ಮಚ್ಚೇಂದ್ರನಾಥ ಪಾಂಡೇಶ್ವರರಿಗೆ ‘ತುಳುನಾಡ ತುಳುಶ್ರೀ’ಪ್ರಶಸ್ತಿ ಪ್ರಧಾನ

Saturday, August 6th, 2011
Machendranatha Pandeshwar/ ಮಚ್ಚೇಂದ್ರನಾಥ ಪಾಂಡೇಶ್ವರ

ಮಂಗಳೂರು : ನಾಟಕಕಾರ-ಸಿನಿಮಾ ನಟ ಮಚ್ಚೇಂದ್ರನಾಥ ಪಾಂಡೇಶ್ವರ ಅವರನ್ನು ಆಲದಪದವು ಅಕ್ಷರ ಪ್ರತಿಷ್ಠಾನ ವತಿಯಿಂದ ನೀಡಲಾಗುವ 8ನೇ ವರ್ಷದ ‘ತುಳುನಾಡ ತುಳುಶ್ರೀ’ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡ ನಾಟಕ ಹಾಗೂ ತುಳು ಸಾಹಿತ್ಯದಲ್ಲಿ ಅನೇಕ ಹಾಡುಗಳನ್ನು ರಚಿಸಿ, 160ಕ್ಕೂ ಹೆಚ್ಚು ನಾಟಕಗಳನ್ನು ಬರೆದು ಸ್ವತಃ ಹಲವು ನಾಟಕಗಳಲ್ಲಿ ಪ್ರಬುದ್ದ ನಟರಾಗಿ-ನಿರ್ದೇಶಕರಾಗಿ ಸೇವೆ ಸಲ್ಲಿಸಿದಕ್ಕೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಗಸ್ಟ್ 7ರಂದು ಸಂಜೆ 3ಗಂಟೆಗೆ ರಾಯಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ […]

ಮಂಗಳೂರು ಕಾಸರಗೋಡು ಬಸ್‌ ಪ್ರಯಾಣ ದರ ಆ.8 ರಿಂದ ಏರಿಕೆ

Friday, August 5th, 2011
Private Bus/ ಖಾಸಗಿ ಬಸ್‌

ಕಾಸರಗೋಡು : ಕೇರಳ ರಾಜ್ಯದಲ್ಲಿ ಡೀಸೆಲ್‌ ಮತ್ತು ಬಿಡಿ ಭಾಗಗಳ ಬೆಲೆಯೇರಿಕೆಯ ಬಿಸಿ ಖಾಸಗಿ ಬಸ್‌ ಮಾಲಕರಿಗೆ ತಟ್ಟಿದ್ದು ಅನಿವಾರ್ಯವಾಗಿ ಪ್ರಯಾಣ ದರವನ್ನು ಆ.8 ಏರಿಸಲಾಗುವುದು ಎಂದು ಕೇರಳ ಬಸ್ ಮಾಲಕರ ಪತ್ರಿಕಾ ಪ್ರಕಟಣೆಯೊಂದು ತಿಳಿಸಿದೆ. ಸಾಮಾನ್ಯ ಬಸ್‌ಗಳಲ್ಲಿ ಕನಿಷ್ಠ ಪ್ರಯಾಣ ದರ 4 ರೂ.ನಿಂದ 5 ಕ್ಕೆ ಏರಲಿದೆ. ಫಾಸ್ಟ್‌ ಪ್ಯಾಸೆಂಜರ್‌ ಬಸ್‌ ಪ್ರಯಾಣ ದರವನ್ನು 5 ರೂ.ನಿಂದ 7 ರೂ. ಗೆ ಏರಿಸಲಾಗಿದೆ. ಕನಿಷ್ಠ ದರದಲ್ಲಿ ಪ್ರಯಾಣಿಸುವ ಕಿಲೋಮೀಟರ್‌ ಮಿತಿಯನ್ನು ಎರಡೂವರೆ ಕಿ.ಮೀ.ನಿಂದ ಐದು […]

ಮುಂಬಯಿ- ಮಂಗಳೂರು ಖಾಸಗಿ ಬಸ್ಸಿನಲ್ಲಿ ಪ್ರಜ್ಞೆ ತಪ್ಪಿಸಿ ಪ್ರಯಾಣಿಕನ ಲೂಟಿ

Friday, August 5th, 2011
Bus-Passenger-Luted/ಬಸ್ಸಿನಲ್ಲಿ ಪ್ರಜ್ಞೆ ತಪ್ಪಿಸಿ ಪ್ರಯಾಣಿಕನ ಲೂಟಿ

ಮಂಗಳೂರು : ಮುಂಬಯಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸಿದ್ದ ಕಾಸರಗೋಡಿನ ಕುಂಬಳೆಯ ವಿಶ್ವನಾಥ ಶೆಟ್ಟಿ (36) ಯವರನ್ನು ಬುಧವಾರ ರಾತ್ರಿ ಮತ್ತು ಬರುವ ಪದಾರ್ಥ ನೀಡಿ. ಪ್ರಜ್ಞೆ ತಪ್ಪಿಸಿ ನಗದು ಹಾಗೂ ಚಿನ್ನಾಭರಣಗಳನ್ನು ಲೂಟಿಗೈಯಲಾಗಿದೆ. ಮಂಗಳೂರಿಗೆ ತಲುಪುವಾಗ ಅರೆ ಪ್ರಜ್ಞಾವಸ್ಥೆಯಲ್ಲಿ ಉಟ್ಟ ಬಟ್ಟೆ ಮತ್ತು ಮೊಬೈಲ್‌ ಫೋನ್‌ ಹೊರತು ಪಡಿಸಿ ಉಳಿದೆಲ್ಲವನ್ನೂ ಕಳೆದುಕೊಂಡಿದ್ದಾರೆ. ಬುಧವಾರ ಮಧ್ಯಾಹ್ನ ಮುಂಬಯಿನ ಮಲಾಡ್‌ನಿಂದ ಖಾಸಗಿ ಸಂಸ್ಥೆಯ ವೋಲ್ವೊ ಬಸ್ಸನ್ನೇರಿದ ವಿಶ್ವನಾಥ ಶೆಟ್ಟಿ ಅವರು ಗುರುವಾರ ಪೂರ್ವಾಹ್ನ 10.30 ಕ್ಕೆ ಮಂಗಳೂರಿಗೆ ತಲುಪಿದಾಗ […]

26ನೇ ಮುಖ್ಯಮಂತ್ರಿಯಾಗಿ ಡಿ.ವಿ ಸದಾನಂದ ಗೌಡ ಪ್ರಮಾಣವಚನ

Thursday, August 4th, 2011
Sadananda Gowda sworn in/ ಸದಾನಂದ ಗೌಡ ಪ್ರಮಾಣ ವಚನ

ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಬಣದ ದೇವರಗುಂಡ ವೆಂಕಪ್ಪಗೌಡ ಸದಾನಂದ ಗೌಡ ರಾಜ್ಯದ 26ನೇ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸುಬ್ರಮಣ್ಯನಗರದ ತಮ್ಮ ನಿವಾಸದಿಂದ ರಾಜಭವನಕ್ಕೆ ಬೆಂಬಲಿಗರೊಂದಿಗೆ ಕ್ರೀಂ ಕಲರ್ ಪ್ಯಾಂಟ್, ಬಿಳಿ ಬಣ್ಣದ ಅಂಗಿ, ಬ್ಲ್ಯಾಕ್ ಕಲರ್ ಶೂ ಧರಿಸಿ ಆಗಮಿಸಿದರು. ನಂತರ ಬಿ.ಎಸ್.ಯಡಿಯೂರಪ್ಪನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಪಕ್ಷದ ಹಿರಿಯ ಮುಖಂಡರು, ಆಪ್ತರಿಗೆ ಕೈಕುಲುಕುವ ಮೂಲಕ ಅಭಿನಂದನೆ ಸ್ವೀಕರಿಸಿದರು. ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಪ್ರತಿಜ್ಞಾವಿಧಿ ಬೋಧಿಸಿದರು. ರಾಗ, ದ್ವೇಷ ಇಲ್ಲದೆ, […]

ನಾಡಿನೆಲ್ಲೆಡೆ ಶೃದ್ದಾ ಭಕ್ತಿಯ ‘ನಾಗರಪಂಚಮಿ’

Thursday, August 4th, 2011
Nagara Panchami/ನಾಗರಪಂಚಮಿ

ಮಂಗಳೂರು : ಇಂದು ದೇಶದಾದ್ಯಂತ ನಾಗರ ಪಂಚಮಿಯನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ‘ನಾಗರ ಪಂಚಮಿ’ ಕೃಷಿ ಮತ್ತು ಮಳೆಯಿಂದಾಗಿ ಸ್ಥಗಿತಗೊಂಡಿದ್ದ ನಮ್ಮ ಎಲ್ಲ ಶ್ರದ್ಧೆಯ, ಉತ್ಸಾಹದ ಆಚರಣೆಗಳೆಲ್ಲ ಮತ್ತೆ ಆರಂಭವಾಗುವ ಮೊದಲ ಹಬ್ಬ. ನಾಡಿಗೆ ದೊಡ್ಡ ಹಬ್ಬವೆಂದೇ ಪ್ರತೀತಿ. ಆಟಿ ತಿಂಗಳ ಅಮಾವಾಸ್ಯೆ ಯಂದು ಕಹಿ ಮದ್ದು ಸೇವಿಸಿ ನಮ್ಮ ಮೂಲದ ನಾಗನ ಸ್ಥಾನಕ್ಕೆ ಹೊರಡಲು ಸಿದ್ಧತೆಗಳಾಗುತ್ತವೆ. ಮುಂದೆ ಐದನೇ ದಿನ ‘ನಾಗರಪಂಚಮಿ’ ಅಥವಾ ‘ನಾಗ ಪಂಚಮಿ’. ನಾಗನಿಗೆ ಹಲವು ನಾಮಗಳಿವೆ, ಉಭಯ ಜೀವಿಗಳಲ್ಲಿ ಹೆಚ್ಚು ಶಕ್ತಿ […]

ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಉಪಶಮನ ನಿಗಾ ಘಟಕದ ಕಾರ್ಯಾಗಾರ

Thursday, August 4th, 2011
Father Muller Medical College workshop /ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು

ಮಂಗಳೂರು : ನಗರದ ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜು ಇದರ ಗ್ರಂಥಿ ವಿಜ್ಞಾನ ಮತ್ತು ನರ್ಸಿಂಗ್ ವಿಭಾಗವು ಉಪಶಮನ ನಿಗಾ ಘಟಕದ ವಿಷಯದಲ್ಲಿ ಆಯೋಜಿಸಿದ ಕಾರ್ಯಾಗಾರವನ್ನು ಬುಧವಾರ ಅವರು ಜಿಲ್ಲಾಧಿಕಾರಿ ಡಾ| ಎನ್‌. ಎಸ್‌. ಚನ್ನಪ್ಪ ಗೌಡ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಬಡ ಜನರು ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅವರಿಗೆ ವೈದ್ಯಕೀಯ ಚಿಕಿತ್ಷೆಗಳು ಸೇವೆಯಾಗಿ ಸಿಗಬೇಕು ಎಂದು ಹೇಳಿದರು. ವೈದ್ಯಕೀಯ ಕ್ಷೇತ್ರ ವಾಣಿಜ್ಯೀಕರಣಗೊಂಡಿರುವ ಕಾರಣ ಎಲ್ಲರಿಗೂ ಸಮಾನ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. […]

ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿ : ಮಂಗಳೂರಿನಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

Thursday, August 4th, 2011
BJP Victory/ಮಂಗಳೂರಿನಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ

ಮಂಗಳೂರು : ಡಿ.ವಿ. ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಂಬ್ರಮವನ್ನು ಕೊಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು. ಮುಖ್ಯಮಂತ್ರಿ ಆಯ್ಕೆಯ ಘೋಷಣೆ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಭಟ್‌, ಶ್ರೀಕರ ಪ್ರಭು ಮೊದಲಾದವರು ಪರಸ್ಪರ ಸಿಹಿ ಹಂಚಿಕೊಂಡರು. ಬಳಿಕ ಕಚೇರಿಂದ ಹೊರಗೆ ಬಂದು ಸುರಿಯುವ ಮಳೆಯನ್ನೂ ಲೆಕ್ಕಿಸದೆ ಪಟಾಕಿ ಸಿಡಿಸಿದರು. ಡಿ.ವಿ. ಸದಾನಂದ ಗೌಡರ ಭಾವಚಿತ್ರವನ್ನು ಹಿಡಿದು ಜೈಕಾರ ಕೂಗಿದರು. […]

ದೇವರಗುಂಡ ವೆಂಕಪ್ಪ ಸದಾನಂದ ಗೌಡ ಕರ್ನಾಟಕದ 26 ನೇ ಮುಖ್ಯಮಂತ್ರಿ

Wednesday, August 3rd, 2011
DV Sadanandagowda/ದೇವರಗುಂಡ ವೆಂಕಪ್ಪ ಸದಾನಂದ ಗೌಡ

ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋತ ಅಭ್ಯರ್ಥಿ ಜಗದೀಶ್ ಶೆಟ್ಟರ್ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ಬುಧವಾರ ಮಧ್ಯಾಹ್ನ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಹಸ್ಯ ಮತದಾನದ ಮೂಲಕ ಡಿವಿಎಸ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡರು. ಸದಾನಂದ ಗೌಡ ಆಯ್ಕೆ ಮೂಲಕ ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಮೇಲುಗೈ ಸಾಧಿಸಿದಂತಾಗಿದೆ. ಯಡಿಯೂರಪ್ಪ ಸಹ ಮತ ಚಲಾಯಿಸಿದರು. ಸದಾನಂದ ಗೌಡ ಪರ 62 – […]

ಮುಂಬಯಿ ಕನ್ನಡ ಸಂಸ್ಕೃತಿ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌

Wednesday, August 3rd, 2011
ಮುಂಬಯಿ ಕನ್ನಡ ಸಂಸ್ಕೃತಿ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌

ಮಂಗಳೂರು: ಮುಂಬಯಿಯಲ್ಲಿ ಆ. 6 ಮತ್ತು 7ರಂದು ನಡೆಯಲಿರುವ ಕನ್ನಡ ಸಂಸ್ಕೃತಿ ಸಮ್ಮೇಳನದ ಪತ್ರಿಕಾಗೋಷ್ಠಿ ಮಂಗಳವಾರ ಪತ್ರಿಕಾಭಾವನದಲ್ಲಿ ನಡೆಯಿತು. ಮುಂಬಯಿಯ ಬಿಲ್ಲವ ಭವನ ಸಾಂತಾಕ್ರೂಸ್‌ನಲ್ಲಿ 8ನೇ ಅಖಲ ಭಾರತ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಕನ್ನಡ ಸಂಘ ಮತ್ತು ಹೃದಯ ವಾಹಿನಿ ಪತ್ರಿಕೆ ಆಯೋಜಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ. ಮಂಜುನಾಥ ಸಾಗರ್‌ ಸಮ್ಮೇಳನದ ಬಗ್ಗೆ ವಿವರಿಸಿದರು. ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದಲ್ಲಿ ಹೊರನಾಡು ಕನ್ನಡಿಗರ ಗೋಷ್ಠಿ, ಹಾಸ್ಯಗೋಷ್ಠಿ, ಕವಿಗೋಷ್ಠಿ, ಮಾಧ್ಯಮ ಗೋಷ್ಠಿ, ಪ್ರಶಸ್ತಿ […]

ಮಂಗಳೂರು ಕೆಎಸ್‌ಆರ್‌ಟಿಸಿ ನಿಗಮದ 50ನೇ ಸಂಸ್ಥಾಪನಾ ದಿನಾಚರಣೆ

Tuesday, August 2nd, 2011
ಮಂಗಳೂರು ಕೆಎಸ್‌ಆರ್‌ಟಿಸಿ ನಿಗಮದ 50ನೇ ಸಂಸ್ಥಾಪನಾ ದಿನಾಚರಣೆ

ಮಂಗಳೂರು: ಕೆಎಸ್‌ಆರ್‌ಟಿಸಿ ನಿಗಮವು ತನ್ನ 50ನೇ ಸಂಸ್ಥಾಪನಾ ದಿನವನ್ನು ಮಂಗಳೂರಿನ ವಿಭಾಹೀಯ ಕಚೇರಿಯಲ್ಲಿ ಸೋಮವಾರ ಆಚರಿಸಿತು. ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ ಅವರು ನಗರ ವ್ಯಾಪ್ತಿಯಲಿ 4 ಸೆಟಲೈಟ್‌ ಬಸ್‌ ನಿಲ್ದಾಣಗಳ ನಿರ್ಮಾಣ ಕೋರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ, ನಗರ ಪ್ರದೇಶ ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ರಸ್ತೆಗಳು ಇನ್ನಷ್ಟು ವಿಸ್ತಾರವಾಗಬೀಕಿದೆ, ನಗರ ಪ್ರದೇಶದಲ್ಲಿ ವಹಿವಾಟುಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ಇನ್ನಷ್ಟು ಫ್ಲೈ ಓವರ್‌ಗಳ ನಿರ್ಮಾಣ ಕೂಡ ಅಗತ್ಯವಾಗಿದೆ. ಕಾಂಟ್ರಾಕ್ಟ್ ಕ್ಯಾರೇಜ್‌ […]