ಮುಂದುವರೆದ ಶಬರಿಮಲೆ ವಿವಾದ: ಇಂದು 12 ಗಂಟೆಗಳ ಕಾಲ ಕೇರಳ ಬಂದ್

Saturday, November 17th, 2018
shabarimale

ಕೊಚ್ಚಿನ್: ಹಿಂದೂ ಐಕ್ಯ ವೇದಿ ಸಂಘಟನೆಯ ಅಧ್ಯಕ್ಷೆ ಕೆ.ಪಿ. ಶಶಿಕಲಾರನ್ನು ಕೇರಳ ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಇಂದು 12 ಗಂಟೆಗಳ ಕೇರಳ ರಾಜ್ಯ ಬಂದ್ಗೆ ಕರೆ ನೀಡಲಾಗಿದೆ. ಶಬರಿಮಲೆ ಕರ್ಮ ಸಮಿತಿಯು 12 ಗಂಟೆಗಳ ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದ್ದು, ಇಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ. ರಾತ್ರಿ ವೇಳೆ ಶಶಿಕಲಾ ಪ್ರಯಾಣಕ್ಕೆ ಅಡ್ಡಿಪಡಿಸಿದ ಪೊಲೀಸರ ವಿರುದ್ಧ ಪ್ರತಿಭಟಿಸಿದ್ದಕ್ಕೆ ಅವರನ್ನು ಸನ್ನಿಧಾನಂನಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ. ಇನ್ನೊಂದೆಡೆ, ನಿನ್ನೆಯಷ್ಟೆ ಅಯ್ಯಪ್ಪನ ದೇಗಲು ಪ್ರವೇಶಿಸಲು […]

ಅನಂತ್​ಕುಮಾರ್ ನಿವಾಸಕ್ಕೆ ವೇಣುಗೋಪಾಲ್‌ ಭೇಟಿ!

Saturday, November 17th, 2018
ananth-kumar

ಬೆಂಗಳೂರು: ಅನಾರೋಗ್ಯದಿಂದ ಮೊನ್ನೆ ನಿಧಾನರಾಗಿದ್ದ ದಿವಂಗತ ಅನಂತ್ಕುಮಾರ್ ರವರ ಬಸನವಗುಡಿಯಲ್ಲಿರುವ ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಭೇಟಿ ನೀಡಿದರು. ಈ ವೇಳೆ ತೇಜಸ್ವಿನಿ ಅನಂತಕುಮಾರ್ರವರಿಗೆ ಸಾಂತ್ವನ ಹೇಳಿದ ಅವರು, ಪಕ್ಷಾತೀತವಾಗಿ ಅಪಾರ ಸ್ನೇಹಿತರನ್ನು‌ ಅನಂತ್ ಕುಮಾರ್ ಪಡೆದಿದ್ದರು ಎಂದು ಅವರ ನಿಧನಕ್ಕೆ ವೇಣುಗೋಪಾಲ್ ಸಂತಾಪ ಸೂಚಿಸಿದರು. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಅಂತಿಮ ನಮನ ಸಲ್ಲಿಸಿದ್ದರು. ಆದರೆ, ವೇಣುಗೋಪಾಲ್ ರಾಜ್ಯದಲ್ಲಿ ಇಲ್ಲದ ಕಾರಣಕ್ಕಾಗಿ‌‌ ಇಂದು ಅನಂತ್ಕುಮಾರ್ ನಿವಾಸಕ್ಕೆ ಭೇಟಿ […]

ಕುಂದಾಪುರದಲ್ಲಿ ಮತ್ತೊಂದು ಚಿರತೆ ಸೆರೆ

Saturday, November 17th, 2018
chetah

ಉಡುಪಿ: ಆಹಾರವರಸಿ ಜನವಸತಿಯತ್ತ ಬಂದು ಆತಂಕ ಮೂಡಿಸಿದ್ದ ಮತ್ತೊಂದು ಚಿರತೆ ಇಂದು ಮುಂಜಾನೆ ಅರಣ್ಯ ಇಲಾಖೆಯಿಟ್ಟ ಬೋನಿಗೆ ಬಿದ್ದಿದೆ. ಕಳೆದ ಶುಕ್ರವಾರ ತಡರಾತ್ರಿ ಹೆಣ್ಣು ಚಿರತೆಯೊಂದು ಬೋನಿಗೆ ಬಿದ್ದಿತ್ತು. ಕುಂದಾಪುರ ತಾಲೂಕು ಕಾಳಾವರ ಕಕ್ಕೇರಿ ಸಮೀಪದ ವರಾಹಿ ಕಾಲುವೆ ಬಳಿಯ ಹಾಡಿ ಪ್ರದೇಶದಲ್ಲಿ ಹಲವಾರು ಸಮಯಗಳಿಂದ ಚಿರತೆಗಳ ಓಡಾಟವನ್ನು ಜನರು ಪ್ರತ್ಯಕ್ಷವಾಗಿ ಕಂಡಿದ್ದರು. ಮನೆಯ ನಾಯಿಗಳನ್ನು ಹಿಡಿಯಲು ಚಿರತೆಗಳು ಜನನಿಬಿಡ ಪ್ರದೇಶದತ್ತವೂ ಸುಳಿದಾಡುತ್ತಿತ್ತು. ಜನರು ನೀಡಿದ ಮಾಹಿತಿಯಂತೆ ಸೂಕ್ತ ಸ್ಥಳದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿದ್ದರು. […]

