ಕೇರಳ ಹೈಕೋಟ್ ತೀರ್ಪು : ವಿಮಾನ ದುರಂತ ಮೃತರ ಕುಟುಂಬಕ್ಕೆ ತಲಾ 75 ಲಕ್ಷ ರೂ. ಪರಿಹಾರ

Wednesday, July 20th, 2011
Air Crash/ವಿಮಾನ ದುರಂತ

ಮಂಗಳೂರು: ಬಜಪೆ ಏರ್ಇಂಡಿಯಾ ವಿಮಾನ ದುರಂತ ಕಳೆದು ಒಂದು ವರುಷದ ಬಳಿಕ ಮೃತರಾದ ಪ್ರಯಾಣಿಕರ ಮನೆಯವರಿಗೆ  ತಲಾ 75 ಲಕ್ಷ ರೂ. ಪರಿಹಾರ ನೀಡುವಂತೆ ಕೇರಳ ಹೈಕೋಟ್ ತೀರ್ಪು ನೀಡಿದೆ. ದುಬೈಯಿಂದ ಮಂಗಳೂರಿಗೆ ತೆರಳುತ್ತಿದ್ದ ಏರ್‌ಇಂಡಿಯಾ ಸಂಸ್ಥೆಗೆ ಸೇರಿದ ಬೋಯಿಂಗ್ IX 892 ವಿಮಾನ ಮೇ 22 2010ರಂದು ಬಜಪೆ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿತ್ತು. ಈ ವಿಮಾನದಲ್ಲಿ 165 ಮಂದಿ ಪ್ರಯಾಣಿಕರಿದ್ದು, ಅವರಲ್ಲಿ 158 ಮಂದಿ ಸಾವಿಗೀಡಾಗಿದ್ದರು. ಇದರಲ್ಲಿ ಮೃತರಾದವರಿಗೆ ಏರ್‌ಇಂಡಿಯಾ ಸಂಸ್ಥೆ ಅತ್ಯಲ್ಪ ಪರಿಹಾರವನ್ನು ನೀಡಿ ಕೈತೊಳೆದುಕೊಂಡಿತ್ತು. ಕುಂಬಳೆಯ ಅಬ್ದುಲ್ […]

ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಅಧಾರ್ ಕಾರ್ಡ್ ಬಿಡುಗಡೆ

Tuesday, July 19th, 2011
Udupi-Adhar-card/ಉಡುಪಿಯಲ್ಲಿ ಆಧಾರ್ ಕಾರ್ಡ್ ಬಿಡುಗಡೆ

ಉಡುಪಿ : ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ಜಾರಿಗೆಗೊಳಿಸಿದ ಅಧಾರ್ ಕಾರ್ಡ್ ವಿತರಣೆಯನ್ನು ಜಿಲ್ಲಾಧಿಕಾರಿ ಟಿ‌.ಎಮ್ ರೇಜು  ನೆರವೇರಿಸಿದರು. ಪ್ರಥಮ ಆಧಾರ್ ಕಾರ್ಡ್ ನ್ನು ಜಿಲ್ಲಾಧಿಕಾರಿ ಟಿ‌.ಎಮ್ ರೇಜು ಅವರು ಲಯನ್ಸ್ ಗವರ್ನರ್ ಪಿಹೆಚ್ ಆಫ್ ಜಯಕರ ಶೆಟ್ಟಿ ಇಂದ್ರಾಳಿ ಯವರಿಗೆ ಹಸ್ತಾಂತರಿಸುವುದರ ಮೂಲಕ ಬಿಡುಗಡೆಗೊಳಿಸಿದರು. ಆಧಾರ್ ಕಾರ್ಡ್ ನಿಂದ ಸಾಕಷ್ಟು ಪ್ರಯೋಜನಕಾರಿಯಾಗಿದ್ದು ಕಂದಾಯ ಇಲಾಖೆಯ ಸಂಬಂಧ ಪಟ್ಟ ತೊಂದರೆಗಳನ್ನು ಈ ಕಾರ್ಡ್ ನಿಂದ ಬಗೆಹರಿಸಬಹುದಾಗಿದೆ. ಈ ಆಧಾರ್ ಕಾರ್ಡ್ ನ ವಿತರಣೆ […]

