ಮೈಸೂರು ದಸರಾಕ್ಕೆ ಆನೆಕಾಡಿನಿಂದ ಹೋರಾಟ ಆನೆಗಳು.

Wednesday, September 14th, 2011
Elephents Starts Travels to Mysore Dasara

ಮಡಿಕೇರಿ : ಇಲ್ಲಿನ ದುಬಾರೆಯ ಸಾಕಾನೆ ಶಿಬಿರದಲ್ಲಿದ್ದ ನಾಲ್ಕು ಆನೆಗಳಾದ ವಿಕ್ರಮ್‌, ಹರ್ಷ ಗೋಪಿ, ಕಾವೇರಿ ಆನೆಗಳು ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು 2ನೇ ಹಂತದ ಪ್ರಯಾಣ ಬೆಳೆಸಿದೆ. ದುಬಾರೆಯ ಆನೆಕಾಡಿನ ಈ ಸಾಕಾನೆಗಳನ್ನು ಬುಧವಾರ ಬೆಳಗ್ಗೆ ಶಿಬಿರದಲ್ಲಿ ನಡೆದ ವಿಶೇಷ ಪೂಜೆಗೆ ತೊಳೆದು – ಸ್ನಾನ ಮಾಡಿಸಿ, ಹಣೆ ಹಾಗೂ ಕಾಲುಗಳಿಗೆ ಹರಳೆಣ್ಣೆ ಲೇಪನ ಮಾಡಿ ಆನೆಗಳ ಮುಖ ಹಾಗೂ ದೇಹಗಳ ಮೇಲೆ ಚಿತ್ತಾರದ ಚಿತ್ರಗಳನ್ನು ಬಿಡಿಸಿ ವಿಶೇಷವಾಗಿ ಅಲಂಕರಿಸಿ ಪೂಜಿಸಿ ಬೀಳ್ಕೊಡಲಾಯಿತು. ವಿಕ್ರಮ್‌ ಆನೆಯ […]

ದರ್ಶನ್ ಕುಡಿದು ಬಂದು ಹಲ್ಲೆ ಮಾಡಿದರಲ್ಲದೆ, ಮಗುವಿನ ಮೇಲೆ ಸಂಶಯ ಪಟ್ಟರು

Saturday, September 10th, 2011
Darshan-Vijayalakshmi

ಬೆಂಗಳೂರು: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಪರಪ್ಪನ ಅಗ್ರಹಾರದ ಕೈದಿಯಾಗಿದ್ದಾರೆ. ಈ ಪ್ರಕರಣ ದರ್ಶನ್ ಸಿನಿಮಾ ಲೈಫಿಗೆ ಮಾರಕ ಆಗಲಿದೆಯೇ ಎಂಬ ಸಂದೇಹ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಕನ್ನಡ ಚಿತ್ರರಂಗದ ಮಾಸ್ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ದರ್ಶನ್ ಅವರಿಗೆ ಹಲವಾರು ಹಿಟ್ ಚಿತ್ರಗಳನ್ನು ಕೊಟ್ಟಿದ್ದರು. ಅವರಿಂದಲೇ ನಟಿ ನಿಖಿತಾ ಪರಿಯಚಯವಾಗಿದ್ದು ಎಂದು ಗಾಂಧೀ ನಗರದ ಜನ ಹೇಳುತ್ತಿದ್ದಾರೆ. ಇಷ್ಟು ದಿನ ಬೆಳ್ಳಿ ತೆರೆಯ […]

ಮಗನಿಗೆ ಬಾಯಿಮುಚ್ಚಿ ಕುಳಿತು ಕೊಳ್ಳಲು ಆದೇಶ ನೀಡಿದ : ದೇವೇಗೌಡ

Friday, September 2nd, 2011
Devegowda/ಎಚ್.ಡಿ.ದೇವೇಗೌಡ

ಬೆಂಗಳೂರು : ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಅವರನ್ನು ಟೀಕಿಸುವ ಮೂಲಕ ಸಾರ್ವಜನಿಕವಾಗಿ ಮುಜುಗರಕ್ಕೆ ಗುರಿಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಇನ್ನು ಮುಂದಾದರೂ ಬಾಯಿ ಬಿಡದಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಪಕ್ಷದ ನಾಯಕರು ತಾಕೀತು ಮಾಡಿದ್ದಾರೆ. ಲೋಕಾಯುಕ್ತ ವರದಿಯ ಕುರಿತು ನ್ಯಾಯಾಲಯದಲ್ಲಿಯೇ ಹೋರಾಟ ಮಾಡಬೇಕಾದ ಸಂದರ್ಭದಲ್ಲಿ ಆ ವರದಿಯನ್ನೇ ಸಂಶಯ ಪಡುವ ರೀತಿಯಲ್ಲಿ ಹೆಗ್ಡೆ ಅವರ ಬಗ್ಗೆ ಹೇಳಿಕೆ ನೀಡಬಾರದಿತ್ತು. ಒಮ್ಮೆ ದೇವೇಗೌಡರು ಕ್ಷಮೆಯಾಚಿಸಿದ ನಂತರ ಮತ್ತೊಮ್ಮೆ ಟೀಕೆ ಮಾಡುವಂತಹ ಅಗತ್ಯವಿರಲಿಲ್ಲ ಎಂದು ಸ್ವತಃ ದೇವೇಗೌಡ, […]

ಕನ್ನಡ ಭಾಷೆಯ ಅಳಿವು-ಉಳಿವು ನಮ್ಮ ಕೈಯಲ್ಲಿದೆ : ನಾಗತಿಹಳ್ಳಿ

Sunday, August 7th, 2011
Mumbai Kannada Sammelana/ಅಖೀಲ ಭಾರತ ಕನ್ನಡ ಸಂಸ್ಕೃತಿ ಸಮ್ಮೇಳನ

ಮುಂಬಯಿ: ಮುಂಬಯಿ ಕನ್ನಡ ಸಂಘ ಹಾಗೂ ಹೃದಯವಾಹಿನಿ ಕನ್ನಡ ಪತ್ರಿಕೆ ಮಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ಆ. 6 ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದ ವಿ. ಕೃ. ಗೋಕಾಕ್‌ ವೇದಿಕೆಯಲ್ಲಿ ಆಯೋಜಿಸಲಾಗಿದ್ದ 2011 ನೇ ಸಾಲಿನ 8 ನೇ ಅಖೀಲ ಭಾರತ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಶನಿವಾರ ಖ್ಯಾತ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಸಮ್ಮೇಳನಾಧ್ಯಕ್ಷರೂ ಆಗಿದ್ದ ನಾಗತಿಹಳ್ಳಿ ಚಂದ್ರಶೇಖರ್‌ ಮಾತನಾಡಿ ಎರಡು ಸಾವಿರಕ್ಕೂ ಅಧಿಕ ಕಾಲದ ಇತಿಹಾಸವನ್ನು […]

26ನೇ ಮುಖ್ಯಮಂತ್ರಿಯಾಗಿ ಡಿ.ವಿ ಸದಾನಂದ ಗೌಡ ಪ್ರಮಾಣವಚನ

Thursday, August 4th, 2011
Sadananda Gowda sworn in/ ಸದಾನಂದ ಗೌಡ ಪ್ರಮಾಣ ವಚನ

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಬಣದ ದೇವರಗುಂಡ ವೆಂಕಪ್ಪಗೌಡ ಸದಾನಂದ ಗೌಡ ರಾಜ್ಯದ 26ನೇ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸುಬ್ರಮಣ್ಯನಗರದ ತಮ್ಮ ನಿವಾಸದಿಂದ ರಾಜಭವನಕ್ಕೆ ಬೆಂಬಲಿಗರೊಂದಿಗೆ ಕ್ರೀಂ ಕಲರ್ ಪ್ಯಾಂಟ್, ಬಿಳಿ ಬಣ್ಣದ ಅಂಗಿ, ಬ್ಲ್ಯಾಕ್ ಕಲರ್ ಶೂ ಧರಿಸಿ ಆಗಮಿಸಿದರು. ನಂತರ ಬಿ.ಎಸ್.ಯಡಿಯೂರಪ್ಪನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಪಕ್ಷದ ಹಿರಿಯ ಮುಖಂಡರು, ಆಪ್ತರಿಗೆ ಕೈಕುಲುಕುವ ಮೂಲಕ ಅಭಿನಂದನೆ ಸ್ವೀಕರಿಸಿದರು. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಪ್ರತಿಜ್ಞಾವಿಧಿ ಬೋಧಿಸಿದರು. ರಾಗ, ದ್ವೇಷ ಇಲ್ಲದೆ, […]

ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾಗಲು ಸುಬ್ರಹ್ಮಣ್ಯದಲ್ಲಿ ಉರುಳುಸೇವೆ

