ರಾಜ್ಯ ಸರ್ಕಾರ ಆರಂಭಿಸಿರುವ 161ಕ್ಕೆ ಕರೆ ಮಾಡುವ ಮೂಲಕ ಪಡಿತರ ಕೂಪನ್

Friday, September 30th, 2016
khadar

ಮಂಗಳೂರು: ರಾಜ್ಯ ಸರ್ಕಾರ ಆರಂಭಿಸಿರುವ 161ಕ್ಕೆ ಕರೆ ಮಾಡುವ ಮೂಲಕ ಪಡಿತರ ಕೂಪನ್ ಪಡೆಯುವ ಸರಳ ವಿಧಾನವು ದೇಶದಲ್ಲೇ ಪ್ರಥಮ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನು ಪಡಿತರ ಕೂಪನ್‌‌ಗಾಗಿ ಕ್ಯೂ ನಿಲ್ಲಬೇಕಾಗಿಲ್ಲ. ಮೊಬೈಲ್ ಫೋನ್‌‌ನಲ್ಲಿ ಕ್ಷಣಮಾತ್ರದಲ್ಲಿ ಪಡಿತರದಾರರು ತಮಗೆ ಬೇಕಾದ ಆಹಾರ ಸಾಮಗ್ರಿಗಳ ಕೂಪನ್ ಪಡೆಯಬಹುದು. ಪಂಚಾಯತ್‌ನಲ್ಲೂ ಕೂಪನ್‌ ಪಡೆಯುವ ವ್ಯವಸ್ಥೆಯಿದೆ ಎಂದರು. ಈ ಮೊದಲು ಮೂರು ತಿಂಗಳಿಗೊಮ್ಮೆ ಕೂಪನ್ ನೀಡಲು ನಿರ್ಧರಿಸಲಾಗಿತ್ತು. ಆದರೆ […]

ಭಾರತದ ಸೇನಾ ಕಾರ್ಯಾಚರಣೆಗೆ ವ್ಯಾಪಕ ಶ್ಲಾಘನೆ

Friday, September 30th, 2016
City celebrates

ಮಂಗಳೂರು/ಉಡುಪಿ/ಕಾಸರಗೋಡು/ಮಡಿಕೇರಿ: ಭಾರತದ ಸೇನಾ ಕಾರ್ಯಾಚರಣೆಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಮಧ್ಯಾಹ್ನದ ವೇಳೆಗೆ ಸುದ್ದಿ ಬಹಿರಂಗಗೊಳ್ಳುತ್ತಿದ್ದಂತೆ ವಿವಿಧೆಡೆ ಪಟಾಕಿ ಸಿಡಿಸಲಾಯಿತು. ಅದು ರಾತ್ರಿವರೆಗೂ ಮುಂದುವರಿಯಿತು. ಸಾಮಾಜಿಕ ಜಾಲ ತಾಣಗಳಲ್ಲಿ ಈ ಕುರಿತಾದ ಸುದ್ದಿ, ಯೋಧರಿಗೆ ಅಭಿನಂದನೆಗಳ ಮಹಾಪೂರವೇ ಹರಿದಾಡಿತು. ಜೈಹಿಂದ್‌ ಘೋಷಣೆ, ಹೇಳಿಕೆಗಳು ಎಲ್ಲೆಲ್ಲೂ ಕೇಳಿಸಿತು. ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉಗ್ರಗಾಮಿಗಳನ್ನು ಸದೆ ಬಡಿದ ಭಾರತೀಯ ಸೇನೆಯ ಯೋಧರನ್ನು ಬಿಜೆಪಿ ಮಂಗಳೂರು ದಕ್ಷಿಣದ ಅಧ್ಯಕ್ಷ ವೇದವ್ಯಾಸ್‌ ಕಾಮತ್‌ ಅವರು ಶ್ಲಾ ಸಿದ್ದಾರೆ. ಕ್ಯಾ| ಕಾರ್ಣಿಕ್‌ ದೇಶದ ಆಂತರಿಕ ಭದ್ರತೆಗೆ […]

