ಓಮನ್‌ನ ಸುಲ್ತಾನ್ ಖಬೂಸ್ ಬಿನ್ ಸೈಯದ್‌ ನಿಧನ

Saturday, January 11th, 2020
Share

oman

ಒಮನ್ : ಅರಬ್ ಜಗತ್ತಿನ ಸುಧೀರ್ಘ ಅವಧಿಯ ಆಡಳಿತ ನಡೆಸಿದ ರಾಜ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಒಮನ್ ಸುಲ್ತಾನ್ ಖಬೂಸ್ ಬಿನ್ ಸೈಯದ್ (79) ನಿಧನರಾದರು.

“ತೀವ್ರ ಶೋಕ ಮತ್ತು ವಿಷಾದದಿಂದ ಶುಕ್ರವಾರ ಕೊನೆಯುಸಿರೆಳೆದ ಸುಲ್ತಾನ್ ಖಬೂಸ್ ಬಿನ್ ಸೈಯದ್ ಅವರಿಗೆ ಆಸ್ಥಾನ ಶೋಕ ವ್ಯಕ್ತಪಡಿಸುತ್ತದೆ” ಎಂದು ಅರಮನೆಯ ಪ್ರಕಟಣೆ ಹೇಳಿದೆ.

ಬೆಲ್ಜಿಯಂನಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆದ ಅವರು ಕಳೆದ ತಿಂಗಳು ವಾಪಸ್ಸಾಗಿದ್ದರು. ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸುಲ್ತಾನ್ ಅವಿವಾಹಿತರಾಗಿದ್ದು ಉತ್ತರಾಧಿಕಾರಿಯನ್ನು ಹೊಂದಿಲ್ಲ ಅಥವಾ ಯಾರನ್ನೂ ಆ ಹುದ್ದೆಗೆ ನೇಮಿಸಿರಲಿಲ್ಲ.

ಅವರ ನಿಧನಕ್ಕೆ ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ. ಬ್ರಿಟಿಷರ ನೆರವಿನೊಂದಿಗೆ 1970ರಲ್ಲಿ ರಕ್ತರಹಿತ ಕ್ರಾಂತಿಯಲ್ಲಿ ತಂದೆಯನ್ನು ಪದಚ್ಯುತಗೊಳಿಸಿ ಸುಲ್ತಾನ್ ಅಧಿಕಾರಕ್ಕೇರಿದ್ದರು. ತೈಲ ಸಂಪತ್ತನ್ನು ಬಳಸಿಕೊಂಡು ಒಮನ್ ದೇಶವನ್ನು ಪ್ರಗತಿ ಪಥದಲ್ಲಿ ಮುನ್ನಡೆಸಿದ್ದರು.

ಸುಮಾರು 50 ಮಂದಿ ಇರುವ ರಾಜ ಕುಟುಂಬ ಮಂಡಳಿಯ ಪ್ರಕಾರ, ರಾಜ್ಯದ ಪಟ್ಟ ತೆರವಾಗಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಒಳಗಾಗಿ ಹೊಸ ಸುಲ್ತಾನ್‌ರನ್ನು ಆಯ್ಕೆ ಮಾಡಬೇಕಾಗುತ್ತದೆ.

ಕುಟುಂಬ ಒಪ್ಪಿಗೆಗೆ ಬರಲು ಸಾಧ್ಯವಾಗದಿದ್ದರೆ, ರಕ್ಷಣಾ ಮಂಡಳಿಯ ಸದಸ್ಯರು ಮತ್ತು ಸುಪ್ರೀಂ ಕೋರ್ಟ್ ಅಧ್ಯಕ್ಷರು, ರಾಜತಾಂತ್ರಿಕ ಮಂಡಳಿ ಮತ್ತು ರಕ್ಷಣಾ ಮಂಡಳಿಯ ಸದಸ್ಯರು ಸುಲ್ತಾನ್ ಖಬೂಸ್ ಅವರು ತಮ್ಮ ಆಯ್ಕೆಯನ್ನು ದಾಖಲಿಸಿದ ರಹಸ್ಯ ಪತ್ರ ಒಳಗೊಂಡ ಲಕೋಟೆಯನ್ನು ತೆರೆದು ಆ ವ್ಯಕ್ತಿಯನ್ನು ಪಟ್ಟಕ್ಕೆ ತರಲಿದ್ದಾರೆ.

ಸುಲ್ತಾನ್ ಅವರ ಸೋದರ ಸಂಬಂಧಿಗಳಾದ ಸಂಸ್ಕೃತಿ ಸಚಿವ ಹೈತಮ್ ಬಿನ್ ತಾರಿಕ್ ಅಲ್ ಸಯೀದ್, ಉಪ ಪ್ರಧಾನಿ ಅಸಾದ್ ಬಿನ್ ತಾರಿಕ್ ಅಲ್ ಸೈಯದ್ ಮತ್ತು ಒಮನ್‌ನ ನೌಕಾಪಡೆಯ ಮಾಜಿ ಕಮಾಂಡರ್ ಹಾಗೂ ರಾಜಕುಟುಂಬದ ಸಲಹೆಗಾರ ಶಿಹಾಬ್ ಬಿನ್ ತಾರಿಕ್ ಅಲ್ ಸೈಯದ್ ಮೂವರು ಸುಲ್ತಾನ್ ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ.