ಮಳೆಗಾಲದ ರಜಾ-ಮಜಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾರಿಷಸ್‌ಗೆ

Tuesday, July 19th, 2011
yeddyurappa family/ಬಿ.ಎಸ್.ಯಡಿಯೂರಪ್ಪ ಕುಟುಂಬ

ಬೆಂಗಳೂರು : ಮಂಗಳವಾರ ಮುಂಜಾನೆ 5.55ಕ್ಕೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ಬಿ.ಎಸ್.ಯಡಿಯೂರಪ್ಪ ಕುಟುಂಬ ಸದಸ್ಯರ ಸಹಿತ ಮಾರಿಷಸ್‌ಗೆ ಪ್ರಯಾಣ ಬೆಳೆಸಿದ್ದಾರೆ. ಭೂಹಗರಣದ ವಿಚಾರಣೆ, ಅಕ್ರಮ ಗಣಿಯ ಅಂತಿಮ ವರದಿಯನ್ನು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಸಲ್ಲಿಸಲು ದಿನಗಣನೆ ಆರಂಭವಾಗುತ್ತಿದ್ದ ಬೆನ್ನಲ್ಲೇ ಮುಖ್ಯಮಂತ್ರಿಗಳು ಪ್ರಯಾಣ ಬೆಳೆಸಿರುವುದು ಕುತೂಹಲಕ್ಕೆ ಎಡೆ ಮಾಡಿದೆ. ರಾಜ್ಯದಲ್ಲಿ ಸಾಕಷ್ಟು ಪ್ರವಾಹ ಪರಿಸ್ಥಿತಿ, ಭೂ ಹಗರಣದ ವಿಚಾರಣೆ ನಡೆಯುತ್ತಿದ್ದರೂ ಕೂಡ ದಿಢೀರ್ ಅಂತ ಪುತ್ರ ರಾಘವೇಂದ್ರ, ಪುತ್ರಿ, ಮೊಮ್ಮಕ್ಕಳ ಜತೆ ಮಾರಿಷಸ್ ಪ್ರವಾಸ ಕೈಗೊಂಡಿದಕ್ಕೆ ಪ್ರತಿಪಕ್ಷಗಳು ಕಿಡಿಕಾರಿವೆ. […]

ಸರಕಾರದ ಆದೇಶದಂತೆ ಶೀಘ್ರದಲ್ಲೇ ಖಾಸಗಿ ಬಸ್ಸ್ ದರ ಏರಿಕೆ : ಜಿಲ್ಲಾಧಿಕಾರಿ

Saturday, July 16th, 2011
Bus Meeting/ಬಸ್ಸ್ ದರ ಏರಿಕೆ

ಮಂಗಳೂರು : ಖಾಸಗಿ ಬಸ್ ಮಾಲೀಕರು ಇತ್ತೀಚಿನ ದಿನಗಳಲ್ಲಿ ಇಂಧನ, ವಾಹನದ ಬಿಡಿಭಾಗಗಳ ಬೆಲೆ ಏರುತ್ತಿರುವುದರಿಂದ ಖಾಸಗಿ ಬಸ್ ಪ್ರಯಾಣದರ ಏರಿಸಬೇಕು ಮನವಿ ಸಲ್ಲಿಸಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಏರಿಕೆಯ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳ ತಿಳಿಸಿದರು. ಜಿಲ್ಲಾಧಿಕಾರಿ ಡಾ.ಎನ್.ಎಸ್.ಚನ್ನಪ್ಪ ಗೌಡ ಅಧ್ಯಕ್ಷತೆಯಲ್ಲಿ ಅವರ ಕಚೇರಿಯ ಸಭಾಂಗಣದಲ್ಲಿ ಜರುಗಿದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು ಬಸ್ ಪ್ರಯಾಣದರ ನಿಗಧಿಗೆ ಸರಕಾರದ ಮಾರ್ಗದರ್ಶನದಂತೆ […]

ದ.ಕ ಜಿಲ್ಲೆಯಲ್ಲಿ 36 ಡೆಂಗ್ಯೂ ಪ್ರಕರಣ ಪತ್ತೆ

Friday, July 15th, 2011
DHO-Rangappa/ಡಾ.ಶ್ರೀರಂಗಪ್ಪ

ಮಂಗಳೂರು ಜುಲೈ: ಇತ್ತೀಚಿನ ದಿನಗಳಲ್ಲಿ ಮಲೇರಿಯಾ ಜೊತೆಗೆ ಡೆಂಗ್ಯೂ ಕಾಯಿಲೆಯೂ ಸೇರ್ಪಡೆಗೊಂಡಿದ್ದು, 2011ರ ಜೂನ್ ಅಂತ್ಯದ ವರೆಗೆ    ಜಿಲ್ಲೆಯಲ್ಲಿ 36 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆಯೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ.ಓ.ಶ್ರೀರಂಗಪ್ಪ ಅವರು ತಿಳಿಸಿದ್ದಾರೆ. ಈ ವರ್ಷ 36 ಪ್ರಕರಣಗಳು ಪತ್ತೆಯಾದುದರಲ್ಲಿ.  ಮಂಗಳೂರು ನಗರದ ಬಿಜಾಪುರ ಕಾಲೊನಿ (ಲಿಂಗಪ್ಪಯ್ಯಕಾಡು) ನಲ್ಲಿ 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಇದನ್ನು ಹೊರತುಪಡಿಸಿ ಮತ್ಯಾವುದೇ ಸಾವುಗಳು ಡೆಂಗ್ಯು ಜ್ವರದಿಂದ ಜೂನ್ ಅಂತ್ಯದ ತನಕ ದಾಖಲಾಗಿಲ್ಲ ಎಂದು ಡಾ.ಶ್ರೀರಂಗಪ್ಪ ತಿಳಿಸಿದ್ದಾರೆ. ಕಳೆದ […]

ಮುಂಬೈ ತ್ರಿವಳಿ ಸ್ಪೋಟ 18ಸಾವು 131ಮಂದಿಗೆ ತೀವ್ರ ಗಾಯ

Thursday, July 14th, 2011
Mumbai-attack/ಮುಂಬೈ ಸ್ಫೋಟ

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಸಂಜೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದ್ದು, 131 ಮಂದಿ ಗಾಯಗೊಂಡಿದ್ದಾರೆ. ಸ್ಫೋಟಕ್ಕೆ ಭಯೋತ್ಪಾದನೆ ದಾಳಿ ಎಂಬುದನ್ನು ಕೇಂದ್ರ ಗೃಹ ಸಚಿವಾಲಯ ಖಚಿತಪಡಿಸಿದ್ದು, ಇಂಡಿಯನ್ ಮುಜಾಹಿದ್ದೀನ್ ಕೈವಾಡ ಇರಬಹುದು ಎಂದು ಶಂಕಿಸಲಾಗಿದೆ. ಆದರೆ ತ್ರಿವಳಿ ಸ್ಫೋಟ ನಡೆದು 15 ಗಂಟೆಗಳಾದರೂ ಯಾವುದೇ ಭಯೋತ್ಪಾದನೆ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲ. ಅಲ್ಲದೆ ಮೃತ ವ್ಯಕ್ತಿಯೊಬ್ಬರ ಮರೋಣೋತ್ತರ ಪರೀಕ್ಷೆಯ ವೇಳೆ ಶರೀರದಲ್ಲಿ ಐಇಡಿ ಸರ್ಕ್ಯೂಟ್ ಪತ್ತೆಯಾಗಿರುವುದು ಮತ್ತಷ್ಟು ಶಂಕೆಗೆ ಎಡೆ ಮಾಡಿಕೊಟ್ಟಿದೆ. […]

