ಶೂಟಿಂಗ್ ವೇಳೆ ಗಾಯಗೊಂಡ ಬಾಲಿವುಡ್ ಸೂಪರ್‌ಸ್ಟಾರ್ ಶಾರೂಕ್

Thursday, January 23rd, 2014
shahrukh-khan

ಮುಂಬೈ:ಬಾಲಿವುಡ್ ಸೂಪರ್‌ಸ್ಟಾರ್ ಶಾರುಕ್ ಖಾನ್ ಚಲನಚಿತ್ರವೊಂದರ ಚಿತ್ರೀಕರಣ ಸಂದರ್ಭದಲ್ಲಿ ಗಾಯಗೊಂಡ ಘಟನೆ ನಡೆದಿದೆ. ತಮ್ಮ ಮುಂಬರುವ ಚಿತ್ರ ‘ಹ್ಯಾಪಿ ನ್ಯೂ ಇಯರ್‌’ನಲ್ಲಿ ಖಾನ್ ಬ್ಯುಸಿಯಾಗಿದ್ದಾಗ ಗಾಯಗೊಂಡಿದ್ದು ಅವರನ್ನು ನಾನಾವತಿ ಆಸ್ಪತ್ರೆಗೆ ಒಯ್ಯಲಾಯಿತು. ಮುಂಬೈನ ಜುಹು ಪ್ರದೇಶದಲ್ಲಿ ಶೂಟಿಂಗ್ ನಡೆಸುತ್ತಿದ್ದಾಗ ಶಾರೂಕ್ ಮೈಮೇಲೆ ಬಾಗಿಲು ಉರುಳಿಬಿದ್ದಿದ್ದರಿಂದ ಕೈ, ಹಾಗು ಮುಖಕ್ಕೆ ಗಾಯವಾಗಿ ರಕ್ತ ಹರಿಯಲಾರಂಭಿಸಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಮುಂಬೈನ ಪಂಚತಾರಾ ಹೊಟೆಲ್‌ನಲ್ಲಿ ಶೂಟಿಂಗ್ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಹ್ಯಾಪಿ ನ್ಯೂ ಇಯರ್ ಚಿತ್ರದಲ್ಲಿ ದೀಪಿಕಾ […]

ಬೆಂಗಳೂರಿನಲ್ಲಿ ಅತೀ ದೊಡ್ಡ ರಾಷ್ಟ್ರಧ್ವಜ ಉದ್ಘಾಟನೆ

Thursday, January 23rd, 2014
National-Flag

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಅತೀ ದೊಡ್ಡ ರಾಷ್ಟ್ರಧ್ವಜ ಉದ್ಘಾಟನೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಸ್ಟೀಲ್ ನಿಂದ ನಿರ್ಮಿತವಾದ 210 ಅಡಿಗಳ ಎತ್ತರದ ಅತೀ ದೊಡ್ಡ ದ್ವಜ ಸ್ತಂಭ. ಆ ಧ್ವಜ ಸ್ತಂಭದಲ್ಲಿ 48 ಅಡಿ ಉದ್ದ, 72 ಅಡಿ ಅಗಲದ, 35 ಕೆಜಿ ತೂಕದ ರಾಷ್ಟ್ರಧ್ವಜವನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇಂದು ಉದ್ಘಾಟನೆ ಮಾಡಿದರು. ರಾಷ್ಟ್ರೀಯ ಸೇನಾ ಸ್ಮಾರಕದಲ್ಲಿ ಬಹುದೊಡ್ಡ ರಾಷ್ಟ್ರಧ್ವಜ ರಾರಾಜಿಸಿದೆ. ಈ ಸಮಾರಂಭದಲ್ಲಿ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಹಾಜರಿದ್ದು,ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. […]

ಪಾತರಗಿತ್ತಿ ಪಕ್ಕ ಖ್ಯಾತಿ ಗಾಯಕ ಯಶವಂತ ಹಳಿಬಂಡಿ ವಿಧಿವಶ

Thursday, January 23rd, 2014
Yashwath-Halibandi

ಬೆಂಗಳೂರು : ‘ವರಕವಿ ಬೇಂದ್ರೆಯವರ ‘ಪಾತರಗಿತ್ತಿ ಪಕ್ಕ ನೋಡಿದ್ದೇನ ಅಕ್ಕ..’ ಹಾಡಿನ ಮೂಲಕ ಖ್ಯಾತಿ ಪಡೆದಿದ್ದ ಸುಗುಮ ಸಂಗೀತ ಕ್ಷೇತ್ರದ ಗಾಯಕ ಯಶವಂತ ಹಳಿಬಂಡಿ ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಶವಂತ ಹಳಿಬಂಡಿ ಅವರ ಪಾರ್ಥೀವ ಶರೀರವನ್ನು ಬ್ಯಾಂಕ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ. ಧಾರಾವಾಡದಲ್ಲಿ 1950, ಮೇ 25ರಂದು ಜನಿಸಿದ ಯಶವಂತ ಹಳಿಬಂಡಿ ಅವರು ಸುಗಮ ಸಂಗೀತ ಕ್ಷೇತ್ರದಲ್ಲಿ […]

ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ವಿಧಿವಶ

Tuesday, December 10th, 2013
Srikantadatta Narasimharaja Wodeyar

ಬೆಂಗಳೂರು : ಮೈಸೂರು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಅವರು ಮಂಗಳವಾರ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಒಂದು ವಾರದ ಹಿಂದೆ ಎದೆನೋವಿನ ಕಾರಣ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಮಹಾರಾಜರನ್ನು ಕರೆ ತರಲಾಗಿತ್ತು. ಆಸ್ಪತ್ರೆಗೆ ಬರುವಷ್ಟರಲ್ಲೇ ಒಡೆಯರ್ ಅವರು ವಿಧಿವಶರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿರುವ ತುರ್ತು ನಿಗಾ ಘಟಕದಲ್ಲಿ ಒಡೆಯರ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಒಡೆಯರ್ […]

ಗೊಮ್ಮಟೇಶ್ವರ ಮೂರ್ತಿಗೆ 64ನೇ ಮಸ್ತಕಾಭಿಷೇಕ

Monday, October 21st, 2013
gommateshwara

ಮೈಸೂರು : ಹುಣಸೂರು ತಾಲ್ಲೂಕಿನ ಗೊಮ್ಮಟಗಿರಿ ಕ್ಷೇತ್ರದ ಗೊಮ್ಮಟೇಶ್ವರ ಮೂರ್ತಿಗೆ ಭಾನುವಾರ 64ನೇ ಮಸ್ತಕಾಭಿಷೇಕ ನೆರವೇರಿತು. ಅರಬ್ಬಿತಿಟ್ಟು ಅರಣ್ಯಕ್ಕೆ ಹೊಂದಿಕೊಂಡಿರುವ ಬೆಟ್ಟದೂರು ಸಮೀಪ ವಿರಾಜಮಾನವಾಗಿರುವ ಬಾಹುಬಲಿಯನ್ನು ಭಕ್ತಿಯಿಂದ ಪೂಜಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. 200 ಅಡಿ ಎತ್ತರದ ಬೆಟ್ಟದ ಮೇಲೆ ಪ್ರತಿಷ್ಠಾಪಿಸಲಾಗಿರುವ 16 ಅಡಿಯ ಮೂರ್ತಿಗೆ ಬೆಳಿಗ್ಗೆ 9.30ರಿಂದ 11.30ರವರೆಗೆ 108 ಕಳಶಾಭಿಷೇಕ ನೆರವೇರಿತು. ಮಧ್ಯಾಹ್ನ 12.30ರಿಂದ ಆರಂಭವಾದ ಮಸ್ತಕಾಭಿಷೇಕ 40 ನಿಮಿಷಗಳ ಕಾಲ […]

ಅಕ್ಕಿಪೇಟೆಯ ಜೈನ ದೇಗುಲದಲ್ಲಿ 25 ಲಕ್ಷ ಲೂಟಿ

Monday, October 21st, 2013
jain

ಬೆಂಗಳೂರು : ನಗರದ ಜೈನ ದೇವಾಲಯವೊಂದರಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಧ್ವಂಸಗೊಳಿಸಿ, ಭದ್ರತಾ ಸಿಬ್ಬಂದಿ ಪ್ರಜ್ಞೆ ತಪ್ಪಿಸಿ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಹುಂಡಿ ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಅಕ್ಕಿಪೇಟೆಯ ಜೈನ ದೇವಾಲಯಕ್ಕೆ ನುಗ್ಗಿದ ದುಷ್ಕರ್ಮಿಗಳು, ಅಲ್ಲಿದ್ದ ಏಳು ಸಿಸಿಟಿವಿ ಕ್ಯಾಮರಾಗಳನ್ನು ಧ್ವಂಸಗೊಳಿಸಿದ್ದಾರೆ . ಐವರು ಭದ್ರತಾ ಸಿಬ್ಬಂದಿ ಪ್ರಜ್ಞೆ ತಪ್ಪಿಸಿ, ಚಿನ್ನಾಭರಣ ಮತ್ತು ಹಣ ದೋಚಿದ್ದಾರೆ. ದೇವಾಲಯಕ್ಕೆ ನುಗ್ಗಿದ ಕಳ್ಳರ ಗುಂಪು, ಭದ್ರತಾ ಸಿಬ್ಬಂದಿ ಮುಖಕ್ಕೆ ಕ್ಲೋರೋಫಾರ್ಮ್ ಹಿಡಿದು ಪ್ರಜ್ಞೆ ತಪ್ಪಿಸಿದ್ದಾರೆ. […]

ಬಿಬಿಎಂಪಿಯ ನೂತನ ಮೇಯರ್ ಆಗಿ ಕಟ್ಟೆ ಸತ್ಯನಾರಾಯಣ, ಉಪ ಮೇಯರ್ ಆಗಿ ಇಂದಿರಾ ಅವಿರೋಧ ಆಯ್ಕೆ

Wednesday, September 4th, 2013
satyanarayan

ಬೆಂಗಳೂರು:  ಬಿಬಿಎಂಪಿಯ ನೂತನ ಮೇಯರ್ ಆಗಿ ಬಸವನಗುಡಿ ವಾರ್ಡ್ ಸದಸ್ಯ ಕಟ್ಟೆ ಸತ್ಯನಾರಾಯಣ, ಉಪಮೇಯರ್ ಆಗಿ  ಬ್ಯಾಟರಾಯನಪುರ ವಾರ್ಡ್ ನ  ಎನ್. ಇಂದಿರಾ ಅವಿರೋಧವಾಗಿ  ಬುಧವಾರ ನಡೆದ ಚುನಾವಣೆಯಲ್ಲಿ  ಆಯ್ಕೆಯಾಗಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಸ್ಥಾನಗಳನ್ನು ಹಂಚಿಕೊಂಡವು. ಬಿಬಿಎಂಪಿಯಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಬಸವನಗುಡಿ ವಾರ್ಡ್ ಸದಸ್ಯ ಕಟ್ಟೆ ಸತ್ಯನಾರಾಯಣ್ ಅವರ ಹೆಸರನ್ನು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಘೋಷಿಸಿದರು. ಬೇರೆ  ಅಭ್ಯರ್ಥಿಗಳು ಸ್ಪರ್ಧಿಸದ ಕಾರಣ ಅವರು ಮೇಯರ್ […]

ಲೋಕಸಭೆ ಉಪ ಚುನಾವಣೆ ಶಾಸಕಿ ಅನಿತಾ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ.

Saturday, August 3rd, 2013
Anitha-Kumaraswami

ಬೆಂಗಳೂರು: ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಲೋಕಸಭೆ ಉಪ ಚುನಾವಣೆಗೆ ಶನಿವಾರ ನಾಮಪತ್ರ ಸಲ್ಲಿಸಿದರು. ತನ್ನ ಪತಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಅವರು ತಮ್ಮಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾ ಅವರು ಉಪಸ್ಥಿತರಿದ್ದರು. ಇಲ್ಲಿ  ಕಾಂಗ್ರೆಸ್‌ನಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರು ಸ್ಪರ್ಧಿಸುತ್ತಿದ್ದು, ಇಬ್ಬರ ನಡುವೆ ನೇರ ಹಣಾಹಣಿ ಏರ್ಪಡಲಿದೆ. […]

ಸದನದಲ್ಲಿ ಸಿದ್ದುವಿಗೆ ಕುಮಾರಸ್ವಾಮಿ ವ್ಯಂಗ್ಯ : ಸಿದ್ದು ಉತ್ತರ

Tuesday, July 30th, 2013
Assembly Siddu Kumara

ಬೆಂಗಳೂರು :  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ಮಧ್ಯೆ ಮಂಗಳವಾರ ಸದನದಲ್ಲಿ ಭಾರಿ ಜಟಾಪಟಿ ನಡೆಯಿತು. ಇದರಿಂದ  ಸದನದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು. ಸದನದಲ್ಲಿ  ಕುಮಾರಸ್ವಾಮಿ, ಹಿಂದುಳಿದ ವರ್ಗದವರನ್ನು ಉಪ ಮುಖ್ಯಮಂತ್ರಿ ಮಾಡಿದ್ದು ದೇವೇಗೌಡರು. ಆದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಲು ಆಗಲಿಲ್ಲ ಎಂದು ಚೇಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದು, ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು, ನೀವೇ ಎಂದರು. ಇದರಿಂದ ಆಕ್ರೋಶಗೊಂಡ ಎಚ್‌ಡಿಕೆ, ಹೌದು ಮುಖ್ಯಮಂತ್ರಿ ಹುದ್ದೆ ತಪ್ಪಿಸಿದ್ದು […]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2013ನೇ ಸಾಲಿನ ಚೊಚ್ಚಲ ಬಜೆಟ್ ಮಂಡನೆ

Friday, July 12th, 2013
Siddu Budget

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಮಧ್ಯಾಹ್ನ 12.30ಕ್ಕೆ ತಮ್ಮ ಚೊಚ್ಚಲ ಹಾಗೂ 2013ನೇ ಸಾಲಿನ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು, ಜನರ ಅವಶ್ಯಕತೆಗಳನ್ನು ಈಡೇರಿಸುವುದು ತಮ್ಮ ಕರ್ತವ್ಯ ಎಂದು ಹೇಳಿದರು. ರಾಜ್ಯದ ಜನರ ನೀರಿಕ್ಷೆಗಳು ಹೆಚ್ಚು ಇಲ್ಲ. ಆದರೆ ಹಿಂದಿನ ಸರ್ಕಾರ ಜನರ ನಿರೀಕ್ಷೆಯನ್ನು ಹುಸಿ ಮಾಡಿದೆ. ಜನತೆಗೆ ಉತ್ತಮ ನೀರು, ಊಟ, ಮನೆ, ಮಾರುಕಟ್ಟೆ, ವಿದ್ಯುತ್ ಮತ್ತು ಉತ್ತಮ ರಸ್ತೆ ಒದಗಿಸುವುದು ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ […]