ಬೆಂಗಳೂರಿನ ಯತೀಂ ಖಾನಾ ವೊಂದರಲ್ಲಿ 200 ಅನಾಥ ಮಕ್ಕಳು ಮೌಲ್ವಿಗಳನ್ನು ಕಂಡರೆ ಭಯ ಪಡುತ್ತಾರೆ

Tuesday, November 21st, 2023
Yatim-khana

ಬೆಂಗಳೂರು : ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿರೋ ಮುಸ್ಲಿಂ ಸಮುದಾಯದ ದಾರುಲ್ ಉಲೂಮ್ ಸಾದಿಯಾ ಅನಾಥಾಶ್ರಮದಲ್ಲಿ ಮಕ್ಕಳಿಗೆ ಇಸ್ಲಾಂ ಧಾರ್ಮಿಕ ಶಿಕ್ಷಣ ಮಾತ್ರ ನೀಡುತ್ತಿದೆ, ಅನಾಥಾಶ್ರಮದಲ್ಲಿರುವ 200 ಮಕ್ಕಳನ್ನು ಶಾಲೆಗೂ ಕಳುಹಿಸಲಾಗುತ್ತಿಲ್ಲ, ಇಸ್ಲಾಂ ಧಾರ್ಮಿಕ ಶಿಕ್ಷಣ ಮಾತ್ರ ನೀಡಲಾಗುತ್ತಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂನ್​ಗೊ ಹೇಳಿದ್ದಾರೆ. ಇಲ್ಲಿನ ಮಕ್ಕಳು ಮಧ್ಯಯುಗದ ತಾಲಿಬಾನ್ ರೀತಿಯಲ್ಲಿ ಬದುಕುತ್ತಿದ್ದಾರೆ. ಇಲ್ಲಿ ಸುಮಾರು 200 ಅನಾಥ ಮಕ್ಕಳಿದ್ದಾರೆ. ಮಸೀದಿಯ ನಮಾಜ್ ಮಾಡುವ ಎರಡು ಹಾಲ್‌ಗಳಲ್ಲಿ ಮಲಗುತ್ತಾರೆ. ಅವರಿಗೆ […]

ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಚಾಂಪಿಯನ್

Sunday, November 19th, 2023
world-cup

ಅಹ್ಮದಾಬಾದ್: ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ. ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ನೀಡಿದ 241 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆಸ್ಚ್ರೇಲಿಯಾ ತಂಡ ಟ್ರಾವಿಸ್ ಹೆಡ್ ಶತಕ ಮತ್ತು ಲಬುಶೇನ್ ರ ಅರ್ಧಶತಕದ ನೆರವಿನಿಂದ ಗುರಿ ತಲುಪಿ ಜಯಭೇರಿ ಭಾರಿಸಿತು. ಆ ಮೂಲಕ 6ನೇ ಬಾರಿಗೆ […]

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ್ ಆಯ್ಕೆ

Friday, November 17th, 2023
R Ashok

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಆಯ್ಕೆಯಾಗಿದ್ದಾರೆ. ಅವರನ್ನು ಬಿಜೆಪಿ ಹೈಕಮಾಂಡ್ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆ ಮಾಡಿದೆ. ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು. ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ ನಡುವೆಯೂ ವಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರನ್ನು ನೇಮಿಸಿದ್ದಾರೆ. ಇನ್ನು ಇದೇ ವೇಳೆ ಸಭೆಯನ್ನು […]

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯುವ ನಾಯಕ ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ

Wednesday, November 15th, 2023
BY Vijayendra

ಬೆಂಗಳೂರು : ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಯುವ ನಾಯಕ ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಭುಧವಾರ ಅಧಿಕಾರ ಸ್ವೀಕರಿಸಿಕೊಂಡರು. ರಾಜ್ಯ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಮುಂದೆ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ಇದಕ್ಕೂ ಮುನ್ನ […]

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

Friday, November 10th, 2023
BY-Vijayendra

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ ಬಿವೈ ವಿಜಯೇಂದ್ರ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ. ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ […]

ಎಂಜಿನಿಯರಿಂಗ್ ವಿದ್ಯಾರ್ಥಿನಿ ಕಾಲೇಜು ಕಟ್ಟಡದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

Thursday, November 2nd, 2023
manya

ಹಾಸನ: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹಾಸನದಲ್ಲಿ ಗುರುವಾರ ಹಾಸನದಲ್ಲಿ ನಡೆದಿದೆ. ಮೂಲತಃ ಚನ್ನರಾಯಪಟ್ಟಣ ಸಮೀಪದ ಹೊನ್ನ ಶೆಟ್ಟಿಹಳ್ಳಿ ಗ್ರಾಮದ ಮಾನ್ಯ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಹಾಸನ ನಗರದ ಹೊರವಲಯದಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆಯಲ್ಲಿ ನಕಲು ಮಾಡಿ ಉಪನ್ಯಾಸಕರ ಕೈಗೆ ಸಿಕ್ಕಿ ಬಿದ್ದಿದಳು. ಈ ಹಿನ್ನೆಲೆಯಲ್ಲಿ ಕ್ಷಮಾಪಣಾ ಪತ್ರ ಬರೆದು ಪ್ರಾಂಶುಪಾಲರಿಗೆ ನೀಡುವಂತೆ ಆಕೆಗೆ ಉಪನ್ಯಾಸಕರು […]