ವಿಮಾನ ನಿಲ್ದಾಣ ಮತ್ತು ಬಿಜೈ ಕೆ.ಎಸ್.ಆರ್.ಟಿಸಿ ನಿಲ್ದಾಣ ಮಧ್ಯೆ ಸರಕಾರಿ ವೋಲ್ವೊ ಬಸ್

Tuesday, July 12th, 2011
kdp meeting/ಕೆಡಿಪಿ ಸಭೆ

ಮಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ  ತ್ರೈ ಮಾಸಿಕ ಕೆಡಿಪಿ ಸಭೆ ಸೋಮವಾರ ನಡೆಯಿತು.  ಗ್ರಾಮೀಣ ಪ್ರದೇಶಗಳಿಗೆ ಅನುಕೂಲವಾಗುವಂತೆ ಬಸ್ಸಿನ ವ್ಯವಸ್ಥೆ  ಮಾಡುವಂತೆ ಕಳೆದ ಸಭೆಯಲ್ಲಿ ಸೂಚಿಸಲಾಗಿತ್ತು,  ಅದರಂತೆ ಗ್ರಾಮೀಣ ಪ್ರದೇಶಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು  ಒದಗಿಸಲು  ಸಲ್ಲಿಸಿರುವ 4 ತಾತ್ಕಾಲಿಕ ಪರವಾನಿಗೆ ಅರ್ಜಿಗಳನ್ನು ಪರಿಗಣಿಸಿ ತಾತ್ಕಾಲಿಕ ಪರವಾನಿಗೆ ನೀಡಲಾಗಿದೆ, 78ಚಾಲಕರನ್ನು ನೇಮಿಸಲಾಗಿದ್ದು,  ಅದರಂತೆ ಬಸ್ಸುಗಳನ್ನು ಓಡಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೆಡಿಪಿ ಸಭೆಯಲ್ಲ್ಲಿ ತಿಳಿಸಿದರು. […]

ಅಶ್ವಿನಿ ಅಕ್ಕುಂಜೆ ಉದ್ದೀಪನ ಮದ್ದು ಸೇವಿಸಿದ್ದು ನಿಜ: ಬಿ ರಿಪೋರ್ಟ್ ಪಾಸಿಟೀವ್

Monday, July 11th, 2011
Ashwini-Akkunji/ಅಶ್ವಿನಿ ಅಕ್ಕುಂಜೆ

ನವದೆಹಲಿ :  ಅಥ್ಲೀಟ್ ಆಟಗಾರ್ತಿ ಅಶ್ವಿನಿ ಅಕ್ಕುಂಜೆ  ಉದ್ದೀಪನ ಮದ್ದು ಸೇವಿಸಿರುವುದು ಬಿ ರಿಪೋರ್ಟ್ ನಿಂದ ಸಾಬೀತಾಗಿದೆ.  ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಕಿದ ಬಿ ರಿಪೋರ್ಟ್  ಪಾಸಿಟೀವ್ ಆಗಿದೆ. ಇದರಿಂದ ಅಶ್ವಿನಿಗೆ 2 ವರ್ಷ ನಿಷೇಧ ವಿಧಿಸುವ ಸಾಧ್ಯತೆ ಇದೆ. ಬಿ ರಿಪೋರ್ಟ್ ಫಲಿತಾಂಶದಿಂದ ಅಶ್ವಿನಿ ಉದ್ದೀಪನ ಮದ್ದು ಸೇವಿಸಿರುವುದು ಸಾಬೀತಾಗಿರುವುದರಿಂದ 2012ರ ಒಲಿಂಪಿಕ್ಸ್ ನಲ್ಲಿ ಅಶ್ವಿನಿ ಪಾಳ್ಗೊಳ್ಳುವುದು ದೂರದ ಮಾತಾಗಿದೆ. ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದ ಮತ್ತೊಬ್ಬ ಅಥ್ಲೀಟ್ ಪ್ರಿಯಾಂಕಾ ಪನ್ವಾರ್ ಕೂಡಾ 2 ವರ್ಷ  ಒಲಿಂಪಿಕ್ಸ್ ನಲ್ಲಿ […]

ಅಶ್ವಿನಿ ಅಕ್ಕುಂಜೆಯನ್ನು ಜಾಹೀರಾತಿನಿಂದ ವಿಮುಖಗೊಳಿಸಿದ ಕಾರ್ಪೊರೇಷನ್ ಬ್ಯಾಂಕ್

Saturday, July 9th, 2011
Ashwini Akkunje

ಮಂಗಳೂರು :  ಅಶ್ವಿನಿ ಅಕ್ಕುಂಜೆ ಉದ್ದೀಪನ ಮದ್ದು ಸೇವನೆ ಮಾಡಿರುವ ವಿವಾದದ ಸುಳಿಗೆ ಸಿಲುಕುತ್ತಿದ್ದಂತೆಯೇ ಕಾರ್ಪೊರೇಷನ್ ಬ್ಯಾಂಕ್ ಆಕೆಯನ್ನು ರಾಯಬಾರಿ (ಬ್ಯ್ರಾಂಡ್ ಅಂಬಾಸಿಡರ್) ಜಾಹೀರಾತಿನಿಂದ ವಿಮುಖಗೊಳಿಸಿದೆ. ಮಂಗಳೂರು ಸಹಿತ ದೇಶದಾದ್ಯಂತ ಆಕೆಯ ಭಾವಚಿತ್ರವಿದ್ದ ಹೋರ್ಡಿಂಗ್ ಗಳನ್ನು ತೆಗೆಯಲು ಸೂಚನೆ ಕೊಟ್ಟಿದೆ.ಈ ಹಿನ್ನೆಲೆಯಲ್ಲಿ ಮಂಗಳೂರಲ್ಲಿ ಅಶ್ವಿನಿ ಅಕ್ಕುಂಜೆಯವರ ಹೋರ್ಡಿಂಗ್ ಮಾಯವಾಗಿವೆ. ಶನಿವಾರ ಆಕೆಯ ಬಿ ಸ್ಯಾಂಪಲ್ ಪರೀಕ್ಷೆಯ ಫಲಿತಾಂಶ ಹೊರಬೀಳಲಿದ್ದು ಮುಂದೇನು ಎನ್ನುವುದು ಕುತೂಹಲದಾಯಕ. ಹಳ್ಳಿ ಹುಡುಗಿಯ ಸಾಧನೆಗೆ ದೇಶವೇ ಅಂದು ಕೊಂಡಾಡಿತ್ತು.

ತುಳು ಸಾಹಿತ್ಯ ಅಕಾಡೆಮಿ ಕಟ್ಟಡ ನಿಮರ್ಾಣಕ್ಕೆ ರೂ.2 ಕೋಟಿ ಮಂಜೂರು

Friday, July 8th, 2011
palthady-ramakrishna-achar

ಮಂಗಳೂರು: ಕರ್ನಾಟಕ ಸರ್ಕಾರ ಕರ್ನಾಟಕ ಸರ್ಕಾರ ಅಭಿವೃದ್ಧಿಗೆ ಅನೇಕ ಪ್ರಗತಿಪರ ಕಾರ್ಯಗಳನ್ನು ಮಾಡುತ್ತಿದ್ದು,ಇದೀಗ ಕರ್ನಾಟಕ ತುಳು ಸಾಹಿತ್ಯ ತುಳು ಭಾಷೆ ಹಾಗೂ ಸಾಹಿತ್ಯ ಅಕಾಡೆಮಿ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಗಳನ್ನು ಮಂಜೂರು ಮಾಡಿದೆಯೆಂದುಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇದರ ಅಧ್ಯಕ್ಷರಾದ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ತಿಳಿಸಿದ್ದಾರೆ. ತುಳು ಸಾಹಿತ್ಯಾಭಿವೃದ್ಧಿಗೆ ಸಾಹಿತ್ಯ ಕಟ್ಟಡ ನಿಮರ್ಾಣಕ್ಕಾಗಿ ರೂ.2 ಕೋಟಿ ಮಂಜೂರು ಮಾಡಲು ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜೆ.ಕೃಷ್ಣ ಪಾಲೇಮಾರ್ರವರಿಗೆ ಡಾ.ರಾಮಕೃಷ್ಣ ಆಚಾರ್ […]