ಶಾಸಕ ಮೊಹಿಯುದ್ದೀನ್ ಬಾವ ಅಕ್ರಮವಾಗಿ ವಾಣಿಜ್ಯ ಸಂಕೀರ್ಣ ನಿರ್ಮಿಸುತ್ತಿರುವ ಬಗ್ಗೆ ಆಕ್ಷೇಪ

Friday, September 30th, 2016
MCC

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಚೊಕ್ಕಬೆಟ್ಟು ಎಂಬಲ್ಲಿ ಶಾಸಕ ಮೊಹಿಯುದ್ದೀನ್ ಬಾವ ಅವರು ಅಕ್ರಮವಾಗಿ ವಾಣಿಜ್ಯ ಸಂಕೀರ್ಣ ನಿರ್ಮಿಸುತ್ತಿರುವ ಬಗ್ಗೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಆರಂಭದಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ಮಧುಕಿರಣ್, ಶಾಸಕ ಬಾವ ಕಾನೂನು ಉಲ್ಲಂಘಿಸಿ ನಾಲ್ಕು ಅಂತಸ್ತಿನ ಬಹುಮಹಡಿ ಕಟ್ಟಡ ನಿರ್ಮಿಸುತ್ತಿದ್ದಾರೆ. ಕಟ್ಟಡಕ್ಕೆ ಯಾವುದೇ ಪರವಾನಗಿ ಪಡೆದುಕೊಂಡಿಲ್ಲ ಎನ್ನುವುದನ್ನು ಪಾಲಿಕೆಯ ಜಂಟಿ ಆಯುಕ್ತರೂ ಒಪ್ಪಿಕೊಂಡಿದ್ದಾರೆ. ಕಟ್ಟಡ ಕಟ್ಟುವವರೆಗೆ ಪಾಲಿಕೆ ಅಧಿಕಾರಿಗಳು […]

ಬಾಲ ಭಿಕ್ಷಾಟನೆ ನಿರ್ಮೂಲನೆಗಾಗಿ ಜನಜಾಗೃತಿ

Friday, September 30th, 2016
Child health

ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ನಗರದ 12 ವೃತ್ತಗಳಲ್ಲಿ ಬಾಲ ಭಿಕ್ಷಾಟನೆ ನಿರ್ಮೂಲನೆಗಾಗಿ ಜನಜಾಗೃತಿ ಸಲುವಾಗಿ ಘೋಷಣಾ ಫಲಕವನ್ನು ಹಿಡಿದುಕೊಂಡು ಜಾಥಾ ನಡೆಸಿದರು. ಮೇಯರ್ ಹರಿನಾಥ್ ಕಾರ್ಯಕ್ರಮದ ಬ್ಯಾನರ್‌ ಅನಾವರಣಗೊಳಿಸುವುದರ ಮೂಲಕ ಜಾಥಾಗೆ ಚಾಲನೆ ನೀಡಿದರು. ಕೆಲವು ಅಜ್ಞಾನಿ ಪೋಷಕರು ಮಕ್ಕಳನ್ನು ಭಿಕ್ಷಾಟನೆಗೆ ಬಳಸಿಕೊಂಡು ಅವರನ್ನು ಶಿಕ್ಷಣದ ಅವಕಾಶದಿಂದ ವಂಚಿತರನ್ನಾಗಿಸುವುದರ ಜೊತೆಗೆ ನಗರ ಜೀವನದ ಕರಾಳತೆಯನ್ನು ಹೆಚ್ಚಿಸುತ್ತಿದ್ದಾರೆ. ಭಿಕ್ಷೆ ಬೇಡಿದ ಮಕ್ಕಳು ಆತ್ಮವಿಶ್ವಾಸ ಹಾಗೂ ಆತ್ಮಗೌರವ ಇಲ್ಲದವರಾಗಿ ಬೆಳೆದು ದೇಶಕ್ಕೆ ಮುಳುವಾಗುತ್ತಾರೆ. ಆದ್ದರಿಂದ ಬಾಲ ಭಿಕ್ಷಾಟನೆಯನ್ನು […]

