ಗೋ ರಕ್ಷಣೆಗೆ ಪೇಜಾವರ ಶ್ರೀಗಳ ಕೊಡುಗೆ ಅನನ್ಯ: ನರೇಂದ್ರ ಮೋದಿ

Monday, February 6th, 2017
video-conference

ಉಡುಪಿ: ಕರ್ನಾಟಕ ಮಧ್ವಾಚಾರ್ಯರಿಗೆ ಜನ್ಮಕೊಟ್ಟ ಪುಣ್ಯಭೂಮಿ. ದೇಶದ ನೈತಿಕ ಉದ್ಧಾರಕ್ಕಾಗಿ ಮಧ್ವರು ಜನ್ಮ ತಾಳಿದರು. ಮಧ್ವರ ಭಕ್ತಿ ಆಂದೋಲನ ನೆನೆದರೆ ಹೆಮ್ಮೆಯಾಗುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಜಗದ್ಗುರು ಮಧ್ವಾಚಾರ್ಯರ ಸಪ್ತ ಶತಮಾನೋತ್ಸವ ಅಂಗವಾಗಿ ಪ್ರಧಾನಿ ಮೋದಿ ಇಂದು ಭಾಷಣ ಮಾಡಿದರು. ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಮಧ್ವಾಚಾರ್ಯರ ಸಪ್ತಾಹದಲ್ಲಿ ಪಾಲ್ಗೊಂಡು ಮಾತನಾಡಿದ ಮೋದಿ, ಮಧ್ವಾಚಾರ್ಯರ ಗುಣಗಾನ ಮಾಡಿದರು. ಅಲ್ಲದೇ ದೇಶದ ಧಾರ್ಮಿಕ ಪರಂಪರೆಯ ಬಗ್ಗೆಯೂ ಮೋದಿ […]

ಸಹೋದರನ ಮನೆಯಲ್ಲಿದ್ದ ವಿವಾಹಿತೆಯೋರ್ವಳು ನಾಪತ್ತೆ

Monday, February 6th, 2017
Shanthi-priya-D'Souza

ಮಂಗಳೂರು: ತನ್ನ ಸಹೋದರನ ಮನೆಯಲ್ಲಿದ್ದ ವಿವಾಹಿತೆಯೋರ್ವಳು ಪುಚ್ಚಮೊಗರಿನಿಂದ ಕಾಣೆಯಾದ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪುಚ್ಚಮೊಗ್ರು ಗ್ರಾಮದ ರೇಂಜರ್ ಕೋಡಿ ಎಂಬಲ್ಲಿಯ ಅರುಣ್ ಡಿಸೋಜಾ ಎಂಬವರ ಸಹೋದರಿ ಶಾಂತಿ ಪ್ರಿಯಾ ಡಿಸೋಜಾ (28) ನಾಪತ್ತೆ ಆಗಿರುವವಳು. ಸಹೋದರನ ಮನೆಯಲ್ಲಿದ್ದ ಇವರು ಜ. 26ರಂದು ಕಾಣೆಯಾಗಿದ್ದು, ಅಂಗಡಿಗೆಂದು ತೆರಳಿದ್ದ ಅರುಣ್ ಅವರು ವಾಪಾಸು ಬಂದಾಗ ಮನೆಯಲ್ಲಿರಲಿಲ್ಲ. ಶಾಂತಿ ಪ್ರಿಯಾ ಡಿಸೋಜಾ ಅವರನ್ನು 7 ತಿಂಗಳ ಹಿಂದೆ ಸಾಣೂರು ಅಲ್ವಿನ್ ಎಂಬವರಿಗೆ ಕೊಟ್ಟು ಮದುವೆ ಮಾಡಿಕೊಡಲಾಗಿತ್ತು. ಕಾಣೆಯಾಗಿರುವ […]

ಅಸೈಗೋಳಿ ಕೇಂದ್ರ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ

Monday, February 6th, 2017
queen Veerarani Abbakka

ಮಂಗಳೂರು: ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ವೀರರಾಣಿ ಅಬ್ಬಕ್ಕ ಸ್ಮರಣೆಯ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು. ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಅಸೈಗೋಳಿ ಕೇಂದ್ರ ಮೈದಾನದಲ್ಲಿ ವೀರರಾಣಿ ಅಬ್ಬಕ್ಕ ಉತ್ಸವ-2017ನ್ನು ಉದ್ಘಾಟಿಸಿ ಮಾತನಾಡಿದರು. ಏಕಲವ್ಯ ಪ್ರಶಸ್ತಿ ವಿಜೇತ ಅಂತಾರಾಷ್ಟ್ರೀಯ ಕ್ರೀಡಾಪಟು ಅಕ್ಷತಾ ಪೂಜಾರಿ ಮಾತನಾಡಿ, ರಾಣಿ ಅಬ್ಬಕ್ಕಳ ಸ್ಮರಣೆಯಂತಹ ಕಾರ್ಯಕ್ರಮದಲ್ಲಿ ಪ್ರತಿಭೆಗಳನ್ನು ಪ್ರದರ್ಶಿಸುವ ಅವಕಾಶ ಶ್ಲಾಘನೀಯ. ಸೋಲು, ಗೆಲುವು ಚಿಂತಿಸದೆ ನೈಜ […]

ಬೀದಿಗೊಂದು ಸರಿಯಾದ ರಸ್ತೆ ಮಾಡಿಕೊಡುವಂತೆ ವೃದ್ಧೆಯ ಮನವಿ

Saturday, February 4th, 2017
Pranavi

ಮಂಗಳೂರು: ಸೊಂಟದಿಂದ ಕೆಳಗೆ ಶರೀರದಲ್ಲಿ ಬಲ ಕುಂದಿ ನಡೆದಾಡಲೂ ಕಷ್ಟವಾದರೂ ಇಂದಿಗೂ ಯಾರಿಗೂ ಅವಲಂಬಿತರಾದವರಲ್ಲ ಈ ಅಜ್ಜಿ. ಪುತ್ತೂರು ನಗರದ ಬಪ್ಪಳಿಗೆ ಬೈಪಾಸ್ ವೃತ್ತ ಸಮೀಪದ ನಿವಾಸಿಯಾದ 65 ವರ್ಷದ ಬಿ.ಪ್ರಣವಿ ಸರಿಯಾದ ರಸ್ತೆಯೊಂದಿದ್ದರೆ ಎಂತಹ ಕೆಲಸವನ್ನಾದರೂ ಮಾಡಬಲ್ಲೆ. ಎಲ್ಲಿ ಬೇಕಾದರೂ ಹೋಗಬಲ್ಲೆ ಎಂಬ ಧೈರ್ಯವಂತೆ. ಆದರೆ, ಆ ಬೀದಿಗೆ ಸರಿಯಾದ ರಸ್ತೆಯಿಲ್ಲದಿರುವುದೇ ಅವರ ಆತ್ಮವಿಶ್ವಾಸವನ್ನು ಕುಗ್ಗಿಸುತ್ತಿದೆ. ಅವಿವಾಹಿತರಾಗಿರುವ ಪ್ರಣವಿ ತಂದೆ, ತಾಯಿಯ ಮರಣಾ ನಂತರ ಏಕಾಂಗಿಯಾಗಿದರು. ಕಳೆದ 20 ವರ್ಷಗಳಿಂದ ಮನೆಯೊಳಗೆ ನಾಲ್ಕು ಚಕ್ರದ ಗಾಡಿಯ […]

ಕಳ್ಳತನ ಮಾಡಿ ದ್ವಿಚಕ್ರ ವಾಹನವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

Saturday, February 4th, 2017
Barke

ಮಂಗಳೂರು: ಕಳ್ಳತನ ಮಾಡಿ ದ್ವಿಚಕ್ರ ವಾಹನವನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ಗದಗ ತಾಲೂಕು ಶಿರಹಟ್ಟಿಯ ಸುರೇಶ ಭಜಂತ್ರಿ (21) ಮತ್ತು ಫಕಿರೇಶ ಈಳಿಗೇರ (23) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಹೀರೋ ಫ್ಯಾಶನ್ ಪ್ರೋ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ಬೆಳಗ್ಗೆ ಬಿಜೈನ ಕೆಎಸ್‌‌‌ಆರ್‌‌ಟಿಸಿ ಬಸ್ ಸ್ಟಾಂಡ್ ಸಮೀಪ ವಾಹನ ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಸುಳಿವಿನ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಲೆತ್ನಿಸಿದರು. ಈ ಸಂದರ್ಭ ಇವರನ್ನು ವಶಕ್ಕೆ […]

ಸಮುದ್ರದ ನೀರನ್ನು ಶುದ್ಧೀಕರಿಸಿ ವಿವಿಧ ಕಡೆಗಳಿಗೆ ಪೂರೈಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ: ಬೇಗ್

Saturday, February 4th, 2017
Roshan-Baig

ಮಂಗಳೂರು: ಸಮುದ್ರದ ನೀರನ್ನು ಶುದ್ಧೀಕರಿಸಿ ರಾಜ್ಯದ ವಿವಿಧ ಕಡೆಗಳಿಗೆ ಪೂರೈಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ತಿಳಿಸಿದರು. ನಗರದಲ್ಲಿ ಸ್ಮಾರ್ಟ್‌ ಸಿಟಿ ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಈ ಪ್ರಕ್ರಿಯೆಯನ್ನು ಅಧ್ಯಯನ ಮಾಡಲು ಕೊರಿಯಾದ ತಜ್ಞರು ಆಗಮಿಸಿದ್ದಾರೆ. ವಿಶೇಷ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಎತ್ತಿನಹೊಳೆ ಯೋಜನೆ ಕಾಮಗಾರಿ ಜಾರಿಯಲ್ಲಿದೆ. ಇದರ ಪೈಪ್‌ಲೈನ್‌ಗಳನ್ನು ಬಳಸಿ ಸಮುದ್ರದ ನೀರನ್ನು ಪೂರೈಸಲಾಗುವುದು ಎಂದು ತಿಳಿಸಿದರು.

ಮೋಟರ್ ಕಾಯ್ದೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

Saturday, February 4th, 2017
Congress-Protest

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಮೋಟರ್ ಕಾಯ್ದೆ ವಿರೋಧಿಸಿ ನಗರದ ಆರ್‌ಟಿಓ ಕಚೇರಿ ಮುಂಭಾಗದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಮೋಟಾರ್ ಕಾಯ್ದೆಯಿಂದ ಜನಸಾಮನ್ಯರು ಸಂಕಷ್ಟಕ್ಕೆ ಈಡಾಗಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಮ್ ಕೋಡಿಜಾಲ್ ಅವರು ಮೋಟರ್ ಕಾಯ್ದೆಯಿಂದ ಚಾಲಕರ ಲೈಸೆನ್ಸ್ ರದ್ದಾದಲ್ಲಿ 5 ವರ್ಷಗಳವರೆಗೆ ಪರವಾನಗಿ ರದ್ದಾಗುತ್ತದೆ. ಇದರಿಂದ ಅವರ ಕುಟುಂಬದ […]

ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೈವಸ್ಥಾನದ ಬಳಿ ನಿಯಂತ್ರಣ ತಪ್ಪಿ ಅರ್ಚಕ ಸ್ಥಳದಲ್ಲೇ ಸಾವು

Friday, February 3rd, 2017
Kartik-Bhat

ಮಂಗಳೂರು: ಬಂಟ್ವಾಳ ತಾಲೂಕಿನ ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೈವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಅರ್ಚಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ನಿವಾಸಿ, ಅನಂತೇಶ್ವರ ದೇವಾಲಯದ ಪ್ರಧಾನ ಅರ್ಚಕ, ಜ್ಯೋತಿಷಿ ಕಾರ್ತಿಕ್ ಭಟ್(38) ಮೃತಪಟ್ಟವರು. ಕಟೀಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಗುರುವಾರ ರಾತ್ರಿ ತಮ್ಮ ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಮೃತ ಕಾರ್ತಿಕ್ ಭಟ್ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ವೈದ್ಯನಾಥ ದೈವಸ್ಥಾನದ ಬಳಿ […]

ಶಾಸಕ ಮೊಯ್ದೀನ್ ಬಾವಾ ಅಧಿಕಾರಿ ಜೊತೆ ಅನುಚಿತ ವರ್ತನೆ: ಸಾಮಾಜಿಕ ಜಾಲತಾಣದಲ್ಲಿ ಘಟನೆ ವೈರಲ್

Friday, February 3rd, 2017
Moiddin-bava

ಮಂಗಳೂರು: ಶಾಸಕ ಬಿ.ಎ. ಮೊಯ್ದೀನ್ ಬಾವಾ ಅವರು ಇಲ್ಲಿನ ಕೈಗಾರಿಕಾಭಿವೃದ್ಧಿ ಅಧಿಕಾರಿ ಪ್ರಕಾಶ್ ಎನ್ನುವವರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ವೈರಲ್ c ಆಗಿದೆ. ಜೋಕಟ್ಟೆ-ಬೈಕಂಪಾಡಿ ರಸ್ತೆ ಕಾಮಗಾರಿ ವಿಚಾರದಲ್ಲಿ ಸಾರ್ವಜನಿಕರ ಜೊತೆ ಕಚೇರಿಗೆ ನುಗ್ಗಿದ ಶಾಸಕ ಮೊಯ್ದೀನ್ ಬಾವಾ ಅಧಿಕಾರಿ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಏಕವಚನದಲ್ಲಿ ಮಾತನಾಡಿ ಪ್ರಕಾಶ್ ಅವರನ್ನು ಎದ್ದು ನಿಂತು ಕ್ಷಮಾಪಣೆ ಕೇಳುವಂತೆ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಾರ್ವಜನಿಕರ ಜೊತೆ ಅಧಿಕಾರಿ […]

ಮಹಾನಗರ ಪಾಲಿಕೆಯ ವತಿಯಿಂದ ಫೆ. 3-4ರಂದು ಸ್ಮಾರ್ಟ್ ಸಿಟಿಯ ರಾಜ್ಯ ಮಟ್ಟದ ಕಾರ್ಯಾಗಾರ

Friday, February 3rd, 2017
MCC

ಮಂಗಳೂರು: ಮಹಾನಗರ ಪಾಲಿಕೆಯ ವತಿಯಿಂದ ಫೆ. 3-4ರಂದು ಎರಡು ದಿನಗಳ ಕಾಲ ನಡೆಯುವ ಸ್ಮಾರ್ಟ್ ಸಿಟಿಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಉದ್ಘಾಟಿಸಲಿದ್ದಾರೆ ಎಂದು ಮನಪಾ ಮೇಯರ್ ಹರಿನಾಥ್ ಹೇಳಿದರು. ಮನಪಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಯು.ಐ.ಡಿ.ಎಫ್.ಸಿ, ಕರ್ನಾಟಕ ಸರಕಾರ, ವಿಶ್ವ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ಈ ಕಾರ್ಯಾಗಾರದಲ್ಲಿ ಮಂಗಳೂರು, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ತುಮಕೂರು ಸೇರಿದಂತೆ 6 ಮಹಾನಗರ ಪಾಲಿಕೆಯ ಅಧಿಕಾರಿಗಳಲ್ಲದೆ ವಿಶ್ವ ಬ್ಯಾಂಕ್ ಕ್ಷೇತ್ರ ಪರಿಣಿತರು, ರಾಜ್ಯ […]