ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಸರಕಾರ ಅಸ್ವಾಭಾವಿಕ, ಅವಾಸ್ತವಿಕದ್ದು : ಜೆ.ಪಿ. ನಡ್ಡಾ
Monday, February 17th, 2020ಮುಂಬಯಿ : ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದಲ್ಲಿನ ಸರಕಾರ ಅಸ್ವಾಭಾವಿಕ, ಅವಾಸ್ತವಿಕ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ. ಮುಂಬಯಿನಲ್ಲಿ ಪಕ್ಷದ ಕಾರ್ಯರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್-ಎನ್ಸಿಪಿ- ಶಿವಸೇನೆ ಮೈತ್ರಿ ಕೂಟ ರಾಜ್ಯದ ಅಭಿವೃದ್ಧಿಗೆ ತಡೆಯಾಗಿದೆ ಎಂದು ದೂರಿದ್ದಾರೆ. ಕಳೆದ ಅಕ್ಟೋಬರ್ನಲ್ಲಿ ಪಕ್ಷಕ್ಕೆ ಉತ್ತಮ ಸ್ಥಾನಗಳು ಬಂದಿದ್ದರೂ ಕೆಲವರ ವೈಯಕ್ತಿಕ ಹಿತಾಸಕ್ತಿಗಳಿಂದಾಗಿ ಸರಕಾರ ರಚನೆ ಸಾಧ್ಯವಾಗಿರಲಿಲ್ಲ. ಮುಂಬರುವ ಚುನಾವಣೆಗಾಗಿ ಪಕ್ಷ ಸ್ವಯಂ ಶಕ್ತಿಯಿಂದ ಸ್ಪರ್ಧಿಸಲು ಈಗಿನಿಂದಲೇ ಸಿದ್ಧಗೊಳ್ಳಬೇಕು. ‘ಬಿಜೆಪಿ ವರ್ಸಸ್ ಎಲ್ಲರೂ’ ಎಂಬಂಥ ಸ್ಪರ್ಧೆಗೆ ಅಣಿಯಾಗಬೇಕು. […]