 

ಉಕ್ರೇನ್ ವಿಮಾನ ದುರಂತ : ಅನುಮಾನ ವ್ಯಕ್ತಪಡಿಸಿದ ಅಮೇರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​

Friday, January 10th, 2020
Share

tramp

ವಾಷಿಂಗ್ಟನ್ : ಬುಧವಾರ ಅಪಘಾತಕ್ಕೀಡಾಗಿ 180 ಜನರ ಸಾವಿಗೆ ಕಾರಣವಾಗಿದ್ದ ಉಕ್ರೇನ್ ವಿಮಾನ ದುರಂತದ ಬಗ್ಗೆ ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಕೆಲಸವನ್ನು ಇರಾನ್ ಮಾಡಿರಬಹುದು ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಉಕ್ರೇನ್ ದೇಶದ ಅಂತಾರಾಷ್ಟ್ರೀಯ ಬೋಯಿಂಗ್ 737-800 ವಿಮಾನ ರಷ್ಯಾದ ಕೀವ್ ಎಂಬಲ್ಲಿಗೆ ಹೊರಟಿತ್ತು. ಇರಾನ್ ದೇಶದ ತೆಹ್ರಾನ್ನ ಇಮಾಮ್ ಖೊಮೇನಿ ವಿಮಾನ ನಿಲ್ದಾಣದಲ್ಲಿ ಇಳಿದು ಮತ್ತೆ ಹೊರಟ ಕೆಲವೇ ಕ್ಷಣಗಳಲ್ಲಿ ವಿಮಾನ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ 180 ಜನ ಮೃತಪಟ್ಟಿದ್ದರು. ಈ ಬಗ್ಗೆ ಮಾತನಾಡಿರುವ ಡೊನಾಲ್ಡ್ ಟ್ರಂಪ್, “ಈ ವಿಮಾನ ನೆರೆಯ ರಾಷ್ಟ್ರದಲ್ಲಿ ಹಾರಾಟ ನಡೆಸುತ್ತಿತ್ತು. ಯಾರೋ ತಪ್ಪು ಮಾಡಿದ್ದಾರೆ ಎನ್ನುವ ಅನುಮಾನ ನನಗಿದೆ,” ಎಂದು ಟ್ರಂಪ್ ಹೇಳಿದ್ದಾರೆ.

“ಕೆಲವರು ಈ ವಿಮಾನ ಅಪಘಾತಕ್ಕೆ ತಾಂತ್ರಿಕ ದೋಷ ಕಾರಣ ಎಂದು ಹೇಳಿದ್ದಾರೆ. ಆದರೆ, ನನಗೆ ಹಾಗೆ ಅನ್ನಿಸುವುದಿಲ್ಲ. ಭಯಾನಕ ಘಟನೆ ನಡೆದಿದೆ,” ಎಂದರು ಟ್ರಂಪ್.

ಇರಾನ್ ದೇಶದ ಸೇನಾ ಮುಖ್ಯಸ್ಥ ಖಾಸಿಂ ಸೊಲೈಮನಿ ಹತ್ಯೆಯಿಂದಾಗಿ ಕಳೆದ ಒಂದು ವಾರದಿಂದ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆಗೆ ಇರಾನ್ ನೆಲದಲ್ಲಿ ವಿಮಾನ ನೆಲಕ್ಕುರುಳಿದ್ದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿತ್ತು. “ಇರಾನ್ ಸೇನೆ ಅಚಾನಕ್ಕಾಗಿ ಉಕ್ರೇನ್ ವಿಮಾನವನ್ನು ಹೊಡೆದುರುಳಿಸಿದೆ,” ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ, ತನಿಖೆ ನಡೆಸಿ ವರದಿ ನೀಡಿರುವ ಇರಾನ್ ನಾಗರೀಕ ವಾಯುಯಾನ ಸಂಸ್ಥೆ, “ವಿಮಾನ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲೇ ಬೆಂಕಿ ಕಾಣಿಸಿಕೊಂಡಿದೆ. ವಿಮಾನದ ಇಂಜಿನ್ನ ಒಂದು ಭಾಗ ಮಿತಿಮೀರಿ ಬಿಸಿಯಾಗಿದ್ದಕ್ಕೆ ಸಾಕ್ಷಿಗಳಿವೆ. ಅಲ್ಲದೆ, ವಿಮಾನ ನೆಲಕ್ಕೆ ಅಪ್ಪಳಿಸುವ ಮುನ್ನವೇ ಬೆಂಕಿಗೆ ಆಹುತಿಯಾಗಿತ್ತು” ಎಂದಿದೆ.

 

ಉಕ್ರೇನ್‌ ವಿಮಾನ ಇರಾನ್‌ನಲ್ಲಿ ಪತನ : ಬೋಯಿಂಗ್‌ ವಿಮಾನದಲ್ಲಿದ್ದ 170 ಮಂದಿ ದುರ್ಮರಣ

Wednesday, January 8th, 2020
Share

vimana

ಟೆಹ್ರಾನ್ ‌: ಉಕ್ರೇನ್‌ನಿಂದ ಹೊರಟಿದ್ದ ವಿಮಾನ ಇರಾನ್‌ನಲ್ಲಿ ಪತನಕ್ಕೀಡಾಗಿದ್ದು, ವಿಮಾನದಲ್ಲಿದ್ದ ಎಲ್ಲ 170 ಮಂದಿ ದುರ್ಮರಣಕ್ಕೀಡಾಗಿದ್ದಾರೆಂದು ಇರಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇರಾನ್‌ ರಾಜಧಾನಿ ಟೆಹ್ರಾನ್‌ನ ಇಮಾಮ್ ಖೊಮೇನಿ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಉಕ್ರೇನ್ ಇಂಟರ್‌ನ್ಯಾಷನಲ್ ಏರ್‌ಲೈನ್ಸ್‌ನ ಬೋಯಿಂಗ್ 737 ವಿಮಾನ ತಾಂತ್ರಿಕ ಸಮಸ್ಯೆಗಳಿಂದಾಗಿ ಬುಧವಾರ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ ಸಿಬ್ಬಂದಿ ಸೇರಿ 180 ಮಂದಿ ಇದ್ದರು ಎಂದು ಇರಾನ್‌ ಸರಕಾರಿ ಮಾಧ್ಯಮ ವರದಿ ಮಾಡಿತ್ತು.

ತಾಂತ್ರಿಕ ಸಮಸ್ಯೆಗಳಿಂದ ಅಪಘಾತ ಉಂಟಾಗಿದೆ ಎಂದು ಶಂಕಿಸಲಾಗಿದೆ. ಟೆಹ್ರಾನ್‌ನ ನೈರುತ್ಯ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ತನಿಖಾ ತಂಡ ಧಾವಿಸಿದೆ ಎಂದು ನಾಗರಿಕ ವಿಮಾನಯಾನ ವಕ್ತಾರ ರೆಜಾ ಜಾಫರ್ಜಾಡೆ ತಿಳಿಸಿದ್ದರು.

ಉಕ್ರೇನ್ ಅಂತಾರಾಷ್ಟ್ರೀಯ ಏರ್‌ಲೈನ್ಸ್‌ನ ಉಕ್ರೇನಿಯನ್ 737-800 ವಿಮಾನ ಬುಧವಾರ ಬೆಳಿಗ್ಗೆ ಹೊರಟಿದ್ದು, ಬಳಿಕ ಕೆಲವೇ ಕ್ಷಣಗಳಲ್ಲಿ ರಾಡಾರ್‌ ಮಾಹಿತಿ ನೀಡುವುದನ್ನು ನಿಲ್ಲಿಸಿದೆ ಎಂದು ಸ್ಥಳೀಯ ವೆಬ್‌ಸೈಟ್‌ವೊಂದು ತಿಳಿಸಿದೆ.

ಖಾಸಿಮ್‌ ಸುಲೈಮಾನಿ ಹತ್ಯೆಗೆ ಪ್ರತೀಕಾರವಾಗಿ ಅಮೆರಿಕದ ಎರಡು ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಮಿಸೈಲ್‌ ದಾಳಿ ನಡೆಸಿದ ಕೆಲವೇ ಗಂಟೆಗಳ ಹೊತ್ತಿನಲ್ಲಿ ಉಕ್ರೇನ್‌ ವಿಮಾನ ಇರಾನ್‌ ರಾಜಧಾನಿ ಟೆಹ್ರಾನ್‌ ವಿಮಾನ ನಿಲ್ದಾಣದ ಬಳಿ ಪತನಗೊಂಡಿದೆ.

 

ಕಿಂಗ್ ಸ್ಟನ್ : ವಿಮಾನ ಪತನದಲ್ಲಿ ಏಳು ಜನರ ಸಾವು

Friday, November 29th, 2019
Share

Kenada

ಕೆನಡಾ : ಇಲ್ಲಿನ ಉತ್ತರ ಕಿಂಗ್ ಸ್ಟನ್ ನಲ್ಲಿ ವಿಮಾನ ಪತನವಾಗಿ ಏಳು ಜನರು ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

ವಿಮಾನ ಪತನಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ವಿಮಾನದ ಅವಶೇಷಗಳು ಉತ್ತರ ಕಿಂಗ್ ಸ್ಟನ್ ನಿಂದ ಮೂರು ಕಿ.ಮೀ ದೂರದ ದಟ್ಟ ಕಾಡು ಪ್ರದೇಶದಲ್ಲಿ ದೊರೆತಿದೆ.

ಟೊರಾಂಟೋ ವಿಮಾನ ನಿಲ್ದಾಣದಿಂದ ಕ್ಯೂಬೆಕ್ ನಗರಕ್ಕೆ ಸಾಗುತ್ತಿದ್ದ ವಿಮಾನ ಪತನವಾಗಿದೆ.

 

ಆಂಧ್ರಪ್ರದೇಶ ಮೂಲದ ಏಳು ಮಂದಿ ಭಾರತೀಯರನ್ನು ಬಂಧಿಸಿದ ಕುವೈತ್‌ ಪೊಲೀಸರು

Tuesday, November 26th, 2019
Share

kuwait-policeಕುವೈತ್‌:  ಆಂಧ್ರಪ್ರದೇಶ ಮೂಲದ ಏಳು ಮಂದಿ ಭಾರತೀಯರನ್ನು ಭಾರತೀಯ ರಾಯಭಾರ ಕಚೇರಿಯ ದಾಖಲೆಗಳನ್ನು ಮತ್ತು ಪ್ರಮಾಣ ಪತ್ರಗಳನ್ನು ನಕಲು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕುವೈತ್‌ನಲ್ಲಿ  ಬಂಧಿಸಲಾಗಿದೆ.

ದಾಖಲೆಗಳನ್ನು ನಕಲು ಮಾಡುವ ಜಾಲದ ಬಗ್ಗೆ ಸುಳಿವು ಸಿಕ್ಕಿದ ಹಿನ್ನೆಲೆಯಲ್ಲಿ ಪೊಲೀಸರೇ ವ್ಯವಹಾರ ಕುದುರಿಸುವವರಂತೆ ನಟಿಸಿ ಅವರ ಸೇವೆಯನ್ನು ಬಳಸಿಕೊಳ್ಳುವಂತೆ ನಂಬಿಸಿ ಅವರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಾಟ್ಸ್‌ಆ್ಯಪ್‌ ಮೂಲಕವೇ ಈ ತಂಡ ಡೀಲ್‌ ಕುದುರಿಸುತ್ತಿತ್ತು. ಡ್ರೈವಿಂಗ್‌ ಲೈಸನ್ಸ್‌ ಅನ್ನು ನಕಲು ಮಾಡಿಕೊಡುವುದರಲ್ಲಿ ಈ ತಂಡ ಸಿದ್ಧಹಸ್ತವಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ. ಅವರ ಹಿಂದೆ ಬಲು ದೊಡ್ಡ ವಂಚನೆಯ ಜಾಲ ಇರುವ ಸಾಧ್ಯತೆ ಇದೆ ಎಂದು ಕುವೈತ್‌ನ ಪೊಲೀಸರು ತಿಳಿಸಿದ್ದಾರೆ.

ಆರಂಭದಲ್ಲಿ ಒಬ್ಬನನ್ನು ಸಾಕ್ಷ್ಯ ಸಮೇತ ದಸ್ತಗಿರಿ ಮಾಡಲಾಯಿತು. ಅನಂತರ ಆತ ನೀಡಿದ ಸುಳಿವಿನಿಂದ ಇಡೀ ತಂಡವನ್ನು ಬಂಧಿಸಲಾಗಿದೆ. ಕುವೈತ್‌ನ ಅಧಿಕಾರಿಗಳು ಈ ತಂಡ ನೀಡಿದ ವಿವಿಧ ಪ್ರಮಾಣ ಪತ್ರಗಳ ಸಿಂಧುತ್ವವನ್ನು ಪರಿಶೀಲಿಸಲು ಮುಂದಾಗಿದೆ.

ಮೂವರು ಉಗ್ರರನ್ನು ಬಾಗ್ರಂ ಸೆರೆಮನೆಯಿಂದ ಬಿಡುಗಡೆ ಮಾಡಿದ ಅಫ್ಘಾನಿಸ್ಥಾನ

Tuesday, November 19th, 2019
Share

Ugraru

ಕಾಬೂಲ್ : ತಾಲೀಬಾನ್ ಉಗ್ರ ಮುಖ್ಯಸ್ಥ ಸಿರಾಜುದ್ದೀನ್ ಹಖ್ಖಾನಿ ಸಹೋದರ ಅನಾಸ್ ಹಖ್ಖಾನಿ ಸೇರಿದಂತೆ ಮೂವರು ಉಗ್ರರನ್ನು ಬಾಗ್ರಂ ಸೆರೆಮನೆಯಿಂದ ಅಫ್ಘಾನಿಸ್ಥಾನ ಬಿಡುಗಡೆ ಮಾಡಿದೆ.

ಅನಾಸದ ಹಖ್ಖಾನಿ, ಹಾಜಿ ಮಲಿ ಖಾನ್, ಹಫೀಜ್ ರಶೀದ್ ಬಿಡುಗಡೆಯಾದ ಉಗ್ರರು.

ಅಫ್ಘಾನಿಸ್ಥಾನದ ಅಮೇರಿಕನ್ ಯುನಿವರ್ಸಿಟಿಯ ಪ್ರೊಫೆಸರ್ಕೆವಿನ್ ಕಿಂಗ್ ಮತ್ತು ಟಿಮೊತಿ ವೀಕ್ಸ್ ಅವರನ್ನು ತಾಲಿಬಾನ್ ಉಗ್ರರು ಅಪಹರಿಸಿ ಬಂಧಿತ ಉಗ್ರರ ಬಿಡುಗಡೆಗೆ ಬೇಡಿಕೆ ನೀಡಿದ್ದರು.

ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಉಗ್ರರ ಷರತ್ತು ಬದ್ಧ ಬಿಡುಗಡೆಯ ಬಗ್ಗೆ ಹೇಳಿಕೆ ನೀಡಿದ್ದರು.

ಆದರೆ ಉಗ್ರರ ಬಿಡುಗಡೆಯ ಬಗ್ಗೆಅಮೇರಿಕಾ ರಾಯಭೇರಿ ಕಚೇರಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

 

ಮೊಸಳೆ ಬಾಯಿಂದ ತಂಗಿಯನ್ನು ಕಾಪಾಡಿದ 15 ವರ್ಷದ ಅಣ್ಣ

Friday, November 15th, 2019
Share

hashimಮನಿಲಾ : ಇನ್ನೇನು ದಡ  ಸೇರಬೇಕು ಅನ್ನುವಷ್ಟರಲ್ಲಿ  14 ಅಡಿ ಉದ್ದದ ಮೊಸಳೆಯೊಂದು ಬಾಲಕಿಯ ಕಾಲನ್ನು ಹಿಡಿದು ಬಿಟ್ಟಿತು.  ಇದನ್ನು ಗಮನಿಸಿದ  ಅಣ್ಣ ತಂಗಿಯನ್ನು ಕಾಪಾಡಿರುವ ಘಟನೆ ಫಿಲಿಪೈನ್ಸ್ ನ ಪಲವಾನ್‍ನಲ್ಲಿ ನಡೆದಿದೆ.

12 ವರ್ಷದ ತಂಗಿ ಹೈನಾ ಲಿಸಾ ಜೋಸ್ ಹಬಿಯನ್ನು ಧೈರ್ಯಶಾಲಿಯಾದ 15 ವರ್ಷದ ಹಾಶಿಮ್ ಮೊಸಳೆಯ ಬಾಯಿಂದ ಕಾಪಾಡಿದ್ದಾನೆ. ಹಾಶಿಮ್ ಮತ್ತು ಹೈನಾ ಮನೆಗೆ ಹೋಗುತ್ತಿರುವಾಗ ಈ ಘಟನೆ ನಡೆದಿದ್ದು, ಮನೆಗೆ ತೆರಳಲು ಬಿದಿರಿನ ಪಟ್ಟಿಯ ಮೇಲೆ ನದಿ ದಾಟುತ್ತಿದ್ದಾಗ ಮೊಸಳೆ ಹೈನಾಳ ಮೇಲೆ ದಾಳಿ ಮಾಡಿದೆ.

ಹೈನಾ ಮತ್ತು ಹಾಶಿಮ್ ಇಬ್ಬರು ನದಿ ದಾಟುವಾಗ, ಹಾಶಿಮ್ ಬೇಗ ಮುಂದೆ ಹೋಗಿದ್ದಾನೆ. ಹೈನಾ ನಿಧಾನವಾಗಿ ಬರುತ್ತಿದ್ದ ವೇಳೆ ದಡ ಸಮೀಪಿಸಿದ ಹೈನಾಳ ಬಲಗಾಲನ್ನು ಮೊಸಳೆ ಜಿಗಿದು ಹಿಡಿದುಕೊಂಡಿದೆ. ಈ ವೇಳೆ ಕಿರುಚುತ್ತಿದ್ದ ತಂಗಿಯ ನೆರವಿಗೆ ಬಂದ ಅಣ್ಣ ಹಾಶಿಮ್ ಕಲ್ಲಿನಿಂದ ಮೊಸಳೆಯ ಬಾಯಿಗೆ ಹೊಡೆದು ನಂತರ ತನ್ನ ತಂಗಿಯನ್ನು ತನ್ನ ಕಡೆ ಎಳೆದುಕೊಂಡು ಮೊಸಳೆಯಿಂದ ಕಾಪಾಡಿದ್ದಾನೆ.

ಈ ವಿಚಾರದ ಬಗ್ಗೆ ಮಾತನಾಡಿರುವ ತಂಗಿ ಹೈನಾ, ಮೊಸಳೆ ನನಗಿಂತ ದೊಡ್ಡದಾಗಿತ್ತು. ನನಗೆ ಅದನ್ನು ನೋಡಿ ಭಯವಾಗಿತ್ತು. ಆದ್ದರಿಂದ ನಾನು ಭಯದಿಂದ ಅಳುತ್ತಿದ್ದೆ. ಅದು ನನ್ನ ಕಾಲನ್ನು ಹಿಡಿದುಕೊಂಡಿತ್ತು. ಆಗ ನನ್ನ ಸಹಾಯಕ್ಕೆ ಹಾಶಿಮ್ ಬಂದ ಅದರ ಬಾಯಿಗೆ ಕಲ್ಲಿನಿಂದ ಹೊಡೆದು ನನ್ನನ್ನು ಕಾಪಾಡಿದ ಎಂದು ಹೇಳಿದ್ದಾಳೆ.

ಈ ಘಟನೆಯಲ್ಲಿ ಹೈನಾಳ ಬಲಗಾಲಿಗೆ ಗಂಭೀರವಾದ ಗಾಯವಾಗಿದ್ದು, ತಕ್ಷಣ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ವಿಚಾರವಾಗಿ ಮಾತನಾಡಿರುವ ಲೆಫ್ಟಿನೆಂಟ್ ಕರ್ನಲ್ ಸಾಕ್ರಟೀಸ್ ಫಾಲ್ಟಾಡೊ, ಈ ಭಾಗದ ನಿವಾಸಿಗಳಿಗೆ ಮೊಸಳೆಯಿಂದ ಇತ್ತೀಚೆಗೆ ಬಹಳ ತೊಂದರೆಯಾಗುತ್ತಿದೆ. ಮೊಸಳೆಗಳನ್ನು ಹಿಡಿದು ಸ್ಥಳಾಂತರ ಮಾಡಲಾಗುವುದು. ಅವರ ಅಣ್ಣನ ಧೈರ್ಯದಿಂದ ಹುಡುಗಿ ಬದುಕಿ ಬಂದಿದ್ದಾಳೆ ಎಂದು ಹೇಳಿದ್ದಾರೆ.

ನೇಪಾಳದ 36 ಹೆಕ್ಟೇರ್​ ಭೂಮಿ ಆಕ್ರಮಿಸಿಕೊಂಡ ಚೀನಾ : ಚೀನಾದ ವಿರುದ್ಧ ನೇಪಾಳದಲ್ಲಿ ತೀವ್ರ ಪ್ರತಿಭಟನೆ

Tuesday, November 12th, 2019
Share

nepal

ಬರ್ದಿಯಾ : ಭಾರತವನ್ನು ದೂರ ಸರಿಸಿ ನೇಪಾಳದ ದೊಡ್ಡಣ್ಣ ಎನಿಸಿಕೊಳ್ಳಲು ಹವಣಿಸುತ್ತಿದ್ದ ಚೀನಾದ ವಿರುದ್ಧ ನೇಪಾಳದಲ್ಲಿ ತೀವ್ರ ಪ್ರತಿಭಟನೆಗಳು ಶುರುವಾಗಿವೆ.

ನೇಪಾಳದ ಭೂ ಪ್ರದೇಶಗಳನ್ನು ಮೆಲ್ಲಮೆಲ್ಲಗೆ ಚೀನಾ ಆಕ್ರಮಿಸುತ್ತಿದ್ದು, ಅದರ ವಿಸ್ತರಣಾವಾದದ ವಿರುದ್ಧ ನೇಪಾಳಿಗರು ಸಿಡಿದೆದ್ದಿದ್ದಾರೆ. ಸೋಮವಾರ ಚೀನಾ ಅಧ್ಯಕ್ಷ ಕ್ಷಿ ಜಿನ್ ಪಿಂಗ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿದಿದ್ದಾರೆ.

ಚೀನಾ ವಿರೋಧಿ ಪ್ಲಕಾರ್ಡ್ಗಳು, ಬ್ಯಾನರ್ಗಳನ್ನು ಹೊಂದಿದ್ದ ಪ್ರತಿಭಟನಾಕಾರರು ಚೀನಾ ವಿರೋಧಿ ಘೋಷಣೆಗಳು ಕೂಗಿದ್ದಾರೆ. “ಗೋ ಬ್ಯಾಕ್ ಚೀನಾ, ನಮ್ಮ ಭೂ ಭಾಗವನ್ನು ವಾಪಸ್ ನೀಡು” ಎಂದು ಪ್ರತಿಭಟನೆ ವೇಳೆ ಕೂಗಿದ್ದಾರೆ.

ಇತ್ತೀಚೆಗೆ ನೇಪಾಳದ ಸರ್ವೇ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ನೇಪಾಳದ 36 ಹೆಕ್ಟೇರ್ ಭೂಮಿ ಚೀನಾ ವಶದಲ್ಲಿರುವುದು ಬಹಿರಂಗವಾಗಿದೆ. ಹುಮ್ಲಾ ಜಿಲ್ಲೆಯಲ್ಲಿ ಮತ್ತು ಕರ್ನಾಲಿ ಜಿಲ್ಲೆಯಲ್ಲಿ ಅತಿಕ್ರಮ ನಡೆದಿದೆ.

ಸರ್ಕಾರದ ಮಾಹಿತಿಯ ಪ್ರಕಾರ, ನೇಪಾಳವು ಚೀನಾಕ್ಕೆ ಸಾವಿರಾರು ಹೆಕ್ಟೇರ್ ಭೂಮಿಯನ್ನು ಕಳೆದುಕೊಂಡಿದೆ ಎನ್ನಲಾಗುತ್ತಿದೆ. ನೇಪಾಳಿಗರಿಗೆ ಇದೀಗ ಅರಿವಾಗಿದ್ದು ಪ್ರತಿಭಟನೆಗೆ ಇಳಿದಿದ್ದಾರೆ.

 

80 ವರ್ಷ ಯಶಸ್ವಿ ದಾಂಪತ್ಯ ಜೀವನ : ಗಿನ್ನಿಸ್ ವರ್ಲ್ಡ್‌ ರೆಕಾರ್ಡ್

Monday, November 11th, 2019
Share

tecnes

ಟೆಕ್ಸಸ್ : ಇತ್ತೀಚಿನ ಕಾಲಘಟ್ಟದಲ್ಲಿ ಮದುವೆಯಾದ ತಿಂಗಳೊಳಗೆ ದಂಪತಿ ದೂರವಾಗುವ ಪ್ರಕರಣಗಳು ನಡೆಯುತ್ತಿರುತ್ತೆ. ಆದರೆ ಅಮೆರಿಕದ ಟೆಕ್ಸಸ್‍ನಲ್ಲಿ ಜೋಡಿಯೊಂದಿದೆ. ಬರೋಬ್ಬರಿ 80 ವರ್ಷದಿಂದ ಯಶಸ್ವಿ ದಾಂಪತ್ಯ ಜೀವನ ನಡೆಸಿಕೊಂಡು ಒಟ್ಟಿಗೆ ಬಾಳುತ್ತಿದ್ದಾರೆ. ಜೊತೆಗೆ ಜಗತ್ತಿನಲ್ಲಿಯೇ ಅತೀ ಹಿರಿಯ ದಂಪತಿ ಆಗುವ ಮೂಲಕ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಮಾಡಿದ್ದಾರೆ.

ಹೌದು. ಈ ಬಗ್ಗೆ ತಿಳಿದರೆ ಅಚ್ಚರಿಯಾಗುತ್ತೆ. ಆದರೂ ಇದು ಸತ್ಯ. ಸತತ 80 ವರ್ಷಗಳಿಂದ ಟೆಕ್ಸಸ್ ಜಾನ್ ಹ್ಯಾಂಡರ್ಸನ್(106) ಹಾಗೂ ಚಾರ್ಲೆಟ್ (105) ಯಶಸ್ವಿ ದಾಂಪತ್ಯ ಜೀವನ ನಡೆಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಡಿ.15ರಂದು ಈ ದಂಪತಿ ತಮ್ಮ 80ನೇ ವರ್ಷದ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳಲಿದ್ದಾರೆ. ಈ ಮೊದಲೇ ಇವರಿಬ್ಬರ ದಾಂಪತ್ಯ ನೋಡಿ ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಇವರನ್ನು ಜಗತ್ತಿನ ಅತೀ ಹಿರಿಯ ದಂಪತಿ ಎಂದು ಅಧಿಕೃತವಾಗಿ ಘೋಷಿಸಿ ಗೌರವಿಸಿದೆ.

ವಿಶ್ವದ ಅತೀ ಹಿರಿಯ ದಂಪತಿ ವಯಸ್ಸು ಕೇಳಿದರೆ ಎಂಥವರಾದ್ರು ದಂಗಾಗುತ್ತಾರೆ. ಗಿನ್ನಿಸ್ ವರ್ಲ್ಡ್‌ ರೆಕಾರ್ಡ್ ಪ್ರಕಾರ, ಹ್ಯಾಂಡರ್ಸನ್ 106 ವರ್ಷ, ಚಾರ್ಲೆಟ್ 105 ವರ್ಷ ವಯಸ್ಸು. ಇವರಿಬ್ಬರ ಒಟ್ಟು ಆಯಸ್ಸು ಸೇರಿಸಿದರೆ 211 ವರ್ಷವಾಗುತ್ತದೆ. ಡಿಸೆಂಬರ್ 15ರಂದು ದಂಪತಿ ತಮ್ಮ 80ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು, ಯಶಸ್ವಿ 80 ವರ್ಷ ಆದರ್ಶ ದಾಂಪತ್ಯ ಜೀವನ ನಡೆಸಿದ ಕೀರ್ತಿಗೆ ಪಾತ್ರರಾಗಲಿದ್ದಾರೆ.

ಅವರಿಬ್ಬರು 1934ರಲ್ಲಿ ಟೆಕ್ಸಸ್ ವಿಶ್ವ ವಿದ್ಯಾಲಯದಲ್ಲಿ ಭೇಟಿಯಾಗಿದ್ದರು. ಇವರಿಬ್ಬರು ಸಹಪಾಠಿಗಳಾಗಿದ್ದರು. ಅಲ್ಲಿ ಜಾನ್ ಫುಟ್‍ಬಾಲ್ ತಂಡದ ಆಟಗಾರನಾಗಿ ಗುರುತಿಸಿಕೊಂಡಿದ್ದರು. ಕಾಲೇಜಿನ ಸಮಯದಲ್ಲೇ ಚಾರ್ಲೆಟ್ ಹಾಗೂ ಜಾನ್ ನಡುವೆ ಪ್ರೀತಿ ಬೆಳೆದಿತ್ತು. ಹೀಗಾಗಿ 1939ರಲ್ಲಿ ಅವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಅಲ್ಲದೆ ಜಾನ್ ಅವರು ಟೆಕ್ಸಸ್ ವಿದ್ಯಾಲಯದ ಫುಟ್‍ಬಾಲ್ ತಂಡದ ಅತ್ಯಂತ ಹಳೆಯ ಆಟಗಾರರು ಎಂಬ ಹೆಗ್ಗಳಿಕೆಯನ್ನೂ ಗಳಿಸಿದ್ದಾರೆ.

ಸತತ 84 ವರ್ಷಗಳಿಂದ ವರ್ಷಕ್ಕೆ ಒಮ್ಮೆಯಾದರೂ ಜಾನ್ ಟೆಕ್ಸಸ್ ವಿಶ್ವವಿದ್ಯಾಲಯದ ಫುಟ್‍ಬಾಲ್ ಪಂದ್ಯವನ್ನು ವೀಕ್ಷಿಸಲು ಹೋಗುವ ಸಂಪ್ರದಾಯವನ್ನು ರೂಡಿಸಿಕೊಂಡಿದ್ದಾರೆ. ಈ ಇಳಿ ವಯಸ್ಸಿನಲ್ಲೂ ಇಬ್ಬರೂ ಆರೋಗ್ಯವಾಗಿದ್ದಾರೆ. ಜಾನ್ ಅವರು ಪ್ರತಿ ದಿನ ದೇಹಸ್ಥಿತಿಯನ್ನು ಚೆನ್ನಾಗಿ ಇಟ್ಟುಕೊಳ್ಳಲು ವ್ಯಾಯಾಮ ಮಾಡುತ್ತಾರೆ.

2009ರಲ್ಲಿ ದಂಪತಿ ಲಾಂಗ್‍ಹಾರ್ನ್ ಗ್ರಾಮಕ್ಕೆ ಸ್ಥಳಾಂತರಗೊಂಡಿದ್ದಾರೆ. ಈ ಗ್ರಾಮದಲ್ಲಿ ಟೆಕ್ಸಾಸ್ ವಿವಿ ಹಳೇ ವಿದ್ಯಾರ್ಥಿಗಳ ಕೂಟದಿಂದ ಸೀನಿಯರ್ ಲಿವಿಂಗ್ ಕಮ್ಯುನಿಟಿ ರಚನೆಕೊಂಡಿದೆ. ಅಲ್ಲಿ ಜಾನ್ ಹಾಗೂ ಚಾರ್ಲೆಟ್ ವಾಸವಾಗಿದ್ದಾರೆ.

 

ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್

Friday, July 28th, 2017
Share

Nawaz Sherifಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅಕ್ರಮ ಸಂಪಾದನೆ ಹಾಗೂ ತೆರಿಗೆ ವಂಚನೆಯಿಂದ ಗಳಿಸಿದ ಕಾಳಧನವನ್ನು ಅಂತರರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಇರಿಸಿರುವವರ ಪಟ್ಟಿಯು ಪನಾಮ ಪೇಪರ್ಸ್‌ ಸೋರಿಕೆಯಿಂದ ಬಹಿರಂಗಗೊಂಡಿತ್ತು.

ವಿಶ್ವದಾದ್ಯಂತ ಬಾರಿ ಸುದ್ದಿಗೆ ಗ್ರಾಸವಾಗಿದ್ದ  ಈ  ಹಗರಣ ಸಂಬಂಧ ಪಾಕಿಸ್ತಾನ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ದೋಷಿ ಎಂದು ತೀರ್ಮಾನಿಸಿರುವ ಕೋರ್ಟ್ ಅವರನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಿದೆ.