ರೋಸಾ ಮಿಸ್ತಿಕಾ ಪ್ರಾಂಶುಪಾಲೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

Thursday, December 13th, 2012
Rosa Mystica students Protest

ಮಂಗಳೂರು :ಗುರುಪುರ – ಕೈಕಂಬದ ರೋಸಾ ಮಿಸ್ತಿಕಾ ಶಿಕ್ಷಣ ಸಂಸ್ಥೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿದ ವಿಧ್ಯಾರ್ಥಿಗಳನ್ನು ತರಗತಿಯಿಂದ ಹೊರ ಹಾಕಿದ ಘಟನೆ ನಡೆದಿದೆ. ರೋಸಾ ಮಿಸ್ತಿಕಾ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ ಓದುತ್ತಿರುವ ನಾಲ್ವರು ವಿದ್ಯಾರ್ಥಿಗಳು ಶಬರಿಮಲೆಗೆ ಹೊಗುವ ನಿಮಿತ್ತ ಅಯ್ಯಪ್ಪ ವ್ರತಾಚರಣೆಯಲ್ಲಿದ್ದು ಮಾಲೆ ಹಾಗೂ ಕಪ್ಪು ಶಾಲು ಧರಿಸಿಕೊಂಡು ತರಗತಿಗೆ ಹಾಜರಾಗುತ್ತಿದ್ದರು ಆದರೆ ಇದಕ್ಕೆ ಪ್ರಾಂಶುಪಾಲೆ ಜೆಸ್ಸಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರಲ್ಲದೆ, ಧರ್ಮವನ್ನು ಅವ್ಯಾಚವಾಗಿ ನಿಂದಿಸುತ್ತಿದ್ದರೆನ್ನಲಾಗಿದೆ. ಬುಧವಾರ ಮುಂಜಾನೆಯೂ ಇದೇ ರೀತಿ ಆಕ್ಷೇಪ ವ್ಯಕ್ತಪಡಿಸಿದ ಇವರು ವಿದ್ಯಾರ್ಥಿಗಳನ್ನು ತರಗತಿಯಿಂದ […]

ಅಡ್ಯಾರು ಬಳಿ ಅಪಘಾತ ಚಾಲಕ ಪವಾಡ ಸದೃಶ ಪಾರು

Thursday, December 13th, 2012
Accident in Adyar

ಮಂಗಳೂರು : ಗುರುವಾರ ಬೆಳಿಗ್ಗೆ ಮಧ್ಯಪ್ರದೇಶದಿಂದ ಮಂಗಳೂರಿಗೆ ದೊಡ್ಡದಾದ ಕಬ್ಬಿಣದ ಕೊಳವೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಗರದ ಹೊರವಲಯದ ಅಡ್ಯಾರು ಸಹ್ಯಾದ್ರಿ ಕಾಲೇಜಿನ ಬಳಿ ಅಪಘಾತಕ್ಕೀಡಾಗಿ ಚಾಲಕನು ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ. ಲಾರಿಯ ಮುಂದೆ ಚಲಿಸುತ್ತಿದ್ದ ಕಾರೊಂದು ಅನಿರೀಕ್ಷಿತವಾಗಿ ತಿರುಗಿದ ಸಂದರ್ಭದಲ್ಲಿ ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಚಾಲಕನು ಬ್ರೇಕ್ ಹಾಕಿದ ಈ ಸಂದರ್ಭದಲ್ಲಿ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಲಾರಿಯು ಮುಂದಿನ ಲಾರಿಗೆ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿದ್ದ ಕೊಳವೆಗಳು ಮುಂದಕ್ಕೆ ಜಾರಿ ಚಾಲಕನು ಕುಳಿತುಕೊಳ್ಳುವ […]

ಆಧಾರ ದ್ವಿತೀಯ ಹಂತದ ನೋಂದಣಿ ಕಾರ್ಯದ ಯೋಜನಾ ಕಾರ್ಯಾಗಾರ

Thursday, December 13th, 2012
Workshop

ಮಂಗಳೂರು :ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಧಾರ ದ್ವಿತೀಯ ಹಂತದ ನೋಂದಣಿ ಕಾರ್ಯದ ಯೋಜನಾ ಕಾರ್ಯಾಗಾರ ವನ್ನು ಆಯೋಜಿಸಲಾಗಿತ್ತು. ಇದರ ಅದ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಕೆ.ಎ ದಯಾನಂದ ರವರು ವಹಿಸಿದ್ದರು. ಆಧಾರ್ ನಡಿ ನೋಂದಣಿಕರಿಸುವುದನ್ನು ಸಮಗ್ರವಾಗಿಸಲು ನಿವೃತ್ತ ಅಧಿಕಾರಿಗಳನ್ನು ಪರಿಶೀಲಕರನ್ನಾಗಿ ನೇಮಿಸಲಾಗಿದ್ದು, ಅವರಿಗಾಗಿ ತರಬೇತಿಯನ್ನು ಆಯೋಜಿಸಲಾಗಿದೆ. ಈ ಕಾರ್ಯವನ್ನು ಬಹಳ ಗಮನವಹಿಸಿ ನಿರ್ವಹಿಸಬೇಕು. ಪರಿಶೀಲಕರ ಜವಾಬ್ದಾರಿ ಮತ್ತು ಕರ್ತವ್ಯ ಬಹುಮುಖ್ಯವಾಗಿದ್ದು, ಪರಿಶೀಲನೆಯ ನಂತರ ಪರಿಶೀಲಿಸಿದ ಮಾಹಿತಿಯ ದೋಷಗಳಿಗೆ ಪರಿಶೀಲಕರೇ ಜವಾಬ್ದಾರರು. ಹಾಗಾಗಿ ಕಾರ್ಯಾಗಾರವನ್ನು ಗಂಭೀರವಾಗಿ ತೆಗೆದುಕೊಂಡು ಎಲ್ಲ ಪ್ರಶ್ನೆಗಳಿಗೆ […]

ಭೂಗತ ಪಾತಕಿ ಛೋಟಾ ಶಕೀಲ್‌ನ ಸಹಚರರ ಸೆರೆ

Thursday, December 13th, 2012
Chota Shakeel's Associates

ಮಂಗಳೂರು :ನಗರದ ಕೊಡಿಯಾಲ್ ಬೈಲ್ ನ ನಿವಾಸಿಯೊಬ್ಬರನ್ನು ಹತ್ಯೆಗೈದು ದರೋಡೆ ನಡೆಸಲು ಸಂಚು ರೂಪಿಸಿದ್ದ ಭೂಗತ ಪಾತಕಿ ಛೋಟಾ ಶಕೀಲ್‌ನ ಸಹಚರರನ್ನು ನಗರದ ಸಿಸಿಬಿ ಹಾಗೂ ಡಿಸಿಐಬಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಬೆಂಗಳೂರಿನ ಹನುಮಗಿರಿ ಗಿರಿನಗರದ ನಿವಾಸಿ

ಎಂಡೋಸಲ್ಫಾನ್ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಒಂದು ದಿನದ ಉಪವಾಸ ಸತ್ಯಾಗ್ರಹ

Wednesday, December 12th, 2012
Endo Protest

ಮಂಗಳೂರು :ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಎಐಸಿಸಿ ಸದಸ್ಯ ಪಿವಿ ಮೋಹನ್ ನೇತೃತ್ವದಲ್ಲಿ ಎಂಡೋ ಸಲ್ಫಾನ್ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು. ಉಪವಾಸ ಸತ್ಯಾಗ್ರಹವನ್ನು ಕಾಂಗ್ರೆಸ್ ನಾಯಕ ಜೆ.ಆರ್. ಲೋಬೊ ಉದ್ಘಾಟಿಸಿ ಎಂಡೋಸಲ್ಫಾನ್ ಸಿಂಪಡನೆಯಿಂದ ಹಲವಾರು ಮಂದಿ ತೊಂದರೆಯನ್ನು ಅನುಭವಿಸುತ್ತಿದ್ದು ಇವರು ಸೂಕ್ತ ರೀತಿಯ ಪರಿಹಾರ ಸಿಗದೆ ನರಳುತ್ತಿದ್ದರೂ ಸರಕಾರ ಮಾತ್ರ ಈ ವಿಷಯದಲ್ಲಿ ತನ್ನ ಜಾಣ ಕುರುಡನ್ನು ಪ್ರದರ್ಶಿಸುತ್ತಿದೆ. ಎಂಡೋ ಸಲ್ಫಾನ್ ಅಥವಾ ಇನ್ನಾವುದೇ ರಾಸಾಯನಿಕಗಳನ್ನು […]

ಜೆಸಿಂತಾ ಆತ್ಮಕ್ಕೆ ಶಾಂತಿ ಕೋರಿ ನಗರದಲ್ಲಿ ಇಂದು ಮೊಂಬತ್ತಿ ಮೆರವಣಿಗೆ

Wednesday, December 12th, 2012
Jacintha Saldanha

ಮಂಗಳೂರು :ಲಂಡನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಉಡುಪಿ ಮೂಲದ ನರ್ಸ್ ಜೆಸಿಂತಾ ಸಲ್ದಾನ ಅವರ ಆತ್ಮಕ್ಕೆ ಶಾಂತಿಕೋರಿ ಇಂದು ಮಂಗಳೂರಿನಲ್ಲಿ ಮೊಂಬತ್ತಿ ಮೆರವಣಿಗೆ ಹಾಗೂ ಸಂತಾಪ ಸಭೆ ಆಯೋಜಿಸಲಾಗಿದೆ. ನಗರದ ವೆಲೆನ್ಸಿಯಾ ವೃತ್ತದಿಂದ ಬೆಂದೂರುವೆಲ್‌ವರೆಗೆ ಸಂಜೆ 6.30ಕ್ಕೆ ಮೊಂಬತ್ತಿ ಮೆರವಣಿಗೆ ನಡೆಯಲಿದ್ದು ಬಳಿಕ ಅಲ್ಲಿ ಸಂತಾಪ ಸಭೆ ಜರಗಲಿದೆ ಎಂದು ಐವನ್‌ ಡಿಸೋಜ ಅವರು ತಿಳಿಸಿದ್ದಾರೆ. ಲಂಡನ್‌ನಲ್ಲಿ ನರ್ಸ್‌ ಜೆಸಿಂತಾ ಸಲ್ದಾನ ಅವರ ನಿಗೂಢ ಸಾವಿನ ಬಗ್ಗೆ ಸಮಗ್ರ ತನಿಖೆಯಾಗುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಕೇಂದ್ರ ಇಂಧನ ಮತ್ತು ನೈಸರ್ಗಿಕ […]

ನಕಲಿ ಸಾರಿಗೆ ಸಂಚಾರ ನಿರೀಕ್ಷಕನ ಬಂಧನ

Wednesday, December 12th, 2012
Fake traffic inspector

ಮಂಗಳೂರು :ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾ ಪ್ರಯುಕ್ತ ಸಾರಿಗೆ ವ್ಯವಸ್ಥೆ ಸುಗಮಗೊಳಿಸಲು ಕಳುಹಿಸಿದ್ದಾರೆಂದು ನಕಲಿ ಗುರುತುಪತ್ರ ತೋರಿಸಿ ಕಳೆದೆರಡು ದಿನಗಳಿಂದ ತಪಾಸನಾಧಿಕಾರಿಯ ಸಮವಸ್ತ್ರ ಧರಿಸಿ, ಸುಬ್ರಹ್ಮಣ್ಯಕ್ಕೆ ಬರುವ ಎಲ್ಲಾ ಸರಕಾರಿ ಬಸ್ ಗಳ ತಪಾಸಣೆ ನಡೆಸಿ ಹಣ ವಸೂಲಿ ಮಾಡುತ್ತಿದ್ದ ನಕಲಿ ತಪಾಸಣಾಧಿಕಾರಿಯನ್ನು ಸೆರೆ ಹಿಡಿಯಲಾಗಿದೆ. ತುಮಕೂರು ಬಿ.ಎಂ ಪಾಳ್ಯದ ಉರಿಡೆಗೆರೆ ರವಿಕುಮಾರ್(25) ಎಂಬಾತ ಆರೋಪಿಯಾಗಿದ್ದಾನೆ. ಇಲಾಖೆಯ ಜಾಗೃತ ದಳದವರು ಮಂಗಳವಾರ ಈತನನ್ನು ಹಿಡಿದು ಸುಬ್ರಹ್ಮಣ್ಯ ಪೋಲೀಸರಿಗೆ ಒಪ್ಪಿಸಿದ್ದಾರೆ. ಐಟಿಐ ತರಬೇತಿ ಹೊಂದಿರುವ ಈತ ಬೆಂಗಳೂರು ಕೇಂದ್ರ ಕಚೇರಿಯಿಂದ […]

ಧರ್ಮಸ್ಥಳ : 80ನೇ ಸರ್ವಧರ್ಮ ಸಮ್ಮೇಳನ

Wednesday, December 12th, 2012
Sarva Dharma Sammelan

ಧರ್ಮಸ್ಥಳ :ಧರ್ಮಸ್ಥಳದ ಲಕ್ಷದೀಪೋತ್ಸವ ಅಂಗವಾಗಿ ಮಂಗಳವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ 80ನೆ ಸರ್ವಧರ್ಮ ಸಮ್ಮೇಳನವು ನಡೆಯಿತು ನಿವೃತ್ತ ಲೋಕಾಯುಕ್ತ ನ್ಯಾ| ಎನ್‌. ಸಂತೋಷ್‌ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಯಾವುದೇ ಧರ್ಮವು ಮತ್ತೊಂದು ಧರ್ಮವನ್ನು ವಿರೋಧಿಸು, ದ್ವೇಷಿಸು ಎಂದು ಹೇಳಿಲ್ಲ ಆದರೆ ಧರ್ಮದ ಮೂಲ ತಿರುಳನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ದೇಶ, ದೇಶಗಳು ಹಾಗೂ ಧರ್ಮ, ಧರ್ಮಗಳ ನಡುವೆ ತಿಕ್ಕಾಟ ನಡೆಯುತ್ತಿವೆ. ಕೆಲವರು ಧರ್ಮಗಳ ನಡುವೆ ಭಿನ್ನಮತ ಸೃಷ್ಟಿಸಿ ಲಾಭ ಪಡೆಯುಲು ಯತ್ನಿಸುತ್ತಾರೆ ಎಂದ ಅವರು, ಧರ್ಮದ ಸಾರವನ್ನು […]

ನಗರದಲ್ಲಿ ಆರ್‌ಸಿ-ಕೆಎಸ್‌ಸಿಎ ಕ್ರಿಕೆಟ್‌ ಅಕಾಡೆಮಿಗೆ ಚಾಲನೆ

Tuesday, December 11th, 2012
Cricket Academy Mangalore

ಮಂಗಳೂರು :ಮಂಗಳೂರಿನ ಕ್ರಿಕೆಟ್ ಅಭಿಮಾನಿಗಳು ಬಹಳ ದಿನಗಳಿಂದ ಕಾದು ಕುಳಿತ್ತಿದ್ದ ಆರ್‌ಸಿ-ಕೆಎಸ್‌ಸಿಎ ಕ್ರಿಕೆಟ್‌ ಆಕಾಡೆಮಿ ಸೋಮವಾರ ನಗರದ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಎಂಡ್ ಮ್ಯಾನೇಜ್‌ಮೆಂಟ್‌ನ ಆವರಣದಲ್ಲಿ ಉದ್ಘಾಟನೆಗೊಂಡಿತು. ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಪತಿ ಪ್ರೊ|. ಡಾ| ಎಂ. ಶಾಂತಾರಾಮ ಶೆಟ್ಟಿ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ದ.ಕನ್ನಡ ಜಿಲ್ಲೆ ಬ್ಯಾಂಕಿಂಗ್‌, ಶಿಕ್ಷಣ, ಉದ್ದಿಮೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತನ್ನ ಹಿರಿಮೆಯನ್ನು ಸಾಧಿಸಿದೆ ಆದರೆ ಕ್ರಿಕೆಟ್‌ ಕ್ಷೇತ್ರದಲ್ಲಿ ಹಿಂದುಳಿದಿದೆ. ಇದಕ್ಕೆ ಮುಖ್ಯ ಕಾರಣ ಮೂಲಭೂತ ಸೌಲಭ್ಯಗಳ ಕೊರತೆ. ಇದೀಗ […]

ಪತ್ರಕರ್ತ ನವೀನ್ ಸೂರಿಂಜೆ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Tuesday, December 11th, 2012
DFYI SFI handcuff protest

ಮಂಗಳೂರು :ಮಾನವಹಕ್ಕುಗಳ ದಿನವಾದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಡಿವೈಎಫ್‌ಐ, ಎಸ್‌ಎಫ್‌ಐ ಮತ್ತು ಜನವಾದಿ ಮಹಿಳಾ ಸಂಘಟನೆಗಳಿಂದ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ ದಾಳಿ ಪ್ರಕರಣದ ಬಗ್ಗೆ ವರದಿ ಮಾಡಿದ ಪತ್ರಕರ್ತ ನವೀನ್ ಸೂರಿಂಜೆಯ ಬಂಧನ ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು ಇದರ ಬಗ್ಗೆ ಸರಿಯಾದ ನಿರ್ಧಾರ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೈ ಕೋಳ ತೊಟ್ಟು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ ಡಿವೈಎಫ್‌ಐಯ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ […]