ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡ ಎಸ್ ಡಿಎಂ ಕಾಲೇಜು

Wednesday, April 10th, 2013
SDM College Ujire

ಮಂಗಳೂರು : ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಮಾನಸೋಲ್ಲಾಸ ಸಭಾಂಗಣದಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಉಜಿರೆಯ ಎಸ್ ಡಿಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗವು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ ಮೀಡಿಯ ವಿಭಾಗವು ಎಪ್ರಿಲ್ 5, 6 ರಂದು ಏರ್ಪಡಿಸಿದ್ದ ಒಟ್ಟು 10 ಸ್ಪರ್ಧೆಗಳಲ್ಲಿ 7 ಸ್ಪರ್ಧೆಗಳಲ್ಲಿ ಗೆಲ್ಲುವ ಮೂಲಕ ಎಸ್ ಡಿಎಂ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. […]

ಬಂದ್ಯೋಡು ವಸತಿ ಗೃಹವೊಂದರ ಮೇಲೆ ದಾಳಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ವಶ

Wednesday, April 10th, 2013
drugs mafia

ಕಾಸರಗೋಡು : ಜಿಲ್ಲೆಯಲ್ಲಿ ಗಾಂಜಾ ಸಾಗಾಣಿಕೆಯ ವಿರುದ್ದ ಪೊಲೀಸ್ ಕಾರ್ಯಾಚರಣೆ ಮುಂದುವರಿದಿದ್ದು ಬಂದ್ಯೋಡು ಬಳಿಯ ವಸತಿ ಗೃಹವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಅಬ್ದುಲ್ ಅಜೀಝ್ ಎಂಬಾತನನ್ನು ಬಂಧಿಸಿದ್ದಾರೆ. ಬಳಿಕ ಆತನ ನೆರೆಮನೆಯ ರಿಕ್ಷಾ ಚಾಲಕ ಅಬ್ಬಾಸ್ (35) ಎಂಬಾತನ ಮನೆ ಮೇಲೆ  ದಾಳಿ ನಡೆಸಿದ ಪೊಲೀಸರು ಮನೆಯಲ್ಲಿ 3 ಗೋಣಿ ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಗಾಂಜಾವನ್ನು ಪತ್ತೆ ಹಚ್ಚಿ ಮನೆಯಲ್ಲಿದ್ದ ಆತನ ಪತ್ನಿ ಸೆಮೀರಾ ಯಾನೆ ಸೆಮೀಮಾ(26) ಎಂಬಾಕೆಯನ್ನು ಬಂಧಿಸಿದ್ದಾರೆ. ಬಳಿಕ ಬಂಧಿತರು ನೀಡಿದ ಮಾಹಿತಿ ಮೇರೆಗೆ […]

ಉಪ್ಪಿನಂಗಡಿ ಬಳಿಯ ಪೆರ್ನೆ ಅಗ್ನಿ ದುರಂತ ಮಡಿದವರಿಗೆ ತಲಾ 1ಲಕ್ಷ ರೂಪಾಯಿ ಪರಿಹಾರ ಘೋಷಣೆ

Wednesday, April 10th, 2013
DC Harsha Gupta

ಮಂಗಳೂರು : ಉಪ್ಪಿನಂಗಡಿ ಸಮೀಪದ ಪೆರ್ನೆ, ರಾಷ್ಟೀಯ ಹೆದ್ದಾರಿ 75ರಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅನಿಲ ಟ್ಯಾಂಕರ್ ದುರಂತದಲ್ಲಿ ಮಡಿದವರಿಗೆ ತಲಾ 1ಲಕ್ಷ ರೂಪಾಯಿಗಳ ಪರಿಹಾರವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಹರ್ಷ ಗುಪ್ತ ಅವರು ಘೋಷಿಸಿದ್ದಾರೆ. ಶೇ.50 ಕ್ಕಿಂತಲೂ ಹೆಚ್ಚು ಸುಟ್ಟು ಗಾಯಗೊಂಡ ವ್ಯಕ್ತಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಹಾಗೂ ಶೇ.50ಕ್ಕಿಂತಲೂ ಕಡಿಮೆ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ತಕ್ಷಣ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮತ್ತು ಸಂಬಂಧಪಟ್ಟ ಅನಿಲ ಸರಬರಾಜು […]

