ಮಹಿಂದ್ರಾ ವಾಹನ ಪಲ್ಟಿ: ಓರ್ವ ಪೊಲೀಸ್ ಪೇದೆ ಸಾವು!

Monday, November 12th, 2018
police

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮಹಿಂದ್ರಾ ವಾಹನ ಪಲ್ಟಿಯಾದ ಪರಿಣಾಮ ಓರ್ವ ಪೊಲೀಸ್ ಪೇದೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮನಜೋಗಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಚಾಲಕ ಮಂಜುಗೆ ಗಂಭೀರ ಗಾಯಗಳಾಗಿವೆ. ಇಂಡಿ ತಾಲೂಕಿನ ಅರ್ಜುಣಗಿ ಬಿಕೆ ಗ್ರಾಮದ ದ್ವಾರಕೀಶ್ ಹಣಮಂತ ದೇವಖಾತೆ ಮೃತಪಟ್ಟ ಪೊಲೀಸ್ ಪೇದೆ.ಇವರು ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಲೆಗೆ ಪೆಟ್ಟು ಹಾಗೂ ಕಾಲ್ಮುರಿತದಿಂದ ಗಾಯಗೊಂಡಿದ್ದ ಪೊಲೀಸ್ ಪೇದೆ, ಸಿಂದಗಿಯ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಅನಂತ್ ಕುಮಾರ್ ನಿಧನ: ರಾಜ್ಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Monday, November 12th, 2018
ananth-kumar

ಬೆಂಗಳೂರು: ಕೇಂದ್ರ ಸಚಿವ ಹೆಚ್.ಎನ್. ಅನಂತ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಸಚಿವರಾಗಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಶೋಕಾಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂತಾಪ‌ ಸೂಚಕವಾಗಿ ರಾಜ್ಯ ಸರ್ಕಾರ ಸರ್ಕಾರ ರಜೆ ಘೋಷಿಸಿದೆ. ಈ ವೇಳೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸಮಾರಂಭಗಳ ಆಯೋಜನೆ ಮಾಡದಂತೆ‌ ಸುತ್ತೋಲೆ ಹೊರಡಿಸಿದೆ. ಈ ನಡುವೆ ಮೈಸೂರು ವಿವಿ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಮೈಸೂರು ವಿವಿ ಆದೇಶ ಹೊರಡಿಸಿದೆ. ಇತರೆ ವಿವಿಗಳ […]

ಕೇಂದ್ರ ಸಚಿವ ಎಚ್‌.ಎನ್. ಅನಂತ್‌ಕುಮಾರ್ ನಿಧನ

Monday, November 12th, 2018
Ananth Kumar

ಬೆಂಗಳೂರು: ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಎನ್. ಅನಂತ್‌ಕುಮಾರ್ (59) ಸೋಮವಾರ ನಸುಕಿನ 3 ಗಂಟೆಗೆ ನಿಧನರಾದರು. ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಿಜೆಪಿ ರಾಜ್ಯ ಘಟಕದ ಆಧಾರ ಸ್ತಂಭಗಳಲ್ಲಿ ಒಂದಾಗಿದ್ದ ಅವರು, ಕಳೆದ ಕೆಲ ತಿಂಗಳುಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಪಾರ್ಥೀವ ಶರೀರವನ್ನು ಬಸವನಗುಡಿಯ ಮನೆಗೆ ತರಲಾಗಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ 9 ಗಂಟೆಯ ನಂತರ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ಕೆಲ ದಿನಗಳ […]

ಅಯ್ಯಪ್ಪನ ದರ್ಶನಕ್ಕಾಗಿ 10 ರಿಂದ 50 ವರ್ಷದವರೆಗಿನ 550 ಮಹಿಳೆಯರು ಆನ್​ಲೈನ್​ನಲ್ಲಿ ಬುಕ್ಕಿಂಗ್​..!

Saturday, November 10th, 2018
ayyappa-swami

ತಿರುವನಂತಪುರ: ಗಲಭೆ ಹಾಗೂ ಭಕ್ತರ ನಿರ್ವಹಣೆ ದೃಷ್ಟಿಯಿಂದ ಕೇರಳ ಪೊಲೀಸರು ಅಯ್ಯಪ್ಪನ ದರ್ಶನಕ್ಕಾಗಿ ಆರಂಭಿಸಿರುವ ಆನ್ಲೈನ್ ಬುಕ್ಕಿಂಗ್ನಲ್ಲಿ 550 ಮಹಿಳೆಯರು ನೋಂದಣಿ ಮಾಡಿದ್ದಾರೆ. ಇದೇ 16ರಂದು ಶಬರಮಲೆಯಲ್ಲಿ ಹಬ್ಬ ಆರಂಭವಾಗಲಿದ್ದು, ಅಯ್ಯಪ್ಪನ ದರ್ಶನಕ್ಕಾಗಿ 10ರಿಂದ 50 ವರ್ಷದವರೆಗಿನ 550 ಮಹಿಳೆಯರು ಆನ್ಲೈನ್ನಲ್ಲಿ ಬುಕ್ಕಿಂಗ್ ಮಾಡಿದ್ದಾರೆ ಎಂದು ತಿರುವಂಕೂರು ದೇವಸಂ ಮಂಡಳಿ ಮಾಹಿತಿ ನೀಡಿದೆ. ಸುಪ್ರೀಂಕೋರ್ಟ್ ತೀರ್ಪಿನಂತೆ ಅಯ್ಯಪ್ಪನ ದೇಗುಲ ಪ್ರವೇಶಿಸಲು ಮುಂದಾದ ಮಹಿಳೆಯರು ಹಾಗೂ ಅಯ್ಯಪ್ಪನ ಭಕ್ತರ ನಡುವೆ ಗಲಭೆ ಸಂಭವಿಸಿ ದೇಶಾದ್ಯಂತ ಸುದ್ದಿಯಾಗಿತ್ತು. ಮತ್ತೆ ಇಂತಹ […]

ಶೀಘ್ರದಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರವನ್ನ ನಿರ್ಮಾಣ ಮಾಡಲಾಗುವುದು: ಯೋಗಿ ಆದಿತ್ಯನಾಥ

Saturday, November 10th, 2018
yogi-adityanath

ಛತ್ತೀಸ್ಗಢ: ಈಗಾಗಲೇ ಛತ್ತೀಸ್ಗಢದಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಗಿದೆ. ಶೀಘ್ರದಲ್ಲಿಯೇ ಅಯೋಧ್ಯೆಯಲ್ಲಿ ರಾಮಮಂದಿರವನ್ನ ನಿರ್ಮಾಣ ಮಾಡಲಾಗುವುದು ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘೋಷಿಸಿದರು. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಗೆಲುವಿಗಾಗಿ ಪ್ರಚಾರ ಕಾರ್ಯ ಕೈಗೊಂಡಿರುವ ಅವರು, ಇಂದು ಛತ್ತೀಸ್ಗಢದ ಲೊರ್ಮಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಗುವುದು. ಅಂತೆಯೇ ಛತ್ತೀಸ್ಗಢದಲ್ಲಿ ಈಗಾಗಲೇ ರಾಮಮಂದಿರ ನಿರ್ಮಾಣ ಮಾಡಲಾಗಿದೆ ಎಂದು ನೆನಪಿಸಿಕೊಂಡರು. ಇದೇ ವೇಳೆ, ಪಕ್ಷ ಮತ್ತೆ ದಿಗ್ವಿಜಯ ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಛತ್ತೀಸ್ಗಢದ […]

ಸಿದ್ದರಾಮಯ್ಯಗೆ ಸನ್ಮಾನ ಮಾಡಿದ ಮುಸ್ಲಿಂ ಧಾರ್ಮಿಕ ಮುಖಂಡರು..!

Saturday, November 10th, 2018
siddaramaih

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಮುಸ್ಲಿಂ ಧಾರ್ಮಿಕ ಮುಖಂಡರು ಅಭಿನಂದಿಸಿದ್ದಾರೆ. ಇಂದು ಬೆಂಗಳೂರಿನ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತೆರಳಿದ ಹಲವು ಮುಸ್ಲಿಂ ಧರ್ಮಗುರುಗಳು, ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಸಿದ್ದರಾಮಯ್ಯರನ್ನು ಧರ್ಮಗುರುಗಳು ಸನ್ಮಾನಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಸಮಯದಲ್ಲಿ ಟಿಪ್ಪು ಜಯಂತಿಯನ್ನು ಆರಂಭಿಸಿದ್ದರು. ಹಾಗಾಗಿ ಅವರ ಕಾರ್ಯವನ್ನು ಗೌರವಿಸುವ ನಿಟ್ಟಿನಲ್ಲಿ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಸಿದ್ದರಾಮಯ್ಯ ಚಿತ್ರದುರ್ಗಕ್ಕೆ ತೆರಳುವ […]

ರಾಜ್ಯ ಲೋಕಸಭೆಯ ಚುನಾವಣೆಗೂ ನಾವು ಒಟ್ಟಾಗಿ ಸ್ಪರ್ಧಿಸಲಿದ್ದೇವೆ: ಹೆಚ್​.ಡಿ. ದೇವೇಗೌಡ

Tuesday, November 6th, 2018
devegouda

ಬೆಂಗಳೂರು: ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಮಿನಿ ಸಮರದಲ್ಲಿ ಮೈತ್ರಿ ಸರ್ಕಾರ ಭರ್ಜರಿ ಗೆಲುವು ಸಾಧಿಸಿದ್ದು, ಈ ಕುರಿತಂತೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮೈತ್ರಿ ಸರ್ಕಾರದ ಗೆಲುವು ಇದಾಗಿದ್ದು, ಜನರ ಬೆಂಬಲಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತ್ರ ಗೆದ್ದಿರುವ ಬಿಜೆಪಿ ಹೆಚ್ಚಿನ ಸಂತಸಪಡುವ ಅಗತ್ಯವಿಲ್ಲ ಎಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರೆಯಲಿದೆ ಎಂದಿರುವ ಹೆಚ್ಡಿಡಿ, ಈ ಕುರಿತಾಗಿ ಎರಡೂ ಪಕ್ಷದ ಮುಖಂಡರು ಒಟ್ಟು ಸೇರಿ ಚುನಾವಣಾ ರೂಪುರೇಷೆ ಸಿದ್ಧಪಡಿಸುವುದಾಗಿ ಹೇಳಿದ್ದಾರೆ.

