ಲೋಕಸಮರ: ಚಿಕ್ಕಬಳ್ಳಾಪುರದಿಂದ ಚಿರಂಜೀವಿ ಸ್ಪರ್ಧೆ?

Monday, March 10th, 2014
Chiranjeev

ಬೆಂಗಳೂರು: ತೆಲುಗು ಸೂಪರ್ ಸ್ಟಾರ್ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಅವರು ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಈಗ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಅವರು ಪ್ರತಿನಿಧಿಸುತ್ತಿರುವ ಆಂಧ್ರಪ್ರದೇಶದ ಗಡಿ ಜಿಲ್ಲೆ ಚಿಕ್ಕಬಳ್ಳಾಪುರದಿಂದ ಚಿರಂಜೀವಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನು ಹಾಕಿರಲಿಲ್ಲ. ಹೀಗಾಗಿ ಮೊಯಿಲಿ ಅವರು ಸುಲಭವಾಗಿ ಜಯ ಗಳಿಸಿ, ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಆದರೆ ಈ ಬಾರಿ […]

ನಟಿ ಜೂಹಿ ಚಾವ್ಲಾ ಸೋದರ ಕೊನೆಗೂ ಬದುಕಿಗೆ ವಿದಾಯ

Monday, March 10th, 2014
Bobby-Chawla

ಮುಂಬೈ: ಬಾಲಿವುಡ್ ನಟಿ, ಪ್ರೇಮಲೋಕ ಖ್ಯಾತಿಯ ಜೂಹಿ ಚಾವ್ಲಾ ಅವರ ಸೋದರ ಕೊನೆಗೂ ಬದುಕಿಗೆ ವಿದಾಯ ಹೇಳಿದ್ದಾರೆ. ನಟಿ ಜೂಹಿ ಅವರ ಸೋದರ ಬಾಬ್ಬಿ ಚಾವ್ಲಾ ಅವರು ಸರಿಯಾಗಿ ನಾಲ್ಕು ವರ್ಷಗಳ ಹಿಂದೆ ತೀವ್ರ ಹೃದಯಾಘಾತಕ್ಕೆ ತುತ್ತಾದ ನಂತರ ಕೋಮಾದಲ್ಲಿಯೇ ಇದ್ದರು. ನಿನ್ನೆ ಭಾನುವಾರ ಮುಂಬೈನ Jaslok Hospital ನಲ್ಲಿ ಅವರು ಕೊನೆಯುಸಿರೆಳೆದರು. ಭಾನುವಾರವೇ ಬಾಬ್ಬಿ ಅಂತ್ಯಕ್ರಿಯೆ ನೇರವೇರಿದೆ. ಸಹೋದರನಾಗಿ ನಟಿ ಜೂಹಿ ಚಾವ್ಲಾಗೆ ಅತ್ಯಂತ ಹತ್ತಿರವಾಗಿದ್ದ ಬಾಬ್ಬಿ ನಿಧನದಿಂದ ಜೂಹಿ ಅಧೀರರಾಗಿದ್ದಾರೆ. ಸೋದರ ಕೋಮಾ ಸ್ಥಿತಿ […]

‘ಅಮೃತಾನಂದಮಯಿ ಅವಮಾನಿಸುವ ಪುಸ್ತಕ ನಿಷೇಧಿಸಿ’

