ಮಳೆಗಾಲದ ರಜಾ-ಮಜಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾರಿಷಸ್‌ಗೆ

Tuesday, July 19th, 2011
yeddyurappa family/ಬಿ.ಎಸ್.ಯಡಿಯೂರಪ್ಪ ಕುಟುಂಬ

ಬೆಂಗಳೂರು : ಮಂಗಳವಾರ ಮುಂಜಾನೆ 5.55ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ಬಿ.ಎಸ್.ಯಡಿಯೂರಪ್ಪ ಕುಟುಂಬ ಸದಸ್ಯರ ಸಹಿತ ಮಾರಿಷಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಭೂಹಗರಣದ ವಿಚಾರಣೆ, ಅಕ್ರಮ ಗಣಿಯ ಅಂತಿಮ ವರದಿಯನ್ನು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸಲ್ಲಿಸಲು ದಿನಗಣನೆ ಆರಂಭವಾಗುತ್ತಿದ್ದ ಬೆನ್ನಲ್ಲೇ ಮುಖ್ಯಮಂತ್ರಿಗಳು ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಎಡೆ ಮಾಡಿದೆ. ರಾಜ್ಯದಲ್ಲಿ ಸಾಕಷ್ಟು ಪ್ರವಾಹ ಪರಿಸ್ಥಿತಿ, ಭೂ ಹಗರಣದ ವಿಚಾರಣೆ ನಡೆಯುತ್ತಿದ್ದರೂ ಕೂಡ ದಿಢೀರ್ ಅಂತ ಪುತ್ರ ರಾಘವೇಂದ್ರ, ಪುತ್ರಿ, ಮೊಮ್ಮಕ್ಕಳ ಜತೆ ಮಾರಿಷಸ್ ಪ್ರವಾಸ ಕೈಗೊಂಡಿದಕ್ಕೆ ಪ್ರತಿಪಕ್ಷಗಳು ಕಿಡಿಕಾರಿವೆ. […]

ಅಶ್ವಿನಿ ಅಕ್ಕುಂಜೆ ಉದ್ದೀಪನ ಮದ್ದು ಸೇವಿಸಿದ್ದು ನಿಜ: ಬಿ ರಿಪೋರ್ಟ್ ಪಾಸಿಟೀವ್

Monday, July 11th, 2011
Ashwini-Akkunji/ಅಶ್ವಿನಿ ಅಕ್ಕುಂಜೆ

ನವದೆಹಲಿ :  ಅಥ್ಲೀಟ್ ಆಟಗಾರ್ತಿ ಅಶ್ವಿನಿ ಅಕ್ಕುಂಜೆ  ಉದ್ದೀಪನ ಮದ್ದು ಸೇವಿಸಿರುವುದು ಬಿ ರಿಪೋರ್ಟ್ ನಿಂದ ಸಾಬೀತಾಗಿದೆ.  ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಕಿದ ಬಿ ರಿಪೋರ್ಟ್  ಪಾಸಿಟೀವ್ ಆಗಿದೆ. ಇದರಿಂದ ಅಶ್ವಿನಿಗೆ 2 ವರ್ಷ ನಿಷೇಧ ವಿಧಿಸುವ ಸಾಧ್ಯತೆ ಇದೆ. ಬಿ ರಿಪೋರ್ಟ್ ಫಲಿತಾಂಶದಿಂದ ಅಶ್ವಿನಿ ಉದ್ದೀಪನ ಮದ್ದು ಸೇವಿಸಿರುವುದು ಸಾಬೀತಾಗಿರುವುದರಿಂದ 2012ರ ಒಲಿಂಪಿಕ್ಸ್ ನಲ್ಲಿ ಅಶ್ವಿನಿ ಪಾಳ್ಗೊಳ್ಳುವುದು ದೂರದ ಮಾತಾಗಿದೆ. ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದ ಮತ್ತೊಬ್ಬ ಅಥ್ಲೀಟ್ ಪ್ರಿಯಾಂಕಾ ಪನ್ವಾರ್ ಕೂಡಾ 2 ವರ್ಷ  ಒಲಿಂಪಿಕ್ಸ್ ನಲ್ಲಿ […]

ಪಂಚ ದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಪ್ರತ್ಯೇಕ ರಾಜ್ಯ ಸಿಗಲಿ : ಹರಿಕೃಷ್ಣ ಪುನರೂರು

