ಕಾವೇರಿ ನೀರು : ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ, 144 ಸೆಕ್ಷನ್​ ಜಾರಿ

Friday, September 29th, 2023
cauvery-protest

ಬೆಂಗಳೂರು: ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ ಜನರ ಜೀವನಾಡಿ ಕಾವೇರಿ ನೀರನ್ನು ರಾಜ್ಯದಲ್ಲಿ ತೀವ್ರ ಬರಗಾಲದ ಮಧ್ಯೆ ತಮಿಳು ನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಶುಕ್ರವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್ ಗೆ ಬೆಳಗ್ಗೆಯಿಂದಲೇ ಪ್ರತಿಕ್ರಿಯೆ ಕಂಡುಬಂತು. ರಾಜಧಾನಿ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು ನಗರದ ಸೂಕ್ಷ್ಮ ಮತ್ತು ಪ್ರಮುಖ ಪ್ರದೇಶಗಳಲ್ಲಿ ಕಾವಲಿಗೆ ಇಳಿದಿದ್ದಾರೆ. ಬೆಂಗಳೂರಿನ ವಾಣಿಜ್ಯ, ವ್ಯಾಪಾರ ಚಟುವಟಿಕೆಗಳ ಕೇಂದ್ರ ಭಾಗವಾಗಿರುವ ಕೆಆರ್ ಮಾರುಕಟ್ಟೆಯಲ್ಲಿ ವಿವಿಧ ಸಂಘಟನೆಗಳು ವಿಭಿನ್ನ […]

ಮಕ್ಕಳನ್ನು ಹಾಸ್ಟೆಲ್ ಗೆ ಕಳುಹಿಸಿದರೆ, ಅವರು ತಂದೆತಾಯಿಯನ್ನು ವೃದ್ದಾಶ್ರಮಕ್ಕೆ ಕಳುಹಿಸುತ್ತಾರೆ: ಬಸವರಾಜ ಹೊರಟ್ಟಿ

Thursday, September 28th, 2023
basavaraja-horatti

ಹುಬ್ಬಳ್ಳಿ: ಜನರ ಮನಸ್ಸಿನಲ್ಲಿ ಸ್ವಾರ್ಥ ಹೆಚ್ಚುತ್ತಿದ್ದು, ಸಾಮಾಜಿಕ ಕಳಕಳಿ ಕುಸಿಯುತ್ತಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕೆಂಬ ಮನಸ್ಸುಗಳು ಹೆಚ್ಚಬೇಕಾಗಿದೆ ಎಂದು ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು. ಇಲ್ಲಿನ ಶ್ರೀನಿವಾಸ ಗಾರ್ಡನ್ನಲ್ಲಿ ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಟ್ರಸ್ಟ್ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಹಾಗೂ ಸಾಮಾನ್ಯರ ಅಸಾಮಾನ್ಯ ಅವ್ವ ಗ್ರಂಥ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಕಳಕಳಿ ಕುಸಿಯುತ್ತಿರುವ ಇಂದಿನ ದಿನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಮ್ಮ ತಾಯಿ ಹೆಸರಿನ ಟ್ರಸ್ಟ್ […]

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Tuesday, September 26th, 2023
ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಮೈಸೂರು : ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅಸಮಾನತೆ, ಜಾತಿ ತಾರತಮ್ಯ ಇರುವ ಸಮಾಜದಲ್ಲಿ ಅಶಕ್ತರಿಗೂ ನ್ಯಾಯ ಸಿಗುವಂತಾಗಬೇಕು. ಕೇವಲ ಬಲಾಡ್ಯರಿಗೆ ಮಾತ್ರ ನ್ಯಾಯ ಸಿಗುವಂತಾದರೆ ಇಷ್ಟೆಲ್ಲಾ ತರಬೇತಿ ಪಡೆದು ಪ್ರಯೋಜನ […]

ಮಂಗಳೂರು ಕಲ್ಲಿದ್ದಲು ಲಾರಿ ಮುಷ್ಕರ : ಲಾರಿ ಮಾಲಕರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ ದಿನೇಶ್ ಗುಂಡೂರಾವ್

