ಬೆಳ್ತಂಗಡಿ ಹಿಂಸಾತ್ಮಕ ಗೋ ಸಾಗಣೆ – ಕಾರು ಮಾಲೀಕನ ಜೊತೆ ಮತ್ತೋರ್ವನ ಬಂಧನ

Wednesday, June 12th, 2019
Cow thives

ಬೆಳ್ತಂಗಡಿ: ಅಕ್ರಮವಾಗಿ ಐಶಾರಾಮಿ ಕಾರೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಣೆ ನಡೆಸುತ್ತಿದ್ದಾಗ ಉಜಿರೆಯ ಮುಂಡಾಜೆ ಸಮೀಪ ಕಾರು ಪಲ್ಟಿಯಾಗಿ 5 ಗೋವುಗಳ ಮೃತ್ಯು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಜಿರೆಯ ಮುಂಡಾಜೆ ಸಮೀಪ ಕಾರು ಪಲ್ಟಿಯಾಗಿ 5 ಗೋವುಗಳ ಮೃತ್ಯುಮೂಡುಬಿದಿರೆ ತೋಡಾರ್ ಇದಾಯತ್ ನಗರ ನಿವಾಸಿ ಕಾರು ಮಾಲೀಕ ಅನ್ಸಾರ್ (27) ಹಾಗೂ ಜುಬೇರ್ (26) ಎಂಬವವರನ್ನ ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಶಾಮೀಲಾಗಿರುವ ಶಂಕೆ ಇದ್ದು, ಅವರ ಬಂಧನಕ್ಕಾಗಿ […]

ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು: ಇಪ್ಪತ್ತೈದನೆ ಪದವಿ ಪ್ರದಾನ ಸಮಾರಂಭ

Wednesday, June 12th, 2019
Prakruti

ಉಜಿರೆ: ರೋಗಿಗಳಿಗೆ ಸಾಂತ್ವನದ ಮಾತುಗಳೊಂದಿಗೆ ಧೈರ್ಯ ಮತ್ತುಆತ್ಮವಿಶ್ವಾಸತುಂಬಿ ಅವರ ಭಯ, ಆತಂಕ ನಿವಾರಿಸಿ ರೋಗವನ್ನು ಶಮನ ಮಾಡಿಆರೋಗ್ಯರಕ್ಷಣೆ ಮಾಡುವುದು ವೈದ್ಯರಕರ್ತವ್ಯ ಮತ್ತು ಹೊಣೆಗಾರಿಕೆಯಾಗಿದೆ. ವೈದ್ಯ ವೃತ್ತಿ ಹಣ ಸಂಪಾದನೆಗಾಗಿಅಲ್ಲ. ಮಾನವೀಯತೆಯಿಂದ ಸೇವೆ ಮಾಡಲಿಕ್ಕಾಗಿ.ರೋಗಿಗಳಆರೋಗ್ಯ ಭಾಗ್ಯರಕ್ಷಣೆಗಾಗಿ ವಿವೇಚನೆಯಿಂದ ವೈದ್ಯರುಅಲೊಪತಿ ಹಾಗೂ ಪಾರಂಪರಿಕಚಿಕಿತ್ಸಾ ವಿಧಾನವನ್ನು ಬಳಸಬೇಕು ಎಂದು ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ನಿರ್ದೇಶಕಡಾ. ಬಿ.ಎನ್. ಗಂಗಾಧರ್ ಹೇಳಿದರು. ಅವರುಉಜಿರೆಯಲ್ಲಿಎಸ್.ಡಿ.ಎಂ.ಪ್ರಕೃತಿಚಿಕಿತ್ಸಾ ಮತ್ತುಯೋಗ ವಿಜ್ಞಾನಕಾಲೇಜಿನಲ್ಲಿ ಮಂಗಳವಾರ ಇಪ್ಪತ್ತೈದನೆ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ವೈದ್ಯ ವೃತ್ತಿ […]

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳ ದಾರುಣ ಸಾವು

Tuesday, June 11th, 2019
Barekinade-death

ಬಂಟ್ವಾಳ :  ಬಂಟ್ವಾಳ ತಾಲೂಕಿನ ವಾಮದಪದವು ಬಾರೆಕಿನಾಡೆ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳ ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ಸಂಜೆ  ನಡೆದಿದೆ. ಗೋಪಾಲಕೃಷ್ಣ ಶೆಟ್ಟಿ ಹಾಗೂ ಮಗಳು 23ರ ಹರೆಯದ ದಿವ್ಯಶ್ರೀ ಮೃತ ದುರ್ದೈವಿಗಳು. ಇವರು ಮಂಗಳವಾರ ಸಂಜೆ ತಮ್ಮ ಮನೆಯ ತೋಟಕ್ಕೆ ಹುಲ್ಲು ತರಲೆಂದು ತೆರಳಿದ್ದರು. ಈ ವೇಳೆ ಹುಲ್ಲಿನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದನ್ನು ಗಮನಿಸದೇ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಳೆ ವಿದ್ಯುತ್ ತಂತಿ ಬದಲಿಸದಿರುವುದು ಘಟನೆಗೆ […]

ಬಜರಂಗದಳ ಮುಖಂಡನ ಇರಿದು ಕೊಲೆಗೆತ್ನ: ಓರ್ವನ ಸೆರೆ

Tuesday, June 11th, 2019
siddiq

ಉಪ್ಪಳ: ಬಜರಂಗದಳ ಬಾಯಾರು ಮಂಡಲ ಸಂಚಾಲಕ ಬಾಯಾರು ಕೊಜಪ್ಪೆ ನಿವಾಸಿ ಪ್ರಸಾದ್ (28)ರನ್ನು ಇರಿದು ಕೊಲೆಗೈಯ್ಯಲೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಾಯಾರು ದಳಿಕುಕ್ಕು ನಿವಾಸಿ ಅಬೂಬಕ್ಕರ್ ಸಿದ್ದಿಕ್ (27) ಸೆರೆಗೀಡಾದ ವ್ಯಕ್ತಿ.  ಬಾಯಾರು ಪರಿಸರದಿಂದ ಎಸ್.ಐ ಸುಭಾಶ್ಚಂದ್ರನ್ ನೇತೃತ್ವದಲ್ಲಿ ಈತನನ್ನು ಸೆರೆ ಹಿಡಿಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ 2 ವಾರಗಳ ರಿಮಾಂಡ್ ವಿಧಿಸಿ ಉಳಿದ ಐದು ಮಂದಿ ಆರೋಪಿಗಳು ಕರ್ನಾಟಕಕ್ಕೆ ಪರಾರಿಯಾಗಿರುವುದಾಗಿ ಸಂಕಿಸಲಾಗಿದ್ದು, ಪೊಲೀಸರ ತಂಡ ಕರ್ನಾಟಕಕ್ಕೆ ಪ್ರಯಾಣ ಬೆಳೆಸಿದೆ. ಉಳಿದ ಆರೋಪಿಗಳನ್ನು ಶೀಘ್ರ […]

ಅಕ್ರಮ ಜಾನುವಾರು ದಂಧೆ ಅಪರಾಧ ಅನಾಗರಿಕ- ಕೃತ್ಯ ವಿರೋಧಿಸಿ ಸಾಮೂಹಿಕ ಪ್ರತಿಭಟನೆ

Tuesday, June 11th, 2019
illigal cow

ಮಂಗಳೂರು  :  ಇತ್ತೀಚೆಗೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಮುಖ್ಯರಸ್ತೆಯಲ್ಲಿ ವಾಹನವೊಂದರಲ್ಲಿ ಜಾನುವಾರುಗಳನ್ನು ಸಾಗಾಟ ಮಾಡಲಾಗಿ, ಆ ಸಂದರ್ಭದಲ್ಲಿ ಸದ್ರಿ ವಾಹನಕ್ಕೆ ಅಪಘಾತವಾದ ವಾಹನದಲ್ಲಿ ಕಂಡು ಬಂದ ನಿರ್ಜೀವಗೊಂಡ ಮತ್ತು ಗಾಯಗೊಂಡ ಜಾನುವಾರುಗಳ ಬಗ್ಗೆ ಸುದ್ದಿ ಮತ್ತು ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಈ ಘಟನೆ ನಿರಂತರ ಪ್ರಚಾರವಾಗುತ್ತಿದ್ದು, ಈ ಕೃತ್ಯವು ನಾಗರಿಕ ಸಮಾಜಕ್ಕೆ ತೀವ್ರ ಮುಜುಗರವಾಗುತ್ತಿರುವುದಾಗಿದೆ. ಅಕ್ರಮ ಜಾನುವಾರು ಮಾರಾಟ, ಸಾಗಾಟ ಮತ್ತು ಖರೀದಿಯು ಸೇರಿದಂತೆ ಇಂತಹ ಜಾನುವಾರುಗಳನ್ನು ಆಹಾರಕ್ಕಾಗಿ ಉಪಯೋಗಿಸುತ್ತಿರುವುದನ್ನು ಧಾರ್ಮಿಕವಾಗಿ ನಿಷೇದಿಸಲಾಗಿದೆ. ಈ ಕೃತ್ಯಗಳು […]

ಐಎಂಎ ಜ್ಯುವೆಲ್ಲರ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ದುಬೈಯಲ್ಲಿ ?

Tuesday, June 11th, 2019
ima-jewellery

ಬೆಂಗಳೂರು: ಪ್ರತಿಷ್ಠಿತ ಐಎಂಎ ಜ್ಯುವೆಲ್ಲರ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ದುಬೈಗೆ ಪರಾರಿಯಾಗಿರುವ ಕುರಿತು ಸಂಶಯ ವ್ಯಕ್ತವಾಗಿದೆ. ಹೂಡಿಕೆ ಹೆಸರಿನಲ್ಲಿ ಸಹಸ್ರಾರು ಜನರಿಗೆ ವಂಚಿಸಿರುವ ಆತ ಕಳೆದ ತಿಂಗಳಾಂತ್ಯದಲ್ಲಿ ದುಬೈಗೆ ತೆರಳಿರುವುದಾಗಿ ಸ್ವತಃ ಹೂಡಿಕೆದಾರರೇ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಹೂಡಿಕೆದಾರರು ಮಂಗಳವಾರ ಕೂಡ ಸಹಸ್ರಾರು ಸಂಖ್ಯೆಯಲ್ಲಿ ದೂರು ನೀಡಲು ಬಂದಿದ್ದ ದೃಶ್ಯ ಶಿವಾಜಿನಗರದ ಶಾದಿ ಮಹಲ್ ನಲ್ಲಿ ಕಂಡುಬಂತು. ಪ್ರತಿಯೊಬ್ಬರ ಕಥೆಯೂ ಕರುಣಾಜನಕವಾಗಿದ್ದು, ಭವಿಷ್ಯದ ಬದುಕು ಕಟ್ಟಿಕೊಳ್ಳಲು ಹೂಡಿಕೆ ಮಾಡಿದವರು ಇದೀಗ ದಿಕ್ಕು ತೋಚದಂತಾಗಿದ್ದಾರೆ. […]

ಪುದು ಗ್ರಾಪಂ ಸದಸ್ಯ, ಮೀನಿನ ವ್ಯಾಪಾರಿ ಕೊಲೆಯತ್ನ ಪ್ರಕರಣದ ಐವರ ಬಂಧನ

Tuesday, June 11th, 2019
Mohammed Riyaz

ಉಡುಪಿ : ಮಲ್ಪೆ ಬಂದರಿಗೆ ಮೀನಿನ ವ್ಯಾಪಾರಕ್ಕೆ ಜೂ.7ರಂದು  ಬಂದಿದ್ದ ಬಂಟ್ವಾಳ ತಾಲೂಕಿನ ಪುದು ಗ್ರಾಪಂ ಸದಸ್ಯ ಹಾಗೂ ಮೀನಿನ ವ್ಯಾಪಾರಿ ಕೆ. ಮುಹಮ್ಮದ್ ರಿಯಾಝ್ (34) ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಉಡುಪಿ ಪೊಲೀಸರು ಜೂ.10ರಂದು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಫರಂಗಿಪೇಟೆಯ ಇಸ್ಮಾಯಿಲ್ (45), ಆತನ ಸಹೋದರ ಮುಹಮ್ಮದ್ ಗೌಸ್ (35), ಮುಹಮ್ಮದ್ ಕೈಸರ್ (60), ಮುನೀರ್ (25), ಅನ್ವರ್ (25) ಬಂಧಿತ ಆರೋಪಿಗಳು, ಇವರಲ್ಲಿ ಇಸ್ಮಾಯಿಲ್ ಪ್ರಮುಖ ಆರೋಪಿ ಯಾಗಿದ್ದು, ಈತ ರಿಯಾಝ್ ಕೊಲೆಗೆ ಸುಪಾರಿ […]

ಬಂಟ್ವಾಳ : ವೈರಲ್ ಆದ ಅಡಿಕೆ ಮರ ಹತ್ತುವ ಬೈಕ್ ವಿಡಿಯೋ

Tuesday, June 11th, 2019
areca

ಬಂಟ್ವಾಳ :  ಬೈಕ್ ಮಾದರಿಯ ಯಂತ್ರದ ಮೂಲಕ ಅಡಿಕೆ ಮರ ಹತ್ತಿ ಕಾಯಿ ಕೀಳುವ ಬೈಕ್ ಬಂಟ್ವಾಳ ತಾಲೂಕಿನ ಪಣೋಲಿಬೈಲ್ ಸಮೀಪದ ಕೋಮಾಲಿ ಎಂಬಲ್ಲಿ  ಮರ ಹತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೋಮಾಲಿ ಎಂಬಲ್ಲಿರುವ ಪ್ರಗತಿಪರ ಕೃಷಿಕ ಗಣಪತಿ ಭಟ್ ಅವರು ನಿರ್ಮಿಸಿ ಪ್ರಾಯೋಗಿಕವಾಗಿ ತನ್ನ ಮನೆಯ ಸದಸ್ಯರು ಅದರಲ್ಲೂ ಮಹಿಳೆಯರು ಇದನ್ನು ಬಳಸಿದ ಸಂದರ್ಭ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಈಗ ಕೃಷಿಕರ ವಲಯದಲ್ಲಿ ವೈರಲ್ ಆಗಿದೆ. ಈ ಬೈಕ್ ಮೂಲಕ ಯಾರ […]

ಮಂಗಳೂರು: ಲಾರಿ ಡಿಕ್ಕಿ, ಬೈಕ್ ಸವಾರ‌ ಸ್ಥಳದಲ್ಲೇ ಮೃತ

Tuesday, June 11th, 2019
sidiq

ಮಂಗಳೂರು: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ, ನಗರದ ಹೊರವಲಯದ ಎಕ್ಕೂರು ಬಳಿ ಸೋಮವಾರ ಸಂಜೆ ಸಂಭವಿಸಿದೆ. ಕುತ್ತಾರು ಮದನಿ ನಗರ ನಿವಾಸಿ ಸಿದ್ದೀಕ್ ಮೃತ ಬೈಕ್ ಸವಾರ‌. ಈತ ಬೈಕ್ನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಲ್ಲಿ ಬರುತ್ತಿದ್ದ ಲಾರಿಯೊಂದು ಎಕ್ಕೂರಿನ ಕೇಂದ್ರೀಯ ವಿದ್ಯಾಲಯದ ಬಳಿ, ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸಿದ್ದೀಕ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟದ್ದಾನೆ. ಸ್ಥಳಕ್ಕೆ ದಕ್ಷಿಣ ಠಾಣೆಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, […]

ಸುರತ್ಕಲ್: ರೆಫ್ರಿಜರೇಟರ್ ಗ್ಯಾಸ್ ಸಿಲಿಂಡರ್ ಸ್ಪೋಟ – ಮಹಿಳೆ ಗಂಭೀರ

Monday, June 10th, 2019
Gas-cylinder

ಮಂಗಳೂರು :  ರೆಫ್ರಿಜರೇಟರ್ ನ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ಕಾಟಿಪಳ್ಳದಲ್ಲಿ ನಡೆದಿದೆ. ಫರ್ಝಾನ ( 33 ) ಗಂಭೀರವಾಗಿ ಗಾಯಗೊಂಡವರು. ಜೊತೆಗೆ ಇವರ ಪತಿ ಸಿದ್ದಿಕ್ (38) ಮತ್ತು ಒಂದು ವರ್ಷದ ಮಗು ಫರಾನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಸಿದ್ದಿಕ್ ಅವರು ಕಾಟಿಪಳ್ಳ ನಾಲ್ಕನೇ ಬ್ಲಾಕ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇಂದು ಮಧ್ಯಾಹ್ನದ ಸಮಯ  ಫರ್ಝಾನ ರೆಫ್ರಿಜರೇಟರ್ ನ ಸಿಲಿಂಡರ್ […]