Monday, March 10th, 2014
Amrtanandamayi

ಬೆಂಗಳೂರು: ಲಕ್ಷಾಂತರ ಜನರ ‘ಅಮ್ಮ’ ಮಾತಾ ಅಮೃತಾನಂದಮಯಿಯವರು ಜಗತ್ತಿನಾದ್ಯಂತ ವಿವಿಧ ಭಾಷೆ, ಜಾತಿ, ಮತಗಳ ಅನುಯಾಯಿಗಳನ್ನು ಹೊಂದಿರುವ ಜಗದ್ವಂದ್ಯರು. ತಮ್ಮ ಅಮಿತ ವಾತ್ಸಲ್ಯ ಮತ್ತು ದೈವಿಕ ಸ್ಪರ್ಶದಿಂದ ಲಕ್ಷಾಂತರ ದುಃಖತಪ್ತ ಜೀವಗಳಿಗೆ ಸಾಂತ್ವನ ನೀಡುತ್ತಿರುವವರು. ಪೂಜ್ಯ ಮಾತಾ ಅಮೃತಾನಂದಮಯಿ ಅವರನ್ನು ಅವಮಾನಿಸುವ ಷಡ್ಯಂತ್ರವನ್ನು ಸಹಿಸುವಂತಿಲ್ಲ. ಅವರನ್ನು ಅವಮಾನಿಸುವ ಪುಸ್ತಕವನ್ನು ನಿಷೇಧಿಸಬೇಕು ಎಂದು ಆರೆಸ್ಸೆಸ್ ಸರಕಾರ್ಯವಾಹ ಸುರೇಶ್ (ಭಯ್ಯಾಜಿ) ಜೋಶಿ ಆಗ್ರಹಿಸಿದ್ದಾರೆ. ಮನುಕುಲದ ದುಃಖ ದುಮ್ಮಾನಗಳನ್ನು ತಗ್ಗಿಸಲು ಶ್ರಮಿಸುತ್ತಿರುವ ಈ ‘ಅಪ್ಪುಗೆಯ ಅಮ್ಮ’ನನ್ನು ವಿಶ್ವಸಂಸ್ಥೆ ಮತ್ತು ಅನೇಕ ದೇಶಗಳು […]

ನಂದನ್ ನಿಲೇಕಣಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

Monday, March 10th, 2014
Nandan-Nilekani

ಬೆಂಗಳೂರು: ‘ಆಧಾರ್‌’ ವಿಶೇಷ ಗುರುತಿನ ಚೀಟಿ ಪ್ರಾಧಿಕಾರದ ಅಧ್ಯಕ್ಷ ನಂದನ್ ನಿಲೇಕಣಿ ಅವರು ಭಾನುವಾರ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಇಂದು ಬೆಳಗ್ಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಿಲೇಕಣಿ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಸಚಿವರು ಹಾಗೂ ಶಾಸಕರು ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ನಿಲೇಕಣಿ ಅವರಿಗೆ ಕಾಂಗ್ರೆಸ್ ಟಿಕೆಟ್ ಖಚಿತವಾಗಿದ್ದು, […]

ರಾಹುಲ್, ಕೇಜ್ರಿ ವಿರುದ್ಧ ದೂರು

Monday, March 10th, 2014
Rahul-Gandhi

ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್ ವಿರುದ್ಧ ಭಾನುವಾರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತರಿಂದಲೇ ಮಹಾತ್ಮಾ ಗಾಂಧಿ ಹತ್ಯೆಯಾಯಿತು ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪದಿಂದ ಕ್ರುದ್ಧಗೊಂಡಿರುವ ಬಿಜೆಪಿ ಅವರ ವಿರುದ್ಧ ಆಯೋಗಕ್ಕೆ ದೂರು ನೀಡಿದೆ. ಮಾತ್ರವಲ್ಲ ಕಾಂಗ್ರೆಸ್‌ನ ಮಾನ್ಯತೆ ರದ್ದುಮಾಡುವಂತೆ ಒತ್ತಾಯಿಸಿದೆ. ಕಾಂಗ್ರೆಸ್ ನಾಯಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಠಿಣ […]

ಪೂಜಾರಿಗೆ ಒಲಿದ ಮತದೇವರು!

Monday, March 10th, 2014
Janardhan-Poojary

ಮಂಗಳೂರು: ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಗೆಲವು ಸಾಧಿಸಿದ್ದು, ಮಂಗಳೂರು ಲೋಕಸಭೆ ಕ್ಷೇತ್ರದಿಂದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಭಾನುವಾರ ನಡೆದ ಆಂತರಿಕ ಚುನಾವಣೆಯಲ್ಲಿ 598 ಮತಗಳ ಪೈಕಿ 547 ಮತಗಳು ಚಲಾವಣೆಯಾಗಿದ್ದು, 7 ಮತಗಳು ಅಸಿಂಧುಗೊಂಡಿವೆ. ಈ ಪೈಕಿ ಜನಾರ್ದನ ಪೂಜಾರಿ 478 ಮತ ಪಡೆದರೆ, ಕಣಚೂರು ಮೋನು 62 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 10 ನಿಮಿಷ ತಡವಾಗಿ ಬಂದ ಶಾಸಕ ಮೊಯಿನುದ್ದೀನ್ ಬಾವಾಗೆ ಮತ ಹಾಕುವ ಅವಕಾಶ ನೀಡಲಿಲ್ಲ. […]

ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಮೋದಿ ಪಾಲಿಗೆ ವಾರಣಸಿ ಪಕ್ಕಾ ಅಟಲ್‌ರ ಲಖನೌ ಲಕ್ ಯಾರಿಗೆ?

Monday, March 10th, 2014
Murli-Manohar-Joshi

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುವ ಬಗೆಗಿನ ಗೊಂದಲಗಳಿಗೆ ಭಾನುವಾರ ಬಹುತೇಕ ತೆರೆ ಬಿದ್ದಿದೆ. ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಡಾ. ಮುರಳಿ ಮನೋಹರ ಜೋಶಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ನಾನು ಪಾಲಿಸುತ್ತೇನೆ’ ಎಂದು ಅವರು ನವದೆಹಲಿಯಲ್ಲಿ ತಿಳಿಸಿದ್ದಾರೆ. 13ರ ಸಭೆಯಲ್ಲಿ ನಿರ್ಧಾರ: ಮಾ.13ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.  […]

26 ಕೈಯಾಳುಗಳು ಅಂತಿಮ, ಲಕ್ಷ್ಮಿ, ನಿವೇದಿತ್, ನಿಲೇಕಣಿ, ರಮ್ಯಾ, ಸುರೇಶ್, ಕುಮಾರ್ ಕ್ಲಿಯರ್

Saturday, March 8th, 2014
Janardhana-poojary

ನವದೆಹಲಿ: ಕರ್ನಾಟಕದಿಂದ ಅತಿ ಹೆಚ್ಚು ಸ್ಥಾನ ನಿರೀಕ್ಷಿಸಿರುವ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ 26 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ. ಆಂತರಿಕ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಮಂಗಳೂರು ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳ ಪೈಕಿ ಮಂಗಳೂರಿಗೆ ಜನಾರ್ದನ ಪೂಜಾರಿ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ಹಿಂದೆಯೇ ನಿರ್ಧರಿಸಿದ್ದಂತೆ ಎಲ್ಲ 9 ಹಾಲಿ ಸಂಸದರು ಟಿಕೆಟ್ ಗಿಟ್ಟಿಸಿದ್ದಾರೆ.  ಶುಕ್ರವಾರ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸುದೀರ್ಘ ಚರ್ಚೆ ನಂತರ […]

ಲೋಕಸಮರ: ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ, 4 ಹಾಲಿ ಸಂಸದರಿಗೆ ಕೊಕ್

Saturday, March 8th, 2014
BJP

ನವದೆಹಲಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿ ನಾಲ್ವರು ಹಾಲಿ ಸಂಸದರಿಗೆ ಕೊಕ್ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಯಿತು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಮೊದಲ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. […]

ಕೇಜ್ರಿವಾಲ್ ಜತೆ ಡಿನ್ನರ್ ಗೆ 20 ಸಾವಿರ ರುಪಾಯಿ ಶುಲ್ಕ!

Saturday, March 8th, 2014
Arvind-Kejriwal

ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಊಟ ಮಾಡುವ ಭಾಗ್ಯ ಬೆಂಗಳೂರಿಗರಿಗೆ ಸಿಕ್ಕಿದೆ. ಆದರೆ ಅದಕ್ಕಾಗಿ ನೀವು 20 ಸಾವಿರ ರುಪಾಯಿ ಖರ್ಚು ಮಾಡಬೇಕು ಅಷ್ಟೆ. ಅರವಿಂದ್ ಕೇಜ್ರಿವಾಲ್ ಅವರು ಇದೇ ಮಾರ್ಚ್ 15ರಂದು ನಗರಕ್ಕೆ ಆಗಮಿಸುತ್ತಿದ್ದು, ಈ ವೇಳೆ ಆಪ್ ನಾಯಕರು ಪಕ್ಷದ ನಿಧಿ ಸಂಗ್ರಹಣೆಗೆ ಭೋಜನಕೂಟ ಏರ್ಪಡಿಸಿದ್ದಾರೆ. ನೀವು 20 ಸಾವಿರ ರುಪಾಯಿ ಕೊಟ್ಟರೆ, ಕೇಜ್ರಿವಾಲ್ ಜತೆ ಊಟದೊಂದಿಗೆ ಸಂದರ್ಶನ ಮಾಡಬಹುದು. ಇತ್ತಿಚೀಗಷ್ಟೆ ಎಎಪಿ […]