ಸಮುದ್ರದ ನೀರನ್ನು ಶುದ್ಧೀಕರಿಸಿ ವಿವಿಧ ಕಡೆಗಳಿಗೆ ಪೂರೈಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ: ಬೇಗ್

Saturday, February 4th, 2017
Roshan-Baig

ಮಂಗಳೂರು: ಸಮುದ್ರದ ನೀರನ್ನು ಶುದ್ಧೀಕರಿಸಿ ರಾಜ್ಯದ ವಿವಿಧ ಕಡೆಗಳಿಗೆ ಪೂರೈಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ತಿಳಿಸಿದರು. ನಗರದಲ್ಲಿ ಸ್ಮಾರ್ಟ್‌ ಸಿಟಿ ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಈ ಪ್ರಕ್ರಿಯೆಯನ್ನು ಅಧ್ಯಯನ ಮಾಡಲು ಕೊರಿಯಾದ ತಜ್ಞರು ಆಗಮಿಸಿದ್ದಾರೆ. ವಿಶೇಷ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಎತ್ತಿನಹೊಳೆ ಯೋಜನೆ ಕಾಮಗಾರಿ ಜಾರಿಯಲ್ಲಿದೆ. ಇದರ ಪೈಪ್‌ಲೈನ್‌ಗಳನ್ನು ಬಳಸಿ ಸಮುದ್ರದ ನೀರನ್ನು ಪೂರೈಸಲಾಗುವುದು ಎಂದು ತಿಳಿಸಿದರು.

ಮೋಟರ್ ಕಾಯ್ದೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ

Saturday, February 4th, 2017
Congress-Protest

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಮೋಟರ್ ಕಾಯ್ದೆ ವಿರೋಧಿಸಿ ನಗರದ ಆರ್‌ಟಿಓ ಕಚೇರಿ ಮುಂಭಾಗದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ಮೋಟಾರ್ ಕಾಯ್ದೆಯಿಂದ ಜನಸಾಮನ್ಯರು ಸಂಕಷ್ಟಕ್ಕೆ ಈಡಾಗಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಮ್ ಕೋಡಿಜಾಲ್ ಅವರು ಮೋಟರ್ ಕಾಯ್ದೆಯಿಂದ ಚಾಲಕರ ಲೈಸೆನ್ಸ್ ರದ್ದಾದಲ್ಲಿ 5 ವರ್ಷಗಳವರೆಗೆ ಪರವಾನಗಿ ರದ್ದಾಗುತ್ತದೆ. ಇದರಿಂದ ಅವರ ಕುಟುಂಬದ […]

ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೈವಸ್ಥಾನದ ಬಳಿ ನಿಯಂತ್ರಣ ತಪ್ಪಿ ಅರ್ಚಕ ಸ್ಥಳದಲ್ಲೇ ಸಾವು

Friday, February 3rd, 2017
Kartik-Bhat

ಮಂಗಳೂರು: ಬಂಟ್ವಾಳ ತಾಲೂಕಿನ ಎಸ್.ವಿ.ಎಸ್. ಕಾಲೇಜು ರಸ್ತೆಯ ವೈದ್ಯನಾಥ ದೈವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಅರ್ಚಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ನಿವಾಸಿ, ಅನಂತೇಶ್ವರ ದೇವಾಲಯದ ಪ್ರಧಾನ ಅರ್ಚಕ, ಜ್ಯೋತಿಷಿ ಕಾರ್ತಿಕ್ ಭಟ್(38) ಮೃತಪಟ್ಟವರು. ಕಟೀಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಗುರುವಾರ ರಾತ್ರಿ ತಮ್ಮ ಕಾರಿನಲ್ಲಿ ವಾಪಸ್ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಮೃತ ಕಾರ್ತಿಕ್ ಭಟ್ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ವೈದ್ಯನಾಥ ದೈವಸ್ಥಾನದ ಬಳಿ […]

ಶಾಸಕ ಮೊಯ್ದೀನ್ ಬಾವಾ ಅಧಿಕಾರಿ ಜೊತೆ ಅನುಚಿತ ವರ್ತನೆ: ಸಾಮಾಜಿಕ ಜಾಲತಾಣದಲ್ಲಿ ಘಟನೆ ವೈರಲ್

Friday, February 3rd, 2017
Moiddin-bava

ಮಂಗಳೂರು: ಶಾಸಕ ಬಿ.ಎ. ಮೊಯ್ದೀನ್ ಬಾವಾ ಅವರು ಇಲ್ಲಿನ ಕೈಗಾರಿಕಾಭಿವೃದ್ಧಿ ಅಧಿಕಾರಿ ಪ್ರಕಾಶ್ ಎನ್ನುವವರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ಘಟನೆ ವೈರಲ್ c ಆಗಿದೆ. ಜೋಕಟ್ಟೆ-ಬೈಕಂಪಾಡಿ ರಸ್ತೆ ಕಾಮಗಾರಿ ವಿಚಾರದಲ್ಲಿ ಸಾರ್ವಜನಿಕರ ಜೊತೆ ಕಚೇರಿಗೆ ನುಗ್ಗಿದ ಶಾಸಕ ಮೊಯ್ದೀನ್ ಬಾವಾ ಅಧಿಕಾರಿ ಜೊತೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಏಕವಚನದಲ್ಲಿ ಮಾತನಾಡಿ ಪ್ರಕಾಶ್ ಅವರನ್ನು ಎದ್ದು ನಿಂತು ಕ್ಷಮಾಪಣೆ ಕೇಳುವಂತೆ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೂ ಮುನ್ನ ಸಾರ್ವಜನಿಕರ ಜೊತೆ ಅಧಿಕಾರಿ […]

ಮಹಾನಗರ ಪಾಲಿಕೆಯ ವತಿಯಿಂದ ಫೆ. 3-4ರಂದು ಸ್ಮಾರ್ಟ್ ಸಿಟಿಯ ರಾಜ್ಯ ಮಟ್ಟದ ಕಾರ್ಯಾಗಾರ

Friday, February 3rd, 2017
MCC

ಮಂಗಳೂರು: ಮಹಾನಗರ ಪಾಲಿಕೆಯ ವತಿಯಿಂದ ಫೆ. 3-4ರಂದು ಎರಡು ದಿನಗಳ ಕಾಲ ನಡೆಯುವ ಸ್ಮಾರ್ಟ್ ಸಿಟಿಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಉದ್ಘಾಟಿಸಲಿದ್ದಾರೆ ಎಂದು ಮನಪಾ ಮೇಯರ್ ಹರಿನಾಥ್ ಹೇಳಿದರು. ಮನಪಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಯು.ಐ.ಡಿ.ಎಫ್.ಸಿ, ಕರ್ನಾಟಕ ಸರಕಾರ, ವಿಶ್ವ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ಈ ಕಾರ್ಯಾಗಾರದಲ್ಲಿ ಮಂಗಳೂರು, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ತುಮಕೂರು ಸೇರಿದಂತೆ 6 ಮಹಾನಗರ ಪಾಲಿಕೆಯ ಅಧಿಕಾರಿಗಳಲ್ಲದೆ ವಿಶ್ವ ಬ್ಯಾಂಕ್ ಕ್ಷೇತ್ರ ಪರಿಣಿತರು, ರಾಜ್ಯ […]

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ಶಿಕ್ಷಕರ ತರಬೇತಿ ಕಾರ್ಯಕ್ರಮ

Friday, February 3rd, 2017
yoga-training-centre

ಮಂಗಳೂರು: ಯೋಗದಿಂದ ಜನರು ನೆಮ್ಮದಿಯುತ ಆರೋಗ್ಯಕರ ಜೀವನವನ್ನು ಕಂಡುಕೊಳ್ಳಲು ಸಾಧ್ಯವಾಗಿದ್ದು, ಯೋಗದ ಮಹತ್ವವನ್ನು ಇಂದು ಇಡೀ ವಿಶ್ವವೇ ಅರಿತುಕೊಂಡಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾಲಯದ ಮಾನವಪ್ರಜ್ಞೆ ಮತ್ತು ಯೋಗವಿಜ್ಞಾನ ವಿಭಾಗ ಹಾಗೂ ಧರ್ಮನಿಧಿ ಯೋಗಪೀಠ ಆಶ್ರಯದಲ್ಲಿ ಸೌತ್ ಕೋರಿಯಾದ ವಾಂಕ್ವಾಂಗ್ ಡಿಜಿಟಲ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಮಂಗಳೂರು ವಿವಿಯಲ್ಲಿ ಐದು ದಿನಗಳ ಕಾಲ ಆಯೋಜಿಸಿರುವ ‘ಅಂತಾರಾಷ್ಟ್ರೀಯ ಯೋಗ ಶಿಕ್ಷಕರ ತರಬೇತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]

ಕಾಂಗ್ರೆಸ್ ಪಕ್ಷ ಉಳಿಯಬೇಕಾದ್ರೆ ರಾಜ್ಯದಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಬೇಕು: ಪೂಜಾರಿ

Friday, February 3rd, 2017
Janardhana-Poojary

ಮಂಗಳೂರು: ರಾಜ್ಯದಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಮತ್ತೆ ಕೇಳಲಾರಂಭಿಸಿದೆ. ಅದಕ್ಕೆ ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಧ್ವನಿಗೂಡಿಸಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಉಳಿಯಬೇಕಾದ್ರೆ ಗೃಹ ಸಚಿವ ಪರಮೇಶ್ವರ್ ಸಿಎಂ ಆಗಬೇಕು. ಈ ಬಗ್ಗೆ ಜನರ ಅಪೇಕ್ಷೆಯೂ ಇದೆ. ಆದರೆ ಪಕ್ಷದಲ್ಲಿ ಕೆಲವರು ಸರ್ಕಸ್ ಮಾಡುತ್ತಿದ್ದರೆ, ಪಕ್ಷದಲ್ಲಿ ಶನಿಯ ಪ್ರಭಾವ ಇದೆ, ನಮಗೆ ಶನಿ ಹಿಡಿದಿದೆ ಎಂದು ವ್ಯಂಗ್ಯವಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿಎಂ ಸೇರಿ ಕಾಂಗ್ರೆಸ್‌‌‌ […]

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಮೊಕ್ತೇಸರ ವಿಧಿವಶ

Thursday, February 2nd, 2017
Raveendranath

ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶೀಯ ಮೊಕ್ತೇಸರ ಡಾ. ರವೀಂದ್ರನಾಥ ಪೂಂಜಾ ಇಂದು ನಿಧನರಾಗಿದ್ದಾರೆ. ದೇವಸ್ಥಾನದ ಮೊಕ್ತೇಸರ  ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯದ ತೀರ್ಪು ಕಳೆದ ವರ್ಷ ಕೊಡೆತ್ತೂರು ಗುತ್ತಿನ ರವೀಂದ್ರನಾಥ ಪೂಂಜಾ ಅವರ ಪರವಾಗಿ ಬಂದಿತ್ತು. ಅದೇ ವರ್ಷ ಅವರು ಮೊಕ್ತೇಸರ ರಾಗಿ ಅಧಿಕಾರ ಸ್ವೀಕರಿಸಿದ್ದರು. ರವೀಂದ್ರನಾಥ ಪೂಂಜಾ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದರು. ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ನಿಂತಿದ್ದ ವ್ಯಕ್ತಿಯ ಬಳಿಯಿಂದ ನಗದು ಕಳವು

Thursday, February 2nd, 2017
Shreenivasulu

ಮಂಗಳೂರು: ಧರ್ಮಸ್ಥಳ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ವ್ಯಕ್ತಿಯ ಬಳಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸರು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಶ್ರೀನಿವಾಸುಲು(25) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯು ಡಿ. 25 ರಂದು ಬೆಂಗಳೂರಿನ ಲೋಕೇಶ್ ಎಂಬವರು ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗ ಅವರ ಪ್ಯಾಂಟ್ ಕಿಸೆಯಿಂದ ಎಟಿಎಂ ಕಾರ್ಡ್ , 8700 ರೂ. ನಗದು ಕಳವು ಮಾಡಿದ್ದ. ಇನ್ನು ಕಳವು ಮಾಡಿದ್ದ ಎಟಿಎಂನಿಂದ ಮಂಗಳೂರಿನಲ್ಲಿ ಚಿನ್ನಾಭರಣವನ್ನು ಖರೀದಿಸಿದ್ದ. ಇದರ ಆಧಾರದಲ್ಲಿ ಬೆಳ್ತಂಗಡಿ […]

ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳದೆ ಟೋಲ್ ಸಂಗ್ರಹಕ್ಕೆ ಅವಕಾಶ ಮಾಡಿಕೊಡುವುದಿಲ್ಲ: ಯೋಗೀಶ್ ಶೆಟ್ಟಿ

Thursday, February 2nd, 2017
Yogish-Shetty

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳದೆ ಯಾವುದೇ ಕಾರಣಕ್ಕೂ ಟೋಲ್ ಸಂಗ್ರಹಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ತುರವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಎಚ್ಚರಿಸಿದ್ದಾರೆ. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ಚತುಷ್ಪಥ ಕಾಮಗಾರಿಗೆ ನಾಗರಿಕರು ಬೆಂಬಲ ಸೂಚಿಸಿದ್ದಾರೆ. ರಸ್ತೆಯ ವಿನ್ಯಾಸದಂತೆ ಕಾಮಗಾರಿ ನಡೆಯಬೇಕಿತ್ತು. ಆದರೆ ಮೊದಲು ತಯಾರಿಸಿದ ನಕ್ಷೆಯಂತೆ ರಸ್ತೆಯನ್ನು ನಿರ್ಮಿಸಿಲ್ಲ. ಕೆಲವೆಡೆ ಅಸಮರ್ಪಕ ಹಾಗೂ ಅವೈಜ್ಞಾನಿಕ ಕಾಮಗಾರಿಗಳು ನಡೆದಿವೆ. ರಸ್ತೆಯ ಕಾಮಗಾರಿ ಶೇ. 95 ರಷ್ಟು ಪೂರ್ಣಗೊಂಡಿಲ್ಲ. ಆದರೂ […]