Sunday, September 24th, 2023
ಮಂಗಳೂರು ಕಲ್ಲಿದ್ದಲು ಲಾರಿ ಮುಷ್ಕರ : ಲಾರಿ ಮಾಲಕರ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ನವಮಂಗಳೂರು ಕೋಲ್ ಟರ್ಮಿನಲ್ (JSW) ದಿಂದ ದಿನಂಪ್ರತಿ ಸಾವಿರಾರು ‌ಮೆಟ್ರಿಕ್ ಟನ್ ಕಲ್ಲಿದ್ದಲು ಸಾಗಾಟ ಮಾಡಲಾಗುತ್ತಿದ್ದು ಲಾರಿ ಮಾಲಕರಿಗೆ ಸರಕಾರ ನಿಗದಿ ಪಡಿಸಿದ ಕನಿಷ್ಟ ಬಾಡಿಗೆ ದರವನ್ನು ನೀಡುತ್ತಿಲ್ಲ, ಇದರಿಂದಾಗಿ ಲಾರಿ ಮಾಲಕರು ಸಂಕಷ್ಟದಲ್ಲಿದ್ದು ಈ ಬಗ್ಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರು ಡಾಲರ್ಸ್ ಕಾಲನಿಯಲ್ಲಿರುವ ಸಚಿವರ ನಿವಾಸದಲ್ಲಿ ಭೇಟಿಯಾದ ಮಂಗಳೂರು ಲಾರಿ ಯೂನಿಯನ್ ಪದಾಧಿಕಾರಿಗಳು ಈ ಬಗ್ಗೆ ಸೆ.25 ಸೋಮವಾರದಿಂದ ಲಾರಿ ಮಾಲಕರು ಸ್ವಯಂಪ್ರೇರಿತರಾಗಿ […]

ರಾಜ್ಯದ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಕಾರ್ಯ ಮಾಡುತ್ತಿದ್ದ ವ್ಯಕ್ತಿ ಅನಂತಕುಮಾರ್: ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್

Sunday, September 24th, 2023
Ananth-KUmar

ಬೆಂಗಳೂರು : ರಾಜ್ಯದ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಕಾರ್ಯ ನಿರ್ವಹಿಸುತ್ತಿದ್ದ ನಾಯಕ ಅನಂತಕುಮಾರ್. ರಾತ್ರಿ ಹಗಲೆನ್ನದೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ವ್ಯಕ್ತಿಯನ್ನು ರಾಜ್ಯ ಕಳೆದುಕೊಂಡಂತೆ ಆಗಿದೆ ಎಂದು ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಇಂದು ನಗರದ ಧೊಂಡುಸಾ ಸಭಾಂಗಣದಲ್ಲಿ ಆಯೋಜಿಸಿದ್ದ ಅನಂತ ನಮನ 64 – ಅನಂತಕುಮಾರ್ ಅವರ 64 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಹಸಿರು ಭಾನುವಾರ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಬಹಳ ಸಂತೋಷದಿಂದ ಭಾಗಿಯಾಗಿದ್ದನೆ. […]

ಸಮಾಜಕ್ಕಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಅಜರಾಮರರಾಗಿ ಉಳಿಯುತ್ತಾರೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Friday, September 15th, 2023
Laxmi-Hebbalkar

ಬೆಳಗಾವಿ: ಸ್ವಾರ್ಥಕ್ಕಾಗಿ, ಸ್ವಹಿತಕ್ಕಾಗಿ ಕೆಲಸ ಮಾಡಿದವರನ್ನು ಸಮಾಜ ಬಹುಬೇಗ ಮರೆಯುತ್ತದೆ. ಸಮಾಜಕ್ಕಾಗಿ, ಪ್ರಜೆಗಳ ಒಳಿತಿಗಾಗಿ ಕೆಲಸ ಮಾಡಿದವರು ಇತಿಹಾಸದಲ್ಲಿ ಅಜರಾಮರರಾಗಿ ಉಳಿಯುತ್ತಾರೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಸಂಜೆ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಅಸೋಸಿಯೇಶನ್ ಆಯೋಜಿಸಿದ್ದ ಎಂಜಿನಿಯರ್ಸ್ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶ್ರಮ ಜೀವಿಗಳಿಗೆ ಸಾಧಿಸುವ ಛಲ ಇರುತ್ತದೆ. ಚಂದ್ರಯಾನ ಯಶಸ್ವಿ ಮಾಡುವಲ್ಲಿ ಶೇ.30ಕ್ಕಿಂತ ಹೆಚ್ಚು ಮಹಿಳೆಯರ, ಅದರಲ್ಲೂ ಗ್ರಾಮೀಣ […]

ಮಹಾಪ್ರಸಾದ ಸೇವೆಗೆ ಚಾಲನೆ ನೀಡಿ ಸ್ವತಃ ಉಣಬಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳಕರ

Monday, September 11th, 2023
laxmi Hebbalkar

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಭೇಟಿ ನೀಡಿ ದರ್ಶನ ಆಶೀರ್ವಾದ ಪಡೆದರು. ಶ್ರಾವಣದ ಕೊನೆಯ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದ ಅವರು, ಸ್ವತಃ ಭಕ್ತಾದಿಗಳಿಗೆ ಪ್ರಸಾದವನ್ನು ಉಣಬಡಿಸಿದರು. ಗ್ರಾಮದ ಹಿರಿಯರು, ಯುವರಾಜ ಕದಂ, ಶಂಕರಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಕೋಲಕಾರ, ಉಮೇಶರಾವ್ ಜಾಧವ್, ಅಪ್ಸರ್ ಜಮಾದಾರ, […]

ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Sunday, September 10th, 2023
ssf

ಬೆಂಗಳೂರು : ದೇಶದ ಐಕ್ಯತೆ, ಸಂವಿಧಾನ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ಎಸ್ ಎಸ್ ಎಫ್ ಕೆಲಸ ಮಾಡಬೇಕು. ಇದಕ್ಕಾಗಿ ತಮ್ಮ ಶಕ್ತಿ, ಸಂಘಟನೆಯನ್ನು ಮುಡಿಪಾಗಿ ಇಟ್ಟು ಅಭಿವೃದ್ಧಿ ದಿಕ್ಕಿನಲ್ಲಿ ದೇಶವನ್ನು ವೇಗವಾಗಿ ಮುನ್ನಡೆಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅರಮನೆ ಮೈದಾನದಲ್ಲಿ ನಡೆದ ಸುನ್ನಿ ಸ್ಟೂಡೆಂಟ್ ಫೆಡರೇಷನ್ (SSF) ಗೋಲ್ಡನ್ 50 ಸಮಾವೇಷದಲ್ಲಿ ಮಾತನಾಡಿದರು. ಸಾಮರಸ್ಯ ಭಾರತದ ಮಣ್ಣಿನ ಗುಣ. 50 ವರ್ಷಗಳಿಂದ ದೇಶದ ಸೌಹಾರ್ದ ಮತ್ತು ಸಾಮರಸ್ಯದ ಸಂಸ್ಕೃತಿ […]

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

Monday, March 28th, 2022
Anushree

ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ. ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ. ಅನುಶ್ರೀ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅನುಶ್ರೀ ತಾಲೂಕಿನ ವಿದ್ಯೋದಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪಾವಗಡ ಖಾಸಗಿ ಬಸ್ಸ್ ದುರಂತದಲ್ಲಿ ಮೃತರ ಸಂಖ್ಯೆ ಏರಿಕೆ

Saturday, March 19th, 2022
Pavgad-Bus-Accident

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದ ಬಳಿ  ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ಎಂಟು ಮೃತಪಟ್ಟು ಮೂವತ್ತೈದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆ 30ಕ್ಕೂ ಅಧಿಕ ಮಂದಿ ಬಸ್ಸಿನ ಮೇಲೆ ಕುಳಿತು ಸಾಗುತ್ತಿದ್ದರು. ಬೆಳಗ್ಗೆ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು, ಆಫೀಸಿಗೆ ಜನರು ಹೋಗುವ ಹೊತ್ತು. ಈ ದಾರಿಯಲ್ಲಿ ಸಂಚಾರಕ್ಕೆ ಬೇರೆ ಸಾರಿಗೆ ಸೌಕರ್ಯಗಳಿಲ್ಲದ ಕಾರಣ ಸಿಕ್ಕಿದ್ದ ಎಸ್ ವಿಟಿ ಬಸ್ಸಿನಲ್ಲಿ ಸಾಧ್ಯವಾದಷ್ಟು ಜನ ಹತ್ತಿದ್ದರು, […]