25 ವಾರ ಮುಗಿಸಿದ ಪೊಲೀಸ್ ಕಮಿಷನರ್ ಪೋನ್ ಇನ್’ ಕಾರ್ಯಕ್ರಮ

Friday, January 27th, 2017
commissioner

ಮಂಗಳೂರು :  ಪೊಲೀಸ್ ಕಮಿಷನರ್ ವತಿಯಿಂದ ಆರಂಭಿಸಲಾಗಿರುವ ‘ಪೋನ್ ಇನ್’ ಕಾರ್ಯಕ್ರಮಕ್ಕೆ 25 ವಾರ ಮುಗಿದಿದ್ದು  ಈ ತನಕ ಒಟ್ಟು 428 ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಹೇಳಿದ್ದಾರೆ. ಪೋನ್ ಇನ್’ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದ್ದು 24 ಕಂತುಗಳಲ್ಲಿ ಸ್ವೀಕರಿಸಿದ ಒಟ್ಟು 403 ದೂರುಗಳ ಪೈಕಿ 373 ದೂರುಗಳಿಗೆ ಪೂರ್ಣ ಪ್ರಮಾಣದಲ್ಲಿ ಮತ್ತು 10 ದೂರುಗಳಿಗೆ ಆಂಶಿಕವಾಗಿ ಸ್ಪಂದಿಸಲಾಗಿದೆ. 20 ದೂರುಗಳನ್ನು ಇತರ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. 261 ದೂರುಗಳು ಸಂಚಾರ ಸುವ್ಯವಸ್ಥೆಗೆ ಸಂಬಂಧ ಪಟ್ಟಿರುತ್ತವೆ. 52 […]

ಚಲನಚಿತ್ರೋತ್ಸವ ಸಪ್ತಾಹಕ್ಕೆ ಚಾಲನೆ

Friday, January 27th, 2017
Film-Festival

ಮಂಗಳೂರು :  ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಚಲನಚಿತ್ರೋತ್ಸವ ಸಪ್ತಾಹಕ್ಕೆ ಶುಕ್ರವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ನಗರದ ನ್ಯೂಚಿತ್ರಾ ಚಿತ್ರಮಂದಿರದಲ್ಲಿ ನಡೆಯುತ್ತಿರುವ ಸಪ್ತಾಹವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್‍ಸ್ಟ್ರೀಟ್ ಇಲ್ಲಿನ ಪ್ರಾಂಶುಪಾಲ ಡಾ. ರಾಜಶೇಖರ ಹೆಬ್ಬಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ಆಧಾರಿತ ಸದಭಿರುಚಿಯ ಚಲನಚಿತ್ರಗಳನ್ನು ವೀಕ್ಷಿಸುವ ಅವಕಾಶ ಇತ್ತೀಚಿನ ದಿನಗಳಲ್ಲಿ ಅಪರೂಪವಾಗಿದೆ. ಮನೋರಂಜನೆಯೊಂದಿಗೆ ಕಲಾಧಾರಿತ […]

ಜಾತಿ ಭೇದ ಮರೆತು ಗೋಮಾತೆಯ ರಕ್ಷಣೆಗೆ ಮುಂದಾಗೋಣ : ರಾಘವೇಶ್ವರ ಭಾರತಿ ಸ್ವಾಮೀಜಿ

Friday, January 27th, 2017
Mangala gou Yatre

ಮಂಗಳೂರು: ಸಂತರೇ ಎಂಜಿನ್‌ಗಳಾಗಿ ಭಕ್ತರೇ ಬೋಗಿಗಳಾಗಿ ಗೋಹತ್ಯೆ ನಿಷೇಧದ ಸಂಗ್ರಾಮದಲ್ಲಿ ಫಾಲ್ಗೊಳ್ಳುವ ಮೂಲಕ ಸಮಾಜಕ್ಕೊಂದು ಶುಭ ಸಂದೇಶ ನೀಡುವ ಕಾಯಘ ನಡೆಯುತ್ತಿದೆ ಎಂದು ಶ್ರೀ ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ನುಡಿದರು. ಕೂಳೂರಿನ ಮಂಗಲಭೂಮಿಗೆ ಮಂಗಲ ಗೋಯಾತ್ರೆಯ ಪುರಪ್ರವೇಶದಲ್ಲಿ ಗೋಧ್ವಜ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು. ಎರಡು ದಿನಗಳ ಬಳಿಕ ಇದೇ ಸ್ಥಳದಲ್ಲಿ ವಿಶ್ವದಲ್ಲಿ ಹೊಸದೊಂದು ಶಕ್ತಿ ಉದಯವಾಗಲಿದೆ. ಅದು ಗೋವಿನ ಸುತ್ತ ಭದ್ರ ಕೋಟೆ ಕಟ್ಟಿ, ಗೋವಿನ ಕಾವಲಿಗೆ ನಿಲ್ಲಲಿದೆ. ತನ್ಮೂಲಕ ಗೋಹತ್ಯೆಯನ್ನು […]

ಕಂಬಳ ಹೋರಾಟಕ್ಕೆ ಬೀದಿಗಿಳಿಯಲಿರುವ ತುಳು ಕಲಾವಿದರು

Friday, January 27th, 2017
Tulu Actors

ಮಂಗಳೂರು: ತುಳು ಚಿತ್ರರಂಗದ ಕಲಾವಿದರು ಕಂಬಳ ಹೋರಾಟಕ್ಕೆ ಮುಂದಾಗಿದ್ದು , ಜ. 27 ರಂದು ಮಂಗಳೂರು ನಗರದಲ್ಲಿ ನಡೆಯುವ ಮಾನವ ಸರಪಳಿ ಹಾಗೂ 28 ರಂದು ಮೂಡುಬಿದಿರೆಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ ಎಂದು ತುಳು ಚಿತ್ರರಂಗದ ಹಿರಿಯ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್‌ಬೈಲ್ ಮತ್ತು ಹಿರಿಯ ನಟ, ನಿರ್ದೇಶಕ ದೇವದಾಸ ಕಾಪಿಕಾಡ್ ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಕೊಡಿಯಾಲ್‌ಬೈಲ್, ತುಳು ಚಿತ್ರರಂಗದ ಕಲಾವಿದರು ಮಾತ್ರವಲ್ಲ ನಾಟಕ, ಯಕ್ಷಗಾನ, ಸಾಂಸ್ಕೃತಿಕ ರಂಗಭೂಮಿಯ ಕಲಾವಿದರು ಕಂಬಳ ಬೆಂಬಲಿಸಿ […]

ಕದ್ರಿ ಉದ್ಯಾನವನದಲ್ಲಿ ನಾಲ್ಕು ದಿನದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

Thursday, January 26th, 2017
Palapushpa

ಮಂಗಳೂರು: ದ.ಕ. ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ಹಾಗೂ ಸಿರಿ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಕದ್ರಿ ಉದ್ಯಾನವನದಲ್ಲಿ  ಜನವರಿ. 26 ರಿಂದ 29 ರವರೆಗೆ ಕದ್ರಿ ಉದ್ಯಾನವನದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು . ಫಲಪುಷ್ಪ ಪ್ರದನರ್ಶದಲ್ಲಿ ಸುಮಾರು  10 ಅಡಿ ಎತ್ತರದಲ್ಲಿ ಉಳ್ಳಾಲದ ವೀರರಾಣಿ ಅಬ್ಬಕ್ಕಳ ಪ್ರತಿಕೃತಿ ಹಾಗೂ ಕುದುರೆಯನ್ನು  ಹೂವುಗಳಿಂದ ರಚಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ನಿರ್ಮಿಸಿದ ಆನೆ, ಸೈನಿಕರು ಎಲ್ಲ ಸೇರಿ ಸುಮಾರು 9 ಅಡಿ […]

