ಅನಧಿಕೃತ ನೀರು ಪಡೆಯುತ್ತಿರುವ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ

Friday, December 24th, 2010
ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್

ಮಂಗಳೂರು :  ಮಹಾನಗರಪಾಲಿಕೆಗೆ ವಂಚಿಸಿ ಹೆಚ್ಚುವರಿ ನೀರು ಪಡೆಯತ್ತಿರುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು ತಮ್ಮಕಚೇರಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಮಹಾನಗರಪಾಲಿಕೆಯಿಂದ ಅದಿಕೃತವಾಗಿ ನೀರು ಸಂಪರ್ಕ ಪಡೆದು ಅನಧಿಕೃತವಾಗಿ ಯಥೇಚ್ಛವಾಗಿ ನೀರನ್ನು ಬಳಸುತ್ತಿರುವ ಉದ್ದಿಮೆ ಕೈಗಾರಿಕೆಗಳನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ದಂಡ ವಸೂಲು ಮಾಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅತ್ಯಂತ ಕಡುಬಡವರಿಗೆ ನೀರು ಸಂಪರ್ಕ ಪಡೆಯಲು ಸಾಧ್ಯವಾಗುವಂತೆ […]

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ

Monday, October 18th, 2010
ಮೈಸೂರು ದಸರಾ

ಮೈಸೂರು : 400 ವರ್ಷಗಳ ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ  ಭಾನುವಾರ ಮಧ್ಯಾಹ್ನ 1.45 ಕ್ಕೆ  ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮ ದ್ವಾರದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು .  750 ಕಿ.ಗ್ರಾಂ. ತೂಕದ ಬಂಗಾರದ ಅಂಬಾರಿಯಲ್ಲಿದ್ದ ದೇವಿ ಚಾಮುಂಡೇಶ್ವರಿಗೆ ಹಸಿರು ಶಾಲು ಹೊದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಪುಷ್ಪ ಸಮರ್ಪಣೆ ಮಾಡಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಅಂಬಾರಿ ಹೊತ್ತಿದ್ದ ಬಲರಾಮ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. ಬಲರಾಮನ ಹಿಂದೆ ಸುಂದರವಾಗಿ ಅಲಂಕೃತಗೊಂಡ ಆನೆಗಳು ಜಂಬೂ ಸವಾರಿಯಲ್ಲಿ […]

ಐದು ಸಾವಿರ ವರ್ಷಗಳ ಭವ್ಯ ಪರಂಪರೆಯ ಆಯುಧಪೂಜೆ ಆಚರಣೆ .

Saturday, October 16th, 2010
ಆಯುಧಪೂಜೆ.

ಮಂಗಳೂರು: ನಾಗರೀಕ ಸಂಸ್ಕೃತಿ ಆರಂಭವಾದಂದಿನಿಂದ ಜನರು ತಾವು ಉಪಯೋಗಿಸುತ್ತಿದ್ದ ಆಯುಧಗಳಿಗೆ ಪೂಜೆ ಮಾಡುತ್ತಿದ್ದರು ಎಂದು ಅನೇಕ ಮೂಲಗಳಿಂದ ನಾವು ಈಗ ತಿಳಿಯಬಹುದಾಗಿದೆ. ಸುಮಾರು 5000 ವರ್ಷಗಳ ಹಿಂದೆ ಪಾಂಡವರು 12 ವರ್ಷಗಳ ವನವಾಸವನ್ನು ಮುಗಿಸಿ, ಅಜ್ಞಾತವಾಸದ ಕೊನೆಯ ದಿನದಲ್ಲಿ ಉತ್ತರ ಗೋಗ್ರಹಣದ ಕದನದಲ್ಲಿ ಆಯುಧಗಳನ್ನು ಪೂಜಿಸಿ ಕೌರವರೊಂದಿಗೆ ಯುದ್ಧ ನಡೆಸಿದರು ಎನ್ನುವ ದಾಖಲೆಗಳು ಮಹಾಭಾರತದ ಪುಟಗಳಲ್ಲಿ ಕಾಣಸಿಗುತ್ತದೆ. ಬ್ರಹನ್ನಳೆಯಾದ ಅರ್ಜುನ ವಿರಾಟ ನಗರದ ರಾಜಕುಮಾರ ಉತ್ತರ ಕುಮಾರನೊಂದಿಗೆ ಬನ್ನಿ ಮಂಟಪದಿಂದ ಆಯುಧಗಳನ್ನು ಪೂಜಿಸಿ ಯುದ್ಧಕ್ಕೆ ಹೊರಟು ಕೌರವರನ್ನು […]