ಗುರು ಪೀಠಗಳ ನಿರ್ದೇಶನ,ಸಲಹೆಗಳಿಂದ ಉತ್ತಮ ಪ್ರಜಾಪರ ಆಡಳಿತ ನೀಡಲು ಸಾಧ್ಯ: ನಳಿನ್ ಕುಮಾರ್

Friday, September 30th, 2016
keshavananda-bharathi-padan

ಬದಿಯಡ್ಕ: ಪ್ರಾಚೀನ ಕಾಲದಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ರಾಜನಿಗಿಂತ ಮೇಲಿನ ಸ್ಥಾನವನ್ನು ಗುರುಪೀಠಗಳಿಗೆ ನೀಡಿವೆ. ರಾಜಕೀಯ ವ್ಯವಸ್ಥೆ ಗತಿ ತಪ್ಪಿದಾಗೆಲ್ಲ ಗುರು ಪೀಠಗಳ ನಿರ್ದೇಶನ,ಸಲಹೆಗಳಿಂದ ಉತ್ತಮ ಪ್ರಜಾಪರ ಆಡಳಿತ ನೀಡಲು ಸಾಧ್ಯವಾಗಿರುವುದು ಮಠ, ಸ್ವಾಮೀಜಿಗಳಿಗೆ ನಮ್ಮ ಪರಂಪರೆ ನೀಡಿರುವ ಮಹಾನ್ ಗೌರವದ ಪ್ರತೀಕವೆಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಅಭಿಪ್ರಾಯ ವ್ಯಕ್ತಪಡಿಸಿದರು. ಎಡನೀರು ಮಠದ ಶಂಕರಾಚಾರ್ಯ ಶ್ರೀಮದ್ ಕೇಶವಾನಂದ ಭಾರತೀ ಪಾದಂಗಳ 75ನೇ ಜನ್ಮ ದಿನಾಚರಣೆಯ ಅಂಗವಾಗಿ ಬುಧವಾರ ರಾತ್ರಿ ನಡೆದ ಗುರುವಂದನೆ ಕಾರ್ಯಕ್ರಮದಲ್ಲಿ ಮುಖ್ಯ […]

ಕಾವೇರಿ ನದಿ ನೀರು ಪ್ರಕರಣ ನಾಳೆ ವಿಚಾರಣೆ: ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮ

Thursday, September 29th, 2016
kaveri

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧದ ಪ್ರಕರಣ ನಾಳೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಚಿತ್ರಕಲಾ ಪರಿಷತ್‌‌ನಲ್ಲಿ ಸುಧ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ನಮಗೆ ಈ ಬಾರಿ ನ್ಯಾಯ ಸಿಗುವ ಭರವಸೆ ಇದೆ. ಕೇಂದ್ರ ಸರ್ಕಾರ ಕರೆದ ಸಭೆಯಲ್ಲಿ ಸಿಎಂ ಭಾಗವಹಿಸಿದ್ದಾರೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡುತ್ತದೆ. ಕೇಂದ್ರ ಸರ್ಕಾರಕ್ಕೂ ವಸ್ತು ಸ್ಥಿತಿ […]

ಆರ್‌ಎಸ್‌ಎಸ್‌ ಮತ್ತು ಆ ಬಗೆಯ ಇತರ ಸಂಘಟನೆಗಳ ಸಿದ್ಧಾಂತಕ್ಕೆ ನನ್ನ ವಿರೋಧವಿದೆ: ರಾಹುಲ್‌ ಗಾಂಧಿ

Thursday, September 29th, 2016
rahul-gandhi

ಹೊಸದಿಲ್ಲಿ : ದೇಶವನ್ನು ವಿಭಜಿಸುವ ಆರ್‌ಎಸ್‌ಎಸ್‌ ಮತ್ತು ಆ ಬಗೆಯ ಇತರ ಸಂಘಟನೆಗಳ ಸಿದ್ಧಾಂತಕ್ಕೆ ನನ್ನ ವಿರೋಧವಿದೆ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧದ ತನ್ನ ಹೇಳಿಕೆಗಾಗಿ ದಾಖಲಿಸಲ್ಪಟ್ಟಿರುವ ಮಾನನಷ್ಟ ದಾವೆಯ ಸಂಬಂಧ ಇಂದು ಅಸ್ಸಾಂ ಕೋರ್ಟಿನಲ್ಲಿ ಹಾಜರಾದ ಬಳಿಕ ರಾಹುಲ್‌ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. “ನಾನು ಬಡವರು, ರೈತರು ಮತ್ತು ನಿರುದ್ಯೋಗಿಗಳ ಪರವಾಗಿ ಹೋರಾಡುತ್ತಿರುವುದರಿಂದ ನನ್ನ ವಿರುದ್ಧ ಈ ಬಗೆಯ ಕೇಸುಗಳನ್ನು ಹೂಡಲಾಗುತ್ತಿದೆ; ಆದರೆ ನಾನು ಈ ರೀತಿಯ ಕೇಸುಗಳಿಂದ ಹೆದರುವವನಲ್ಲ; ನನ್ನ […]

ಮಂಗಳೂರು ಮಹಾನಗರ ಪಾಲಿಕೆಗೆ ಬಯಲು ಶೌಚಾಲಯ ಮುಕ್ತ ನಗರ ಪ್ರಮಾಣ ಪತ್ರ ಹಸ್ತಾಂತರ

Thursday, September 29th, 2016
clean-city

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಬಯಲು ಶೌಚಾಲಯ ಮುಕ್ತ ನಗರವೆಂಬ ಘೋಷಣೆಯ ಪ್ರಮಾಣ ಪತ್ರ ಹಸ್ತಾಂತರಗೊಂಡಿದೆ. ಕೇಂದ್ರ ಸರಕಾರದ ನಗರಾಭಿವೃದ್ಧಿ ಇಲಾಖೆ ಮತ್ತು ಸ್ವಚ್ಛ ಭಾರತ ಮಿಷನ್ ವತಿಯಿಂದ ಈ ಪ್ರಮಾಣ ಪತ್ರ ನೀಡಲಾಗುತ್ತಿದೆ. ಮೇಯರ್ ಹರಿನಾಥ್ ಅಧ್ಯಕ್ಷತೆಯಲ್ಲಿ ಮನಪಾ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕ್ವಾಲಿಟಿ ಕಂಟ್ರೋಲ್ ಆಫ್ ಇಂಡಿಯಾದ ಸ್ವಚ್ಛ ಭಾರತ ಮಿಶನ್ ಯೋಜನೆಯ ಮುಖ್ಯಸ್ಥ ಅಭಿನವ್ ಯಾದವ್ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ವಿಶೇಷವೆಂದರೆ, ಈ ಪ್ರಮಾಣ ಪತ್ರವನ್ನು ನೀಡಲಾದ ದಿನಾಂಕದಿಂದ ಆರು ತಿಂಗಳ […]

ಆಳ್ವಾಸ್‍ನುಡಿಸಿರಿ -2016′ ರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಬಿ.ಎನ್. ಸುಮಿತ್ರಾಬಾಯಿ ಆಯ್ಕೆ

Thursday, September 29th, 2016
alwas-nudisiri

ಮಂಗಳೂರು :ಈ ಬಾರಿ ‘ಕರ್ನಾಟಕ ನಾಳೆಗಳ ನಿರ್ಮಾಣ’ ಎಂಬ ಪರಿಕಲ್ಪನೆಯಲ್ಲಿ ಮೂರು ದಿನಗಳ ಕಾಲ ಜರಗುವ `ಆಳ್ವಾಸ್‍ನುಡಿಸಿರಿ -2016′ ರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಸಂಸ್ಕೃತ ಭಾಷಾ ಪ್ರಾಧ್ಯಾಪಕಿಯಾಗಿರುವ ವಿಮರ್ಶಕಿ ಡಾ. ಬಿ.ಎನ್. ಸುಮಿತ್ರಾಬಾಯಿ ಆಯ್ಕೆಯಾಗಿದ್ದು, ಸಾಹಿತಿ ಡಾ. ಜಯಂತ ಗೌರೀಶ ಕಾಯ್ಕಿಣಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಈ ಕುರಿತು ತಿಳಿಸಿದ್ದಾರೆ. ನಿರಂತರ ಆಳ್ವಾಸ್ ನುಡಿಸಿರಿ ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಆಯೋಜಿಸಿಕೊಂಡು ಬರುತ್ತಿದ್ದು 13ನೇ ವರ್ಷಕ್ಕೆ […]

ಬ್ಯಾಂಕ್ ಮೆನೇಜರ್‌ರನ್ನು ದರೋಡೆಗೈಯಲು ಹೊಂಚುಹಾಕಿದ್ದ ಆರು ಮಂದಿಯ ಬಂಧನ

Thursday, September 29th, 2016
honey-trap

ಮಂಗಳೂರು: ಯುವತಿಯನ್ನು ಮುಂದಿಟ್ಟುಕೊಂಡು ಬ್ಯಾಂಕ್ ಮೆನೇಜರ್‌ ಒಬ್ಬರಿಗೆ ಪಂಗನಾಮ ಹಾಕಲು ಹೋಗಿದ್ದ ಓರ್ವ ಯುವತಿ ಸೇರಿದಂತೆ ಆರು ಮಂದಿಯನ್ನು ಉರ್ವ ಹಾಗೂ ಬರ್ಕೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಯುವತಿಯರನ್ನು ಬಳಸಿಕೊಂಡು ನಗರದ ಬಳ್ಳಾಲ್‌ಬಾಗ್ ನಿವಾಸಿ ಬ್ಯಾಂಕ್ ಮೆನೇಜರ್‌ರನ್ನು ದರೋಡೆಗೈಯಲು ಹೊಂಚುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬಂಧಿಸಿರುವ ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಸೆರೆ ವಿಧಿಸಿ ಆದೇಶ ನೀಡಿದೆ. ಬಂಧಿತರನ್ನು ತೃಪ್ತಿ ಕುಲಾಲ್ ಕೋಟೆಕಾರ್, ಅವಿನಾಶ್ ಕೊಣಾಜೆ, […]