ದ.ಕ.ದಲ್ಲಿ ಮಂಗಳವಾರ ಮೀಲಾದ್​​ ರಜೆ: ಯು.ಟಿ.ಖಾದರ್

Monday, November 19th, 2018
u-t-khader

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪ್ರವಾದಿ ಮುಹಮ್ಮದ್ ಅವರ‌ ಜನ್ಮ ದಿನ ಮೀಲಾದುನ್ನಬಿ ಆಚರಣೆ ನವೆಂಬರ್ 20ರಂದು ನಡೆಯಲಿರುವುದರಿಂದ ಅಂದು ದ.ಕ. ಜಿಲ್ಲೆಯಲ್ಲಿ ಸರ್ಕಾರಿ ರಜೆ ಘೋಷಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಮೀಲಾದ್ ಸರ್ಕಾರಿ ರಜೆ ನ. 21 ರಂದು ನಿಗದಿಯಾಗಿದ್ದರೂ ದ.ಕ. ಜಿಲ್ಲೆಯಲ್ಲಿ ಮೀಲಾದ್ 20ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ. 21ರ ಸರ್ಕಾರಿ ರಜೆಯನ್ನು ಬದಲಾಯಿಸಿ ನ. 20 ರಂದು ಶಾಲಾ-ಕಾಲೇಜುಗಳಿಗೆ, ಸರ್ಕಾರಿ ಕಚೇರಿಗಳಿಗೆ ರಜಾ ದಿನವನ್ನಾಗಿ […]

ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Monday, November 19th, 2018
arrested

ಮಂಗಳೂರು: ನಗರದ ಭಾರತ್ ಮಾಲ್ನಲ್ಲಿ‌ ಮಹಿಳೆಯೋರ್ವರ ಪರ್ಸ್ ಮತ್ತು ಮೊಬೈಲ್ ಸುಲಿಗೆ ಮಾಡಿ ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಕೇಂದ್ರ ಉಪ ವಿಭಾಗದ ರೌಡಿ ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಬಿ.ಕಸಬಾ ಗ್ರಾಮದ ಪೆರ್ನಂಕಿಲ ಹೌಸ್ನ ಮ್ಯಾಕ್ಸಿಂ ಆಲ್ವಿನ್ ರೋಡ್ರಿಗಸ್ ಬಂಧಿತ ಆರೋಪಿ. 2017ರ ಮೇ 26ರಂದು ಈ ಕೃತ್ಯ ಎಸಗಿ ತಲೆಮರೆಸಿಕೊಂಡಿದ್ದ ಈತನನ್ನು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿಯಿರುವ ಜಾನ್ ವೈನ್ ಶಾಪ್ ಬಳಿ‌ […]

ಪತ್ರಕರ್ತರ ನಿವೇಶನಕ್ಕೆ ಶೀಘ್ರ ಕ್ರಮ: ಸಚಿವ ಖಾದರ್

Sunday, November 18th, 2018
press house

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರ ನಿವೇಶನಕ್ಕೆ ಸಂಬಂಧಿಸಿದ ಬೇಡಿಕೆಯನ್ನು ಇತ್ಯರ್ಥಗೊಳಿಸಲು ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಹೇಳಿದರು. ನಗರದ ಪತ್ರಿಕಾಭವನದಲ್ಲಿ ಶನಿವಾರ ಸಚಿವರು ಮತ್ತು ಪತ್ರಕರ್ತರ ಜತೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಪತ್ರಕರ್ತರ ಸಂಘಕ್ಕೆ ಈ ಭರವಸೆ ನೀಡಿದರು. ಸಮಾಜದ ಮುಖ್ಯ ಅಂಗವಾಗಿರುವ ಪತ್ರಕರ್ತರಿಗೆ ನಿವೇಶನ ಬೇಡಿಕೆಗೆ ಈಡೇರಿವು ಬಗ್ಗೆ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಗರಕ್ಕೆ ಬಂದಾಗ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರು […]

15ನೇ ಆವೃತ್ತಿಯ ಆಳ್ವಾಸ್ ನುಡಿಸಿರಿಗೆ ವೈಭವೋಪೇತ ತೆರೆ

Sunday, November 18th, 2018
Alvas

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ರತ್ನಾಕರವರ್ಣಿ ವೇದಿಕೆ ಸಂತ ಶಿಶುನಾಳ ಶರೀಫ ಸಭಾಂಗಣದಲ್ಲಿ ಜರುಗಿದ 15ನೇ ಆವೃತ್ತಿಯ ಆಳ್ವಾಸ್ ನುಡಿಸಿರಿ ಭಾನುವಾರದಂದು ವೈಭವಪೂರ್ಣವಾಗಿ ಸಮಾಪನಗೊಂಡಿತು. ಇದೇ ಸಂದರ್ಭದಲ್ಲಿ 12 ಸಾಧಕರಿಗೆ ನುಡಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಗೌರವ ಸಮ್ಮಾನ ಸ್ವೀಕರಿಸಿ ಮಾತನಾಡಿದ ಜ್ಞಾನಪೀಠ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಮಾತನಾಡಿ “ನಾವಿಂದು ನಮ್ಮ ಮಕ್ಕಳಿಗೆ ಎಷ್ಟೇ ಉನ್ನತ ಶಿಕ್ಷಣ ನೀಡಿದರೂ, ಅದು ಸಾರ್ಥಕ್ಯವಾಗುತ್ತಿದೆಯಾ ಎಂದು ವಿಮರ್ಶಿಸಿಕೊಳ್ಳುವ ಅನಿವಾರ್ಯತೆ ಒದಗಿದೆ. ಕಾರಣ ಬ್ರಿಟೀಷರು ನಮ್ಮವರ ಅಪೇಕ್ಷೆಯ ಮೇರೆಗೆ ಇಂಗ್ಲೀಷ್ […]

ಧರ್ಮಸ್ಥಳದಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ: ವೆಬ್‌ಸೈಟ್‌ಗೆ ಚಾಲನೆ

Sunday, November 18th, 2018
mastakabhisheka website

ಉಜಿರೆ: ಶ್ರವಣಬೆಳಗೊಳದದಲ್ಲಿ ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರಾಗಿದ್ದ ಶ್ರೀಪಾಲ್ ಗಂಗ್ವಾಲ್ ಧರ್ಮಸ್ಥಳದಲ್ಲಿ 2019 ರ ಫೆಬ್ರವರಿ 9 ರಿಂದ 18vರ ವರೆಗೆ ನಡೆಯಲಿರುವ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ವೆಬ್‌ಸೈಟ್‌ಗೆ ಭಾನುವಾರ ಚಾಲನೆ ನೀಡಿ ಶುಭ ಹಾರೈಸಿದರು. ವೆಬ್‌ಸೈಟ್: www.bahubali.live ಇದರಲ್ಲಿ ಮಸ್ತಕಾಭಿಷೇಕದ ಸವಿವರ ಮಾಹಿತಿ ಲಭ್ಯವಿದೆ. ಅಲ್ಲದೆ ಧರ್ಮಸ್ಥಳದಲ್ಲಿ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಇತರ ಎಲ್ಲಾ ಮಾಹಿತಿ ಲಭ್ಯವಿದೆ. ಕಾಲಕಾಲಕ್ಕೆ ಸುದ್ದಿಯನ್ನು ಇದರಲ್ಲಿ ಅಳವಡಿಸಲಾಗುವುದು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಪ್ರಧಾನ ಸಂಚಾಲಕ ಡಿ. […]

ಜೀವನ ಪದ್ಧತಿಯ ಆತಂಕದ ನೆಲೆಗಳು- ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ

Sunday, November 18th, 2018
Narahalli Balasubrahmanya

ಮೂಡಬಿದ್ರಿ  : ಭಾರತೀಯರ ಬದುಕಿನಲ್ಲಿ ಆಧುನಿಕ ಶಿಕ್ಷಣ ತನ್ನ ಪ್ರಭಾವವನ್ನು ಅತಿಯಾಗಿ ಬೀರುತ್ತಿದೆ, ಇದರಿಂದಾಗಿ ಇಂದು ನಮ್ಮ ಸುತ್ತಲಿನ ಪರಿಸರ, ಸಂಸ್ಕೃತಿ, ಕಲೆ, ಸಾಹಿತ್ಯ ಎಲ್ಲವನ್ನೂ ಕೀಳರಿಮೆಯಿಂದ ನೋಡುವಂತಾಗಿದೆ ಎಂದು ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಹೇಳಿದರು. ಆಳ್ವಾಸ್ ನುಡಿಸಿರಿಯ ಎರಡನೇ ದಿನ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ ‘ಜೀವನ ಪದ್ಧತಿಯ ಆತಂಕದ ನೆಲೆಗಳು ಎಂಬ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ‘ಬದುಕಿನ ವೃತ್ತಿಯು ನಮ್ಮ ಇಡೀ ಜೀವನ ಪದ್ಧತಿಯ ಬದಲಾವಣೆಗೆ ಕಾರಣವಾಗುತ್ತಾ ಹೋಗುತ್ತದೆ. ಈ ರೀತಿಯ ಬದಲಾವಣೆ […]

ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡಲು ಜಿಲ್ಲಾಧಿಕಾರಿ ಶಿಫಾರಸ್ಸು

Saturday, November 17th, 2018
mysuru

ಮೈಸೂರು: ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್‌ಡೌನ್ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಸೂರು ಪಾರಂಪರಿಕ ಪ್ರದೇಶ ಅಭಿವೃದ್ಧಿ ಮತ್ತು ಸಂರಕ್ಷಣಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಮೈಸೂರು ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಜನದಟ್ಟಣೆಯನ್ನು ನಿವಾರಿಸಲು ರಸ್ತೆಗಳನ್ನು ಅಗಲೀಕರಿಸುವ ಸಂಬಂಧ ಅಲ್ಲಿರುವ ಪಾರಂಪರಿಕ ಕಂಬಗಳನ್ನು ಸ್ಥಳಾಂತರಿಸುವ ಬಗ್ಗೆ ಚರ್ಚಿಸಲಾಯಿತು. ಸಮಿತಿ ಸದಸ್ಯರು ತುರ್ತಾಗಿ ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವಂತೆ […]

ಮೀನುಗಳಿಗೆ ತಡೆ: ಗೋವಾದ ಮೀನುಗಾರಿಕಾ ಸಚಿವರ ಜೊತೆ ಶೀಘ್ರ ಮಾತುಕತೆ: ಯು.ಟಿ. ಖಾದರ್​

Saturday, November 17th, 2018
circuit-house

ಮಂಗಳೂರು: ಗೋವಾದಲ್ಲಿ ಕರ್ನಾಟಕದ ಮೀನುಗಳಿಗೆ ತಡೆಯೊಡ್ಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾದ ಮೀನುಗಾರಿಕಾ ಸಚಿವರ ಜೊತೆ ಕರ್ನಾಟಕದ ಮೀನುಗಾರಿಕಾ ಸಚಿವರು ಶೀಘ್ರ ಮಾತನಾಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೀನುಗಾರಿಕೆ ಕರಾವಳಿ ಕರ್ನಾಟಕದ ಪ್ರಮುಖ ಉದ್ಯಮ. ಇಲ್ಲಿಯ ಮೀನುಗಳು ಅಲ್ಲಿಗೆ ಹೋಗಬಾರದೆಂದು ತಡೆಯುವುದು ಸರಿಯಲ್ಲ. ಭಾರತ ದೇಶದಲ್ಲಿ ಸೀಮಿತ ಪ್ರದೇಶಕ್ಕೆ ವ್ಯಾಪಾರ ಮಾಡಲು ಸಾಧ್ಯವಿಲ್ಲ. ನಾನು, ಕಾರವಾರ ಉಸ್ತುವಾರಿ ಸಚಿವರು ಹಾಗೂ ಮೀನುಗಾರಿಕಾ ಸಚಿವರು ಭೇಟಿಯಾಗಿ […]

