲ ಮರುಪಾವತಿ ಅವಧಿ ಮುಗಿದಿದ್ದರೆ ಅಂತಹ ರೈತರು ತಮ್ಮ ಸಾಲದ ಅವಧಿಯನ್ನು ವಿಸ್ತರಿಸುವಂತೆ/ಸಾಲ ಮರುಹೊಂದಾಣಿಕೆ ಮಾಡಿಕೊಳ್ಳಲು ಸಂಬಂಧಿಸಿದ ಬ್ಯಾಂಕುಗಳಿಗೆ /ಸಹಕಾರ ಸಂಘಗಳಿಗೆ ಕೋರಿಕೆ ಪತ್ರಗಳನ್ನು ಸಲ್ಲಿಸಿದಲ್ಲಿ ಸಂಬಂಧಿಸಿದ ಹಣಕಾಸು ಸಂಸ್ಥೆಗಳು ಸಾಲಮರುಪಾವತಿಗೆ ರೈತರಿಗೆ ನೋಟೀಸ್‌ಗಳನ್ನು ನೀಡದಂತೆ ಬಲವಂತದ ಸಾಲ ವಸೂಲಿಗೆ ಮುಂದಾಗದಂತೆ ತಡೆಯಬಹುದೆಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ರೈತರಿಗೆ ತಿಳಿಸಿದ್ದಾರೆ. ಅವರು ಇಂದು ತಮ್ಮ ಕಚೇರಿಯಲ್ಲಿ ರೈತ ಮುಖಂಡರೊಂದಿಗೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು. […]

ಬೆಸೆಂಟ್ ಮಹಿಳಾ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ

Thursday, August 13th, 2015
Besant

ಮಂಗಳೂರು : ಬೆಸೆಂಟ್ ಮಹಿಳಾ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ ಅಗೋಸ್ಟ್ 5 ಶನಿವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮಾನಸಿಕ ಆರೋಗ್ಯ ವಿಭಾಗದ ಡಾ.ಸುಪ್ರಿಯಾ ಹೆಗ್ಡೆ ಅರೂರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸಭೆಯಲ್ಲಿ ಭಾಗವಹಿಸಿದ ಪೋಷಕರನ್ನು ಹಾಗೂ ರಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಮಕ್ಕಳು ತಂದೆ ತಾಯಿಯರಲ್ಲಿ ಏನಾದರೂ ವಿಷಯವನ್ನು ಹಂಚಿಕೊಳ್ಳಲು ಬಯಸಿದಾಗ ಅವರು ಕಿವಿಗೊಡುವುದೇ ಅಲ್ಲದೆ ದಿನ ನಿತ್ಯದ ಕೆಲಸಗಳನ್ನು ಮಾಡುವಾಗ ತಮ್ಮೊಂದಿಗೆ ಮಕ್ಕಳನ್ನು ಸೇರಿಸಿಕೊಳ್ಳುವುದರಿಂದ ವಿಶ್ವಾಸ ವೃದ್ಧಿಗೊಳ್ಳುವುದು […]

ರೋಟರಿಯವರಿಂದ ಅಭಿನಂದನಾರ್ಹ ಸೇವೆ ಶ್ರೀ. ಯೋಗೀಶ್ ಭಟ್

Thursday, August 13th, 2015
Rotary Bejai

ಮಂಗಳೂರು : ದ.ಕ.ಜಿ.ಪಂ. ಹಿ.ಪ್ರಾ ಶಾಲೆ ಕಾಪಿಕಾಡು ಶಾಲೆಗೆ ಸಂಪೂರ್ಣ ಸುಣ್ಣ ಬಣ್ಣ ಬಳಿದು (ಪೈಂಟಿಂಗ್) ಶಾಲೆಯ ಸುತ್ತಮುತ್ತ ಬೆಳೆದಂತಹ ಹುಲ್ಲು ಮತ್ತು ಗಿಡಗಳನ್ನು ಕಡಿದು ಸ್ವಚ್ಛಗೊಳಿಸಿ ಶಾಲೆಯ ಅಂದವನ್ನು ಹೆಚ್ಚಿಸುವಲ್ಲಿ ಸುಮಾರು ರೂ. 1,50,000.00 ವರೆಗೆ ವೆಚ್ಛ ಮಾಡಿದ ಕುರಿತು ಸೇವೆಯನ್ನು ಗುರುತಿಸಿ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಶಿಕ್ಷಕರಿಂದ ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್‌ನ ಅಧ್ಯಕ್ಷರಾದ ಶ್ರೀ. ಇಲಿಯಾಸ್ ಸಾಂಟಿಸ್ ಇವರನ್ನು ಅಭಿನಂದಿಸಲಾಯಿತು. ಸಭೆಯ ಮುಖ್ಯ ಅತಿಥಿಯಾಗಿ ಮಾಜಿ ಶಾಸಕರಾದ ಶ್ರೀ. ಎನ್. […]

‘ಚಾಲಿಪೋಲಿಲು’ ಉತ್ತಮ ಸಂದೇಶ ಸಾರುವ ಚಿತ್ರ: ಡಾ. ಡಿ. ವೀರೇಂದ್ರ ಹೆಗ್ಗಡೆ

Wednesday, August 12th, 2015
v.heggade chali polilu

ಮಂಗಳೂರು: ’ಚಾಲಿಪೋಲಿಲು’ ಉತ್ತಮ ಸಂದೇಶ ಸಾರುವ ಚಿತ್ರವಾಗಿದ್ದು ಮನೋರಂಜನೆಯ ಜೊತೆಗೆ ಸಾಕಷ್ಟು ಕುತೂಹಲ ಮೂಡಿಸುತ್ತದೆ. ಉತ್ತಮ ಕಥಾ ಹಂದರವನ್ನೊಳಗೊಂಡ ಈ ಚಿತ್ರ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕವಾದ ಅಂಶಗಳನ್ನು ಒಳಗೊಂಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಭಿಪ್ರಾಯಿಸಿದ್ದಾರೆ. ಅವರು ನಗರದ ಪಾಂಡೇಶ್ವರದ ಫಾರಂ ಫಿಜ್ಜಾ ಮಾಲ್‌ನಲ್ಲಿರುವ ಪಿವಿಆರ್ ಮಲ್ಟಿಪ್ಲೆಕ್ಸ್ ಸಿನಿಮಾ ಮಂದಿರದಲ್ಲಿ ಚಾಲಿಪೋಲಿಲು ತುಳು ಚಿತ್ರವನ್ನು ತನ್ನ ಕುಟುಂಬಿಕರ ಜೊತೆಯಲ್ಲಿ ವೀಕ್ಷಿಸಿ ತನ್ನ ಅಭಿಪ್ರಾಯವನ್ನು ಮಾಧ್ಯಮದ ಮುಂದೆ ಹಂಚಿಕೊಂಡರು. ಸಾಮಾನ್ಯವಾಗಿ ಬಹುತೇಕ ಸಿನಿಮಾಗಳಲ್ಲಿ […]

ಜನಪರ ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸಲು ಜಿ.ಪಂ. ಅಧ್ಯಕ್ಷರ ಸೂಚನೆ

Wednesday, August 12th, 2015
KDP

ಮಂಗಳೂರು :-ಸಮಾಜದಲ್ಲಿನ ಅಸಮಾನತೆ ಮೇಲು ಕೀಳು ಭಾವನೆಗಳನ್ನು ಹೊಗಲಾಡಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಸಂಬಂಧಿಸಿದ ಯೋಜನೆಗಳ ಅನುಷ್ಠಾನಾಧಿಕಾರಿಗಳು ಮುತುವರ್ಜಿ ವಹಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾತಿಮ್ಮಪ್ಪ ಗೌಡ ಅವರು ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ಮಾಸಿಕ ಸಮೀಕ್ಷಾ ಸಭೆ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲಿಸಿದರು. ಜನಪ್ರತಿನಿಧಿಗಳು ಇಂದು ಒಬ್ಬರು ನಾಳೆ ಮತ್ತೊಬ್ಬರು ಬರುತ್ತಾರೆ. ಆದರೆ ಅಧಿಕಾರಿಗಳು ಎಲ್ಲಾ […]

ಮಂಗಳೂರು ಪ್ರೆಸ್ ಕ್ಲಬ್ಬಿಗೆ ನೂತನ ಸಮಿತಿ

Wednesday, August 12th, 2015
Ronald Balepuni

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್‌ನ 2015-18 ನೇ ಸಾಲಿನ ನೂತನ ಅಧ್ಯಕ್ಷರಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯಸ್ಥ ಡಾ. ರೊನಾಲ್ಡ್ ಅನಿಲ್ ಫೆರ್ನಾಂಡಿಸ್ ಚುನಾಯಿತರಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಗುರುವಪ್ಪ ಎನ್.ಟಿ.ಬಾಳೇಪುಣಿ, ಕಾರ್ಯದರ್ಶಿಯಾಗಿ ಆಗ್ನೆಲ್ ರೋಡ್ರಿಗಸ್,ಕೋಶಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ರಾವ್ ಮತ್ತು ಆಂತರಿಕ ಲೆಕ್ಕ ಪರಿಶೋಧಕರಾಗಿ ಸುರೇಶ್ ಬೆಳಗಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರಾಮಕೃಷ್ಣ ಆರ್, ಕಿರಣ್ ಯು ಸಿರ್ಸಿಕರ್, ಮುಹಮ್ಮದ್ ಆರೀಫ್, ಇಬ್ರಾಹಿಂ ಅಡ್ಕಸ್ಥಳ, ಆತ್ಮ ಭೂಷಣ್, ರಾಜೇಶ್ ಶೆಟ್ಟಿ […]

ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಕ್ಕಳಿಗೆ ಜೈನ ಧರ್ಮದ ವಿವಿಧ ಸ್ಫರ್ಧೆಗಳು

Wednesday, August 12th, 2015
Jain Children

ಧರ್ಮಸ್ಥಳ: ಬಾಹುಬಲಿ ಮಹಿಳಾ ಸಮಿತಿ ವತಿಯಿಂದ ಜೈನ ಧರ್ಮದ ಕುರಿತಾಗಿ ವಿಶೇಷವಾಗಿ ವಿವಿಧ ಸ್ಫರ್ಧೆಗಳನ್ನು ಭಾನುವಾರದಂದು ಧರ್ಮಸ್ಥಳದ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಕ್ಕಳಿಗಾಗಿ ಏರ್ಪಡಿಸಲಾಯಿತು. ಈ ಸ್ಫರ್ಧೆಗಳಲ್ಲಿ ಸುಮಾರು 25 ಕ್ಕೂ ಮಿಕ್ಕಿದ ಮಕ್ಕಳು ಪಾಲ್ಗೊಂಡಿದ್ದು ವಿಜೇತರ ವಿವರ ಹೀಗಿದೆ. ಭಕ್ತಾಮರ ಸ್ತೋತ್ರ ಪಠಣದಲ್ಲಿ ಕ್ರಮವಾಗಿ (ಸ್ತುತಿ, ದರ್ಶನ್, ನಿಧಿಶಾ), ಉತ್ತಮ ಸತ್ಯಧರ್ಮದ ಕುರಿತು ನಡೆಸಿದ ಪ್ರಬಂಧ ಸ್ಫರ್ಧೆಯಲ್ಲಿ (ಪೂರ್ಣಿಮಾ, ದರ್ಶನ್, ಸಾನಿಧ್ಯ), ಜಿನಭಕ್ತಿಗೀತೆಯಲ್ಲಿ (ಸ್ವಪ್ನ, ಸಿಂಚನ, ಶಮಿತಾ), ದರ್ಶನ ಸ್ತುತಿ ಸ್ಫರ್ಧೆಯಲ್ಲಿ ಸಾನ್ವಿ ವಿಜೇತರಾಗಿರುತ್ತಾರೆ. ಚಿತ್ರಕಲೆಯ […]

ದೆಹಲಿ ತುಳು ಸಿರಿ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ ಆಯ್ಕೆ

Wednesday, August 12th, 2015
Purushatama

ನವದೆಹಲಿ: ತುಳು ಭಾಷೆ ಮತ್ತು ಸಂಸ್ಕೃತಿಯ ಕುರಿತು ದೆಹಲಿಯಲ್ಲಿ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಸ್ಥೆ ದೆಹಲಿ ತುಳು ಸಿರಿಯ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ ಡಾ. ಪುರುಷೋತ್ತಮ ಬಿಳಿಮಲೆ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿದ್ದು ಕನ್ನಡ ಮತ್ತು ತುಳು ಭಾಷೆಗಳಿಗೆ ಅಪೂರ್ವ ಕೊಡುಗೆಗಳನ್ನು ನೀಡಿರುವ ಡಾ. ಪುರುಷೋತ್ತಮ ಬಿಳಿಮಲೆ ಅವರು ಅಮೇರಿಕನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಸ್ಟಡೀಸ್‌ನಲ್ಲಿ ನಿರ್ದೇಶಕರಾಗಿದ್ದಾರೆ. ಡಾ. ಬಿಳಿಮಲೆ ಅವರು ದೆಹಲಿ ಕರ್ನಾಟಕ ಸಂಘದಲ್ಲಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಸಾಂಸ್ಕೃತಿಕ ಸಮುಚ್ಛಯದ ನಿರ್ಮಾಣವಾಯಿತು. ಇದೇ ಆಗಸ್ಟ್ ೯ರಂದು […]

ಶತಾಯುಷಿ, ಕರ್ನಾಟಕ ಏಕೀಕರಣ ಚಳುವಳಿಯ ಮುಂಚೂಣಿಯ ನಾಯಕ, ಕಯ್ಯಾರ ಕಿಞ್ಞಣ್ಣ ರೈ ಇನ್ನು ನೆನಪು ಮಾತ್ರ

Tuesday, August 11th, 2015
Kayyara Kinhanna Rai

ಕಾಸರಗೋಡು: ಮಹಾಕವಿ, ಹಿರಿಯ ಸಾಹಿತಿ, ಬಹುಭಾಷಾ ವಿದ್ವಾಂಸ, ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾಕ, ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಕಾಸರಗೋಡಿನ ಬದಿಯಡ್ಕ ಗ್ರಾಮದ ಮನೆಯಲ್ಲಿ ತನ್ನ 101ನೆಯ ಇಳಿ ವಯಸ್ಸಿನಲ್ಲಿ ಭಾನುವಾರ ನಿಧನರಾದರು. ಅಖಿಲಭಾರತ ಮಟ್ಟದಲ್ಲಿ ಜರುಗಿದ 66 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಕಯ್ಯಾರ ಕಿಞ್ಞಣ್ಣ ರೈ ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ ದುಗ್ಗಪ್ಪ ರೈ-ದೈಯಕ್ಕೆ ದಂಪತಿಗಳ ಮಗನಾಗಿ […]