ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ರಾಜೀನಾಮೆ

Sunday, September 12th, 2010
ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ರಾಜೀನಾಮೆ

ಬೆಂಗಳೂರು,  : ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡರು ಹಾಸನ ಹಾಗೂ ಮೈಸೂರು ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳ ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ  ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ರಾಮಚಂದ್ರಗೌಡರು ಅವರ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಅವ್ಯವಹಾರ್ ನಡೆದಿಲ್ಲ ಎಂದು ರಾಜ್ಯ ಹೈಕೋರ್ಟ್  ಗೆ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು. ಆದರೆ ಆಸ್ಪತ್ರೆಗಳ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರೂ ಆಗಿರುವ ಸಚಿವ ರಾಚಂಗೌಡ ಅವರ ಅಫಿಡವಿಟ್ ಅನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಸಿಎಂ ಯಡಿಯೂರಪ್ಪ […]

ಡಿ.ವೈ.ಎಫ್.ಐ ನೇತೃತ್ವದಲ್ಲಿ ವಿಮಾನ ದುರಂತ ಸಂತ್ರಸ್ತರಿಗೆ ನ್ಯಾಯಯುತವಾದಪರಿಹಾರ ಒದಗಿಸಬೇಕೆಂದು ಪ್ರತಿಭಟನೆ

Thursday, September 9th, 2010
 ಡಿ.ವೈ.ಎಫ್.ಐ ನೇತೃತ್ವದಲ್ಲಿ ವಿಮಾನ ದುರಂತ ಸಂತ್ರಸ್ತರಿಗೆ ನ್ಯಾಯಯುತವಾದಪರಿಹಾರ ಒದಗಿಸಬೇಕೆಂದು ಪ್ರತಿಭಟನೆ

ಮಂಗಳೂರು: ಡಿ.ವೈ.ಎಫ್.ಐ ನೇತೃತ್ವದಲ್ಲಿ ಜೈಲ್ ರೋಡ್ ನಿಂದ ಏರ್ ಇಂಡಿಯಾ ಕಛೇರಿ ತನಕ ಪ್ರತಿಭಟನಾ ಮೆರವಣಿಗೆ ನಿನ್ನೆ ಬೆಳಿಗ್ಗೆ ನಡೆಯಿತು. ಬಜಪೆಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಾಂಟ್ರಿಯಲ್ ಒಪ್ಪಂದದ ಪ್ರಕಾರ ನ್ಯಾಯಯುತವಾದ ಪರಿಹಾರ ಸಿಗಬೇಕೆಂದು ಆಗ್ರಹಿಸಿ ಬ್ರಹತ್ ಏರ್ ಇಂಡಿಯಾ ಕಛೇರಿ ಚಲೋ ಜರಗಿತು. ಕಾಸರಗೋಡು ಲೋಕಸಭಾ ಸದಸ್ಯ ಪಿ. ಕರುಣಾಕರನ್ ಸಭೆಯನ್ನು ಉದ್ಘಾಟಿಸಿದರು , ಬಳಿಕ ಮಾತನಾಡಿದ ಅವರು ಸಂತ್ರಸ್ತರಿಗೆ ಆಗಿರುವ ಅನ್ಯಾಯದ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು. ಏರ್ ಇಂಡಿಯಾ ದುರಂತದ […]

ಯು.ಎಸ್ ಓಪನ್ ಕೂಟದಲ್ಲಿ ಬೋಪಣ್ಣ-ಕುರೇಶಿ ಸೆಮಿಫೈನಲಿಗೆ.

Thursday, September 9th, 2010
ಯು.ಎಸ್ ಓಪನ್ ಕೂಟದಲ್ಲಿ ಬೋಪಣ್ಣ-ಕುರೇಶಿ ಸೆಮಿಫೈನಲಿಗೆ.

ನ್ಯೂಯಾರ್ಕ್: ಯು.ಎಸ್ ಓಪನ್ ಕೂಟದ ಪುರುಷರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕದ ರೋಹನ್ ಬೋಪಣ್ಣ ಅವರು ಪಾಕಿಸ್ಥಾನದ ಐಸಾಮ್ ಉಲ್ ಹಕ್ ಕುರೇಶಿ ಜತೆಗೂಡಿ ಸೆಮಿಫೈನಲ್ ಹಂತಕ್ಕೇರಿದ್ದಾರೆ.  ಬೋಪಣ್ಣ ಮೊದಲ ಬಾರಿಗೆ ಗ್ರ್ಯಾನ್ ಸ್ಲಾಮ್ ಉಪಾಂತ್ಯ ತಲುಪಿದ ಸಾಧನೆಯಾಗಿದೆ. ಯು.ಎಸ್ ಓಪನ್ ಕೂಟದ 16ನೇ ಶ್ರೇಯಾಂಕಿತರಾದ ಬೋಪಣ್ಣ – ಕುರೇಶಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 10ನೇ ಶ್ರೇಯಾಂಕದ ದಕ್ಷಿಣ ಆಫ್ರಿಕಾದ ವೆಸ್ಲೆ ಮೂಡಿ ಮತ್ತು ಬೆಲ್ಜಿಯಂನ ಡಿಕ್ ನಾರ್ಮನ್ ವಿರುದ್ಧ 7-5, 7-6 ಅಂತರದಿಂದ ಜಯ ದಾಖಲಿಸಿದರು. ಈ […]

ಕೆಥೋಲಿಕ್ ಸಮಾಜ ಬಾಂಧವರ ಸಾಂಸ್ಕೃತಿಕ ಹಬ್ಬ, ಮೊಂತಿ ಫೆಸ್ತ್.

Wednesday, September 8th, 2010
ಕೆಥೋಲಿಕ್ ಸಮಾಜ ಬಾಂಧವರ ಸಾಂಸ್ಕೃತಿಕ ಹಬ್ಬ, ಮೊಂತಿ ಫೆಸ್ತ್.

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಕೊಂಕಣಿ ಕೆಥೋಲಿಕ್ ಸಮಾಜ ಬಾಂಧವರು ಮಾತೆ ಮೇರಿಯ ಜನ್ಮ ದಿನವನ್ನು ತೆನೆ ಹಬ್ಬವಾಗಿ ಆಚರಿಸಿದರು. ಇಂದು (ಸೆ. 8) ಮಾತೆ ಮೇರಿಯ ಜನ್ಮ ದಿನ ಮೊಂತಿ ಹಬ್ಬವನ್ನು ಕುಟುಂಬದ ಎಲ್ಲಾ ಸದಸ್ಯರು ಜತೆಯಾಗಿ ಒಗ್ಗಟ್ಟಿನಿಂದ ಆಚರಿಸುತ್ತಾರೆ. ಈ ದಿನದಂದು ಮೇರಿಯನ್ನು ಅದ್ಬುತ ಪವಾಡ ಮತ್ತು ಭಕ್ತಾಧಿಗಳ ಬೇಡಿಕೆಗಳನ್ನು ಈಡೇರಿಸಿದ ಪ್ರತೀಕವಾಗಿ ಹಲವು ನಾಮಗಳಿಂದ ಕರೆಯಲಾಗುತ್ತದೆ. ಮೊಂತಿ ಫೆಸ್ತ್ ಎಂದರೆ ಪರ್ವತದ ಮೇಲಿನ ಮಾತೆಯ ಹಬ್ಬ ಎಂದು ಅರ್ಥೈಸಿಕೊಳ್ಳಲಾಗಿದೆ. ಸರಿಸುಮಾರು […]

ಚಿತ್ರ ನಟ ಮುರಳಿ ಇನ್ನಿಲ್ಲ

Wednesday, September 8th, 2010
ಚಿತ್ರ ನಟ ಮುರಳಿ ಇನ್ನಿಲ್ಲ

ಚೆನ್ನೈ : ಕನ್ನಡ ಚಿತ್ರರಂಗದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿಮಿಂಚಿದ ನಟ ಮುರಳಿ (46) ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕನ್ನಡದಲ್ಲಿ ಅಜಯ್ ವಿಜಯ್, ಪ್ರೇಮ ಪರ್ವ, ಪ್ರೇಮ ಪ್ರೇಮ ಪ್ರೇಮ ಮತ್ತಿತರ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.ಮಂಗಳವಾರ  ಮಗಳ ನಿಶ್ಚಿತಾರ್ಥ ಮುಗಿಸಿ ಮಲಗಿದ್ದ ಮುರಳಿ ಬೆಳಗ್ಗೆ ಏಳದ್ದನ್ನು ನೋಡಿ ಮನೆಯವರು ಎಬ್ಬಿಸಲು ಹೋದಾಗ ಅವರು ತೀರಿಕೊಂಡ ವಿಚಾರ ಬೆಳಕಿಗೆ ಬಂದಿದೆ ಮುರಳಿ ಪತ್ನಿ ಶೋಭಾ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಕನ್ನಡದಲ್ಲಿ ಹಲವು ಜನಪ್ರಿಯ ಹಾಡುಗಳಲ್ಲಿ […]

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆ.ಸಿ.ಟಿ.ಯು) ಆಶ್ರಯದಲ್ಲಿ ಒಂದು ದಿನದ ದೇಶವ್ಯಾಪಿ ಮುಷ್ಕರ

Wednesday, September 8th, 2010
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆ.ಸಿ.ಟಿ.ಯು) ಆಶ್ರಯದಲ್ಲಿ ಒಂದು ದಿನದ ದೇಶವ್ಯಾಪಿ ಮುಷ್ಕರ

ಮಂಗಳೂರು : ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರರ ಸಂಘಟನೆಗಳು, ಬ್ಯಾಂಕ್, ವಿಮಾ ನೌಕರರ ಸಂಘಗಳು ಡಿಸಿ ಕಛೇರಿ ಮುಂಭಾಗದಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದರು. ಕಳೆದ ಎರಡು ದಶಕಗಳಿಂದ ನಮ್ಮ ದೇಶದ ಕಾರ್ಮಿಕ ವರ್ಗವು ಕೇಂದ್ರ ಸರಕಾರಗಳ ಜಾಗತೀಕರಣ ಹಾಗೂ ಉದಾರೀಕರಣ ನೀತಿಗಳ ವಿರುದ್ದ ನಿರಂತರ ಹೋರಾಟದಲ್ಲಿ ತೊಡಗಿದೆ. ಕಾರ್ಮಿಕರ ನಿರಂತರ ಶೋಷಣೆ ನಡೆಯುತ್ತಿದೆ. ಶ್ರೀಮಂತರ ಮತ್ತು ಬಡವರ ನಡುವೆ ಅಂತರ ಬಹಳ ಜಾಸ್ತಿಯಾಗಿದೆ. ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ ಎಂದು ಸಿಐಟಿಯು ಮುಖಂಡ ಬಿ.ಮಾಧವ […]

ಸೈಬರ್ ಕೆಫೆ ನಿರ್ವಹಣೆ ಹಾಗೂ ಸುರಕ್ಷಾ ಪರಿವಾರಕ್ಕೆ ಹೊಸ ಸೂತ್ರ

Tuesday, September 7th, 2010
ಸೈಬರ್ ಕೆಫೆ ನಿರ್ವಹಣೆ ಹಾಗೂ ಸುರಕ್ಷಾ ಪರಿವಾರಕ್ಕೆ ಹೊಸ ಸೂತ್ರ

ಮಂಗಳೂರು : ಸೈಬರ್ ಕೆಫೆ ನಿರ್ವಹಣೆ ಹಾಗೂ ಸುರಕ್ಷಾ ಪರಿವಾರ ಕುರಿತಂತೆ ಐಡಿಯಾಕ್ಟ್ಸ್ ಇನೋವೇಶನ್ಸ್ ಹಾಗೂ ಮಂಗಳೂರು ನಗರ ಪೊಲೀಸ್ ಸೈಬರ್ ಕೆಫೆ ಮಾಲಕರೊಂದಿಗೆ ಸಂವಾದವು ಸೋಮವಾರ ಕಮಿಷನರೇಟ್ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಉಪ ಕಮಿಷನರ್ ಆರ್. ರಮೇಶ್ ಸಭೆಯನ್ನು ಉದ್ದೇಶೀಸಿ ಮಾತನಾಡಿ, ಮಾಹಿತಿ ತಂತ್ರಜ್ಞಾನ ಕಾಯಿದೆ ತಿದ್ದುಪಡಿ-2008 ರಲ್ಲಿ ಸೈಬರ್ ಕೆಫೆಗಳ ಬಗ್ಗೆ ರೂಪಿಸಿರುವ ನಿಯಮಗಳನ್ನು ಪಾಲಿಸುವುದು ಸುರಕ್ಷತೆಯ ದ್ಥಷ್ಟಿಯಲ್ಲಿ ಅತ್ಯವಶ್ಯ ಎಂದು ಹೇಳಿದರು. ಸೈಬರ್ ಕೆಫೆಗಳಿಗೆ ಬರುವ ಪ್ರತಿಯೋರ್ವ ಗ್ರಾಹಕರ ಭಾವಚಿತ್ರ ಸಹಿತ ಪೂರ್ಣ […]

ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ

Monday, September 6th, 2010
ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ

ಮಂಗಳೂರು: ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ನಗರ ವಲಯ ಶಿಕ್ಷಕ ದಿನಾಚರಣೆ ಸಮಿತಿ ವತಿಯಿಂದ ಬಾನುವಾರ ಶಿಕ್ಷಕ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಮಂಗಳೂರು ಇಲ್ಲಿ ಕರಾವಳಿ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ಉದ್ಘಾಟಿಸಿದರು. ವಿದ್ಯಾಥರ್ಿಗಳ ಮೇಲೆ ಸಮಾನ ಮನೋಭಾವ ಹೊಂದುವ ಮೂಲಕ ಶಿಕ್ಷಕರು ಸಮಾಜದಲ್ಲಿ ಶ್ರೇಷ್ಠತೆ ಪಡೆಯಬೇಕು ಎಂದು  ಉದ್ಘಾಟನೆ ನಡೆಸಿದ ಬಳಿಕ ಬಿ. ನಾಗರಾಜ ಶೆಟ್ಟಿ ಹೇಳಿದರು. ಪ್ರಾಥಮಿಕ ವಿಭಾಗದ ಏಳು ಮಂದಿ ಶಿಕ್ಷಕಗೆ ಹಾಗೂ ಪ್ರೌಢ […]

ಗೋವಂಶ ರಕ್ಷಣೆಗೆ ಬಿಜೆಪಿ ಕಾರ್ಯಕರ್ತರ ಒಕ್ಕೊರಳ ಧ್ವನಿ

Saturday, September 4th, 2010
ಗೋವಂಶ ರಕ್ಷಣೆಗೆ ಬಿಜೆಪಿ ಕಾರ್ಯಕರ್ತರ ಒಕ್ಕೊರಳ ಧ್ವನಿ

ಮಂಗಳೂರು : ಗೋ ಹತ್ಯೆ ನಿಷೇಧ ಕಾಯ್ದೆಗೆ ಅಂಕಿತ ಹಾಗೂ ಕಾಶ್ಮೀರಕ್ಕೆ ಸ್ವಾಯತ್ತತೆ ವಿರೋಧಿಸಿ, ಭಾರತೀಯ ಜನತಾಪಾರ್ಟಿ ವತಿಯಿಂದ ಪ್ರತಿಭಟನೆಯು ಇಂದು ಬೆಳಿಗ್ಗೆ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿಯ ಮುಂಭಾಗದಲ್ಲಿ ಜರಗಿತು.

ಭಾರತಿ ಅರಸ್ ಬಂಧನಕ್ಕೆ ರಾಜ್ಯ ಹೈಕೋರ್ಟ್ ವಾರಂಟ್

Friday, September 3rd, 2010
ಭಾರತಿ ಅರಸ್ ಬಂಧನಕ್ಕೆ ರಾಜ್ಯ ಹೈಕೋರ್ಟ್ ವಾರಂಟ್

ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸ್ ಪುತ್ರಿ ಭಾರತಿ ಅರಸ್ ಬಂಧನಕ್ಕೆ ರಾಜ್ಯ ಹೈಕೋರ್ಟ್ ಶುಕ್ರವಾರ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಚಿತ್ರಲೇಖಾ ಕೊಲೆ ಪ್ರಕರಣದ ಆರೋಪಿಗಳಾದ ಭಾರತಿ ಅರಸ್, ಚಂದ್ರಕಾಂತ್ ಹಾಗೂ ಮಧುಕರ್ ಇಂದು ವಿಚಾರಣೆ ಸಂದರ್ಭದಲ್ಲಿ ಹಾಜರಾಗದ..