ಕೆಲಸ ನಿರಾಕರಿಸಲ್ಪಟ್ಟ ಗುತ್ತಿಗೆ ಕಾರ್ಮಿಕರಿಂದ ವೆನ್ಲಾಕ್ ಆಸ್ಪತ್ರೆಯೆದುರು ಧರಣಿ ಸತ್ಯಾಗ್ರಹ

Saturday, November 17th, 2018
protest

ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ವಿನಾಃ ಕಾರಣ ಕೆಲಸ ನಿರಾಕರಣೆ ಮಾಡಿದ ಸಾಯಿ ಸೆಕ್ಯುರಿಟೀಸ್ ಸಂಸ್ಥೆಯ ವಿರುದ್ದ ಮತ್ತು ಕಾರ್ಮಿಕರನ್ನು ಗುಲಾಮರಂತೆ ದುಡಿಸಿಕೊಳ್ಳುವ ಜಿಲ್ಲಾ ಅಧೀಕ್ಷಕರ ಕಾರ್ಮಿಕ ವಿರೋಧಿ ನೀತಿಯ ವಿರುದ್ದ ಇಂದು(16-11-2018) CITU ನೇತ್ರತ್ವದಲ್ಲಿ ನಗರದ ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯೆದುರು ಧರಣಿ ಸತ್ಯಾಗ್ರಹ ನಡೆಸಲಾಯಿತು. ಕೆಲಸದಿಂದ ನಿರಾಕರಿಸಲ್ಪಟ್ಟ 10 ಮಂದಿ ಕಾರ್ಮಿಕರು ಹಾಗೂ CITU ಕಾರ್ಯಕರ್ತರು ಸೇರಿ ನಡೆಸಿದ ಧರಣಿ ಸತ್ಯಾಗ್ರಹವನ್ನು CITU ಮಂಗಳೂರು ನಗರ ಪ್ರಧಾನ ಕಾರ್ಯದರ್ಶಿ […]

ಸ್ನೇಹಿತ ಎಂ.ಸಂಜೀವರ ಜೀವನ ಕಥನ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Saturday, November 17th, 2018
h-d-devegouda

ಮಂಗಳೂರು: ಮಾಜಿ ಸಿಎಂ ದಿ.ರಾಮಕೃಷ್ಣ ಹೆಗಡೆ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಆತ್ಮೀಯ ಅವಿಭಜಿತ ಜನತಾದಳ ಮುಖಂಡರಾಗಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕದ್ರಿ ಎಂ.ಸಂಜೀವ ಅವರ ಜೀವನ ಕಥನವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ರಾತ್ರಿ ಯುನಿಟಿ ಆಸ್ಪತ್ರೆಯ ವಾರ್ಡಿನಲ್ಲಿ ಬಿಡುಗಡೆ ಮಾಡಿದರು. ಮಂಗಳೂರಿಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿದೇವೇಗೌಡ ಅವರು ಆಸ್ಪತ್ರೆಗೆ ದಾಖಲಾಗಿದ್ದ ತಮ್ಮ ರಾಜಕೀಯ ಸ್ನೇಹಿತ ಎಂ.ಸಂಜೀವ ಅವರ ಯೋಗ ಕ್ಷೇಮ ವಿಚಾರಿಸಲು ಆಗಮಿಸಿದರು. […]