ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಶರತ್ ಮಡಿವಾಳ ಅಂತಿಮ ಸಂಸ್ಕಾರ

Saturday, July 8th, 2017
Sarath madivala

ಬಂಟ್ವಾಳ : ಬಿಸಿ ರೋಡ್ ನಲ್ಲಿ ಜುಲೈ 4 ಮಂಗಳವಾರ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಶುಕ್ರವಾರ ರಾತ್ರಿ ಮೃತಪಟ್ಟ ಶರತ್ ಮಡಿವಾಳರ ಮೃತದೇಹ ಆಸ್ಪತ್ರೆಯಿಂದ ಮೆರವಣಿಗೆಯ ಮೂಲಕ ಸಾಗಿ ಅವರ ಸ್ವಗ್ರಾಮವಾದ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರಿಗೆ ತಲುಪಿದ್ದು, ಮಧ್ಯಾಹ್ನ ವೇಳೆ ಶರತ್ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಇಂದು ಮಧ್ಯಾಹ್ನದ ವೇಳೆಗೆ ಶರತ್ ಸ್ವಗ್ರಾಮಕ್ಕೆ ತಲುಪಿದ ಮೃತದೇಹವನ್ನು ಧಾರ್ಮಿಕ ವಿಧಿವಿಧಾನದಂತೆ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಘಪರಿವಾರದ ಮುಖಂಡರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನರು […]

ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ , ಜಾತ್ಯತೀತ ಮೌಲ್ಯಗಳು ಕುಸಿಯುತ್ತಿವೆ : ಮುನೀರ್

Friday, July 7th, 2017
muneer

ಮಂಗಳೂರು : ಸೌಹಾರ್ದತೆ, ಐಕ್ಯತೆ, ಜ್ಯಾತೀತತೆ ವ್ಯವಸ್ಥೆಯನ್ನು ದುರ್ಭಲಗೊಳಿಸುವ ಶಕ್ತಿಗಳ ವಿರುದ್ಧ  ಡಿವೈಎಫ್‌ಐ ವತಿಯಿಂದ ಹಮ್ಮಿಕೊಂಡಿರುವ ಸಪ್ತಾಹವನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ  ದಲಿತರ, ಅಲ್ಪ ಸಂಖ್ಯಾತರ ಜನರ ಮೇಲೆ ಆಳುವ ಶಕ್ತಿಗಳ ಪ್ರಾಯೋಜಕತ್ವದಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಹಮ್ಮಿಕೊಂಡ ಪ್ರತಿಭಟನಾ ಪ್ರದರ್ಶನವನುದ್ದೇಶಿಸಿ ಮಾತನಾಡಿ ದೇಶದೊಳಗೆ ದ್ವೇಷದ ವಾತವರಣ ಸೃಷ್ಟಿಯಾಗುತ್ತಿರುವ ಕಾರಣ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ , ಜಾತ್ಯತೀತ ಮೌಲ್ಯಗಳು ಕುಸಿಯುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜನ ಸಾಮನ್ಯರಲ್ಲಿ, ಅಲ್ಪಸಂಖ್ಯಾತರಲ್ಲಿ, […]

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಮೃತ್ಯು

Friday, July 7th, 2017
sharath

ಮಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಮಡಿವಾಳ (28)  ನಗರದ ಎ.ಜೆ. ಆಸ್ಪತ್ರೆಯಲ್ಲಿ  ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಶರತ್ ಜುಲೈ 4 ರಂದು  ಬಿ.ಸಿ.ರೋಡ್‌ನಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದರು. ಶರತ್ ಬಿ.ಸಿ.ರೋಡ್‌ನ ತನ್ನ  ಲಾಂಡ್ರಿಯಲ್ಲಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಆಗಮಿಸಿದ ಅಪರಿಚಿತರ ತಂಡವೊಂದು ಅಂಗಡಿಗೆ ನುಗ್ಗಿ ಶರತ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರ ಅಂತಿಮ […]

