ಬಸ್‌ ನಿಲ್ದಾಣದಲ್ಲಿ ಬಸ್ ಅಡಿ ಸಿಲುಕಿ ಕಂಡಕ್ಟರ್‌ ಸಾವು

Saturday, December 1st, 2012
Bus conductor

ಮಂಗಳೂರು :ಶುಕ್ರವಾರ ಬಿಜೈ ನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬಸ್ ಕಂಡಕ್ಟರ್ ಬಸ್ ನಡಿ ಸಿಲುಕಿ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆಯ ವಿರೂಪಾಕ್ಷ ಸಜ್ಜನ್ ಬೆಟಗೇರಿ ಕಳೆದ 12 ವರ್ಷಗಳಿಂದ ಸಾರಿಗೆ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಅವರು ಪ್ರಸ್ತುತ ಕೊಪ್ಪಳ ಜಿಲ್ಲೆಗೆ ಸೇರಿದ ಬಸ್ ನಲ್ಲಿ ಮಂಗಳೂರು -ಗಂಗಾವತಿ ನಡುವೆ ಸಂಚರಿಸುತ್ತಿದ್ದ ಬಸ್ ನಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಬಸ್ ಶುಕ್ರವಾರ ಮಂಗಳೂರಿಗೆ ಬಂದಿದ್ದು, ಸಂಜೆ ಹೊತ್ತಿಗೆ ಹೊರಡುವುದಿತ್ತು. ಬಸ್ […]

ಉಡುಪಿ ಮಿಲಾಗ್ರಿಸ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Saturday, December 1st, 2012
Rakshitha Milagres College

ಉಡುಪಿ :ಕಲ್ಯಾಣ್ ಪುರ ಮಿಲಾಗ್ರಿಸ್ ಕಾಲೇಜಿನ ಅಂತಿಮ ಬಿಎಸ್ಸಿ ವಿದ್ಯಾರ್ಥಿನಿ ರಕ್ಷಿತಾ ಎಂಬಾಕೆ ಸಂತೆಕಟ್ಟೆ ಬಳಿಯ ನಯಂಪಳಿಯಲ್ಲಿರುವ ತನ್ನ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾಳೆ. ಉಡುಪಿ ಸಂತೇಕಟ್ಟೆ ನಯಂಪಳಿ ನಿಸರ್ಗ ಹೌಸ್ ನಿವಾಸಿ ನಿತ್ಯಾನಂದ ಕೆ.ಪಿ. ಮತ್ತು ಮಾಲತಿ ಎನ್ ಎಂಬವರ ಪುತ್ರಿಯಾಗಿರುವ ರಕ್ಷಾ ಶುಕ್ರವಾರ ಕಾಲೇಜಿಗೆ ರಜೆ ಇದ್ದ ಕಾರಣ ಓದಲೆಂದು ತನ್ನ ಕೋಣೆ ಸೇರುದ್ದಾಳೆನ್ನಲಾಗಿದೆ. ರಕ್ಷಿತಾಳ ಸ್ನೇಹಿತೆಯೊಬ್ಬಳು ಮನೆಗೆ ಫೋನ್ ಕರೆ ಮಾಡಿ ಕಂಪ್ಯೂಟರ್ ಕ್ಲಾಸ್ ಇರುವ ಬಗ್ಗೆ ಆಕೆಗೆ […]

ಬಿಜೆಪಿ :ಶಾಸಕ ಸ್ಥಾನಕ್ಕೆ ಬಿ ಎಸ್ ವೈ ರಾಜೀನಾಮೆ

Friday, November 30th, 2012
Yeddyurappa resignation

ಬೆಂಗಳೂರು :ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಮೂಡಿದ್ದ ಕುತೂಹಲಗಳಿಗೆ ಕೊನೆಗೂ ತೆರೆ ಎಳೆದಿದ್ದಾರೆ. ಸುಮಾರು 40 ವರ್ಷಗಳ ಕಾಲ ಭಾರೀ ಪರಿಶ್ರಮ ಪಟ್ಟು ತಾನೇ ಕಟ್ಟಿದ ಮನೆಯಿಂದ ಯಡಿಯೂರಪ್ಪ ಹೊರ ನಡೆದಿದ್ದಾರೆ. ಮಧ್ಯಾಹ್ನ 1.00 ಗಂಟೆಯ ಸುಮಾರಿಗೆ ವಿಧಾನಸೌಧಕ್ಕೆ ತೆರಳಿದ ಯಡಿಯೂರಪ್ಪ ಸ್ಪೀಕರ್ ಬೋಪಯ್ಯಗೆ ತನ್ನ ರಾಜೀನಾಮೆಯನ್ನು ಸಲ್ಲಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡುವುದಕ್ಕೂ ಮುನ್ನ ಯಡಿಯೂರಪ್ಪ ಫ್ರೀಡಂ ಪಾರ್ಕ್ ನಲ್ಲಿ ತನ್ನ […]

ಎ.ಜೆ. ಆಸ್ಪತ್ರೆ :ಅನ್ನನಾಳದಲ್ಲಿನ ಫೈಬ್ರೋವ್ಯಾಸ್ಕಾಲರ್‌ ಪೊಲಿಪ್‌ ಸಮಸ್ಯೆಗೆ ಅಪರೂಪದ, ಯಶಸ್ವಿ ಶಸ್ತ್ರಚಿಕಿತ್ಸೆ

Friday, November 30th, 2012
AJ Hospital

ಮಂಗಳೂರು :ಅನ್ನನಾಳದಲ್ಲಿ ಕಂಡುಬರುವ ಫೈಬ್ರೋವ್ಯಾಸ್ಕಾಲರ್‌ ಪೊಲಿಪ್‌ (ಗಡ್ಡೆ) ಎಂಬ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ನಗರದ ಎ.ಜೆ. ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ಮಾಡಿ ಗುಣಮುಖರನ್ನಾಗಿಸಲಾಗಿದೆ. 32ರ ವಯಸ್ಸಿನ ಮಹಿಳೆಯೊಬ್ಬರು ಕಳೆದ ಮೂರು ವರ್ಷಗಳಿಂದ ಆಹಾರ ನುಂಗಲಾರದೆ ತೊಂದರೆಯಿಂದ ಬಳಲುತ್ತಿದ್ದರು. ಪರಿಣಾಮ ರಕ್ತ ಹೀನತೆಯಿಂದ ಬಳಲಿ ಕಳೆದ 6 ತಿಂಗಳಲ್ಲಿ 10 ಕೆ.ಜಿ. ತೂಕ ಕಳೆದುಕೊಂಡಿದ್ದರು. ಈ ಸಂದರ್ಭ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯದ ಜನರಲ್‌ ಸರ್ಜರಿ ವಿಭಾಗದ ಮುಖ್ಯಸ್ಥ ಡಾ| ಅಶೋಕ್‌ ಹೆಗ್ಡೆ ಅವರನ್ನು ಸಂಪರ್ಕಿಸಲಾಗಿತ್ತು. ಪರೀಕ್ಷೆಯ ಅನಂತರ ಮಹಿಳೆಗೆ […]

ಲೋಕಸಭಾ ಅಭ್ಯರ್ಥಿ ಆಯ್ಕೆ, ಕಾಂಗ್ರೆಸ್ ನ ಜನಾರ್ದನ ಪೂಜಾರಿ ಮತ್ತು ವಿನಯ್ ಕುಮಾರ್ ಸೊರಕೆ ನಡುವೆ ಪೈಪೋಟಿ

Friday, November 30th, 2012
Congress LS ticket

ಮಂಗಳೂರು :ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಗುರುವಾರ ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಜನಾರ್ದನ ಪೂಜಾರಿ ಮತ್ತು ವಿನಯ್ ಕುಮಾರ್ ಸೊರಕೆ ಈ ಇಬ್ಬರು ನಾಯಕರ ಬೆಂಬಲಿಗರ ಬಿರುಸಿನ ಚಟುವಟಿಕೆ ಕಂಡುಬಂದಿತು. ಈ ಬಿರುಸಿನ ಚಟುವಟಿಕೆಯಲ್ಲಿ ಎಐಸಿಸಿ ವೀಕ್ಷಕರಾಗಿ ಆಗಮಿಸಿದ್ದ ಕೇರಳದ ಮಾಜಿ ಶಾಸಕ ಮುರಳೀಧರನ್ ಜಿಲ್ಲಾ ಕಾಂಗ್ರೆಸ್ ನಾಯಕರುಗಳಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ರಮಾನಾಥ ರೈ, ಶಾಸಕರಾದ ಯು.ಟಿ. ಖಾದರ್, ವಸಂತ ಬಂಗೇರ, ಕೆಪಿಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಅಶ್ವಿನಿಕುಮಾರ್ ರೈ, ಮಾಜಿ […]

ವಿದ್ಯಾರ್ಥಿನಿ ಸೌಜನ್ಯ ಪ್ರಕರಣ:ಸಿಒಡಿ ಪೊಲೀಸರ ತನಿಖೆ ಆರಂಭ

Friday, November 30th, 2012
Sowjanya

ಬೆಳ್ತಂಗಡಿ : ಉಜಿರೆ ಎಸ್‌ಡಿಎಂ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾ ಅವರ ಕೊಲೆ, ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಒಡಿ ಪೊಲೀಸರು ಬೆಳ್ತಂಗಡಿಗೆ ಆಗಮಿಸಿದ್ದಾರೆ. ಸಿಒಡಿ ಇನ್ಸ್‌ಪೆಕ್ಟರ್‌ ಗೋಪಾಲ್‌ ಅವರು ಪ್ರಕರಣದ ಕುರಿತು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಸಾರ್ವಜನಿಕರು ಹಿಡಿದುಕೊಟ್ಟ ಸಂಶಯಾಸ್ಪದ ವ್ಯಕ್ತಿಯನ್ನೇ ಪೊಲೀಸರು ಆರೋಪಿ ಎಂದು ಹೇಳಿದ್ದು ಸಾರ್ವಜನಿಕರ ಗೊಂದಲಕ್ಕೆ ಕಾರಣವಾಗಿತ್ತು. ಪ್ರಕರಣದಲ್ಲಿ ಘಟಾನುಘಟಿಗಳು ಭಾಗಿಯಾಗಿರಬಹುದು ಎಂದು ಜನತೆ ಸಂಶಯ ವ್ಯಕ್ತಪಡಿಸಿದ್ದರು. ಅಲ್ಲದೆ ನೈಜ ಆರೋಪಿಯನ್ನು ಪತ್ತೆಹಚ್ಚಲು ಪ್ರಕರಣದ ತನಿಕೆಯನ್ನು ಸಿಒಡಿ ಪೊಲೀಸರಿಗೆ ಒಪ್ಪಿಸಬೇಕೆಂದು ಪ್ರತಿಭಟನೆಗಳೂ […]

ಪಿಲಿಕುಳ : ದ.ಕ. ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆ

Thursday, November 29th, 2012
Science Model contest

ಮಂಗಳೂರು :ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಸೊಸೈಟಿ ಮಂಗಳೂರು, ದ.ಕ. ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಕಾಲ ಪಿಲಿಕುಳದಲ್ಲಿ ಹಮ್ಮಿಕೊಂಡ ದ.ಕ. ಜಿಲ್ಲಾ ಮಟ್ಟದ ಪ್ರೌಢಶಾಲಾ ಮಕ್ಕಳ ವಿಜ್ಞಾನ ವಸ್ತುಪ್ರದರ್ಶನದ ಉದ್ಘಾಟನಾ ಸಮಾರಂಭವು ಬುಧವಾರ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ಎನ್. ವಿಜಯಪ್ರಕಾಶ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಸಲುವಾಗಿ ಹಾಗೂ […]

ಮಕ್ಕಳಾಟಿಕೆ ಸೃಷ್ಟಿಸಿದ ನಕ್ಸಲ್ ಪ್ರಸಂಗ

Thursday, November 29th, 2012
Boys in forest

ಬೆಳ್ತಂಗಡಿ :ಚಾರ್ಮಾಡಿಯಲ್ಲಿ ಎಎನ್‌ಎಫ್ ಪೊಲೀಸರ ಕೂಂಬಿಂಗ್ ಕಾರ್ಯಾಚರಣೆ ಸಂದರ್ಭ ಬಾಲಕರಿಬ್ಬರು ಕಾಡಿನಲ್ಲಿ ಪತ್ತೆಯಾಗುವ ಮೂಲಕ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಘಟನೆ ಬುಧವಾರ ಚಾರ್ಮಾಡಿಯ ಪೇಟೆಯ ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು ಎರಡು ಕಿ. ಮೀ. ದೂರದಲ್ಲಿ ನಡೆದಿದೆ. ನಕ್ಸಲ್ ನಿಗ್ರಹ ದಳದ ಪೊಲೀಸರಿಗೆ ಮಂಗಳವಾರ ರಾತ್ರಿ ಚಾರ್ಮಾಡಿಯಲ್ಲಿ ನಕ್ಸಲ್ ತಂಡವಿದೆ ಎಂಬ ಮಾಹಿತಿ ಬಂದಿತ್ತು. ಅದರಂತೆ ಬುಧವಾರ ಬೆಳಗ್ಗೆ ತಂಡವೊಂದು ಚಾರ್ಮಾಡಿ ಪೇಟೆ ಬಳಿಯ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು. ಚಾರ್ಮಾಡಿ ಪೇಟೆಯಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿ […]

ನಿರುದ್ಯೊಗಿಗಳಿಗೆ ಉದ್ಯೋಗ ಕಲ್ಪಿಸುವಂತೆ ಒತ್ತಾಯಿಸಿ ರಾಜ್ಯ ಡಿ.ವೈ.ಎಫ್.ಐ ಸಮಿತಿ ವತಿಯಿಂದ ಪ್ರತಿಭಟನೆ

Wednesday, November 28th, 2012
employment or Allowance

ಮಂಗಳೂರು :ಡಿ.ವೈ.ಎಫ್.ಐ.ರಾಜ್ಯ ಸಮಿತಿ ವತಿಯಿಂದ ನಿರುದ್ಯೊಗಿಗಳಿಗೆ ಉದ್ಯೋಗ ಒದಗಿಸಿ ಕೊಡುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯನ್ನುದ್ದೇಷಿಸಿ ಮಾತನಾಡಿದ ಡಿ.ವೈ.ಎಫ್.ಐ. ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ ವಿದ್ಯಾವಂತ ನಿರುದ್ಯೋಗಿ ಯುವಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ನಮ್ಮ ಸರ್ಕಾರವು ಈ ಬಗ್ಗೆ ಯಾವುದೇ ಚಿಂತನೆ ನಡೆಸದೆ ಇರುವುದರಿಂದ ನಮ್ಮ ಯುವಕರು ಹೊಟ್ಟೆಪಾಡಿಗಾಗಿ ಅಪರಾಧ ಚಟುವಟಿಕೆಗಳಂತಹ ಅನ್ಯ ಮಾರ್ಗವನ್ನು ಅನುಸರಿಸುವ ಅಪಾಯ ಎದುರಾಗಿದೆ. ಈ ಅಪಾಯದಿಂದ ಹೊರಬರಲು […]

ಎಕ್ಕಾರು ಕೋಳಿ ಫಾರ್ಮ್ ಕಾರ್ಮಿಕನ ಕೊಲೆ

Wednesday, November 28th, 2012
Bajpe Labour murder

ಮಂಗಳೂರು : ದುರ್ಗಾ ನಗರದ ಕೋಳಿ ಫಾರ್ಮ್‌ನಲ್ಲಿ ಕಳೆದ 20 ವರ್ಷಗಳಿಂದ ಕಾರ್ಮಿಕನಾಗಿ ದುಡಿಯುತ್ತಿದ್ದ ಭದ್ರಾವತಿ ಮೂಲದ ಸಿದ್ದಪ್ಪ (38) ಎಂಬಾತನನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂದಿಸಿದಂತೆ ಇನ್‌ಸ್ಪೆಕ್ಟರ್ ದಿನಕರ ಶೆಟ್ಟಿ ನೇತೃತ್ವದ ಬಜಪೆ ಪೊಲೀಸರ ತಂಡ ಆರೋಪಿಯನ್ನು ಬಂಧಿಸಲಾಗಿದೆ. ಸಿದ್ದಪ್ಪ ಕಳೆದ 20 ವರ್ಷಗಳಿಂದ ಇದೇ ಕೋಳಿ ಫಾರ್ಮ್ ನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ. ಈ ಮೊದಲು ಇದೇ ಫಾರ್ಮ್ ನಲ್ಲಿ ಕೆಲಸಮಾಡುತ್ತಿದ್ದ ಕಿರಣ್ ಎಂಬಾತನನ್ನು ಹಣ ದುಂದುವೆಚ್ಚ ಮಾಡುತ್ತಿದ್ದ ಆರೋಪದಲ್ಲಿ ಕೆಲಸದಿಂದ ತೆಗೆದು […]