ಸೋತ ಮಾತ್ರಕ್ಕೆ ಕೈ ಕಟ್ಟಿ ಕೂರಲ್ಲ, ನಾವೇನು ಎಂದು ತೋರಿಸಲಿದ್ದೇವೆ: ಬಿ.ಎಸ್.ಯಡಿಯೂರಪ್ಪ

Tuesday, November 6th, 2018
yedyurappa

ಬೆಂಗಳೂರು: ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಸೋತಿದೆ ಎಂದು ಕೈಕಟ್ಟಿ ಕೂರುವುದಿಲ್ಲ. ನಾವು ಸೋತದ್ದು ಬಳ್ಳಾರಿ ಮಾತ್ರ. ನಮ್ಮ ಸೋಲನ್ನು ಆತ್ಮಾವಲೋಕನ ಮಾಡಿಕೊಂಡು ಮುಂದಿನ 2019ರ ಚುನಾವಣೆಯನ್ನು ಗೆಲ್ಲುವತ್ತ ನಮ್ಮ ದೃಷ್ಟಿಯನ್ನು ಹರಿಸುತ್ತೇವೆ. ನಾವೇನು ಎಂದು ಮುಂದೆ ತೋರಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 5 ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ನನ್ನ ಅಭಿನಂದನೆ ಮತ್ತು ವಂದನೆಗಳು. 5 ಕ್ಷೇತ್ರಗಳ ಮತದಾರರ ತೀರ್ಪನ್ನು ನಾನು ಮತ್ತು ನಮ್ಮ ಪಕ್ಷ ಸ್ವೀಕರಿಸುತ್ತದೆ. ಸತ್ಯಸಂಗತಿ […]

ರಾಮನಗರದ ಮೊದಲ ಮಹಿಳಾ ಶಾಸಕಿಯಾಗಿ ಅನಿತಾ ಕುಮಾರಸ್ವಾಮಿ ಆಯ್ಕೆ!

Tuesday, November 6th, 2018
anitha-kumarswamy

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕೊನೆಯ ಹಾಗೂ 20ನೇ ಸುತ್ತು ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿ ಈ ಕ್ಷೇತ್ರದ ಮೊದಲ ಮಹಿಳಾ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಈ ಉಪಸಮರದಲ್ಲಿ ಒಟ್ಟು 1,25,043 ಮತಗಳನ್ನು ಅನಿತಾ ಕುಮಾರಸ್ವಾಮಿ ಪಡೆದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ 15,906 ಮತಗಳನ್ನು ಪಡೆದು ಭಾರೀ ಅಂತರದಿಂದ ಸೋಲು ಕಂಡಿದ್ದಾರೆ. ಇನ್ನು ಅನಿತಾ ಕುಮಾರಸ್ವಾಮಿ ಸುಮಾರು ಒಂದು ಲಕ್ಷ ಮತಗಳಿಂದ ಭಾರೀ ಗೆಲುವು ಸಾಧಿಸಿದ್ದಾರೆ. […]

ಉಪಚುನಾವಣಾ: ಐದರ ಪೈಕಿ ನಾಲ್ಕರಲ್ಲಿ ಮೈತ್ರಿ ಸರ್ಕಾರ ಅಭ್ಯರ್ಥಿಗಳಿಗೆ ಗೆಲುವು..!

Tuesday, November 6th, 2018
by-polls

ಮಂಡ್ಯ: ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಈ ನಡುವೆ ಐದರಲ್ಲಿ ನಾಲ್ಕು ಕಡೆ ಮೈತ್ರಿ ಸರ್ಕಾರದ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಗೆಲುವಿನ ಬಗ್ಗೆ ಅಧಿಕೃತ ಘೋಷಣೆಯೊಂದು ಬಾಕಿ ಇದೆ. ರಾಮನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಗೆ ಭರ್ಜರಿಯಾಗಿ ಗೆಲುವು ಸಾಧಿಸಿದರೇ ಇತ್ತ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ 1ಲಕ್ಷದ 82 ಸಾವಿರ ಮತಗಳ ಅಂತರದಿಂದ ಗೆದ್ದು ಅಂಬರೀಶ್ ದಾಖಲೆ ಮುರಿದಿದ್ದಾರೆ. ಇನ್ನೊಂದೆಡೆ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ […]