ತೆರಿಗೆ ವಂಚನೆ, ಪಾಲಿಕೆಗೆ 3 ಪಟ್ಟು ಹೆಚ್ಚು ಬಾಡಿಗೆ!

Tuesday, February 18th, 2014
City-Corporation

ಮಂಗಳೂರು: ದೈತ್ಯ ಕೈಗಾರಿಕೆ ಸಂಸ್ಥೆಗಳಿಂದಲೇ ನೀರಿನ ಕಳವು, ಸುರತ್ಕಲ್‌ನಲ್ಲಿ ಪಾಲಿಕೆ ಕಚೇರಿಯ ಲೆಕ್ಕಕ್ಕಿಂತ ಹೆಚ್ಚಿಗೆ ಬಾಡಿಗೆ ಜಾಲ, ಖಾಸಗಿ ಮಾಲ್‌ಗಳ ತೆರಿಗೆ ವಂಚನೆ ಪುರಾಣ, ಅನಧಿಕೃತ ಪಾರ್ಕಿಂಗ್ ಶುಲ್ಕ… ಒಂದೇ ರಡೇ ಮಹಾನಗರ ಪಾಲಿಕೆಯ ಬಜೆಟ್ ಪೂರ್ವ ಸಿದ್ಧತೆ ಸಭೆಯಲ್ಲಿ ಸಾರ್ವಜನಿಕರು, ಕಾರ್ಪೊರೇಟರ್‌ಗಳು ಒಂದೊಂದೇ ವಂಚನೆಯನ್ನು ಬಟಾ ಬಯಲು ಮಾಡಿದರು. ಪ್ರತಿ ವಿಚಾರಗಳು ಬಂದಾಗ ಸರಿಯಾಗಿ ಮಾಹಿತಿ ಇಲ್ಲದೆ ಪಾಲಿಕೆ ಎಂಜಿನಿಯರ್‌ಗಳು, ಅಧಿಕಾರಿಗಳು ತಡಬಡಾಯಿಸಿದರು. ನೀರಿನ ಬಿಲ್ಲಿನ ಅಕ್ರಮ ತಡೆಗಟ್ಟುವ ಸಲುವಾಗಿ ಕೈಗಾರಿಕೆಗಳಿಗೆ ಡಿಜಿಟಲ್ ಮಾದರಿಯ ಮೀಟರ್ […]

ಕಾಣೆಯಾದ ಮಕ್ಕಳ ಬ್ಯೂರೋಃ ಜಿಲ್ಲಾ ಘಟಕಕ್ಕೆ ಚಾಲನೆ

Tuesday, February 18th, 2014
A.B.-Ibrahim

ಮಂಗಳೂರು : ಹಿರಿಯ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಬಾಲ ನ್ಯಾಯ ಮಂಡಳಿ ಅಧ್ಯಕ್ಷ ಪಾಟೀಲ್‌ ನಾಗಲಿಂಗನ ಗೌಡ, ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚಿ ಮರಳಿ ಮನೆಗೆ ಸೇರಿಸುವ ಮಕ್ಕಳ ಬ್ಯೂರೋ, ದಕ್ಷಿಣ ಕನ್ನಡ ಜಿಲ್ಲಾ ಘಟಕಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಘಟಕವನ್ನು ಸೋಮವಾರ  ಉದ್ಘಾಟಿಸಿದರು. ಕಾಣೆಯಾದ ಮಕ್ಕಳನ್ನು ಪತ್ತೆಹಚ್ಚಿ ಅವರನ್ನು ಮನೆಗೆ ಸೇರಿಸುವ ಈ ಘಟಕವು ಪರಿಣಾಮಕಾರಿಯಾಗಿ ಕಾರ್ಯವೆಸಗಬೇಕು ಎಂದವರು ಸಲಹೆ ನೀಡಿದರು. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಬ್ಯೂರೋದ ಮಾಹಿತಿ ಮತ್ತು ಶೈಕ್ಷಣಿಕ ಪರಿಕರಗಳನ್ನು […]

ಮೇ 2ಕ್ಕೆ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

Tuesday, February 18th, 2014
Virender-Hegde

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದಲ್ಲಿ ಮೇ 2ರಂದು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ವರದಕ್ಷಿಣೆ, ವಿವಾಹಕ್ಕಾಗುವ ದುಂದುವೆಚ್ಚ ತಡೆಯುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಆರಂಭಿಸಿದ್ದು, ಪ್ರತಿವರ್ಷ ಸಾಮೂಹಿಕ ವಿವಾಹ ಏರ್ಪಡಿಸಲಾಗುತ್ತದೆ. ಕಳೆದ ವರ್ಷದವರೆಗೆ ಧರ್ಮಸ್ಥಳದಲ್ಲಿ 11,465 ಜೋಡಿ ಸಾಮೂಹಿಕ ವಿವಾಹವಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಕೊಡಲಾಗುವುದು. ವಿವಾಹವಾಗಲು ಇಚ್ಚಿಸುವವರು ಏ.28ರೊಳಗೆ ಧರ್ಮಸ್ಥಳದ ವಿವಾಹ ನೋಂದಣಿ ಕಚೇರಿಯಲ್ಲಿ ಹೆಸರು ದಾಖಲಿಸಲು […]

ದರ್ಶನ್ ಸಂಭಾವನೆ 8 ಕೋಟಿ

Tuesday, February 18th, 2014
Dharshan

ಇತ್ತೀಚೆಗೆ ಡಬ್ಬಿಂಗ್ ವಿವಾದದ ಚರ್ಚೆಯ ಸಂದರ್ಭ ಶತಾಯಗತಾಯ ಡಬ್ಬಿಂಗ್ ತಂದೇ ತೀರ್ತೆವೆ ಅಂತ ವಾದ ಮಾಡಿದ್ದ ನಿರ್ಮಾಪಕರೊಬ್ಬರು ಕನ್ನಡದಲ್ಲಿ ಒಬ್ಬ ದೊಡ್ಡ ಹೀರೋಗೆ ರು.8 ಕೋಟಿ ಸಂಭಾವನೆ ಕೊಡ್ಬೇಕು ಅಂದಿದ್ರು. ಇನ್ನು ಹೀರೋಯಿನ್ ಗೆ ಒಂದು ಕೋಟಿ. ಡೈರೆಕ್ಟರ್ ಗೆ ಒಂದು ಕೋಟಿ. ಸಿನಿಮಾ ಮಾಡೋಕೆ ಒಂದೈದು ಕೋಟಿ. ಹದಿನೈದು ಇಪ್ಪತ್ತು ಕೋಟಿ ಹಾಕಿ ಸಿನಿಮಾ ಮಾಡೋಕೆ ನಮ್ದೇನು ತೆಲುಗು ಸಿನಿಮಾನಾ, ತಮಿಳು ಸಿನಿಮಾನ ಅಂತ ಗುಟುರು ಹಾಕಿದ್ರು. ಆದರೆ ಕನ್ನಡದಲ್ಲಿ ಯಾವ ಹೀರೋಗೆ ಎಂಟು ಕೋಟಿ […]

ಕೃಷ್ಣಾ ನ್ಯಾಯಾಧೀಕರಣ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ

Tuesday, February 18th, 2014
Siddaramaiah

ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ 2013 ನವೆಂಬರ್ 29 ರಂದು ಕೃಷ್ಣಾ ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಮಂಗಳವಾರ ನಿರ್ಧರಿಸಿದೆ. ಹಿರಿಯ ವಕೀಲ ನಾರಿಮನ್ ಅವರ ಸಲಹೆಯಂತೆ ಕೃಷ್ಟಾ ನ್ಯಾಯಾಧೀಕರಣ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಕೆಲವೊಂದು ಮಾರ್ಪಾಡು ಮಾಡುವ ಅಗತ್ಯತೆ ಇದ್ದು, ಈ ಸಂಬಂಧ ಸ್ಪಷ್ಟಿಕರಣಕ್ಕಾಗಿ ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕೃಷ್ಣಾ ನ್ಯಾಯಾಧೀಕರಣ ತೀರ್ಪಿಗೆ […]

