ಕುದ್ರೋಳಿ ನವರಾತ್ರಿ ಸಂಬ್ರಮ`ಬೃಹತ್‌ ಮಂಗಳೂರು ದಸರಾ ಮೆರವಣಿಗೆ’ ಯಲ್ಲಿ ಸಮಾಪನ

Sunday, October 5th, 2014
ಕುದ್ರೋಳಿ ನವರಾತ್ರಿ ಸಂಬ್ರಮ`ಬೃಹತ್‌ ಮಂಗಳೂರು ದಸರಾ ಮೆರವಣಿಗೆ’ ಯಲ್ಲಿ ಸಮಾಪನ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮೆರವಣಿಗೆ ಶನಿವಾರ ಸಂಜೆ ಆರಂಭಗೊಂಡ ‘ಬೃಹತ್‌ ಮಂಗಳೂರು ದಸರಾ ಮೆರವಣಿಗೆ ರವಿವಾರ ಮುಂಜಾನೆ ಸಮಾಪನಗೊಂಡಿತು. ಶೋಭಾ ಯಾತ್ರೆಯಲ್ಲಿ ಶ್ರೀಶಾರದೆ, ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸ್ತಬ್ಧಚಿತ್ರಗಳು; ಕೇರಳದ ಚೆಂಡೆ ವಾದ್ಯ, ವಿವಿಧೆಡೆಯ ಜಾನಪದ ಕಲಾ ನೃತ್ಯ ತಂಡಗಳು, ಮಹಾರಾಷ್ಟ್ರದ ಡೋಲು, ಕರಾವಳಿ ಹುಲಿವೇಷ ಸಹಿತ ಪಾರಂಪರಿಕ ವೈವಿಧ್ಯ, ಆಂಧ್ರದ ಬಾಲಮುರಳೀಕೃಷ್ಣ ಕೋಲಾಟಂ, ಕಲ್ಲಡ್ಕದ ಶಿಲ್ಪ ಗೊಂಬೆ, ತ್ರಿಶ್ಯೂರಿನ ವರ್ಣದ ಕೊಡೆಗಳು, ವಾದ್ಯವೃಂದ, ಕರಾವಳಿಯ ಅನೇಕ […]

ನವವಿವಾಹಿತೆಯ ಶವ ಮನೆಯ ಬಾವಿಯಲ್ಲಿ ಪತ್ತೆ

Saturday, October 4th, 2014
Safida

ಕಾಸರಗೋಡು : ನವವಿವಾಹಿತೆಯ ಶವ ಕಾಸರಗೋಡು ಜಿಲ್ಲೆಯ ಅಂಬಲಟ್ಟರ ಎಂಬಲ್ಲಿ ಬಾವಿಯಲ್ಲಿ ಪತ್ತೆಯಾದ ಬಗ್ಗೆ ಶುಕ್ರವಾರ ವರದಿಯಾಗಿದೆ. ಮೃತ ವಿವಾಹಿತ ಯುವತಿಯನ್ನು ಸಫೀದಾ (19) ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಸಫೀದಾ ನಾಪತ್ತೆಯಾಗಿದ್ದರು. ಮನೆಯವರು ಸಫೀದಾಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ ಬಾವಿಯಲ್ಲಿ ಶವ ಪತ್ತೆಯಾಗಿದೆ. ಅಗ್ನಿ ಶಾಮುಕ ದಳದ ಸಿಬ್ಬಂದಿ ಶವವನ್ನು ಮೇಲಕ್ಕೆತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರ ಪಕ್ಷಿ ನವಿಲನ್ನು ಕೊಂದು ಗರಿಗಳನ್ನು ಮಂಗಳೂರು ನಗರದಲ್ಲಿ ಮಾರಾಟ

Thursday, October 2nd, 2014
ರಾಷ್ಟ್ರ ಪಕ್ಷಿ ನವಿಲನ್ನು ಕೊಂದು ಗರಿಗಳನ್ನು ಮಂಗಳೂರು ನಗರದಲ್ಲಿ ಮಾರಾಟ

ಮಂಗಳೂರು : ರಾಜಸ್ಥಾನ ಮೂಲದ ಕೆಲವೊಂದು ವ್ಯಕ್ತಿಗಳು ಅಲ್ಲಿ ಯಥೇಚ್ಛವಾಗಿ ಸಿಗುವ ನವಿಲುಗಳ ಆಹಾರದಲ್ಲಿ ಅಮಲು ಪದಾರ್ಥಗಳನ್ನು ಬೆರೆಸಿ ಅವುಗಳನ್ನು ಹಿಡಿದು ಕೊಂದು ತಿಂದು ಅವುಗಳ ಗರಿಗಳನ್ನು ದೇಶಾದ್ಯಂತ ಮುಕ್ತವಾಗಿ ಮಾರಾಟ ಮಾಡುತ್ತಿದ್ದಾರೆ ಎಂದು ಪರಿಸರ ಸಂರಕ್ಷಣಾ ಒಕ್ಕೂಟ ತಿಳಿಸಿದೆ. ಮಂಗಳೂರು ನಗರದಲ್ಲಿ ಈಗ ಜಾತ್ರಾ ಸಮಯ ಆದುದರಿಂದ ಈ ರಾಜಸ್ಥಾನದ ಜನರು ಹೊರೆಗಟ್ಟಲೆ ನವಿಲು ಗರಿಗಳನ್ನು ತಂದು ಸಾರ್ವಜನಿಕವಾಗಿ ಮಾರಾಟ ಮಾಡುತ್ತಿದ್ದಾರೆ. ಅವರನ್ನು ವಿಚಾರಿಸಿದರೆ ತಾವುಗಳು ಬಿದ್ದ ಗರಿಗಳನ್ನು ತಂದು ಮಾರಾಟ ಮಾಡುತ್ತಿರುವುದಾಗಿ ತಿಳಿಸುತ್ತಾರೆ. ಇದು […]

ಪುತ್ತೂರು ಪುರಸಭಾಧ್ಯಕ್ಷರಾಗಿ ನೆಲ್ಲಿಕಟ್ಟೆ ಜಗದೀಶ್‌ ಶೆಟ್ಟಿ ಆಯ್ಕೆ

Wednesday, October 1st, 2014
ಪುತ್ತೂರು ಪುರಸಭಾಧ್ಯಕ್ಷರಾಗಿ ನೆಲ್ಲಿಕಟ್ಟೆ ಜಗದೀಶ್‌ ಶೆಟ್ಟಿ ಆಯ್ಕೆ

ಪುತ್ತೂರು: ಪುತ್ತೂರು ಪುರಸಭೆಗೆ ಮಂಗಳವಾರ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಎಚ್‌. ಮಹಮ್ಮದಾಲಿ ಅವರನ್ನು ಸೋಲಿಸುವ ಮೂಲಕ ಬಂಡಾಯ ಅಭ್ಯರ್ಥಿ ಕಾಂಗ್ರೆಸ್‌ನ ನೆಲ್ಲಿಕಟ್ಟೆ ಜಗದೀಶ್‌ ಶೆಟ್ಟಿ ಪುರಸಭಾ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಅವರು 18 ಮತಗಳನ್ನು ಪಡೆದು ಎಚ್‌. ಮಹಮ್ಮದಾಲಿ ಅವರನ್ನು ಸೋಲಿಸಿದರು. ಮಂಗಳವಾರ ಬೆಳಗ್ಗೆ ಕಾಂಗ್ರೆಸ್‌ನಿಂದ ಎಚ್‌. ಮಹಮ್ಮದಾಲಿ ಮತ್ತು ನೆಲ್ಲಿಕಟ್ಟೆ ಜಗದೀಶ್‌ ಶೆಟ್ಟಿ ಹಾಗೂ ಬಿಜೆಪಿಯಿಂದ ವಿಶ್ವನಾಥ ಗೌಡ ನಾಮಪತ್ರ ಸಲ್ಲಿಸಿದ್ದರು. ನೆಲ್ಲಿಕಟ್ಟೆ ಜಗದೀಶ್‌ ಶೆಟ್ಟಿ ನಾಮಪತ್ರವನ್ನು ಹಿಂದೆ ತೆಗೆದುಕೊಳ್ಳದೇ ಚುನಾವಣಾ ಕಣದಲ್ಲಿ […]

ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆ – ಮಂಗಳೂರು ಒನ್‌ ತನಿಖೆಗೆ ಸದನ ಸಮಿತಿ

Tuesday, September 30th, 2014
MCC

ಮಂಗಳೂರು: ಮಂಗಳೂರು ಒನ್‌ ಸೇವಾ ಕೇಂದ್ರಗಳು ಜನರಿಂದ ಸಂಗ್ರಹಿಸಿದ ಆಸ್ತಿ ತೆರಿಗೆಯನ್ನು ಕ್ಲಪ್ತ ಸಮಯದಲ್ಲಿ ಪಾಲಿಕೆಯ ಖಾತೆಗೆ ಪಾವತಿಸುತ್ತಿಲ್ಲ. ಪಾಲಿಕೆಗೆ ಸಂದಾಯ­ವಾದ ಮೊತ್ತ ಹಾಗೂ ಸೇವಾ ಕೇಂದ್ರಗಳು ಸಂಗ್ರಹಿಸಿರುವ ಮೊತ್ತದಲ್ಲಿ ₨ 2.5 ಕೋಟಿ­ಯಷ್ಟು ವ್ಯತ್ಯಯ ಕಂಡುಬಂದಿದೆ’ ಎಂದು  ಪಾಲಿಕೆ ಸದಸ್ಯ ವಿಜಯ ಕುಮಾರ್‌ ಶೆಟ್ಟಿ ಆರೋಪಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮೇಯರ್‌ ಮಹಾಬಲ ಮಾರ್ಲ ಅವರು, ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಲು ಸದನ ಸಮಿತಿಯನ್ನು ನೇಮಿಸಿದರು. ಪಾಲಿಕೆ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ […]

ವಿಶ್ವ ಹೃದಯ ದಿನದ ಓಟ: ಕೆಎಂಸಿ ಆಸ್ಪತ್ರೆಗೆ ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ

Monday, September 29th, 2014
World-Heat-Day

ಮಂಗಳೂರು: ವಿಶ್ವ ಹೃದಯ ದಿನದ ಅಂಗವಾಗಿ ಕೆಎಂಸಿ ಆಸ್ಪತ್ರೆ ಹಮ್ಮಿಕೊಂಡಿದ್ದ ‘ವಿಶ್ವ ಹೃದಯ ದಿನದ ಓಟ’ದಲ್ಲಿ ಸುಮಾರು 3 ಸಾವಿರ ಮಂದಿ ಭಾಗವಹಿಸಿದರು. ಕೈಗಳನ್ನು ತೊಡೆಗೆ ಬಡಿ­ಯುತ್ತಾ ಹೃದಯ ಮಾಡುವ ಸದ್ದಿನ ಪ್ರತಿಧ್ವನಿ­ಯನ್ನು 5 ನಿಮಿಷಗಳ ಕಾಲ ಬಾಯಲ್ಲಿ ಮೂಡಿಸಿ ಏಕಕಾಲದಲ್ಲಿ ಇಷ್ಟು ಸಂಖ್ಯೆಯ ಜನ 5 ನಿಮಿಷ ನಿರಂತರವಾಗಿ ಸದ್ದು ಮಾಡಿ ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದರು. ಒಟ್ಟು 2500 ಮಂದಿ ನೋಂದಣಿ ಮಾಡಿಸಿ ಕೊಂಡಿದ್ದರು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ನ ಪ್ರತಿನಿಧಿಯಾಗಿ ಆಗಮಿಸಿದ […]

ಮುಖ್ಯಮಂತ್ರಿ ಸಿದ್ಧರಾಮಯ್ಯರಿಂದ ಮಂಗಳೂರು ದಸರಾ-2014 ಕ್ಕೆ ಚಾಲನೆ

Sunday, September 28th, 2014
Kudroli Dasara

ಮಂಗಳೂರು: ಮಂಗಳೂರು ದಸರಾ-2014 ನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ಸಾಮಾಜಿಕ ಬದಲಾವಣೆ ನಡೆದಿದ್ದು, ಅದರಲ್ಲೂ ಅರ್ಚಕರಾಗಿ ವಿಧವೆಯರ ನೇಮಕ ಮಾಡಿರುವುದು ಬದಲಾವಣೆಯ ಹೊಸ ಯುಗ ಎಂದೇ ಹೇಳಬಹುದು. ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಸಮಾಜ ಹೋರಾಟದ ಮನೋಭಾವ ಬೆಳೆಸಿಕೊಳ್ಳಬೇಕು, ಸಮಾಜದಲ್ಲಿರುವ ಮೂಡನಂಭಿಕೆಗಳನ್ನು ತೊಲಗಿಸಿ ಮಹಿಳೆಯರೂ ಪುರುಷರಂತೆ ಸಮಾನರು ಎಂಬುದನ್ನು ತಿಳಿಸಿಕೊಡಬೇಕು, ಸರಕಾರದ ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳಾ ಅರ್ಚಕಿಯರನ್ನು ಪ್ರಾಯೋಗಿಕವಾಗಿ ನೇಮಕ ಮಾಡುವ ಸಂಬಂಧ ಸರಕಾರ ಕ್ರಮಕೈಗೊಳ್ಳಲಿದೆ ಎಂದು […]

ಅರ್ಚರಿಯಲ್ಲಿ ಭಾರತಕ್ಕೆ ಬಂಗಾರದ ಅಚ್ಚರಿ

Saturday, September 27th, 2014
ಅರ್ಚರಿಯಲ್ಲಿ ಭಾರತಕ್ಕೆ ಬಂಗಾರದ ಅಚ್ಚರಿ

ಇಂಚೆನ್‌ : ಭಾರತದ ಕ್ರೀಡಾ ಪ್ರೇಮಿಗಳ ಪಾಲಿಗೆ ಶನಿವಾರ ಶುಭದಿನ. 17ನೇ ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯಲ್ಲಿ ಭಾರತವು ತಲಾ ಒಂದು ಬಂಗಾರ ಹಾಗೂ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಚಾರಿತ್ರಿಕ ಸಾಧನೆ ಮಾಡಿದೆ. ಇಲ್ಲಿ ನಡೆಯುತ್ತಿರುವ 17ನೇ ಏಷ್ಯನ್ ಕ್ರೀಡಾಕೂಟದ ಕಂಪೌಂಡ್ ಪುರುಷರ ಆರ್ಚರಿ  ತಂಡವು ಬಂಗಾರ ಗೆದ್ದಿದೆ. ಈ ಕ್ರೀಡಾಕೂಟದಲ್ಲಿ ಭಾರತಕ್ಕೆ ದೊರೆತ ಎರಡನೇ ಚಿನ್ನದ ಪದಕವಿದು. ಇದೇ ವಿಭಾಗದ ಮಹಿಳೆಯರ ತಂಡವು   ಕಂಚಿನ ಸಾಧನೆ ಮಾಡಿದೆ. ಮತ್ತೊಂದೆಡೆ ಪುರುಷರ […]

ಸಿದ್ದರಾಮಯ್ಯನವರಿಂದ ಗುರುಪೀಠ ಉದ್ಘಾಟನೆ

Saturday, September 27th, 2014
Siddaramaiah-at-guru-peeta

ಬ್ರಹ್ಮಾವರ : ಇಲ್ಲಿನ ಬಾರಕೂರಿನ ಬೆಣ್ಣೆಕುದುರಿನಸಮಸ್ತ ಮೊಗವೀರರ ಕುಲದೇವರು   ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ  ನವೀಕೃತ ಗುರುಪೀಠವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ  ಬೆಳಗ್ಗೆ 11ಕ್ಕೆ  ಉದ್ಘಾಟಿಸಿದರು. ಸಚಿವರಾದ ವಿನಯ್‌ಕುಮಾರ್‌ ಸೊರಕೆ ,ಶಾಸಕ ಪ್ರಮೋದ್‌ ಮಧ್ವರಾಜ್‌ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಇದೀಗ ಮುಖ್ಯಮಂತ್ರಿಗಳು ಬ್ರಹ್ಮಾವರದ ಗಾಂಧೀ ಮೈದಾನದಲ್ಲಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌, ಮೊಗವೀರ ಯುವ ವೇದಿಕೆ,ಮಣಿಪಾಲ ವಿ.ವಿ. ಸಹಯೋಗದಲ್ಲಿ ಕೊಡುವ ಜಿ. ಶಂಕರ್‌- ಮಣಿಪಾಲ ಆರೋಗ್ಯ ಕಾರ್ಡ್‌ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಬಳಿಕ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ […]

ಬಿಜೈ ಯಲ್ಲಿ ಮೆಸ್ಕಾಂ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಬರ್ಬರ ಹತ್ಯೆ

Sunday, September 21st, 2014
Mescom Engineer murder

ಮಂಗಳೂರು : ಇಬ್ಬರು ದುಷ್ಕರ್ಮಿಗಳು ಮೆಸ್ಕಾಂ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಒಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೆಪ್ಟೆಂಬರ್ 21 ರ ಭಾನುವಾರ ಬೆಳಗಿನ ಜಾವ ನಗರದ ಬಿಜೈ ನಲ್ಲಿ ನಡೆದಿದೆ. ಹತ್ಯೆಗೀಡಾದವರನ್ನು ಮೆಸ್ಕಾಂ ಕಾರ್ಪೋರೇಟ್‌ ಕಜೇರಿಯಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಆಗಿರುವ ಜಗದೀಶ್‌ ರಾವ್‌ (55) ಎನ್ನುವವರಾಗಿದ್ದಾರೆ. ರಾತ್ರಿ 2.30 ರ ವೇಳೆಗೆ ಗಾಢ ನಿದ್ದೆಯಲ್ಲಿದ್ದ ಜಗದೀಶ್‌ ಅವರ ಪತ್ನಿ ಅರಚಾಟ ಕೇಳಿ ಎಚ್ಚರಗೊಂಡು ನೋಡಿದಾಗ ಜಗದೀಶ್‌ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಕೂಡಲೇ ನೆರಮನೆವರನ್ನು ಕರೆದು ಆಸ್ಪತ್ರಗೆ […]