Wednesday, July 6th, 2011
Harikrishana punaroor/ಹರಿಕೃಷ್ಣ ಪುನರೂರು

ಮಂಗಳೂರು : ಪಂಚ ದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಮತ್ತು ತುಳುವರಿಗೆ ಅನ್ಯಾಯವಾಗಿದೆ. 1956ರಲ್ಲಿ ಭಾಷಾವಾರು ರಾಜ್ಯಗಳ ರಚನೆಯಾದಾಗ ನಮ್ಮ ನಾಯಕರು ತುಳು ರಾಜ್ಯದ ಬೇಡಿಕೆಯನ್ನು ಇರಿಸದೆ ತುಳುವರಿಗೆ ಅನ್ಯಾಯವೆಸಗಿದ್ದಾರೆ.ದೇಶದ ಉದ್ಧಾರದ ಹೆಸರಿನಿಂದ ಹೊಸ ಹೊಸ ಕೈಗಾರಿಕೆಗಳು ಬಂದು ತುಳುನಾಡು, ಸಂಸ್ಕೃತಿ ಇದರಿಂದಾಗಿ ನಾಶವಾಗುತ್ತಿದೆ. ತುಳುವರು ಅನಾಥರಾಗಿದ್ದಾರೆ ಈಗ ತೆಲುಗರು ಅವರ ರಾಜ್ಯ ವನ್ನು ಒಡೆದು ಪ್ರತ್ಯೇಕ ತೆಲುಂಗಾಣ ರಾಜ್ಯದ ಬೇಡಿಕೆಗೆ ಮುಂದಾಗಿದ್ದಾರೆ. ಈ ಸಮಯದಲ್ಲಿ ತೆಲಂಗಾಣ ರಾಜ್ಯವನ್ನು ರಚಿಸಲು ಕೇಂದ್ರ ಸರಕಾರ ಮುಂದೆ ಬಂದರೆ,ತುಳುವರು ನ್ಯಾಯ […]

ನಿವೇಶನ ಕೊಡುವುದಿರಲಿ, ಬಿಡಿಎಗೆ ನಿರ್ದೇಶನ ನೀಡಲು ಕೂಡ ಸರಕಾರಕ್ಕೆ ಅಧಿಕಾರವಿಲ್ಲ

Tuesday, April 5th, 2011
ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು  : ದೇಶಾಭಿಮಾನದಿಂದ ಭಾರತ ವಿಶ್ವಕಪ್ ಗೆದ್ದಾಗ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪನವರ ಉತ್ಸಾಹ ಮಿತಿಮೀರಿತ್ತು, ಅದೇ ಉತ್ಸಾಹದಲ್ಲಿ ಕ್ರಿಕೆಟ್ ಆಟಗಾರರರಿಗೆ 50×80 ಬಿಡಿಎ ನಿವೇಶನ ನೀಡುವುದಾಗಿ ಘೋಷಿಸಿಯೂಬಿಟ್ಟರು. ಇಂಥ ವಾಗ್ದಾನವನ್ನು ನೀಡಲು  ಮುಖ್ಯಮಂತ್ರಿಗಳಿಗೆ ಅಧಿಕಾರವೇ ಇಲ್ಲ. ಸರಕಾರ ನಿವೇಶನ ಕೊಡುವುದಿರಲಿ, ಬಿಡಿಎಗೆ ನಿರ್ದೇಶನ ನೀಡಲು ಕೂಡ ಸರಕಾರಕ್ಕೆ ಅಧಿಕಾರವಿಲ್ಲ. ಏಕೆಂದರೆ, ಬಿಡಿಎ ಒಂದು ಸ್ವಾಯತ್ತ ಸಂಸ್ಥೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರಿಗೆ ನೀಡಲಾಗಿದ್ದ ಬಿಡಿಎ ನಿವೇಶನಕ್ಕೆ ಸಂಬಂಧಿಸಿದಂತೆ ಹೈಕೋರ್ಟಿನಲ್ಲಿ […]

ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ರಂಭಾ

Thursday, January 20th, 2011
ರಂಭಾ

ಬೆಂಗಳೂರು :  ‘ಸರ್ವರ್ ಸೋಮಣ್ಣ’ ಕನ್ನಡ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ  ದಕ್ಷಿಣ ಭಾರತದ ನಟಿ ರಂಭಾ ಸಂಕ್ರಾಂತಿ ಹಬ್ಬ, ಜನವರಿ 14ರಂದು ಕೆನಡಾದ ಟೊರೊಂಟೊದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೆನಡಾದಲ್ಲಿ ನೆಲೆಸಿರುವ ಭಾರತೀಯ ಉದ್ಯಮಿ ಇಂದಿರನ್ ಪದ್ಮನಾಭನ್ ಅವರನ್ನು ರಂಭಾ ಕಳೆದ ವರ್ಷದ ಏಪ್ರಿಲ್ 8ರಂದು ತಿರುಪತಿಯಲ್ಲಿ ವರಿಸಿದ್ದರು ನಂತರ ನ್ಯೂಜಿಲಂಡ್ ಗೆ ಮಧುಚಂದ್ರಕ್ಕೆಂದು ಹೋಗಿದ್ದರು. ಹೆರಿಗೆ ಆಗುವಾಗ ರಂಭಾ ಕುಟುಂಬದ ಸದಸ್ಯರು ಆಸ್ಪತ್ರೆಯಲ್ಲಿ ಉಪಸ್ಥಿತರಿದ್ದರೆಂದು ಮೂಲಗಳಿಂದ ತಿಳಿದುಬಂದಿದೆ. ನವರಸ ನಾಯಕ ಜಗ್ಗೇಶ್ ಜೊತೆಯಲ್ಲಿ […]

ನಟಿ ಜೂಹಿ ಚಾವ್ಲಾ , ರಂಜಿತಾರಿಂದ ನಿತ್ಯಾನಂದನ ಪಾದಪೂಜೆ

Saturday, January 1st, 2011
Nityananda

ಬೆಂಗಳೂರು : ಹೊಸ ವರ್ಷದ ಸಂಭ್ರಮದ ನಡುವೆಯೇ  ನಿತ್ಯಾನಂದ ಸ್ವಾಮಿ  ಆನಂದೋತ್ಸವದ ಹೆಸರಿನಲ್ಲಿ ತನ್ನ 34ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಬಾಲಿವುಡ್ ಖ್ಯಾತ ನಟಿ ಜೂಹಿ ಚಾವ್ಲಾ ಅವರು ಬಿಡದಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಆಶ್ರಮದಲ್ಲಿ ಸಾಮಾಜಿಕ, ಧಾರ್ಮಿಕ ಹಾಗೂ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂದು ಬೆಳಿಗ್ಗೆ ಮೆರವಣಿಗೆ ಮೂಲಕ ನಿತ್ಯಾನಂದ ಸ್ವಾಮಿಯನ್ನು  ಆಶ್ರಮಕ್ಕೆ ಕರೆ ತಂದು ಪಾದಪೂಜೆ ನಡೆಸಲಾಯಿತು. ಜೂಹಿ ಚಾವ್ಲಾ ಕುಟುಂಬ ಕೂಡ […]

ವಿಷ್ಣು ಅಭಿಮಾನಿಗಳಿಂದ ಅಭಿಮಾನ್ ಸ್ಟುಡಿಯೋದಲ್ಲಿ ಪುಣ್ಯ ಸ್ಮರಣೆ

Thursday, December 30th, 2010
ವಿಷ್ಣುವರ್ಧನ್

ಬೆಂಗಳೂರು : ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳನ್ನಗಲಿ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಷ್ಣುವರ್ಧನ್ ಅಭಿಮಾನಿಗಳು ರಕ್ತದಾನ, ನೇತ್ರದಾನದಂತಹ ಹಲವಾರು ಕಾರ್ಯಗಳನ್ನು  ಬಡವರಿಗಾಗಿ ರಾಜ್ಯಾದ್ಯಂತ ಹಮ್ಮಿಕೊಂಡಿದ್ದರು ವಿಷ್ಣು ಸಮಾಧಿ ಇರುವ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ, ಆರಾಧ್ಯಮೂರ್ತಿಗೆ ನಮನ ಸಲ್ಲಿಸಿದರು. ಉತ್ತರಳ್ಳಿಯಲ್ಲಿರುವ ಸ್ಟುಡಿಯೋಗೆ ಮೆರವಣಿಗೆಯಲ್ಲಿ ಸಾಗಿದ ಸಾವಿರಾರು ಅಭಿಮಾನಿಗಳು ಗೌರವ ಅರ್ಪಿಸಿದರು. ಸರಕಾರದ ಪರವಾಗಿ ಸಚಿವೆ ಶೋಭಾ ಕರಂದ್ಲಾಜೆ ಗೌರವ ಸಲ್ಲಿಸಿದರು ವಿಷ್ಣು ಸಹೋದರ ರವಿಕುಮಾರ್, ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿವರ್ಧನ್, ಅಳಿಯ ಅನಿರುದ್ಧ […]