ಮೋದಿ ಸಮಾವೇಶಕ್ಕೆ ಜನ ಜಾತ್ರೆ

Tuesday, February 18th, 2014
Modi

ಮಂಗಳೂರು: ಕೇಂದ್ರ ಮೈದಾನದಲ್ಲಿ ಫೆ.18ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರ ಮಾತುಕೇಳಲು ಒಂದುವರೆ ಲಕ್ಷಕ್ಕೂ ಮಿಕ್ಕಿ ಜನ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಹೇಳಿದೆ. ದಕ್ಷಿಣ ಕನ್ನಡ 1,676 ಬೂತ್ ಮತ್ತು ಉಡುಪಿಯ 1 ಸಾವಿರ ಬೂತ್‌ಳಿಂದಲೂ ಜನ ಸ್ವಯಂ ಪ್ರೇರಿತರಾಗಿ ವಾಹನ ವ್ಯವಸ್ಥೆಯೊಂದಿಗೆ ಆಗಮಿಸಲಿದ್ದಾರೆ. ಇದಕ್ಕೆ  ಜಿಲ್ಲಾಡಳಿತ ನೆರವಿನೊಂದಿಗೆ ಸರ್ವ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಪ್ರತಾಪ್‌ಸಿಂಹ ನಾಯಕ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಸಮಾವೇಶ ವೀಕ್ಷಿಸಲು ನಗರದಲ್ಲಿ 4 ಎಲ್‌ಇಡಿ ಅಳವಡಿಸಲಾಗಿದೆ. ಕೇಂದ್ರ ಮೈದಾನದ ಹೊರಗಡೆ […]

ತೆಲಂಗಾಣ ಸಮರ ಜಗನ್ ರೆಡ್ಡಿ ಬಂಧನ

Tuesday, February 18th, 2014
Jagan-Reddy

ನವದೆಹಲಿ: ವಿವಾದಿತ ತೆಲಂಗಾಣ ಬಗೆಗಿನ ರಾಜಕೀಯ ಸಮರ ತೀವ್ರಗೊಂಡಿದೆ. ಆಂಧ್ರ ವಿಭಜನೆ ವಿರೋಧಿಸಿ ವೈಎಸ್ಸಾರ್ ಕಾಂಗ್ರೆಸ್ ನಾಯಕ ಜಗನ್ಮೋಹನ್‌ರೆಡ್ಡಿ ಸೋಮವಾರ ದೆಹಲಿಯ ಜಂತರ್‌ಮಂತರ್‌ನಲ್ಲಿ ಧರಣಿ ನಡೆಸಿ, ಸಾವಿರಾರು ಬೆಂಬಲಿಗರೊಂದಿಗೆ ಬಂಧನಕ್ಕೊಳಗಾಗಿದ್ದಾರೆ. ಇದೇ ವೇಳೆ, ಆಂಧ್ರ ವಿಭಜನೆ ತಡೆಯಲು ಬಿಜೆಪಿ ಸಹಕರಿಸಿದರೆ ನಮ್ಮ ಪಕ್ಷ ಮೋದಿಗೆ ಬೆಂಬಲ ನೀಡಲಿದೆ ಎಂದೂ ಜಗನ್ ಘೋಷಿಸಿದ್ದಾರೆ.  ಈ ಎಲ್ಲ ಬೆಳವಣಿಗೆಗಳ ನಡುವೆಯೂ ಲೋಕಸಭೆಯಲ್ಲಿ ಮಂಗಳವಾರ ತೆಲಂಗಾಣ ಮಸೂದೆ ಅಂಗೀಕಾರವಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಐವರು ಸಂಸದರು ಸೋಮವಾರ ಬಿಜೆಪಿ ಹಿರಿಯ ನಾಯಕ ಎಲ್.ಕೆ. […]

ದೆಹಲಿಗೆ ಇನ್ನು ಜಂಗ್ ರಾಜ್ಯಭಾರ

Tuesday, February 18th, 2014
Najib--Jung

ನವದೆಹಲಿ: ದೆಹಲಿಯಲ್ಲಿ ಸೋಮವಾರ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. ಸಿಎಂ ಅರವಿಂದ ಕೇಜ್ರಿವಾಲ್ ರಾಜಿನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದಾರೆ. ಕೇಜ್ರಿವಾಲ್ ರಾಜಿನಾಮೆ ಅಂಗೀಕಾರ ಅಮಾನತಿನಲ್ಲಿ ವಿಧಾನಸಭೆ ದೆಹಲಿ ವಿಧಾನಸಭೆಯನ್ನು ಅಮಾನತಿನಲ್ಲಿಡಲಾಗಿದೆ ಎಂದು ಸಂಸತ್‌ನ ಎರಡೂ ಸದನಗಳಲ್ಲಿ ಕೇಂದ್ರ ಗೃಹ ಸಚಿವ ಸುಶೀಲ್‌ಕುಮಾರ್ ಶಿಂದೆ ಸ್ವಯಂಪ್ರೇರಿತ ಹೇಳಿಕೆ ನೀಡಿದ್ದಾರೆ.  ರಾಷ್ಟ್ರಪತಿ ಪ್ರಣಬ್ ಅವರು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಮೂಲಕ ದೆಹಲಿಯಲ್ಲಿ ಆಡಳಿತ ನಡೆಸಲಿದ್ದಾರೆ ಎಂದು ಲೆ.ಗವರ್ನರ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ. ಕೇಜ್ರಿವಾಲ್ ಸರ್ಕಾರ ರಾಜಿನಾಮೆ ನೀಡಿದ ಬೆನ್ನಲ್ಲೇ […]

ರಾಜೀವ್ ಗಾಂಧಿ ಹಂತಕರಿಗೆ ಜೀವಾವಧಿ ಶಿಕ್ಷೆ

Tuesday, February 18th, 2014
Rajiv-Gandhi

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಮಂಗಳವಾರ ಪರಿವರ್ತಿಸಿದೆ. ಕ್ಷಮಾದಾನ ಅರ್ಜಿ ವಿಲೇವಾರಿಯಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ತಮ್ಮ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬೇಕು ಎಂದು ಮೂವರು ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ‘ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಂತಕರಿಗೆ ಕ್ಷಮಾದಾನ ಇಲ್ಲ. ಅವರಿಗೆ ಗಲ್ಲು ಶಿಕ್ಷೆಯೇ ಸೂಕ್ತ’ ಎಂದು  ಸುಪ್ರೀಂಕೋರ್ಟ್ ಈ ಹಿಂದಿನ ವಿಚಾರಣೆಯಲ್ಲಿ ಅಭಿಪ್ರಾಯಪಟ್ಟಿತ್ತು. ಅಲ್ಲದೆ ಕೇಂದ್ರ […]

ಮೋದಿ ಸಮಾವೇಶಕ್ಕೆ ಪೊಲೀಸ್ ಸರ್ಪಗಾವಲು

Monday, February 17th, 2014
Narendra-Modi

ಮಂಗಳೂರು: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಫೆ.18ರಂದು ಮಂಗಳೂರಿಗೆ ಆಗಮಿಸಲಿದ್ದು, ಅವರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ನೆಹರೂ ಮೈದಾನ ಹಾಗೂ ನಗರದಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೋಮವಾರ ಸಂಜೆಯಿಂದ ಸಮಾವೇಶ ನಡೆಯುವ ಸ್ಥಳ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಿದ್ದು, ನಗರದೆಲ್ಲೆಡೆ ಪೊಲೀಸ್ ಸರ್ಪಕಾವಲು ಹಾಕಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಆರ್.ಹಿತೇಂದ್ರ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮೈದಾನ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲ, ಕಾರ್ಯಕ್ರಮದಂದು ವಿಐಪಿ ಮಾರ್ಗ ಮತ್ತು ಕಾರ್ಯಕ್ರಮ ಸ್ಥಳದ ಸುತ್ತ […]