ಶರತ್ ಮೇಲಿನ ಕೊಲೆಯತ್ನ ಖಂಡಿಸಿ ಬಿಸಿ ರೋಡ್ ನಲ್ಲಿ ಹಿಂದೂ ಕಾರ್ಯಕರ್ತರಿಂದ ಬ್ರಹತ್ ಪ್ರತಿಭಟನೆ

Friday, July 7th, 2017
Hindu protest

ಬಂಟ್ವಾಳ : ನಿಷೇಧಾಜ್ಞೆ ಇದ್ದರೂ ಹಿಂದೂ ಯುವಕನಿಗೆ ಚೂರಿ ಹಾಕಿ ದುಷ್ಕರ್ಮಿಗಳು ಪರಾರಿಯಾದ ಪ್ರಕರಣವನ್ನು ಖಂಡಿಸಿ  ಹಿಂದೂ ಹಿತ ರಕ್ಷಣಾ ವೇದಿಕೆ ಹಾಗೂ ಹಲವು ಹಿಂದೂ ಸಂಘಟನೆಗಳು ಸಾವಿರಾರು ಸಂಖ್ಯೆಯಲ್ಲಿ ಬಿಸಿ ರೋಡ್ ಬಸ್ ನಿಲ್ದಾಣದ ಬಳಿ ಶುಕ್ರವಾರ  ಪ್ರತಿಭಟನೆ ನಡೆಸಿದರು. ಮಂಗಳವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಎಂಬವರ ಮೇಲೆ ಕೊಲೆಯತ್ನ ಮಾಡಿ ಸಾವು ಬದುಕಿನ ನಡುವೆ ಹೋರಾಟನಡೆಸುತ್ತಿದ್ದು, ಈ ಕೃತ್ಯವನ್ನು ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಶೋಭಾ ಕರಂದ್ಲಾಜೆ, ಕಾರ್ಕಳ […]

ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಗಿ ಕಾನೂನು ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

Friday, July 7th, 2017
CM Siddaramaiah

ಮಂಗಳೂರು :  ಅಡ್ಯಾರ್ ನಲ್ಲಿ  ನಡೆಯುವ ಕಾಂಗ್ರೆಸ್ ಪಕ್ಷದ ಮೈಸೂರ್ ವಿಭಾಗದ  ಪ್ರತಿನಿಧಿಗಳ ಸಮಾವೇಶಕ್ಕೆ ಆಗಮಿಸಿದ ಕರ್ನಾಟಕ ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರೊಂದಿಗೆ ಮಾತನಾಡಿ ಕೆಲವು ಸಮಾಜ ಘಾತುಕ ಶಕ್ತಿಗಳು ಕಾನೂನು ಕೈಗೆತ್ತಿಕೊಳ್ಳುತ್ತಿ ಕೊಂಡು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳು ಮಾಡುತ್ತಿದ್ದಾರೆ ನಮ್ಮ ಸರ್ಕಾರ ಇದಕ್ಕೆ ಖಂಡಿತ ಅವಕಾಶ ನೀಡುವುದಿಲ್ಲ ಎಂದು  ಹೇಳಿದರು. ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವ ಸಂಘಟನೆ ಸಫಲತೆ ಕಾಣುವುದಿಲ್ಲ, ಸಮಾಜಘಾತುಕ ಶಕ್ತಿಗಳ ವಿರುದ್ಧ ಬಿಗಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದವರು ಹೇಳಿದರು. ಈ ಸಂದರ್ಭ […]

ಸ್ಕಿಲ್ ಗೇಮ್ ಎಂಬ ಹೆಸರಿನಲ್ಲಿ ನಡೆಯುತ್ತಿದ್ದ ಜೂಜು ಕೇಂದ್ರಕ್ಕೆ ಮಂಗಳೂರು ಮಹಾನಗರ ಪಾಲಿಕೆ ದಾಳಿ

Thursday, July 6th, 2017
silk Game

ಮಂಗಳೂರು : ಜೂಜು ಆಡುವ ಮೂಲಕ ಆಡುವವರು ಮತ್ತು ಆಡಿಸುವವರು ಸುಲಭದಲ್ಲಿ ದುಡ್ಡು ಮಾಡಬಹುದು. ಒಮ್ಮೆ ಜೂಜು ಆಡಲು ಸುರು ಮಾಡಿದರೆ ಮನೆ, ಅಸ್ತಿ ಎಲ್ಲವನ್ನು ಕಳಕೊಂಡೇ ಜನ ಆಟ ನಿಲ್ಲಿಸುವುದು. ಜನರನ್ನು ಸುಲಿಗೆ ಮಾಡುವ ಅಂತಹ ಆಟದ ಅಡ್ಡೆಗಳು ಮಂಗಳೂರಿನಲ್ಲಿ 80 ಕ್ಕೂ ಹೆಚ್ಛೇ ಇದೆ ಎಂದು ಹೇಳಲಾಗಿದೆ. ಅಂತಹ ಜೂಜು ಕೇಂದ್ರಗಳಿಗೆ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಮಂಗಳೂರಿನ ಮೇಯರ್ ಕವಿತಾಸನಿಲ್  ಗುರುವಾರ ಸಂಜೆ ಮಹತ್ವದ ಕಾರ್ಯಾಚರಣೆಯೊಂದನ್ನು ನಡೆಸಿದರು. ಸಂಜೆ 5 ಗಂಟೆ ಹೊತ್ತಿಗೆ […]

ರೈಲ್ವೇ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಜು.22ರಂದು ಸ್ಥಳ ಪರಿಶೀಲನೆ

Thursday, July 6th, 2017
Nalin Kumar

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೇ ಇಲಾಖೆಗೆ ಸಂಬಂಧಿಸಿದ ಹಲವು ಸಮಸ್ಯೆಗಳು ನಿವಾರಣೆಯಾಗಿವೆ.  ಮಂಗಳೂರು-ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ರೈಲ್ವೇಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹರಿಸಿಕೊಳ್ಳಲು ಜು.22ರಂದು ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ರೈಲ್ವೇ ಅಧಿಕಾರಿಗಳ ಸಭೆಯಲ್ಲಿ ಗುರುವಾರ  ಮಾತನಾಡಿದ  ಸಂಸದ ನಳಿನ್, ಅಧಿಕಾರಿಗಳು ಸಮಸ್ಯೆ ಸೃಷ್ಟಿಯಾಗದಂತೆ ಎಚ್ಚರವಹಿಸಬೇಕು, ರೈಲ್ವೇ ಸಮಸ್ಯೆಗಳ ಕುರಿತಂತೆ ಇಲಾಖೆಯು ಪಿಡಬ್ಲ್ಯೂಡಿ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಪರಸ್ಪರ ಸಹಭಾಗಿತ್ವದಿಂದ […]

ಸೆಪ್ಟಂಬರ್ 2ರಂದು ಮೂಡಬಿದ್ರೆಯಲ್ಲಿ ‘ಸದಾಭಿನಂದನೆ’

Thursday, July 6th, 2017
A Sadananada

ಮಂಗಳೂರು :  ಎ. ಸದಾನಂದ ಶೆಟ್ಟಿಯವರ 75ನೆ ಜನ್ಮ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 2ರಂದು ‘ಸದಾಭಿನಂದನೆ’ ಕಾರ್ಯಕ್ರಮವನ್ನು ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಅಮರನಾಥ ಶೆಟ್ಟಿ  ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್‌ಫೇರ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ, ಶ್ರೀದೇವಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಕರಾವಳಿಯ ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ, ಸಾಮಾಜಿಕ, ಉದ್ಯಮ ಹಾಗೂ ಸೇವಾ ವಲಯದಲ್ಲಿ ಕೊಡುಗೈದಾನಿಯಾಗಿ ಅಪ್ರತಿಮ ಮಾತೃಸಂಘದ ಮಾಜಿ ಅಧ್ಯಕ್ಷ, ಸ್ಪೋರ್ಟ್ಸ್ ಪ್ರಮೋಟರ್ಸ್ ಕ್ಲಬ್, ದ.ಕ. ಬ್ಯಾಡ್‌ಮಿಂಟನ್ ಅಸೋಸಿಯೇಶನ್, ದ.ಕ. […]

ಕಡಲ್ಕೊರೆತ ಪ್ರದೇಶಗಳ ನಿವಾಸಿಗಳಿಗೆ ಪುನರ್ವಸತಿ: ಸಚಿವ ಖಾದರ್ ಸೂಚನೆ

Thursday, July 6th, 2017
Khader

ಮಂಗಳೂರು : ಉಳ್ಳಾಲ ಸುತ್ತಮುತ್ತಲ ಪ್ರದೇಶಗಳಲ್ಲಿ ಪ್ರತೀವರ್ಷ ಕಡಲ್ಕೊರೆತ ಸಮಸ್ಯೆಯಿಂದ ಸಂತ್ರಸ್ತರಾಗುವ ಜನತೆಗೆ ಇದರಿಂದ ಮುಕ್ತಿ ನೀಡಲು ಪರ್ಯಾಯ ನಿವೇಶನ ನೀಡಿ ಪುನರ್ವಸತಿ ಕಲ್ಪಿಸಲು ಆಹಾರ ಸಚಿವ ಯು.ಟಿ. ಖಾದರ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಡಲ್ಕೊರೆತ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಪ್ರತೀವರ್ಷ ಕಡಲ್ಕೊರೆತದಿಂದ ತೀರ ಪ್ರದೇಶದ ನಿವಾಸಿಗಳು ಅತಂತ್ರರಾಗಿ ಭಯದಿಂದ ಬದುಕು ಸಾಗಿಸಬೇಕಾಗಿದೆ. ಸಂತ್ರಸ್ತ ಕುಟುಂಬಗಳ ಭವಿಷ್ಯದಲ್ಲಿ ನೆಮ್ಮದಿಯಿಂದ ಬದುಕು ಸಾಗಿಸಲು ಇಲ್ಲಿನ ಸಮುದ್ರ ತೀರ ಪ್ರದೇಶದಲ್ಲಿ […]

ಮಲೇರಿಯಾ ಉತ್ಪತ್ತಿ ತಾಣಗಳಿಗೆ ಮಹಾನಗರ ಪಾಲಿಕೆಯ ವತಿಯಿಂದ ದಾಳಿ

Wednesday, July 5th, 2017
Malaria

ಮಂಗಳೂರು : ಮಹಾನಗರ ಪಾಲಿಕೆಯ ವತಿಯಿಂದ ಈಗಾಗಲೇ ಗುರುತಿಸಲಾಗಿರುವ ಮಲೇರಿಯಾ ಉತ್ಪತ್ತಿ ತಾಣಗಳಿಗೆ ದಾಳಿ ನಡೆಸಿ ದಂಡ ವಿಧಿಸುವುದು ಹಾಗೂ ಕಟ್ಟಡ ಪರವಾನಿಗೆ ರದ್ದು ಪಡಿಸುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಮೇಯರ್ ಕವಿತಾ ಸನಿಲ್ ಎಚ್ಚರಿಸಿದ್ದಾರೆ. ಪತ್ರಿಕಾ ಘೋಷ್ಟಿಯಲ್ಲಿ ಮಾತನಾಡಿದ ಮೇಯರ್ ಮಲೇರಿಯಾ ಹಾಗೂ ಡೆಂಗ್ಯೂ ನಂತಹ ಸಾಂಕ್ರಾಮಿಕ ರೋಗಗಳಿಂದ ಮಂಗಳೂರು ಮಹಾನಗರ ಪಾಲಿಕೆಯ ಜನರನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದು ಅವರು ಹೇಳಿದ್ದಾರೆ . ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಮಲೇರಿಯಾ ರೋಗ ಪ್ರಕರಣಗಳಲ್ಲಿ ಇಳಿಕೆ […]