ನಾಟಕ ಸ್ಪರ್ಧೆಗಳು ಹೊಸ ಕಲಾವಿದರನ್ನ ಹುಟ್ಟುಹಾಕುವ ವೇದಿಕೆಗಳು: ನಟ ಪ್ರಮೋದ್‌ ಶೆಟ್ಟಿ

Thursday, November 2nd, 2023
ನಾಟಕ ಸ್ಪರ್ಧೆಗಳು ಹೊಸ ಕಲಾವಿದರನ್ನ ಹುಟ್ಟುಹಾಕುವ ವೇದಿಕೆಗಳು: ನಟ ಪ್ರಮೋದ್‌ ಶೆಟ್ಟಿ

ಬೆಂಗಳೂರು : ಅಂತರ್‌ ಕಾಲೇಜು ನಾಟಕ ಸ್ಪರ್ಧೆಗಳು ಹೊಸ ಕಲಾವಿದರನ್ನ ಹುಟ್ಟು ಹಾಕುವ ವೇದಿಕೆಗಳು. ಇಂತಹ ಅಂತರ್‌ ಕಾಲೇಜು ಸ್ಪರ್ಧೆಯ ವೇದಿಕೆಯಿಂದಲೇ ನಾನು ರಂಗಭೂಮಿಗೆ ಪಾದಾರ್ಪಣೆ ಮಾಡಿದ್ದು, ಇಂತಹ ವೇದಿಕೆಗಳನ್ನ ತಮ್ಮ ಕಲೆಯನ್ನು ಪ್ರದರ್ಶಿಸಲು ವಿದ್ಯಾರ್ಥಿಗಳು ಸಕ್ರಿಯವಾಗಿ ಬಳಸಿಕೊಳ್ಳಬೇಕು ಎಂದು ಖ್ಯಾತ ಬಹುಭಾಷ ನಟ ಹಾಗೂ ರಂಗಕರ್ಮಿ ಪ್ರಮೋದ್‌ ಶೆಟ್ಟಿ ಕರೆ ನೀಡಿದರು. ಇಂದು ಜಯನಗರದ ನ್ಯಾಷನಲ್‌ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಅಂತರ ಕಾಲೇಜು ನಾಟಕ ಸ್ಪರ್ಧೆ ರಂಗವೈಭವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ […]

ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

Monday, October 2nd, 2023
ಡಿಕೆ ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾವೆರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, . ಡಿ ಕೆ ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ. ಯಾಕೆ ಇಷ್ಟೊಂದು ಹಗುರವಾಗಿ ಮಾತನಾಡುತ್ತಿದ್ದಾರೆ […]

ಹಿಂದೆಯೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು, ಆಗ ಮುಸ್ಲಿಮರಿಗೆ ಯಾವುದಾದರೂ ಸಮಸ್ಯೆಗಳು ಆಗಿತ್ತಾ?’ : ಬಿ.ಎಂ.ಫಾರೂಕ್

Sunday, October 1st, 2023
BM-Farooq

ಬೆಂಗಳೂರು : ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಜೊತೆ 20 ತಿಂಗಳು ಉತ್ತಮ ಸರಕಾರ ನೀಡಿದೆ. ಆಗ ರಾಜ್ಯದಲ್ಲಿರುವ ಮುಸ್ಲಿಮರಿಗೆ ಯಾವುದಾದರೂ ಸಮಸ್ಯೆಗಳು ಆಗಿತ್ತಾ?’ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಪ್ರಶ್ನಿಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿ ಬಳಿಯಿರುವ ಕುಮಾರಸ್ವಾಮಿಯವರ ತೋಟದ ಮನೆಯಲ್ಲಿ ಆಯೋಜಿಸಿದ್ದ ಜೆಡಿಎಸ್ ನಾಯಕರ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ ‘ಜೆಡಿಎಸ್ ಪಕ್ಷವು ಈ ಹಿಂದೆಯೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು ಎಂದಿದ್ದಾರೆ. ಈಗ ಕಾಂಗ್ರೆಸ್ […]

ಕಾವೇರಿ ನೀರು : ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ, 144 ಸೆಕ್ಷನ್​ ಜಾರಿ

Friday, September 29th, 2023
cauvery-protest

ಬೆಂಗಳೂರು: ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ ಜನರ ಜೀವನಾಡಿ ಕಾವೇರಿ ನೀರನ್ನು ರಾಜ್ಯದಲ್ಲಿ ತೀವ್ರ ಬರಗಾಲದ ಮಧ್ಯೆ ತಮಿಳು ನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್ ಗೆ ಬೆಳಗ್ಗೆಯಿಂದಲೇ ಪ್ರತಿಕ್ರಿಯೆ ಕಂಡುಬಂತು. ರಾಜಧಾನಿ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ನಗರದ ಸೂಕ್ಷ್ಮ ಮತ್ತು ಪ್ರಮುಖ ಪ್ರದೇಶಗಳಲ್ಲಿ ಕಾವಲಿಗೆ ಇಳಿದಿದ್ದಾರೆ. ಬೆಂಗಳೂರಿನ ವಾಣಿಜ್ಯ, ವ್ಯಾಪಾರ ಚಟುವಟಿಕೆಗಳ ಕೇಂದ್ರ ಭಾಗವಾಗಿರುವ ಕೆಆರ್ ಮಾರುಕಟ್ಟೆಯಲ್ಲಿ ವಿವಿಧ ಸಂಘಟನೆಗಳು ವಿಭಿನ್ನ […]