ಕರ್ನಾಟಕದಲ್ಲಿ ಚುನಾವಣೆ ಬಳಿಕ ಮತ್ತೆ ವಿದ್ಯುತ್ ದರ ಏರಿಕೆ

Tuesday, December 28th, 2010
ಶೋಭಾ ಕರಂದ್ಲಾಜೆ

ಗುಲ್ಬರ್ಗಾ  : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಈಗಾಗಲೇ ದರ ಏರಿಕೆಗೆ ಶಿಫಾರಸ್ಸು ಮಾಡಿರುವ ಹಿನ್ನಲೆಯಲ್ಲಿ  ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಬಳಿಕ ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ವಿದ್ಯುತ್ ದರ ಏರಿಕೆಗೆ ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಖ್ಯವಾಗಿ ವಿದ್ಯುತ್ ಕಂಪನಿಗಳು ಹಾನಿಯಲ್ಲಿವೆ. ಇದರ ಜೊತೆಗೆ ಉಚಿತ ವಿದ್ಯುತ್ ನ್ನು ಸಹ ನೀಡುತ್ತಿದ್ದೇವೆ. ವಿದ್ಯುತ್ ಸೋರಿಕೆ ಕೂಡಾ ನಿರಂತರವಾಗಿದೆ. ನಿಗಮ ಮಾಡಿರುವ […]

ಅನಧಿಕೃತ ನೀರು ಪಡೆಯುತ್ತಿರುವ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ

Friday, December 24th, 2010
ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್

ಮಂಗಳೂರು :  ಮಹಾನಗರಪಾಲಿಕೆಗೆ ವಂಚಿಸಿ ಹೆಚ್ಚುವರಿ ನೀರು ಪಡೆಯತ್ತಿರುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು ತಮ್ಮಕಚೇರಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಮಹಾನಗರಪಾಲಿಕೆಯಿಂದ ಅದಿಕೃತವಾಗಿ ನೀರು ಸಂಪರ್ಕ ಪಡೆದು ಅನಧಿಕೃತವಾಗಿ ಯಥೇಚ್ಛವಾಗಿ ನೀರನ್ನು ಬಳಸುತ್ತಿರುವ ಉದ್ದಿಮೆ ಕೈಗಾರಿಕೆಗಳನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ದಂಡ ವಸೂಲು ಮಾಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅತ್ಯಂತ ಕಡುಬಡವರಿಗೆ ನೀರು ಸಂಪರ್ಕ ಪಡೆಯಲು ಸಾಧ್ಯವಾಗುವಂತೆ […]

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ

Monday, October 18th, 2010
ಮೈಸೂರು ದಸರಾ

ಮೈಸೂರು : 400 ವರ್ಷಗಳ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ  ಭಾನುವಾರ ಮಧ್ಯಾಹ್ನ 1.45 ಕ್ಕೆ  ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು .  750 ಕಿ.ಗ್ರಾಂ. ತೂಕದ ಬಂಗಾರದ ಅಂಬಾರಿಯಲ್ಲಿದ್ದ ದೇವಿ ಚಾಮುಂಡೇಶ್ವರಿಗೆ ಹಸಿರು ಶಾಲು ಹೊದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಪುಷ್ಪ ಸಮರ್ಪಣೆ ಮಾಡಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಅಂಬಾರಿ ಹೊತ್ತಿದ್ದ ಬಲರಾಮ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಬಲರಾಮನ ಹಿಂದೆ ಸುಂದರವಾಗಿ ಅಲಂಕೃತಗೊಂಡ ಆನೆಗಳು ಜಂಬೂ ಸವಾರಿಯಲ್ಲಿ […]