ಮಂಗಳೂರಲ್ಲಿ ಎಂಎಲ್​ಸಿ ಮಗಳ ಮದುವೆಯಲ್ಲಿ ಪಾಲ್ಗೊಂಡ ಹೆಚ್​ಡಿಕೆ ಕುಟುಂಬ..!

Saturday, November 17th, 2018
marriege

ಮಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ಉಳ್ಳಾಲದ ಸೋಮೇಶ್ವರದಲ್ಲಿ ನಡೆದ ಎಂಎಲ್ಸಿ ಬಿ.ಎಂ.ಫಾರೂಕ್ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಿಗಿ ಬಂದೋಬಸ್ತ್ನಲ್ಲಿ ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಕಾರಿನಲ್ಲಿ‌ ಬಂದಿಳಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಹೆಚ್.ಡಿ.ದೇವೇಗೌಡ, ಅನಿತಾ ಕುಮಾರಸ್ವಾಮಿ, ದೇವೇಗೌಡರ ಪತ್ನಿ ಚೆನ್ನಮ್ಮ ಹಾಗೂ ಕುಟುಂದವರನ್ನು ಬಿ.ಎಂ.ಫಾರೂಕ್ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಸ್ವಾಗತಿಸಿದರು. ಈ ಸಂದರ್ಭ ಕುಮಾರಸ್ವಾಮಿ ಹಾಗೂ ಕುಟುಂಬಸ್ಥರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಿ.ಎಂ.ಫಾರೂಕ್ ಅವರ ಆತಿಥ್ಯ ಸ್ವೀಕರಿಸಿದರು

ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ ಗೆ ಚಾಲನೆ

Friday, November 16th, 2018
alvas-nudisiri 18

ಮೂಡುಬಿದಿರೆ : ಖ್ಯಾತ ಸಂಶೋಧಕ ಡಾ.ಷ.ಶೆಟ್ಟರ್  ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ  15ನೆ ವರ್ಷದ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ ಯನ್ನು ಸುಂದರಿ ಆನಂದ ಆಳ್ವ ಆವರಣದಲ್ಲಿರುವ ಸಂತ ಶಿಶುನಾಳ ಶರೀಫ ಸಭಾಂಗಣದ ರತ್ನಾಕರವರ್ಣಿ ವೇದಿಕೆಯಲ್ಲಿ ಉದ್ಘಾಟಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಮೋಹನ್ ಆಳ್ವ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು. ಬಳಿಕ ಮಾತನಾಡಿದ ಷ.ಶೆಟ್ಟರ್ ನಾಲ್ಕನೇ ಶತಮಾನದ ಆರಂಭದಲ್ಲೇ ಕನ್ನಡ ಭಾಷೆಯ ಉಗಮವಾಗಿದೆ, ಆದುದರಿಂದ ಹಲ್ಮಿಡಿ ಶಾಸನದಿಂದ ಆಯಿತು ಎನ್ನುವುದು ಅರ್ಧ ಸತ್ಯ.ಇದನ್ನು ಪುನರ್ ಪರಿಶೀಲನೆ ಮಾಡಬೇಕಾದ ಅಗತ್ಯವಿದೆ ಎಂದರು. ತೆಲುಗು […]

ಆಳ್ವಾಸ್ ಸಿನಿಸಿರಿ ಉದ್ಘಾಟನೆ

Friday, November 16th, 2018
ingrution-alwas

ಮೂಡಬಿದಿರಿ: ನುಡಿಸಿರಿಯು ಹಲವಾರು ರೀತಿಯ ಸಿರಿಗಳಿಂದ ಒಳಗೊಂಡು ಸಾಂಸ್ಕೃತಿ ಸಾಹಿತ್ಯದ ಹಬ್ಬವಾಗಿ ರೂಪುಗೊಂಡಿದೆ ಆದರೆ ಬಹುಕಲೆಯ ಸಿರಿಯಲ್ಲಿ ಚಲನಚಿತ್ರದ ಕೊರತೆ ಇದ್ದು ಅದನ್ನು ನೀಗಿಸಲು ಚಲನಚಿತ್ರಕ್ಕೆ ಪ್ರಾಶಸ್ತ್ಯ ನೀಡಲಾಗಿದೆ. ಕಲಾತ್ಮಕ ಸಿನಿಮಾಗಳಿಗೆ ಮಾರುಕಟ್ಟೆಯಲ್ಲಿ ಸ್ಥಾನವಿಲ್ಲದ ಕಾರಣ, ಸಿನೆಮಾ ನೋಡುಗರ ಸಂಖ್ಯೆ ಕಡಿಮೆಯಾಗಿದೆ. ಇಂದಿನ ಯುವಜನತೆ ಹೊಂದಿಕೊಂಡಿರುವ ಸಾಮಾಜಿಕ ಜಾಲತಾಣವನ್ನು, ಸಾಂಸ್ಕೃತಿಕ ಜಾಲತಾಣವನ್ನಾಗಿ ಪರಿವರ್ತಿಸುವ ಕಾರ್ಯ ನಡೆಯಬೇಕಾಗಿದೆ ಆ ನಿಟ್ಟಿನಲ್ಲಿ ಕಲಾತ್ಮಕ ಸಿನಿಮಾಗಳಿಗೆ ಯಾವುದೇ ರೀತಿಯ ಮೋಸವಾಗಬಾರದು ಎಂದು ಈ ರೀತಿ ಸಿನಿಮಾ ಉತ್ಸವವನ್ನು ನಡೆಸಬೇಕು ಎಂದು ಕರ್ನಾಟಕ […]

ದ.ಕ. ಜಿಲ್ಲೆಯ ಮೂರು ತಾಲೂಕು ಒಟ್ಟುಗೂಡಿ ಪುತ್ತೂರು ಜಿಲ್ಲೆ ರಚನೆಯಾಗಬೇಕು: ಹೋರಾಟ ಸಮಿತಿ ಒತ್ತಾಯ

Friday, November 16th, 2018
puttur

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂರು ತಾಲೂಕುಗಳು ಒಟ್ಟುಗೂಡಿ ಪ್ರತ್ಯೇಕ ಪುತ್ತೂರು ಜಿಲ್ಲೆ ರಚನೆಯಾಗಬೇಕು ಎಂಬ ಒತ್ತಾಯ ಕೇಳಿಬಂದಿದೆ. ಈಗಾಗಲೇ ಈ ಕುರಿತು ಹೋರಾಟ ಸಮಿತಿಯನ್ನೂ ರಚಿಸಲಾಗಿದೆ ಎನ್ನಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದ ಉಡುಪಿ ಜಿಲ್ಲೆಯನ್ನು ಸರ್ಕಾರ ಪ್ರತ್ಯೇಕ ಜಿಲ್ಲೆಯಾಗಿ‌ ಘೋಷಿಸಿದ ಬಳಿಕ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ತಾಲೂಕುಗಳಿವೆ. ಇದರಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕುಗಳನ್ನು ಸೇರಿಸಿ ಪ್ರತ್ಯೇಕ ಪುತ್ತೂರು ಜಿಲ್ಲೆ ಮಾಡಬೇಕೆಂಬ ಕೂಗು ಕೇಳಿಬಂದಿದೆ. ಇದಕ್ಕಾಗಿ ಈ ಭಾಗದ ಪ್ರಮುಖರು ಒಂದು ಹಂತದ ಸಭೆಯನ್ನು […]

ಆ್ಯಕ್ಷನ್​ ಪ್ರಿನ್ಸ್​ ಧ್ರುವಾ ಸರ್ಜಾಗೆ ಕಂಕಣ ಭಾಗ್ಯ: ಬಾಲ್ಯದ ಸ್ನೇಹಿತೆಯೊಂದಿಗೆ ಹಸೆಮಣೆ ಏರಲು ಸರ್ಜಾ ರೆಡಿ..!

Friday, November 16th, 2018
dhruva-sarja

ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾಗೆ ಕಂಕಣ ಭಾಗ್ಯ ಕೂಡಿಬಂದಿದೆ. ತಮ್ಮ ಬಾಲ್ಯದ ಸ್ನೇಹಿತೆಯೊಂದಿಗೆ ಹಸೆಮಣೆ ಏರಲು ಸರ್ಜಾ ರೆಡಿಯಾಗಿದ್ದಾರೆ. ತಮ್ಮ ಬಾಲ್ಯದ ಗೆಳತಿ ಪ್ರೇರಣಾ ಅವರೊಂದಿಗೆ ಧ್ರುವಾ ಸರ್ಜಾ ಡಿಸೆಂಬರ್ 10ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಹಿಂದೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ತಾವು ಲವ್ ಮ್ಯಾರೇಜ್ ಆಗುವುದಾಗಿ ಸುಳಿವು ಬಿಟ್ಟುಕೊಟ್ಟಿದ್ದರು. ಅದರಂತೆ ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಸ್ನೇಹಿತೆ ಪ್ರೇರಣಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಸದ್ಯದಲ್ಲೇ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಮದುವೆಗೆ […]

ಅಯ್ಯಪ್ಪನ ದರ್ಶನಕ್ಕೆ ಸಜ್ಜಾದ ತೃಪ್ತಿ ದೇಸಾಯಿ: ಕೊಚ್ಚಿನ್​ ಏರ್​ಪೋರ್ಟ್​ನಲ್ಲಿ ಬಿಜೆಪಿ ಪ್ರತಿಭಟನೆ

Friday, November 16th, 2018
Tripti-desai

ಕೊಚ್ಚಿನ್: ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರ ಪ್ರವೇಶ ಸಂಬಂಧ ಭುಗಿಲೆದ್ದಿರುವ ವಿವಾದ ಶಮನವಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಮಹಿಳೆಯರ ಪ್ರವೇಶಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೆ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ದೇಗುಲ ಪ್ರವೇಶಕ್ಕೆ ಸಿದ್ಧರಾಗಿದ್ದಾರೆ. ದೇಗುಲ ಪ್ರವೇಶಿಸಿಯೇ ತೀರುತ್ತೇನೆ ಎಂದು ಪಣತೊಟ್ಟಿರುವ ಅವರು ಭಾರಿ ಭದ್ರತೆಯೊಂದಿಗೆ ನಿನ್ನೆ ಕೊಚ್ಚಿನ್ ವಿಮಾನನಿಲ್ದಾಣಕ್ಕೆ ಆಗಮಿಸಿದರು. ಅಲ್ಲದೆ, ಅಯ್ಯಪ್ಪನ ಭಕ್ತರು ಅವರಿಗೆ ಪ್ರತಿರೋಧವೊಡ್ಡಿದ ಘಟನೆಯೂ ನಡೆಯಿತು. ವಿಮಾನನಿಲ್ದಾಣದ ಬಳಿಯೇ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ವ್ಯಕ್ತಪಡಿಸಿದರು. ಪೊಲೀಸ್ ವಾಹನದಲ್ಲಿ ಅಥವಾ ಸರ್ಕಾರಿ ವಾಹನದಲ್ಲಿ ತೃಪ್ತಿ […]

ಆಳ್ವಾಸ್‌ ವಿದ್ಯಾರ್ಥಿ ಸಿರಿ-2018 ವಿದ್ಯಾರ್ಥಿ ಸಾಹಿತ್ಯ- ಸಂಸ್ಕೃತಿ ಸಮ್ಮೇಳನ ಉದ್ಘಾಟನೆ

Friday, November 16th, 2018
vidyasiri

ಮೂಡಬಿದಿರೆ: ಆತ್ಮವಿಶ್ವಾಸದೊಂದಿಗೆ ಸ್ವಂತಿಕೆಯನ್ನು ಅರಳಿಕೊಳ್ಳುವುದರಷ್ಟೇ ಮುಖ್ಯ ಸಾಂಘಿಕ ಪ್ರಜ್ಞೆಯೊಂದಿಗೆ ಬದುಕಲು ಕಲಿಯು ವುದು ಎಂದು ನಟಿ, ನಿರ್ದೇಶಕಿ ವಿನಯಾ ಪ್ರಸಾದ್‌ ಹೇಳಿದರು. ವಿದ್ಯಾಗಿರಿಯಲ್ಲಿ ಗುರುವಾರ “ಆಳ್ವಾಸ್‌ ವಿದ್ಯಾರ್ಥಿ ಸಿರಿ-2018′ ವಿದ್ಯಾರ್ಥಿ ಸಾಹಿತ್ಯ- ಸಂಸ್ಕೃತಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊರತೆಗಳಿವೆ ಎಂದು ಕೊರಗುವುದರಲ್ಲಿ ಅರ್ಥವಿಲ್ಲ; ಅವುಗಳ ನಡುವೆ ಸಂತೃಪ್ತ ಜೀವನ ನಡೆಸಲು ಸಮರ್ಥರಾದಾಗ ಬದುಕು ಸಾರ್ಥಕ ಎಂದು ಕಿವಿಮಾತು ಹೇಳಿದರು. ಬಣ್ಣ, ರೂಪ, ಬುದ್ಧಿವಂತಿಕೆಗಳ ನೆಲೆಗಟ್ಟಿನ ತಾರತಮ್ಯ ಭಾವ ಸಲ್ಲದು. ಮನೆಯ ಎಲ್ಲ ಕೆಲಸಗಳಲ್ಲೂ ಇದ್ದೇನೆ ಎಂದು […]