ಜೆಡಿಎಸ್ ಶಾಸಕ ಎಂ.ಸಿ.ಅಶ್ವತ್ಥ ರಾಜೀನಾಮೆ

Friday, October 15th, 2010
ಎಂ.ಸಿ.ಅಶ್ವತ್ಥ

ಬೆಂಗಳೂರು : ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಅಶ್ವತ್ಥ ಅವರು ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಚನ್ನಪಟ್ಟಣ ಶಾಸಕ ಎಂ.ಸಿ.ಅಶ್ವತ್ಥ ಗುರುವಾರ ಈ ನಿರ್ಧಾರ ಕೈಗೊಂಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ತಮಿಳುನಾಡು ಪ್ರವಾಸದಲ್ಲಿದ್ದೆ. ಹಾಗಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಪಕ್ಷದ ನಾಯಕರಿಂದ ತನಗೆ ಯಾವುದೇ ತೊಂದರೆ ಇಲ್ಲ. ಇದೀಗ ನನ್ನ ವೈಯಕ್ತಿಕ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಅ.11ರಂದು ನಡೆದ ವಿಶ್ವಾಸಮತ ಯಾಚನೆಗಾಗಲಿ, ಅ.14ರಂದು ನಡೆದು […]

ಎರಡನೇ ಬಾರಿಗೆ ಬಹುಮತ ಗೆದ್ದ ಯಡಿಯೂರಪ್ಪ ಸರಕಾರ

Thursday, October 14th, 2010
ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ದೇಶದ ಇತಿಹಾಸದಲ್ಲೇ ಒಂದೇ ವಾರದಲ್ಲಿ ಎರಡೆರಡು ಬಾರಿ ವಿಶ್ವಾಸ ಮತ ಚಲಾಯಿಸಿ ದಕ್ಷಿಣ ಭಾರತದಲ್ಲಿ ಮೊದಲ ಭಾರಿಗೆ ಅಧಿಕಾರ ಹಿಡಿದ ಬಿ.ಎಸ್.ಯಡಿಯೂರಪ್ಪ ಸರಕಾರ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದೆ. ವಿಧಾನ ಸಭಾ ಸ್ಪೀಕರ್ ದ್ವನಿ ಮತದ ಮೂಲಕ ವಿಶ್ವಾಸ ಮತ ಚಲಾಯಿಸಲು ಸೂಚಿಸಿದರಾದರೂ ವಿರೋಧ ಪಕ್ಷದ ಪ್ರತಿರೋದದಿಂದಾಗಿ ತಲೆ ಎಣಿಕೆಗೆ ಸೂಚನೆ ನೀಡಿದರು. ಪರ ಹಾಗೂ ವಿರೋಧ ಪಕ್ಷಗಳ ಶಾಸಕರ ಪ್ರತಿ ಸಾಲಿನ ಮತ ಎಣಿಕೆ ಬಳಿಕ ಯಡಿಯೂರಪ್ಪ ಪರವಾಗಿ 106 ಹಾಗೂ ವಿರೋಧವಾಗಿ […]

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳಿಂದ ಜಯ

Wednesday, October 13th, 2010
ಆಸ್ಟ್ರೇಲಿಯಾ ಭಾರತ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ,ಬೆಂಗಳೂರಿನಲ್ಲಿ ನಡೆಯುತ್ತಿರುವ ಟೆಸ್ಟ್‌ ಸರಣಿಯಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಏಳು ವಿಕೆಟುಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್‌ಸ್ವೀಪ್‌ಗೈದಿದೆ. ಆ ಮೂಲಕ ಟೆಸ್ಟ್‌ನ ಅಗ್ರಸ್ಥಾನಕ್ಕೆ ನಾವೇ ಅರ್ಹ ತಂಡ ಎಂಬುದನ್ನು ಮಹೇಂದ್ರ ಧೋನಿ ಬಳಗ ಮತ್ತೊಮ್ಮೆ ಸಾಬೀತುಪಡಿಸಿದಂತಾಗಿದೆ. ಇದರೊಂದಿಗೆ ಭಾರತದಲ್ಲಿ ಟೆಸ್ಟ್ ಜಯ ದಾಖಲಿಸುವ ಆಸೀಸ್ ನಾಯಕ ರಿಕಿ ಪಾಂಟಿಂಗ್ ಕನಸು ಕನಸಾಗಿಯೇ ಉಳಿಯುವಂತಾಗಿದೆ. ನಾಲ್ಕನೇ […]

ದಂಡುಪಾಳ್ಯ ಗ್ಯಾಂಗ್ ನ 11 ಮಂದಿಗೆ ಮರಣದಂಡನೆ

Friday, October 1st, 2010
ದಂಡುಪಾಳ್ಯ ಗ್ಯಾಂಗ್

ಬೆಂಗಳೂರು : ವಿಚಿತ್ರ ರೀತಿಯಲ್ಲಿ ಕೊಲೆ, ದರೋಡೆ, ಅತ್ಯಾಚಾರ ವನ್ನು ನಡೆಸುತ್ತಿದ್ದ ದಂಡುಪಾಳ್ಯ ಗುಂಪಿನ 11 ಮಂದಿಗೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಚ್.ಆರ್.ಶ್ರೀನಿವಾಸ್  ರವರು ಗುರುವಾರ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ. ಕೃಷ್ಣ, ಹನುಮ ಅಲಿಯಾಸ್ ದೊಡ್ಡಹನುಮ, ಮುನಿಕೃಷ್ಣ, ವೆಂಕಟರಮಣ, ತಿಮ್ಮ ಅಲಿಯಾಸ್ ಕೋತಿ ತಿಮ್ಮ, ವೆಂಕಟೇಶ್ ಅಲಿಯಾಸ್ ಚಂದ್ರ, ಮುನಿಕೃಷ್ಣ ಅಲಿಯಾಸ್ ಕೃಷ್ಣ, ನಲ್ಲ ತಿಮ್ಮ ಅಲಿಯಾಸ್ ತಿಮ್ಮ, ಚಿಕ್ಕಮುನಿಯಪ್ಪ ಅಲಿಯಾಸ್ ಮುನಿಯಪ್ಪ, ಕ್ರಿಸಂದು, ಲಕ್ಷ್ಮಿ ಮರಣದಂಡನೆಗೆ ಒಳಗಾದವರು. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ 34ನೇ ವಿಶೇಷ ನ್ಯಾಯಾಲಯದ […]

ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಸದಸ್ಯ

Friday, October 1st, 2010
ಲೋಕಾಯುಕ್ತ ಬಲೆಗೆ ಬಿದ್ದ ಬಿಬಿಎಂಪಿ ಸದಸ್ಯ

ಬೆಂಗಳೂರು :  ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪುತ್ರ, ಬಿಬಿಎಂಪಿ ಸದಸ್ಯ ಜಗದೀಶ್ ನಾಯ್ಡು ಕೆಐಎಡಿಬಿ ಪ್ರಕರಣದ ಸಾಕ್ಷಿದಾರೊಬ್ಬರಿಗೆ ಗಾಂಧಿನಗರದ ಕಚೇರಿಯಲ್ಲಿ ಒಂದು ಲಕ್ಷ ರೂಪಾಯಿ ಲಂಚ ನೀಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ಲೋಕಾಯುಕ್ತ ಪೊಲೀಸರು ದಿಢೀರನೆ ನಡೆಸಿದ ಕಾರ್ಯಾಚರಣೆಯಲ್ಲಿ ಕಟ್ಟಾ ಜಗದೀಶ್ ನಾಯ್ಡು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ಬುಧವಾರ ಬಿಬಿಎಂಪಿ ಸಭೆಯಲ್ಲಿ  ಜಗದೀಶ್ ನಾಯ್ಡುವನ್ನು […]

ವೈಶಾಲಿ ಕಾಸರವಳ್ಳಿ ಅಂತಿಮ ಯಾತ್ರೆ

Tuesday, September 28th, 2010
ವೈಶಾಲಿ ಕಾಸರವಳ್ಳಿ

ಬೆಂಗಳೂರು  : ಕನ್ನಡ ಚಿತ್ರರಂಗದಲ್ಲಿ ಬೆಳ್ಳಿ ಪರದೆ ಮತ್ತು  ಕಿರುತೆರೆ ಲೋಕಕ್ಕೆ ಅಪಾರ ಸೇವೆ ಸಲ್ಲಿಸಿದ ಹಿರಿಯ ನಟಿ  ವೈಶಾಲಿ ಕಾಸರವಳ್ಳಿ ಅವರ ಅಂತ್ಯಸಂಸ್ಕಾರ ಇಂದು ಸಂಜೆ ನಾಲ್ಕು ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ. ವೈಶಾಲಿ ಕಾಸರವಳ್ಳಿ ದೀರ್ಘ ಕಾಲದ ಅನಾರೋಗ್ಯದಿಂದ ಚೇತರಿಸದೆ ಸೋಮವಾರ ನಿಧನರಾಗಿದ್ದಾರೆ. ರಂಗಭೂಮಿಯಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ವೈಶಾಲಿ ಕಾಸರವಳ್ಳಿ ನಿರ್ದೇಶಕಿ, ವಸ್ತ್ರವಿನ್ಯಾಸಕಿ ನಟಿಯೂ ಆಗಿದ್ದರು, ಪತಿ, ಖ್ಯಾತ ನಿರ್ದೇಶಕ ಗಿರೀಶ ಕಾಸರವಳ್ಳಿ, ಪುತ್ರಿ ಅನನ್ಯ ಹಾಗೂ ಪುತ್ರ ಅಪೂರ್ವ ಅವರನ್ನು ಅಗಲಿದ್ದಾರೆ. […]

ಮಂಗಳೂರಿನ ಬೀದಿಗಳಲ್ಲಿ ಮೈಸೂರು ದಸರಾ ಪ್ರಚಾರ

Monday, September 27th, 2010
ಮೈಸೂರು ದಸರಾ ಪ್ರಚಾರ

ಮಂಗಳೂರು: ಅಕ್ಟೋಬರ್ 8 ರಿಂದ ಮೈಸೂರಿನಲ್ಲಿ ನಡೆಯಲಿರುವ ವಿಶ್ವವಿಖ್ಯಾತ ಐತಿಹಾಸಿಕ ಹಿನ್ನೆಲೆಯುಳ್ಳ ಮೈಸೂರು ದಸರಾದ ಪ್ರಚಾರ ಜಾಥಾವನ್ನು ಮಂಗಳೂರು  ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯ್ಕ ಚೆಂಡೆ ಬಡಿಯುವ ಮೂಲಕ ಉದ್ಘಾಟಿಸಿದರು. ಮೈಸೂರು ವಾರ್ತಾ ಇಲಾಖೆ ಹಾಗೂ ದಸರಾ ಮಹೋತ್ಸವದ ವಿಶೇಷ ಅಧಿಕಾರಿಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 1 ರವರೆಗೆ ಪ್ರಚಾರ ಜಾಥಾ ನಡೆಸಲಿದ್ದಾರೆ. ನಾಲ್ಕು ತಂಡಗಳಾದ ಚೈತನ್ಯ ಕಲಾತಂಡ, ಸ್ಪಂದನ ಮಹಿಳಾ ತಂಡ, ವಿವೇಕ ಕಲಾ ತಂಡ […]