ಮುಂಡ್ಕೂರಿನ ಬೆಳ್ಮಣ್ ಬಳಿ ಟಿಪ್ಪರ್ ಪಲ್ಟಿ, ಓರ್ವನ ಸಾವು

Tuesday, April 9th, 2013
Truck overturns at Karkala

ಕಾರ್ಕಳ : ಸೋಮವಾರ ಸಂಜೆ 4.30ರ ಸುಮಾರಿಗೆ ಕಾರ್ಕಳದಿಂದ ಮುಂಡ್ಕೂರಿಗೆ ಇಂಟರ್‌ಲಾಕ್‌ ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ವೊಂದು ಬೆಳ್ಮಣ್ ಇಂದಾರು ತಿರುವು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೆ ಮೃತಪಟ್ಟರೆ ಚಾಲಕನ ಸಹಿತ ೪ ಮಂದಿ ಗಾಯಗೊಂಡಿದ್ದು, ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ. ಮೃತಪಟ್ಟವರು ಯಾದಗಿರಿ ಮೂಲದವರಾಗಿದ್ದು, ಇತರರ ವಿವರ ತಿಳಿದು ಬಂದಿಲ್ಲ. ಅಪಘಾತ ನಡೆದ ಸ್ಥಳದಲ್ಲಿ ರಬ್ಬರ್‌ ಮೌಲ್ಡಿಂಗ್‌ ಚೆಲ್ಲಾ ಪಿಲ್ಲಿಯಾಗಿದ್ದು ಗಾಯಗೊಂಡವರ ಪೈಕಿ ಓರ್ವನ ಕಾಲು, ತಲೆಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮಣಿಪಾಲ […]

ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ ಸಂಚಾರ ಸಂಪೂರ್ಣ ಬಂದ್

Tuesday, April 9th, 2013
Gas tanker accident near Uppinangady

ಮಂಗಳೂರು : ಸುಮಾರು 16 ಸಾವಿರ ಲೀಟರ್ ಅನಿಲವನ್ನು ತುಂಬಿಕೊಂಡ ಟ್ಯಾಂಕರ್ ವೊಂದು  ಮಂಗಳೂರಿನನಿಂದ ಬೆಂಗಳೂರಿಗೆ ಸಾಗುತ್ತಿದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಇಂದು ಬೆಳಗ್ಗೆ ೯ ಗಂಟೆಗೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಪೆರ್ನೆ ಬಳಿ ನಡೆದಿದೆ. ಟ್ಯಾಂಕರ್ ಉರುಳಿಬಿದ್ದ ಪರಿಣಾಮ ಅನಿಲ ಸೋರಿಕೆ ಉಂಟಾಗಿ ಬೆಂಕಿ ಹೊತ್ತಿಕೊಂಡು ಟ್ಯಾಂಕರ್‌ನಲ್ಲಿದ್ದ ಚಾಲಕ ಹಾಗೂ ಕ್ಲಿನರ್ ಬೆಂಕಿಗಾಹುತಿಯಾಗಿದ್ದಾರೆ. ಮಾತ್ರವಲ್ಲದೆ ಬೆಂಕಿ ರಾಷ್ಟ್ರೀಯ ಹೆದ್ದಾರಿ 75 ರ ಸುಮಾರು 20 ಕ್ಕೂ ಹೆಚ್ಚಿನ ಮನೆಗಳಿಗೆ […]

ಪ್ರಶಾಂತ್ ಕೊಲೆ ಪ್ರಕರಣ, ಎಸಿಪಿ ಜಗನ್ನಾಥ ನೇತೃತ್ವದಲ್ಲಿ ತನಿಖೆ

Tuesday, April 9th, 2013
Prashanth murder case

ಮಂಗಳೂರು : ಆದಿನಾಥೇಶ್ವರ ಟ್ರಾನ್ಸ್‌ಪೋರ್ಟ್ ಕಂಪನಿಯ ಮ್ಯಾನೇಜರ್ ಪ್ರಶಾಂತ್ ಕೊಲೆ ಪ್ರಕರಣಕ್ಕೆ ಸಂಬಧಪಟ್ಟಂತೆ ಮಂಗಳೂರು ಗ್ರಾಮಾಂತರ ಇನ್‌ಸ್ಪೆಕ್ಟರ್ ಹಾಗೂ ಎಸಿಪಿ ಜಗನ್ನಾಥ ನೇತೃತ್ವದಲ್ಲಿ  ತಂಡಗಳನ್ನು ರಚಿಸಲಾಗಿದೆ. ರವಿವಾರ ರಾತ್ರಿ ೧೧.೨೫ ರ ವೇಳೆಗೆ ಸುಮಾರು ಆರರಿಂದ ಏಳು ಮಂದಿಯ ಹಂತಕರ ತಂಡ ಪ್ರಶಾಂತ್ ಮೇಲೆ ಗುಂಡು ಹಾರಿಸಿ ಬಳಿಕ ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದೆ. ಕೊಲೆ ನಡೆದ ಸ್ಥಳಕ್ಕೆ ಬೆರಳಚ್ಚು ಹಾಗೂ ಶ್ವಾನದಳತಂಡ ಭೇಟಿ ನೀಡಿ ತನಿಖೆ ನಡೆಸಿದೆ. ಪೊಲೀಸರಿಗೆ ಆರೋಪಿಗಳ ಬಗ್ಗೆ ಸ್ಪಷ್ಟ ಮಾಹಿತಿ ಲಭಿಸಿದ್ದು ಬಂಧನಕ್ಕೆ […]

ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ

Tuesday, April 9th, 2013
Siddaramaiah CM candidate

ಉಡುಪಿ : ಬಿಜೆಪಿಯ ಭದ್ರ ಕೋಟೆಯಾಗಿದ್ದ ಉಡುಪಿಯಲ್ಲಿ ಸ್ಥಳೀಯ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲೆ ರಾಜ್ಯದಲ್ಲೂ ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಹೊಂದಿರುವ ಉಡುಪಿ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿರುವ ಸಿದ್ದರಾಮಯ್ಯ ನವರೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದಾಗಿ ಘೋಷಿಸಿದ್ದಾರೆ. ಸೋಮವಾರ ಉಡುಪಿ ತಾಲುಕಿನ ಪರ್ಕಳದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಿದ್ದಾರಮಯ್ಯನವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯನವರೆ ಮುಖ್ಯಮಂತ್ರಿಯಾಗಬೇಕೆಂದು ಪ್ರಾರ್ಥಿಸಿ ದೇವಾಲಯದಲ್ಲಿ  ವಿಶೇಷ ಪೂಜೆ ಸಲ್ಲಿಸಿದರು.

ಅನಿಯಮಿತ ವಿದ್ಯುತ್ ಕಡಿತ, ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕರ್ನಾಟಕ ರೈತ ಸಂಘ

Monday, April 8th, 2013
KRRS pickets Mescom office

ಮಂಗಳೂರು : ಅನಿಯಮಿತ ಲೋಡ್ ಶೆಡ್ಡಿಂಗ್, ಹಾಗು ರೈತರ ಮೇಲೆ ಅನಗತ್ಯ ಹಾಕಿರುವ ಕೇಸುಗಳನ್ನು ಹಿಂತೆಗೆದುಕೊಳ್ಳುವಂತೆ ಮತ್ತು ವಿವಿಧ ಸಮಸ್ಯೆಗಳ ಪರಿಹಾರಕ್ಕೆ  ಆಗ್ರಹಿಸಿ ಸೋಮವಾರ ಕರ್ನಾಟಕ ರೈತ ಸಂಘದ ಸದಸ್ಯರು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದರು. ಈ ಹಿಂದೆ ಜೋಗ್ ಜಲಪಾತದ ವಿದ್ಯುತ್ ನ್ನು ದ.ಕ. ಮತ್ತು ಉಡುಪಿ ಜಿಲ್ಲೆಗಳಿಗೆ ಪೂರೈಸಲಾಗುತಿತ್ತು. ಆದರೆ ಯು.ಪಿ.ಸಿ.ಎಲ್ ಸ್ಥಾಪನೆಯಾದ ನಂತರ ನಿರಂತರ ವಿದ್ಯುತ್ ಒದಗಿಸಲಾಗುವುದು ಎಂದು ಹೇಳಿಕೆ ನೀಡಿ. ಇದೀಗ ಯು.ಪಿ.ಸಿ.ಎಲ್.ನ ವಿದ್ಯುತ್ ನೇರ […]

ಪಣಂಬೂರು ಬೀಚ್ ನಲ್ಲಿ ನೀರಾಟವಾಡುತ್ತಿದ್ದ ವಿದ್ಯಾರ್ಥಿ ನೀರುಪಾಲು

Monday, April 8th, 2013
Panamburu beach

ಮಂಗಳೂರು : ಪರೀಕ್ಷೆ ಬರೆಯಲೆಂದು ಚಿಕ್ಕಮಗಳೂರಿನಿಂದ ಮಂಗಳೂರಿಗೆ ಆಗಮಿಸಿದ ವಿದ್ಯಾರ್ಥಿಯೊಬ್ಬ ಪಣಂಬೂರು ಬೀಚ್ ನಲ್ಲಿ ನಿರಾಟವಾಡುತ್ತಿದ್ದ ವೇಳೆ ಸಮುದ್ರದ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ಮೃತ ದುರ್ದೈವಿ ಚಿಕ್ಕಮಂಗಳೂರಿನ ಅಕಾಶ್ ಕಡೂರ್ (17). ಚಿಕ್ಕಮಗಳೂರಿನಿಂದ ಮಂಗಳೂರಿಗೆ ಎಇಇಇ ಪರೀಕ್ಷೆ ಬರೆಯಲು ಚಿಕ್ಕಮಂಗಳೂರಿನ ನವೋದಯ ವಿದ್ಯಾಲಯದ ಸುಮಾರು 35 ಮಂದಿ ವಿದ್ಯಾರ್ಥಿಗಳು ಆಗಮಿಸಿದ್ದರು. ಪರೀಕ್ಷೆ ಮುಗಿದ ನಂತರ ಪಣಂಬೂರು ಬೀಚ್ ಗೆ ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಆಡುತ್ತಿದ್ದು ಅಕಾಶ್ ಅನಿರೀಕ್ಷಿತವಾಗಿ ಬಂದ ಸಮುದ್ರದ ಅಲೆಗೆ ಸಿಕ್ಕಿ ಸೆಳೆಯಲ್ಪಟ್ಟು […]

ಜಿಲ್ಲಾ ವಾರ್ತ ಇಲಾಖೆಯಲ್ಲಿ ದಿನದ ೨೪ ಗಂಟೆ ಕಾರ್ಯನಿರ್ವಹಿಸುವ ಎಂಸಿಎಂಸಿ ಸಮಿತಿ ಸ್ಥಾಪನೆ

Monday, April 8th, 2013
MCMC

ಮಂಗಳೂರು : ಸ್ಥಳೀಯ ಕೇಬಲ್‌ ಟಿ.ವಿ. ಚಾನೆಲ್‌ಗ‌ಳಲ್ಲಿ ಪ್ರಸಾರವಾಗುವ ಚುನಾವಣಾ ಸಂಬಂಧಿತ ವರದಿ ಹಾಗು ಜಾಹಿರಾತುಗಳ ಬಗ್ಗೆ ಗಮನ ಹರಿಸಲು ಮೀಡಿಯಾ ಸರ್ಟಿಫಿಕೇಶನ್ ಅಂಡ್ ಮಾನಿಟರಿಂಗ್ ಕಮಿಟಿ (ಎಂಸಿಎಂಸಿ) ಯೊಂದನ್ನು ಜಾರಿಗೆ ತರಲಾಗಿದೆ. ಮಂಗಳೂರಿನ ಜಿಲ್ಲಾ ವಾರ್ತ ಇಲಾಖೆ ಕಛೇರಿ ಸಭಾಂಗಣದಲ್ಲಿ ಪ್ರಾರಂಭಗೊಂಡಿರುವ ಈ ವ್ಯವಸ್ಥೆ ದಿನದ 24 ಗಂಟೆಗಳ ಕಾಲವೂ ಕಾರ್ಯಾಚರಿಸಲಿದ್ದು,  ತಾತ್ಕಾಲಿಕ ಎರವಲು ಸೇವೆಯಲ್ಲಿ ಬೇರೆ ಬೇರೆ ಇಲಾಖೆಗಳ ಸಿಬ್ಬಂದಿಗಳನ್ನು ಈ ಕಮಿಟಿಯಲ್ಲಿ ಕಾರ್ಯನಿರ್ವಹಿಸಲು ನೇಮಕ ಮಾಡಲಾಗಿದೆ. ಈ ಕಮಿಟಿಯಲ್ಲಿನ ಸಿಬ್ಬಂದಿಗಳು ಮಂಗಳೂರಿನಲ್ಲಿ ಸ್ಥಳೀಯವಾಗಿ […]