Wednesday, August 3rd, 2011
DV Sadananda Gowda/ಡಿ.ವಿ. ಸದಾನಂದ ಗೌಡ

ಸುಬ್ರಹ್ಮಣ್ಯ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ಸುಳ್ಯ ತಾಲೂಕಿನ ದೇವರಗುಂಡ ವೆಂಕಪ್ಪ ಸದಾನಂದ ಅವರನ್ನು ಸೂಚಿಸಿರುವ ಬೆನ್ನಿಗೆ ಡಿ.ವಿ. ಸದಾನಂದ ಗೌಡ ಬೆಂಬಲಿಗರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉರುಳುಸೇವೆ ಸಲ್ಲಿಸಿದರು. ಡಿ.ವಿ.ಹೆಸರು ಮುಂಚೂಣಿಯಲ್ಲಿರುವುದರಿಂದ ಸಂತಸಗೊಂಡಿರುವ ಸುಬ್ರಹ್ಮಣ್ಯದ ನಾಗರಿಕರು ಪಕ್ಷಬೇಧ ಮರೆತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ, ದೇವಳದ ಹೊರಾಂಗಣದಲ್ಲಿ ಮಧ್ಯಾಹ್ನದ ವೇಳೆ ಉರುಳುಸೇವೆ ನಡೆಸಿದರು. ಸುಬ್ರಹ್ಮಣ್ಯದ ನಾಗರಿಕರು, ವಾಹನ ಮಾಲಕರು-ಚಾಲಕರು ಸೇರಿ ಕಾಶಿಕಟ್ಟೆಯಿಂದ ದೇವಳದ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ದರ್ಪಣತೀರ್ಥ ನದಿಯಲ್ಲಿ […]

‘ಸಂತೋಷ’ದಿಂದ ಹೋಗುತ್ತಿದ್ದೇನೆ. ಹುದ್ದೆ ಇಲ್ಲದಿದ್ದರೂ, ಪಕ್ಷದ ಅಭಿವೃದ್ಧಿಗೆ ನಿರಂತರ ದುಡಿಯುತ್ತೇನೆ: ಯಡಿಯೂರಪ್ಪ

Sunday, July 31st, 2011
CM Yeddyurappa Resigns/ಯಡಿಯೂರಪ್ಪ ರಾಜೀನಾಮೆ

ಬೆಂಗಳೂರು : ದಕ್ಷಿಣ ಭಾರತದ ಪ್ರಪ್ರಥಮ ಬಿಜೆಪಿ ಸರ್ಕಾರದ ಮುಖ್ಯ ಮಂತ್ರಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ಸಂಜೆ 3.30ರ ಸುಮಾರಿಗೆ ತಮ್ಮ ಅಸಂಖ್ಯ ಬೆಂಬಲಿಗರೊಂದಿಗೆ ಅಧಿಕೃತ ನಿವಾಸದಿಂದ ರೇಸ್ ಕೋರ್ಸ್ ರಸ್ತೆಯ ಮೂಲಕ ಹೊರಟು ರಾಜಭವನದಲ್ಲಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ತಮ್ಮ ಒಂದು ವಾಕ್ಯದ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಸಂವಿಧಾನದ ಕಲಂ 164(1)ರ ಅನ್ವಯ ಯಡಿಯೂರಪ್ಪ ಅವರ ರಾಜೀನಾಮೆಯನ್ನು ಸ್ವೀಕರಿಸಿ, ಅಂಗೀಕಾರ ಮುದ್ರೆ ಒತ್ತಿದ್ದಾರೆ. ಹೊಸ ನಾಯಕನ ಆಯ್ಕೆಯಾಗುವವರೆಗೂ […]

ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

Saturday, July 30th, 2011
BJP Yuva Morcha/ ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಸಂಘರ್ಷ ಆಂದೋಲನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಸಂಘ ನಿಕೇತನದಲ್ಲಿ ಶುಕ್ರವಾರ ಆಯೋಜಿಸಿದ ಯುವ ಸಂಘರ್ಷ ಆಂದೋಲನವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಪ್ರತಾಪಸಿಂಹ ನಾಯಕ್‌ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಬಿಜೆಪಿ ವಿವಿಧ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಮತ್ತೆಮತ್ತೆ ಎದ್ದುಬಂದಿದೆ, ಸರಕಾರವನ್ನು ಉರುಳಿಸಲು ರಾಜಕೀಯ ವಿರೋಧಿಗಳ ಪ್ರಯತ್ನ ನಿರಂತರ ನಡೆಯುತ್ತಿದೆ ಎಂದರು. ಕಾರ್ಯಕರ್ತರು ಇನ್ನಷ್ಟು ಪಕ್ಷದ ಬೆಳವಣಿಗೆಯಲ್ಲಿ ಶ್ರಮವಹಿಸುವುದು ಅತ್ಯಗತ್ಯ. ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಅಸ್ತಿತ್ವಕ್ಕೆ ಬಂದ ಬಿಜೆಪಿ ನೇತೃತ್ವದ ಸರಕಾರವನ್ನು […]

ಬಿಜೆಪಿಯ ದಕ್ಷಿಣ ಭಾರತದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಭಾನುವಾರ ಪದತ್ಯಾಗ

Friday, July 29th, 2011
cm Yeddyurappa/ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು : ಲೋಕಾಯುಕ್ತ ವರದಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಪ್ರಸ್ತಾಪವಾದ ಬಳಿಕ ಹುದ್ದೆ ತೊರೆಯುವಂತೆ ಹೈಕಮಾಂಡ್‌ನಿಂದ ಸೂಚನೆ ಬಂದ ಬಳಿಕ ಅವರು ಮೊದಲ ಬಾರಿ ಮೌನ ಮುರಿದು ಪಕ್ಷದ ನಿರ್ದೇಶನಕ್ಕೆ ಮಣಿದು ಭಾನುವಾರ (ಜು.31)ರಂದು ಪದತ್ಯಾಗ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಶೂನ್ಯದಿಂದ ಕಟ್ಟಿ ಬೆಳೆಸಿದ್ದೇನೆ ಮತ್ತು ಭವಿಷ್ಯದಲ್ಲಿ ಕೂಡ ಪಕ್ಷಕ್ಕಾಗಿ ದುಡಿಯಲು ಸಿದ್ಧ ಎಂದು ಹೇಳಿದ್ದಾರೆ. ತಾನು ಬಿಜೆಪಿಯ ಶಿಸ್ತಿನ ಸಿಪಾಯಿಯಾಗಿದ್ದು, ಆಷಾಢ ಮಾಸವು ಜು.30ರಂದು ಕೊನೆಗೊಳ್ಳುತ್ತದೆ. ಅದರ ಬಳಿಕ ಆ.31ರಂದು ರಾಜೀನಾಮೆ ನೀಡುವುದಾಗಿ […]

ಉಡುಪಿ ಜಿಲ್ಲೆಯ ಡಾ.ಹರೀಶ್ ಹಂದೆ ಸೇರಿದಂತೆ ಇಬ್ಬರು ಭಾರತೀಯರಿಗೆ ರಾಮನ್ ಮ್ಯಾಗ್ಸೇಸೆ ಪ್ರಶಸ್ತಿ

Thursday, July 28th, 2011
Harish-Hande-Neelima-Misra

ಬೆಂಗಳೂರು : ಪ್ರತಿಷ್ಠಿತ ರಾಮನ್ ಮ್ಯಾಗ್ಸೇಸೆ ಪ್ರಶಸ್ತಿ ಈ ಬಾರಿ ಇಬ್ಬರು ಭಾರತೀಯರಿಗೆ ಸಿಕ್ಕಿದೆ. ಉಡುಪಿ ಜಿಲ್ಲೆಯ ಡಾ.ಹರೀಶ್ ಹಂದೆ ಹಾಗೂ ಮಹಾರಾಷ್ಟ್ರದ ನೀಲಿಮಾ ಮಿಶ್ರಾ ಈ ಭಾರಿ ಪಡೆದ ಭಾರತೀಯರು. ಒಟ್ಟು ಆರು ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ. ಡಾ.ಹರೀಶ್ ಹಂದೆ ಮೂಲತ: ಉಡುಪಿ ಜಿಲ್ಲೆಯ ಕೋಟದ ಹಂದೆ ಕುಟುಂಬಕ್ಕೆ ಸೇರಿದವರು. ಸೌರ ವಿದ್ಯುತನ್ನು ಕರ್ನಾಟಕ ರಾಜ್ಯದ ಹಳ್ಳಿಹಳ್ಳಿಗೂ ಕೊಂಡೊಯ್ದು, ಸುಮಾರು ಒಂದು ಲಕ್ಷ ಬಡ ಕುಟುಂಬಗಳ ಗುಡಿಸಲುಗಳಲ್ಲಿ ಸೌರ ಶಕ್ತಿಯ ಮೂಲಕ ಬೆಳಕನ್ನು ನೀಡಿದ್ದಾರೆ. […]