ಮಂಗಳೂರಿನಲ್ಲಿ 68ನೇ ಗಣರಾಜ್ಯೋತ್ಸವದ ಧ್ವಜಾರೋಹಣಗೈದ ರಮಾನಾಥ ರೈ

Thursday, January 26th, 2017
Republic day

ಮಂಗಳೂರು: 68ನೇ ಗಣರಾಜ್ಯೋತ್ಸವವನ್ನು ಮಂಗಳೂರಿನ ನೆಹರೂ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣಗೈಯುವ ಮೂಲಕ ಪರಿಸರ, ಅರಣ್ಯ, ಜೀವಿಶಾಸ್ತ್ರ ಮತ್ತು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಆಚರಿಸಿದರು. ಬಳಿಕ ಗಣರಾಜ್ಯೋತ್ಸವದ ಸಂದೇಶ ನೀಡಿದ ಸಚಿವ ರೈ, ಸುಮಾರು 125 ಕೋಟಿ ಜನಸಂಖ್ಯೆ ಇರುವ ಬಹುಸಂಸ್ಕೃತಿ, ಬಹುಭಾಷೆ, ಜಾತಿ, ಮತಗಳ ನೆಲೆಯಾಗಿರುವ ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಸಾರಿದ ರಾಷ್ಟ್ರ. ಆದ್ದರಿಂದ ಗಣರಾಜ್ಯೋತ್ಸವವು ಜನತೆಯ, ಜನತಂತ್ರ ವ್ಯವಸ್ಥೆಯ ಹಬ್ಬ ಎಂದರು. ಸಮಾಜದ ಎಲ್ಲಾ ಬಡಜನತೆಯನ್ನು ಆರ್ಥಿಕವಾಗಿ […]

ಎರಡು ತಿಂಗಳಿಗೊಮ್ಮೆ ಪಡಿತರ ವಿತರಣೆಯ ವ್ಯವಸ್ಥೆ ಶೀಘ್ರ ಜಾರಿಗೆ ಬರಲಿದೆ: ಯು.ಟಿ.ಖಾದರ್

Thursday, January 26th, 2017
U-T-Khadar

ಮಂಗಳೂರು: ಎರಡು ತಿಂಗಳಿಗೊಮ್ಮೆ ಪಡಿತರ ವಿತರಣೆಯ ವ್ಯವಸ್ಥೆ ಶೀಘ್ರ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ರಮದ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ಇದರಿಂದ ಗ್ರಾಹಕರಿಗೆ ಅನುಕೂಲವಾಗಲಿದೆ. ಎರಡು ತಿಂಗಳು ಅಥವಾ ಮೂರು ತಿಂಗಳ ಪಡಿತರವನ್ನು ಒಮ್ಮೆಲೆ ವಿತರಿಸಿದರೆ ಗ್ರಾಹಕರು ಪದೇ ಪದೆ ಪಡಿತರ ಅಂಗಡಿಗೆ ಬರುವುದು ತಪ್ಪುತ್ತದೆ. ಈ ಬಗ್ಗೆ ಜನತೆಯ ಅಭಿಪ್ರಾಯವನ್ನೂ ಸಂಗ್ರಹಿಸಲಾಗುತ್ತಿದೆ. […]

ಡಿಜಿಟಲ್ ಪಾವತಿಗಾಗಿರುವ ಡಿಜಿಧನ್ ಮೇಳದ 32ನೇ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಾಲನೆ

Thursday, January 26th, 2017
Dijidhan-Mela

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಡಿಜಿಟಲ್ ಪಾವತಿಗಾಗಿರುವ ಡಿಜಿಧನ್ ಮೇಳದ 32ನೇ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಾಲನೆ ದೊರೆತಿದೆ. ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಮೇಳವನ್ನು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು, ಭಾರತವನ್ನು ವಿಶ್ವದಲ್ಲೇ ಪರಿಣಾಮಕಾರಿ, ಪ್ರಾಮಾಣಿಕ ಹಾಗೂ ಉತ್ತರದಾಯಿ ದೇಶವನ್ನಾಗಿ ಮಾಡುವ ಸಲುವಾಗಿ ಡಿಜಿಟಲ್ ಇಂಡಿಯಾ ಕಾರ್ಯನಿರ್ವಹಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಈ ನಿಟ್ಟಿನಲ್ಲಿ ಶ್ರಮಿಸುತ್ತಿದ್ದು, ಇಡೀ ದೇಶವನ್ನು ಬದಲಾವಣೆಯತ್ತ ಕೊಂಡೊಯ್ಯುತ್ತಿದ್ದಾರೆ ಎಂದರು. ದೊಡ್ಡ ನೋಟ ರದ್ಧತಿಯಿಂದ ಕಪ್ಪುಹಣ ಹಾಗೂ ಭ್ರಷ್ಟಾಚಾರಕ್ಕೆ ಮಾತ್ರ […]

ಚರ್ಚ್‌ಗಳಲ್ಲಿ ರಾಷ್ಟ್ರೀಯ ಚಿಂತನೆಗಳ ಬೋಧನೆಗೂ ಅವಕಾಶ ಕಲ್ಪಿಸಬೇಕು: ಫ್ರಾಂಕ್ಲಿನ್ ಮೊಂತೆರೋ

Thursday, January 26th, 2017
Frankin Monthero

ಮಂಗಳೂರು: ಚರ್ಚ್‌ಗಳಲ್ಲಿ ಧಾರ್ಮಿಕ ಬೋಧನೆಯೊಂದಿಗೆ ರಾಷ್ಟ್ರೀಯ ಚಿಂತನೆಗಳ ಬೋಧನೆಗೂ ಒತ್ತು ನೀಡುವಂತೆ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಧಾರ್ಮಿಕ ನಾಯಕರನ್ನು ಆಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ವೇದಿಕೆಯ ಸ್ಥಾಪಕ ಸಂಚಾಲಕ ಫ್ರಾಂಕ್ಲಿನ್ ಮೊಂತೆರೋ, ಭಾರತೀಯ ಕ್ರೈಸ್ತರು ರಾಷ್ಟ್ರದ ಬಗ್ಗೆ ಸದಾ ಚಿಂತನೆ ಹೊಂದಿದ್ದು, ದೇಶ ಹಿತಕ್ಕೆ ಸದಾ ಸ್ಪಂದಿಸುವ ಮನಸ್ಸುಳ್ಳವರಾಗಿದ್ದಾರೆ. ಆದರೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿ ಜಾಗತಿಕ ಅಥವಾ ಆಂತರಿಕವಾಗಿ ಘಟನೆಗಳು ನಡೆದಾಗ ಕ್ರೈಸ್ತ ಸಮಾಜ ಸಂಘಟಿತವಾಗಿ ಒಕ್ಕೊರಲಿನಿಂದ ಖಂಡಿಸುವ ಮತ್ತು ವಿರೋಧಿಸುವ ಮನೋಭಾವನೆಯನ್ನು ಮತ್ತಷ್ಟು ಬೆಳೆಸಿಕೊಳ್ಳುವ ಮೂಲಕ ರಾಷ್ಟ್ರ […]

ಗ್ರಾಮೀಣ ಜನರ ಬಾಳಿಗೆ ಬೆಳಕಾದ ಗಿರೀಶ್ ಭಾರದ್ವಾಜ್ ಗೆ ಪದ್ಮಶ್ರೀ ಪ್ರಶಸ್ತಿ

Thursday, January 26th, 2017
Bharadwaj

ಮಂಗಳೂರು: ಗ್ರಾಮೀಣ ಜನರ ಬಾಳಿಗೆ ಬೆಳಕಾದವರು ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್. ಮಳೆಗಾಲ ಹತ್ತಿರ ಬರುತ್ತಿದ್ದಂತೆ ನದಿಗಳನ್ನು ಹಾದುಹೋಗಲು ಹರಸಾಹಸ ಪಡುವವರಿಗೆ ಸೇತುವೆಗಳ ಮೂಲಕ ಅವರ ಮಾರ್ಗಗಳನ್ನು ಸುಗಮಗೊಳಿಸಿದವರು. ಇವರ ಈ ವಿಶಿಷ್ಟ ಸೇವೆಗೆ ಪದ್ಮಶ್ರೀ ಅರಸಿಬಂದಿದೆ. ಕಳೆದ ಮೂರು ದಶಕಗಳಿಂದ ದೇಶದ ವಿವಿಧೆಡೆ ತೂಗು ಸೇತುವೆಗಳನ್ನು ನಿರ್ಮಿಸುವ ಮೂಲಕ ವಿಶ್ವವಿಖ್ಯಾತಿ ಪಡೆದ ಗಿರೀಶ್ ಭಾರದ್ವಾಜ್ ಮೂಲತ: ಸುಳ್ಯದ ಅರಂಬೂರಿನವರು. ಬಿ.ಇ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದ ಗಿರೀಶ್ ಅವರು ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ಕಾವೇರಿ […]